Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 2 ಬೆಳೆಗೆ ನೀರು ಕೊಡುವುದು ಅಧಿಕಾರಿಗಳ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

2 ಬೆಳೆಗೆ ನೀರು ಕೊಡುವುದು ಅಧಿಕಾರಿಗಳ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: July 21, 2024 5:10 pm
Dinamaana Kannada News
Share
davanagere former
ದಾವಣಗೆರೆ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಸಭೆಯನ್ನು ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು.
SHARE

ದಾವಣಗೆರೆ:  ಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಯಾವುದೇ ರೀತಿಯಲ್ಲಿ ಪೋಲಾಗದಂತೆ ಸಂಗ್ರಹಿಸಿ ರೈತರ ಎರಡು ಬೆಳೆಗಳಿಗೆ ನೀರು ಕೊಡುವುದು ಅಧಿಕಾರಿಗಳ ಹೊಣೆಯಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ತಾಲೂಕಿನ ಬಾಡ ಗ್ರಾಮದ ಮರಳಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಬಾರಿ ಭೀಕರ ಬರಗಾಲದಿಂದ ರೈತರು ಭತ್ತ ಬೆಳೆಯಲು ಆಗಲಿಲ್ಲ. ಈ ಬಾರಿ ಮುಂಗಾರು ಮಳೆ ಅಬ್ಬರದಿಂದ ಭದ್ರಾ ಜಲಾಶಯದಲ್ಲಿ 165 ಅಡಿ ನೀರು ಸಂಗ್ರಹವಾಗಿದ್ದು, ಇನ್ನು 20 ಅಡಿ ಬಾಕಿ ಇದೆ. ನೀರು ಸಂರಕ್ಷಿಸಿ ರೈತರ ಎರಡು ಬೆಳೆಗಳಿಗೆ ನೀರು ಕೊಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಭದ್ರಾ ಕಾಲುವೆಗಳಿಗೆ ಹೊಂದಿಕೊಂಡಿರುವ ಕೆರೆಗಳಿಗೆ ಮೊದಲು ನೀರು ತುಂಬಿಸಿಕೊಂಡು ನಂತರ ಭತ್ತ ನಾಟಿ ಮಾಡಲು ಅವಕಾಶ ನೀಡಬೇಕು. ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕಾಲುವೆ ಅಭಿವೃದ್ಧಿ ಕಾಮಗಾರಿಗಳಿಗೆ ಪುನಃ ಚಾಲನೆ ನೀಡಬೇಕು. ಕಾಲುವೆ ದುರಸ್ತಿ ಮಾಡಿ ಹಂತ ಹಂತವಾಗಿ ನೀರು ಬಿಡಲು ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ತುಂಗಾ ಜಲಾಶಯದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಸ್ಥಗಿತಗೊಂಡಿದ್ದು, ಕೂಡಲೇ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಪರಿಸರ ಇಲಾಖೆಯಿಂದ ಅಡ್ಡಿಯಾಗಿರುವ ತೊಡಕು ನಿವಾರಿಸಿ ಪುನಃ ಕಾಮಗಾರಿ ಆರಂಭಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕು. ಈ ಯೋಜನೆ ಪೂರ್ಣಗೊಂಡರೆ ಮಳೆಗಾಲದಲ್ಲಿ ತುಂಗಾ ಜಲಾಶಯದಿಂದ ಸಾವಿರಾರು ಕ್ಯುಸೆಕ್ಸ್ ನೀರು ಪೋಲಾಗುವುದನ್ನು ಭದ್ರಾ ಜಲಾಶಯಕ್ಕೆ ತುಂಬಿಸಿದರೆ ಅಪ್ಪರ ಭದ್ರಾ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರಿಗೆ ಸಮರ್ಪಕ ನೀರು ಪೂರೈಸಬಹುದಾಗಿದೆ ಎಂದರು.

ಭದ್ರಾ ಇಂಜಿನಿಯರ್‍ಗಳು ವೈಜ್ಞಾನಿಕ ತಂತ್ರಜ್ಞಾನ ಬಳಸಿ ಭದ್ರಾ ಜಲಾಶಯದಲ್ಲಿ ಉಂಟಾಗಿರುವ ನೀರೆತ್ತುವ ಗೇಟ್‍ನ ಸಮಸ್ಯೆ ಬಗೆಹರಿಸಬೇಕು. ಜಲಾಶಯದಿಂದ ಯಾವುದೇ ಕಾರಣಕ್ಕೂ ನೀರು ಪೋಲಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ತಾಕೀತು ಮಾಡಿದರು.

