Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ
Blog

ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ

Dinamaana Kannada News
Last updated: June 3, 2024 12:45 pm
Dinamaana Kannada News
Share
davangere
ದಾವಣಗೆರೆ ತಾಲೂಕಿನ ಮಂಡಲೂರು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ಮಳೆಗೆ ಕೊಚ್ಚಿ ಹೋದ ಸೇತುವೆ ಪರಿಶೀಲನೆ ನಡೆಸಿದರು.
SHARE

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ ಬೆಳೆ ಹಾನಿಯಾಗಿವೆ. ಇಷ್ಟೆಲ್ಲ ತೊಂದರೆ ಆಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ಮಂಡಲೂರು, ಹುಣಸೆಕಟ್ಟೆ, ಕಾಟೇಹಳ್ಳಿ, ಚಿನ್ನಸಮುದ್ರ, ಲಕ್ಕಮುತ್ತೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಡೆರಾತ್ರಿ ಸುರಿದ ಧಾರಾಕಾರ ಮಳೆ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಅಣಜಿ ಹಳ್ಳ ರಭಸವಾಗಿ ಹರಿದು ಮಂಡಲೂರು-ಗೊಲ್ಲರಹಟ್ಟಿ ಸಂಪರ್ಕ ರಸ್ತೆ, ಮಂಡಲೂರು-ಲಕ್ಕ್ಕೆಮುತ್ತೇನಹಳ್ಳಿ ರಸ್ತೆ ಹಾಗೂ ಮಂಡಲೂರು- ಕಾಟೇಹಳ್ಳಿ ತಾಂಡಾ, ಕದರಪ್ಪನಹಟ್ಟಿ ರಸ್ತೆಗಳ ಸಂಪರ್ಕ ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ .

ಅಲ್ಲದೇ ಹುಣಸೆಕಟ್ಟೆ ಗ್ರಾಮದ ಶೇಖರಪ್ಪ ತನ್ನ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಟೊಮೆಟೊ, ಮೆಣಸಿನಕಾಯಿ ನೀರಿನಲ್ಲಿ ಕೋಚಿ ಹೋಗಿವೆ. ಅಡಿಕೆ ತೋಟಗಳಿಗೂ ನೀರು ನುಗ್ಗಿ ಬೆಳೆ ನಷ್ಟವಾಗಿದೆ. ಮಳೆಯಿಂದ ಇಷ್ಟೆಲ್ಲ ರಸ್ತೆಗಳು ಮತ್ತು ಬೆಳೆ ಹಾನಿಯಾಗಿದ್ದರೂ ಒಬ್ಬ ಅಧಿಕಾರಿಗಳು ಭೇಟಿ ನೀಡಿಲ್ಲ. ಶಾಸಕರು ಬಂದು ಪರಿಶೀಲನೆ ನಡೆಸಿದ್ದರೂ ಕೂಡ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಗ್ರಾಮಸ್ಥರಿಗೆ, ರೈತರಿಗೆ ಇಷ್ಟು ತೊಂದರೆ ಆಗಿದ್ದರೂ ಅವರ ಸಮಸ್ಯೆಗಳನ್ನು ಆಲಿಸುವ ಸೌಜನ್ಯವಿಲ್ಲ. ಕೂಡಲೇ ಸಂಬಂಧಪಟ್ಟ ಮೇಲಧಿಕಾರಿಗಳು ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿ-48ರ ಹುಣಸೆಕಟ್ಟೆ ಗ್ರಾಮದ ಬಳಿ ಅವೈಜ್ಞಾನಿಕ ಸೇತುವೆ ನಿರ್ಮಾಣದಿಂದ ಮಳೆ ಬಂದಾಗ ಗುಡ್ಡದಿಂದ ಹರಿದು ಬರುವ ನೀರು ಹುಣಸೆಕಟ್ಟೆ ಗ್ರಾಮಕ್ಕೆ ನುಗ್ಗಿ ಅವಾಂತರ ಸೃಷ್ಟಿ ಮಾಡುತ್ತಿದೆ. ಹೆದ್ದಾರಿ ಸೇತುವೆ ಬಳಿ ಮಳೆ ನೀರು ಹರಿದು ಹೋಗಲು ಸಣ್ಣ ಸಣ್ಣ ಸಿಮೇಂಟ್ ಪೈಪ್ ಅಳವಡಿಸಿದ್ದರಿಂದ ಹೂಳು ತುಂಬಿ ನೀರು ಸರಾಗವಾಗಿ ಹರಿಯದೆ ಗುಡ್ಡದಿಂದ ಬರುವ ನೀರು ಗ್ರಾಮಕ್ಕೆ ನುಗ್ಗುತ್ತಿದೆ. ಕೂಡಲೇ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಅವೈಜ್ಞಾನಿಕ ಕಾಮಗಾರಿ ಸರಿಪಡಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿವು, ರಮೇಶ್, ಕುಮಾರ್, ಗಿರೀಶ್, ನಾಗೇಂದ್ರಪ್ಪ, ಕಲ್ಲಿಂಗಪ್ಪ, ಕಂಟಪ್ಪ, ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ರಸ್ತೆ ಕಾಮಗಾರಿಗೆ 1.50 ಕೋಟಿ ಮಂಜೂರು…
ಮಂಡಲೂರು-ಲಕ್ಕೆಮುತ್ತೇನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 1.50 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿವೆ. ಕೂಡಲೇ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸರ್ಕಾರದ ಮೇಲೆ ಒತ್ತಡ ಹಾಕಿ ಹಾನಿಗೊಳಗಾದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು.

Share This Article
Twitter Email Copy Link Print
Previous Article harihara ಕಾಯಿಲೆ ಮುಕ್ತ ಬದುಕಿಗೆ ನಿರಂತರ ವ್ಯಾಯಾಮ ಅವಶ್ಯ : ಡಾ.ಬಿ.ಎಸ್.ಶೈಲೇಶ್ ಕುಮಾರ್
Next Article davanagere ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹುತಾತ್ಮರಿಗೆ ಜೀವ ತುಂಬಿದ ರವೀಂದ್ರ ಎಚ್. ಅರಳಗುಪ್ಪಿ

ದಾವಣಗೆರೆ.ಜು.28:  ದಾವಣಗೆರೆಯ ರಂಗ ಸಾರಥಿ ತಂಡದಿಂದ ಕಾರ್ಗಿಲ್ ವಿಜಯ ದಿವಸ್  ಹಾಗೂ ಜಾನಪದ ತಜ್ಞ ಡಾ. ಎಂ. ಜಿ. ಈಶ್ವರಪ್ಪ…

By Dinamaana Kannada News

Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…

By Dinamaana Kannada News

Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ದಾವಣಗೆರೆ (Davanagere)  : ನಕಲು ಕೀ ಬಳಸಿ ಮನೆಯ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ನಂದೀಶ…

By Dinamaana Kannada News

You Might Also Like

UPSC
Blog

Davanagere | ಅಲ್ಪಸಂಖ್ಯಾತರ ಇಲಾಖೆಯಿಂದ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ

By Dinamaana Kannada News
Political analysis
Blog

Political analysis | ಮುಂದಿನ ವರ್ಷ ನಾನೇ ಸಿಎಂ ಆಗಿರ್ತೀನಲ್ಲ?

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
Shamanur Shivashankarappa
Blog

ಶಾಮನೂರು ಎಂಬುದು ಜಾತಿ ನಿರಸನದ ‘ಮೋಸ್ಟ್ ಸೆಕ್ಯುಲರ್’ ಬ್ರಾಂಡ್ ನೇಮ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?