Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ವೈದ್ಯರು ಇಲ್ಲದ್ದನ್ನು ಕಂಡು ಶಾಸಕ ಬಸವಂತಪ್ಪ ಗರಂ
ತಾಜಾ ಸುದ್ದಿ

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ವೈದ್ಯರು ಇಲ್ಲದ್ದನ್ನು ಕಂಡು ಶಾಸಕ ಬಸವಂತಪ್ಪ ಗರಂ

Dinamaana Kannada News
Last updated: June 19, 2024 11:53 am
Dinamaana Kannada News
Share
davanagare
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE

ದಾವಣಗೆರೆ:  ಆರೋಗ್ಯ ಹದಗೆಟ್ಟರೆ ರೋಗಿಗಳು ಆರೋಗ್ಯ ಕೇಂದ್ರಗಳತ್ತ ದೌಡಾಯಿಸುವುದು ಸಾಮಾನ್ಯ. ಆದರೆ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿ ಇರದಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳ ಗತಿಯೇನು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಗರಂ ಆದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆಡಳಿತ ವೈದ್ಯಾಧಿಕಾರಿಗಳು ಕಾಣದಿದ್ದಾಗ, ವೈದ್ಯಾಧಿಕಾರಿಗಳು, ಲ್ಯಾಬ್ ಟೆಕ್ನಿಶಿಯನ್ , ವೈದ್ಯರು ಎಲ್ಲಿಗೆ ಹೋಗಿದ್ದಾರೆ ಎಂದು ಸಿಬ್ಬಂದಿಗಳನ್ನು ಪ್ರಶ್ನಿಸಿದರು. ಕರ್ತವ್ಯದ ಮೇರೆಗೆ ಹೊರಗೆ ಹೋಗಿದ್ದಾರೆ ಎಂದು ನರ್ಸ್‍ಗಳು, ಸಿಬ್ಬಂದಿಗಳು ಉತ್ತರಿಸಿದರು.

ಶಾಸಕರು ಭೇಟಿ ನೀಡುವಾಗ ಸ್ಥಳದಲ್ಲಿ ಇರಬೇಕು. ಭೇಟಿ ವೇಳೆ ಇಲ್ಲಿನ ಸಮಸ್ಯೆಗಳು, ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳುವವರು ಯಾರು. ಈ ಬಗ್ಗೆ ಮಾಹಿತಿ ತಿಳಿದುಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ದಿಢೀರ್ ಭೇಟಿ ನೀಡುತ್ತೇನೆ. ಆಗಲೂ ಇದೇ ರೀತಿಯ ಕರ್ತವ್ಯ ಲೋಪ ಕಂಡು ಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜನಸಂಖ್ಯೆ ಮತ್ತು ಅಗತ್ಯಕ್ಕೆ ಅನುಗುಣವಾಗಿ ಔಷಧಿಗಳನ್ನು ಇಂಡೇಟ್ ಆಗಿ ತೆಗೆದುಕೊಳ್ಳಬೇಕು. ಅಗತ್ಯಕ್ಕಿಂತ ಹೆಚ್ಚು ಔಷಧಿಗಳನ್ನು ತರಿಸಿಕೊಂಡು ಅವಧಿ ಮೀರಿದ ಮೇಲೆ ತೆಗೆದು ಬಿಸಾಡಿ ಸರ್ಕಾರದ ಹಣ ಪೆÇೀಲು ಮಾಡುವುದಲ್ಲ. ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಇತ್ತೀಚಿಗೆ ಡೆಂಗೀ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ರೋಗಿಗಳ ತಪಾಸಣೆ ಮಾಡಿದ ಪುಸ್ತಕದಲ್ಲಿ 380ಕ್ಕೂ ಹೆಚ್ಚು ಆರ್ ಬಿಎಸ್ (ಸಕ್ಕರೆ ಕಾಯಿಲೆ) ಇರುವ ರೋಗಿಗಳ ಮಾಹಿತಿ ಇದೆ. ಇμÉ್ಟೂಂದು ಆರ್ ಬಿಎಸ್ ಹೊಂದಿದ್ದರೆ ರೋಗಿಗಳ ಜೀವಕ್ಕೆ ಹಾನಿ. ಹಳ್ಳಿ ಜನರು ಮುಗ್ದರು. ಅವರಿಗೆ ಈ ರೋಗದ ಬಗದಗೆ ಸರಿಯಾದ ಮಾಹಿತಿ ನೀಡಿ, ಅರಿವು ಮೂಡಿಸಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕಳುಹಿಸಬೇಕೆಂದು ಸೂಚನೆ ನೀಡಿದರು.

