ದಾವಣಗೆರೆಯ ವಿನೋಬನಗರದ 1ನೇ ಮುಖ್ಯರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ತೋಟಗಾರಿಕಾ ಬೆಳೆಗಾಗರರ ಅನುಕೂಲಕ್ಕಾಗಿ ಹಾಗೂ ತೋಟಗಾರಿಕಾ ಬೆಳೆಗಳ ವ್ಯಾಪಾರೋದ್ಯಮ ಉತ್ತೇಜನಕ್ಕಾಗಿ ಮೇಳವನ್ನು ಆಯೋಜಿಸಲಾಗಿದೆ. ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟದ ವಿಭಾಗದಲ್ಲಿನ ಕಾರ್ಯಕ್ರಮವನ್ನು ಸರ್ವರೂ ಸದುಪಯೋಗ ಪಡೆಯುವುದರ ಮೂಲಕ ತೋಟಗಾರಿಕಾ ಬೆಳೆಗಳು ಹಾಗೂ ಉತ್ಪನಗಳ ಅಭಿವೃದ್ಧಿಗೆ ಪ್ರೋತ್ಸಾಯಿಸುವಂತೆ ಕರೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಗಂಗಾಧರಸ್ವಾಮಿ, ಸಿಇಓ ಸುರೇಶ್ ಇಟ್ನಾಳ್, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.