Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತುರ್ತು ಪರಿಸ್ಥಿತಿ : ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ
ತಾಜಾ ಸುದ್ದಿ

ತುರ್ತು ಪರಿಸ್ಥಿತಿ : ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ

Dinamaana Kannada News
Last updated: May 18, 2025 4:11 pm
Dinamaana Kannada News
Share
Davanagere
Davanagere
SHARE
ದಾವಣಗೆರೆ  (Davanagere):  ವೈಮಾನಿಕ ದಾಳಿ ಎದುರಾದಾಗ ಸ್ಥಳೀಯ ಜನರು ಭಯಭೀತರಾಗದೇ ತುರ್ತು ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕೈಗೊಳ್ಳಲಾಯಿತು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.
ಭಾನುವಾರ ನಗರದ ಮಹಾನಗರಪಾಲಿಕೆ ಆರವಣದಲ್ಲಿ ನಡೆದ ಅಣುಕು ಪ್ರದರ್ಶನದ  ನಂತರ ಮಾತನಾಡಿದ ಅವರು,  ತುರ್ತು ಪರಿಸ್ಥಿತಿ ಎದುರಿಸಲು ಜನರಿಗೆ ತಿಳಿಸುವ ಎಚ್ಚರಿಕೆ ಗಂಟೆಯೂ ಸರಿಯಾದ ಸಮಯಕ್ಕೆ ಶಬ್ದ ಮಾಡುವಂತೆ ಗಮನ ವಹಿಸಲಾಗುತ್ತದೆ. ಗಾಯಾಳುಗಳಾದ ಸಾರ್ವಜನಿಕರನ್ನು ಅಂಬ್ಯುಲೆನ್ಸ್ ಗೆ ವರ್ಗಾಯಿಸುವಾಗ ನಿಧಾನವಾಗಿ ತುಂಬಾ ಜಾಗರೂಕತೆಯಿಂದ ಸ್ಥಳಾಂತರಿಸಬೇಕು. ಯುದ್ದದಂತಹ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರ ಹೇಗೆ ಕೆಲಸ ನಿರ್ವಹಿಸುತ್ತದೆ ಎಂದು ಅವರು ತಿಳಿಸಿದರು.
ನಗರದಲ್ಲಿ ವೈಮಾನಿಕ ದಾಳಿಯಾದಾಗ ಅದಕ್ಕೆ ಇಲಾಖೆ ಅಧಿಕಾರಿಗಳು ಯಾವ ತರಹ ಕಾರ್ಯಾಚರಣೆ, ಪರಿಹಾರ ಕಂಡುಕೊಳ್ಳುತ್ತೇವೆ ಎನ್ನುವುದನ್ನು ತಿಳಿಸುವ ಅಣುಕು ಪ್ರದರ್ಶನ ಇದಾಗಿದೆ. ಬಾಂಬ್ ಬಿದ್ದಿದೆ ಎಂದು ಮಾಹಿತಿ ತಿಳಿದ ಕೂಡಲೇ ಬಾಂಬ್ ಸ್ಕ್ವಾಡ್ ತಕ್ಷಣ ಹೋಗಿ ಸ್ಥಳೀಯ ಪರಿಸ್ಥಿತಿ ಅರಿತು
ಸ್ಪೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದರು. ಪೊಲೀಸ್ ಅಗ್ನಿಶಾಮಕ ದಳ ಅಂಬುಲೆನ್ಸ್ ಸ್ವಯಂಸೇವಕರು ಬಂದು ಭಯಭೀತರಾದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಯಿತು. ಪ್ರಥಮ ಚಿಕಿತ್ಸೆಯ ಕ್ಯಾಂಪ್ ಗಳನ್ನು ಪ್ರಾರಂಭಿಸಲಾಯಿತು. ಅವುಗಳ ಪರಿಸ್ಥಿತಿಗನುಗುಣವಾಗಿ ಕಾರ್ಯಗಳನ್ನು ನಿಭಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಯಿತು.
ಬಾಂಬ್ ದಾಳಿಯಾದ ತಕ್ಷಣ ಈ ಅವಘಡ ಸಂಭವಿಸಿರುವ ಬಗ್ಗೆ, ತುರ್ತು ಸಂಖ್ಯೆ 112 ಮುಖಾಂತರ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿಯನ್ನು ನೀಡುತ್ತಿರುವುದು ಹಾಗೂ ಎಚ್ಚರಿಕೆ ಗಂಟೆಯನ್ನು ಘೋಷಿಸುತ್ತಿರಬೇಕು. ಮಾಹಿತಿ ತಲುಪಿದ ಕೂಡಲೇ ತುರ್ತು ಆಪದ್ಬಾಂದವನಾಗಿ 112 ವಾಹನ ಆಗಮಿಸಿದ್ದು, ಸಾರ್ವಜನಿಕರೆಲ್ಲರಿಗೂ ಆತ್ಮಸ್ಥೆರ್ಯವನ್ನು ತುಂಬಿ ಘಟನಾ ಸ್ಥಳದ ಹತ್ತಿರ ಸುಳಿಯದಂತೆ ಜಾಗೃತಿ ವಹಿಸಬೇಕು. ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯಪುವೃತ್ತರಾಗಿರುವುದು.