ಸಿಸಿ ಟಿವಿ ಕ್ಯಾಮೆರಾ ಕಳವು:
ಪ್ರಾಥಮಿಕ ಆರೋಗ್ಯ ಕೇಂದ್ರ ಊರ ಹೊರಗೆ ಇರುವುದರಿಂದ ರಾತ್ರಿಯ ವೇಳೆ ಕಳ್ಳರ ಕಾಟ ಹೆಚ್ಚಾಗಿದೆ. ಈಚೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಕಳವು ಮಾಡಲಾಗಿದೆ ಎಂದು ನರ್ಸ್‍ಗಳು ಶಾಸಕರ ಗಮನಕ್ಕೆ ತಂದರು. ಕೂಡಲೇ ದಾವಣಗೆರೆ ಗ್ರಾಮಾಂತರ ಪಿಎಸ್‍ಐ ದೂರವಾಣಿ ಮೂಲಕ ಸಂಪರ್ಕಿಸಿ ಸಿಸಿ ಟಿವಿ ಕ್ಯಾಮೆರಾ ಕಳವು ಮಾಡಿರುವ ಬಗ್ಗೆ ಮಾಹಿತಿ ನೀಡಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಕೆರೆ ಹೋರಾಟಗಾರ ಹೇಮಂತ್, ಸೋಮಣ್ಣ, ಸಿದ್ದೇಶ್, ಶಿವಣ್ಣ ಸೇರಿದಂತೆ ಇನ್ನಿತರರಿದ್ದರು.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 59: ಆ ಟೇಮ್ನಾಗ ರೊಕ್ಕ ಅನ್ನಾವು ಕಲ್ಲಳ್ಳು ಆಗೋಗಿದ್ವು….
Next Article _Davanagere ವೈಜ್ಞಾನಿಕ ಕೃಷಿಯಿಂದ ಉತ್ತಮ ಆದಾಯ ಸಾಧ್ಯ ; ಸಿಇಓ ಸುರೇಶ್ ಬಿ. ಇಟ್ನಾಳ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಶೇ. 90 ರಷ್ಟು ಭಾರತೀಯ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ

ಬೆಂಗಳೂರು : ಒಬ್ಬ ಮನುಷ್ಯನಲ್ಲಿ 30 ng/ml ಗಿಂತ ಕಡಿಮೆ ಇದ್ದರೆ ವಿಟಮಿನ್ ಡಿ ಮಟ್ಟವು ಸಾಕಷ್ಟಿಲ್ಲ ಅಥವಾ ಇದರ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !

ಹರಿಶಂಕರ  ಸೊಂಡೂರಿನ ಪ್ರಮುಖ ತೀರ್ಥ ತೊರೆ ಸೊಂಡೂರಿನ ಪರಿಸರ ಬಹು ಸೂಕ್ಷ್ಮವಾಗಿದೆ.ಇಂತಹ ವಲಯದ ಸುತ್ತಲಿನ ಎರಡು ಕಿಲೋಮೀಟರಿನಷ್ಟು ದೂರದವರೆಗಾದರೂ ಗಣಿಗಾರಿಕೆ…

By Dinamaana Kannada News

ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ : ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ 27ನೇ ರಾಜ್ಯ ಸಮ್ಮೇಳನವು ಕೋಲಾರದಲ್ಲಿ ಮಾ 16…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?