Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಗಾಳಿ, ಮಳೆಗೆ ಧರೆಗುರುಳಿದ ಅಡಿಕೆ ಮರಗಳು: ಶಾಸಕ ಕೆ.ಎಸ್.ಬಸವಂತಪ್ಪರಿಂದ ಪರಿಶೀಲನೆ
Blog

ಗಾಳಿ, ಮಳೆಗೆ ಧರೆಗುರುಳಿದ ಅಡಿಕೆ ಮರಗಳು: ಶಾಸಕ ಕೆ.ಎಸ್.ಬಸವಂತಪ್ಪರಿಂದ ಪರಿಶೀಲನೆ

Dinamaana Kannada News
Last updated: May 14, 2024 4:29 pm
Dinamaana Kannada News
Share
MLA Basavantappa
ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ, ಪರಿಶೀಲನೆ
SHARE

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಮಳೆ, ಗಾಳಿಗೆ ಬೆಳೆ ಹಾನಿಯಾದ ತೋಟಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೋಮವಾರ ರಾತ್ರಿ ಮಳೆ, ಗಾಳಿಗೆ ತಾಲೂಕಿನ ಅಣಬೇರು ಗ್ರಾಮದ ರೈತರ ಅಡಿಕೆ ತೋಟಗಳಲ್ಲಿ ಫಲಕ್ಕೆ ಬಂದ ಸುಮಾರು 150ರಿಂದ 200 ಅಡಿಕೆ ಮರಗಳು ಧರೆಗುರುಳಿವೆ.
ಈ ಸಂದರ್ಭದಲ್ಲಿ ಮಳೆ, ಗಾಳಿಗೆ ಅಡಿಕೆ ಮರಗಳು ನೆಲಕ್ಕುರುಳಿ ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ಸರ್ಕಾರದಿಂದ ಪರಿಹಾರ ಕೊಡಿಸುವಂತೆ ರೈತರು ಶಾಸಕರಿಗೆ ಮನವಿ ಮಾಡಿದರು.

ತೋಟಗಳಿಗೆ ಭೇಟಿ ನೀಡಿ ಮಳೆ, ಗಾಳಿಗೆ ಹಾನಿಯಾಗಿರುವ ಬೆಳೆ ವರದಿ ತಯಾರಿಸಿ ಸರ್ಕಾರ ಸಲ್ಲಿಸುವ ಮೂಲಕ ಪರಿಹಾರ ವಿತರಣೆಗೆ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಸಂಪರ್ಕಿಸಿ ಸೂಚನೆ ನೀಡಿದರು.

ಕ್ಷೇತ್ರದ ರೈತರು ಬೆಳೆ ವಿಮೆ ಕಟ್ಟಿದ್ದಾರೆ. ಆದರೆ ಈ ಬಾರಿ ಬರಗಾಲ ಎದುರಾಗಿ ರೈತರು ಕಂಗಾಲಾಗಿದ್ದರೂ ಕೆಲವು ಗ್ರಾಪಂ ವ್ಯಾಪ್ತಿಯಲ್ಲಿ ವಿಮೆ ಪಾವತಿಸಿದರೆ, ಇನ್ನು ಕೆಲವು ಗ್ರಾಪಂಗಳಲ್ಲಿ ವಿಮೆ ಪಾವತಿಸಿಲ್ಲ. ಈಗ ಗಾಳಿ, ಮಳೆಗೆ ಬೆಳೆ ಹಾನಿಯಾಗಿರುವ ರೈತರು ಬೆಳೆ ವಿಮೆ ಕಟ್ಟಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಂದ ಬೆಳೆ ಹಾನಿ ವರದಿ ತರಿಸಿಕೊಂಡು ಬೆಳೆ ವಿಮೆ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಬಳಿಕ ಗ್ರಾಮದ ಶಿಥಿಲಗೊಂಡ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಶಾಸಕರು, ಪರಿಶೀಲನೆ ನಡೆಸಿದರು. ಶಾಲೆಯ ಕೊಠಡಿಗಳಲ್ಲಿ ಶಿಥಿಲಗೊಂಡು ಆರ್ ಸಿಸಿಯ ಚಕ್ಕಳ ಕಿತ್ತುಕೊಂಡಿವೆ. ಇದರಿಂದ ಮಳೆ ಬಂದಾಗ ಸೊರುತ್ತಿವೆ ಎಂದು ಗ್ರಾಮಸ್ಥರು ಶಾಸಕರಿಗೆ ಸಮಸ್ಯೆ ಬಿಚ್ಚಿಟ್ಟರು.

ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೈಟೆಕ್ ಶೌಚಾಲಯವನ್ನು ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲಿಸಿದರು.
ಈ ವೇಳೆ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿ ಕಳಪೆ ಆಗಿರುವುದನ್ನು ಕಂಡು ಗುತ್ತಿಗೆದಾರನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಪಟ್ಟ ಅಧಿಕಾರಿಗಳಿಗೆ ಕಳಪೆ ಕಾಮಗಾರಿ ಕುರಿತು ಮಾಹಿತಿ ನೀಡಿ, ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರನಿಗೆ ಸೂಚನೆ ನೀಡಬೇಕು. ಕಳಪೆ ಮಾಡಿರುವ ಗುತ್ತಿಗೆದಾರನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಣಬೇರು ಗ್ರಾಮ ಪಂಚಾಯತಿ ಅಧ್ಯಕ್ಷ ಬುಡೆನ್ ಸಾಬ್, ಸದಸ್ಯ ಮಹಾರುದ್ರಪ್ಪ, ಜಾಫರ್ ಶರೀಫ್, ಸೇರಿದಂತೆ ರೈತರು, ಗ್ರಾಮಸ್ಥರು ಹಾಜರಿದ್ದರು.

ರೈತನಿಗೆ ಧೈರ್ಯ ತುಂಬಿದ ಶಾಸಕ..
ಮಳೆ ಕೊರತೆ, ಬೋರ್‍ವೆಲ್‍ನಲ್ಲಿ ನೀರು ಕುಸಿತದಿಂದ ಅಡಿಕೆ ಮರಗಳು ಒಣಗುವುದನ್ನು ಕಂಡು ಬೇಸತ್ತ ಹೊನ್ನಾಯಕನಹಳ್ಳಿ ಗ್ರಾಮದ ರೈತ ಶಾಸ್ತ್ರಿಹಳ್ಳಿ ಬಸವರಾಜಪ್ಪ ಎಂಬುವರು ತಮ್ಮ 2 ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಮರಗಳನ್ನು ಕಡಿದು ಸುಟ್ಟು ಹಾಕಿದ್ದ ವಿಷಯ ತಿಳಿದ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ರೈತ ಬಸವರಾಜಪ್ಪ ಹಾಗೂ ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗ್ರಾಮದ ಎಚ್. ಡಿ.ಕಿರಣಕುಮಾರ್, ದೇವೇಂದ್ರಪ್ಪ, ಸಿದ್ದೇಶ್, ಹನುಮಂತಪ್ಪ, ಸಿದ್ದಪ್ಪ ಇದ್ದರು.

Share This Article
Twitter Email Copy Link Print
Previous Article Davangere DC ಬೆಳೆ ಪರಿಹಾರ, ವಿಮಾ ಪರಿಹಾರ, ಖಾತರಿ ಹಣ ಸಾಲಕ್ಕೆ ಮುರಿದುಕೊಳ್ಳಬಾರದು : ಡಿಸಿ
Next Article Sanduru sotries ಸೊಂಡೂರಿನ ಕಗ್ಗತ್ತಲೆಯ ಕಥನಗಳು-24 …….. ಧ್ಯಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ…

By Dinamaana Kannada News

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ : ಡಿಸಿ

ದಾವಣಗೆರೆ ಡಿ.13 (Davanagere) : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ…

By Dinamaana Kannada News

ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಶಿಕ್ಷಣ ಪ್ರೇಮಿಗಳು ಕೊಡುಗೆ ನೀಡುವುದರಿಂದ ಶೈಕ್ಷಣಿಕವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ಪ್ರಗತಿ ಸಾಧಿಸಲು ಸಹಾಯಕವಾಗುತ್ತದೆ ಎಂದು ಶಾಸಕ…

By Dinamaana Kannada News

You Might Also Like

loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
ASUS Exclusive Retail Store Launched in Davangere
Blog

ದಾವಣಗೆರೆಯಲ್ಲಿ ಎಎಸ್ಯುಎಸ್ ಎಕ್ಸ್ಕ್ಲೂಸಿವ್ ರಿಟೇಲ್ ‌ಸ್ಟೋರ್ ಪ್ರಾರಂಭ 

By Dinamaana Kannada News
Applications invited
Blog

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
K.S.Prabhukumar
Blog

ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?