ಹಾಲು ಉತ್ಪಾದಕ ಸಹಕಾರ ಸಂಘಗಳನ್ನು ಆರ್ಥಿಕವಾಗಿ ಬಲಪಡಿಸಿದಂತೆ ನೀರು ಬಳಕೆದಾರರ ಸಂಘಗಳನ್ನು ಆರ್ಥಿಕವಾಗಿ ಬಲಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲು ಒತ್ತಾಡ ಹಾಕುವುದಾಗಿ ಭರವಸೆ ನೀಡಿದ ಶಾಸಕರು, ನಾಳೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ವೇಳೆ ನೀರಾವರಿ ಸಚಿವರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ಮಾಡಿ ಕೂಡಲೇ ಸಲಹಾ ಸಮಿತಿ ಸಭೆ ಕರೆದು ನೀರು ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಅತ್ತಿಗೆರೆ ನೀರು ಬಳಕೆದಾರರ ಸಂಘದ ಅಧ್ಯಕ್ಷ ಎ.ಒ.ರವಿಕುಮಾರ್, ಶರಣಪ್ಪ, ತಾಪಂ ಮಾಜಿ ಸದಸ್ಯ ಧರ್ಮಪ್ಪ, ಗ್ರಾಪಂ ಸದಸ್ಯ ರಂಗನಾಥ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್, ಸಿದ್ದೇಶ್ವರ ಕಬ್ಬೂರು, ದೇವೇಂದ್ರಪ್ಪ, ಬಾಡ ರುದ್ರಸ್ವಾಮಿ, ಮಳಲಕೆರೆ ಶುಭಾಷ್‍ಗೌಡ್ರು, ಮುರುಗೇಂದ್ರಪ್ಪ, ಕೃಷ್ಣಮೂರ್ತಿ, ಎಂ.ಡಿ.ಸುರೇಶಪ್ಪ, ಲೋಕಿಕೆರೆ ರವಿಕುಮಾರ್, ಗೋಪನಾಳ ನಿಂಗರಾಜ್, ಕಬ್ಬೂರ್ ಬಸವರಾಜ್ಪಪ, ಕಂದಗಲ್ ಕುಮಾರ, ಮಂಜುನಾಥ್, ಮಳಲ್ಕೆರೆ ವೆಂಕಟೇಶ್, ಹುಮ್ಮಜ್ಜ, ಅಣಬೇರು ಬುಡನ್ ಸಾಹೇಬರು ಹಾಗೂ ಅಚ್ಚುಕಟ್ಟು ಪ್ರದೇಶದ ರೈತರು ಸಭೆಯಲ್ಲಿ ಭಾಗವಹಿಸಿದ್ದರು.

–ಬಾಕ್ಸ್—
40 ಕೋಟಿ ಬಿಡುಗಡೆಗೆ ಶೀಘ್ರವೇ ಅನುಮೋದನೆ
ನನ್ನ ಮತ ಕ್ಷೇತ್ರದ ವ್ಯಾಪ್ತಿಯ ಅತಿ ಹೆಚ್ಚು ನೀರಾವರಿ ಪ್ರದೇಶ ಹೊಂದಿದ್ದು, ಭದ್ರಾ ಕಾಲುವೆಗಳನ್ನು ವೀಕ್ಷಿಸಿ ಇಲ್ಲಿನ ನೀರಿನ ಸಮಸ್ಯೆ, ಕಾಲುವೆಗಳ ಸಮಸ್ಯೆ, ಗೇಟ್‍ಗಳ ಸಮಸ್ಯೆ ಹಾಗೂ ಸೇತುವೆಗಳ ಸಮಸ್ಯೆಗಳ ಬಗ್ಗೆ ಕಳೆದ ಅಧಿವೇಶನದಲ್ಲಿ ಬೆಳಕು ಚೆಲ್ಲಿದ್ದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 40 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಈಗ ನೀರಾವರಿ ಇಲಾಖೆಯಲ್ಲಿ ಅನುದಾನ ಬಿಡುಗಡೆಗೆ ಪ್ರಕ್ರಿಯೆ ಹಂತದಲ್ಲಿದ್ದು, ಅಲ್ಲಿಂದ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಶೀಘ್ರವೇ 40 ಕೋಟಿ ರೂ. ಅನುದಾನ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article cinema ರಿಷಿ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ಬಿಡುಗಡೆಯಾಗಿ ಏಳು ವರ್ಷ ..
Next Article cinema ದ್ವಾಪರ ದಾಟುತ ಬಂದ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೂರನೇ ಹಾಡು ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ದಾವಣಗೆರೆ (Davanagere)  : ನಕಲು ಕೀ ಬಳಸಿ ಮನೆಯ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ನಂದೀಶ…

By Dinamaana Kannada News

DAVANAGERE NEWS : ಮೆಟ್ರಿಕ್ ನಂತರದ ಹಾಸ್ಟೆಲ್‍ ಗಳಿಗೆ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಆ.9  (Davangere District)  :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಿಗೆ ಪ್ರಸಕ್ತ ವರ್ಷ ಸಾಮಾನ್ಯ…

By Dinamaana Kannada News

Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

ದಾವಣಗೆರೆ (Davanagere): ಸ್ಟಾರ್ ಕ್ರಿಯೇಶನ್ಸ್ ಲಾಂಛನದಲ್ಲಿ ಚಂದ್ರಕಾಂತ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರ ರಾನಿ ಸೆ.12ರಂದು ರಾಜ್ಯಾದ್ಯಂತ 200ಕ್ಕೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?