ನಂತರ ಕಂಟ್ರೋಲ್ ರೂಂ ನಿಂದ ಬೆಸ್ಕಾಂ ಇಲಾಖೆಗೆ ಮಾಹಿತಿ ರವಾನೆ ಮಾಡಿ, ಇಂತಹ ಅನಿರೀಕ್ಷಿತ ಸಂದರ್ಭಗಳಲ್ಲಿ, ವಿದ್ಯುತ್  ಅವಘಡಗಳು ಸಂಭವಿಸುವ ಸಾಧ್ಯತೆ ಇರುವುದರಿಂದ, ನೆರೆದಿರುವ ಸಾರ್ವಜನಿಕರಿಗೆ ಹಾಗೂ ರಕ್ಷಣೆಗೆ ಆಗಮಿಸಲಿರುವ ವಿವಿಧ ಇಲಾಖೆಯ ಪಡೆಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುಚ್ಛಕ್ತಿ ಸಂಪರ್ಕವನ್ನು ಕಡಿತಗೊಳಿಸಬೇಕು.
ಘಟನಾ ಸ್ಥಳಕ್ಕೆ  ಶ್ವಾನದಳದವನ್ನು ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿ ಯಾವುದಾದರೂ ಸಿಡಿಯದೇ ಉಳಿದ ಅಥವಾ ಸಿಡಿಯಬಹುದಾದ ಸ್ಫೋಟಕ ವಸ್ತುಗಳು ಅಥವಾ ಇನ್ನಿತರೆ ಅಪಾಯಕಾರಿ ವಸ್ತುಗಳ ಲಭ್ಯತೆಯ ಬಗ್ಗೆ ಶೋಧನೆಯನ್ನು ನಡೆಸಿ, ಅಪಾಯಕಾರಿ ವಸ್ತುಗಳ ವಾಸನೆಯ ಗ್ರಹಿಕೆಯ ಮುಖಾಂತರ ಶ್ವಾನದಳದ ತಂಡ ಎಲ್ಲೆಡ ಹುಡುಕಾಟವನ್ನು ನಡೆಸಿ, ಅಲ್ಲದೇ ತಾಂತ್ರಿಕ ಉಪಕರಣಗಳ ಸಹಾಯದಿಂದ ಶೋಧ ಕಾರ್ಯವನ್ನು ಮುಂದುವರೆಸಿದ್ದು, ಯಾವುದಾದರೂ ಅಪಾಯಕಾರಿ ವಸ್ತುಗಳು ಕಂಡುಬಂದಲ್ಲಿ ಅವುಗಳನ್ನು ವಶಕ್ಕೆ ಪಡೆದುಕೊಂಡು ಅಥವಾ ಸ್ಫೋಟಕ ವಸ್ತುಗಳಿದ್ದಲ್ಲಿ ಅವುಗಳನ್ನು ನಿಷ್ಕ್ರಿಯಗೊಳಿಸಿ, ಸ್ಥಳಾಂತರಿಸುವ ನಿಟ್ಟಿನಲ್ಲಿ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತದೆ.
ಇದೀಗ ಆಂಬುಲೆನ್ಸ್ ಆಗಮನ: ಈ ರೀತಿಯ ಅವಘಡಗಳು ಸಂಭವಿಸಿದಲ್ಲಿ ಅದೆಷ್ಟೋ ಅಮಾಯಕರು ಸಾವಿಗೀಡಾಗಿರುತ್ತಾರೆ. ಅಥವಾ ಗಂಭೀರವಾಗಿ ಗಾಯಗೊಂಡಿರುತ್ತಾರೆ, ಅಥವಾ ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುತ್ತಾರೆ. ಇಂತಹ ಸನ್ನಿವೇಶದಲ್ಲಿ ತುರ್ತು ಚಿಕಿತ್ಸೆ ಒದಗಿಸುವ ಸಲುವಾಗಿ ಆಂಬುಲೆನ್ಸ್  ಸ್ಥಳಕ್ಕೆ ಧಾವಿಸಿ ವೈದ್ಯಕೀಯ ಚಿಕಿತ್ಸೆಗಾಗಿ ಏರ್ಪಾಡು ಮಾಡಬೇಕು. ವೈದ್ಯೋ ನಾರಾಯಣೋ ಹರಿ ಎನ್ನುವಂತೆ ವೈದ್ಯರ ಸೇವೆ ಇಂತಹ ಸಂದರ್ಭಗಳಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಗಾಯಗೊಂಡಿದ್ದವರನ್ನಲ್ಲ ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸುವ ಕಾರ್ಯ ಮಾಡಬೇಕು.
ಅಗ್ನಿಶಾಮಕ ದಳದ ಆಗಮನ: ಅನಿರೀಕ್ಷಿತ ಸ್ಫೋಟದಿಂದಾಗಿ ಮಹಾನಗರ ಪಾಲಿಕೆಯ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದ ಸಾರ್ವಜನಿಕರನ್ನು ರಕ್ಷಿಸಲು ಅಗ್ನಿಶಾಮಕ ದಳ ಆಗಮಿಸಿದ್ದು ಆದಷ್ಟು ಬೇಗನೇ ಬೆಂಕಿಯನ್ನು ನಂದಿಸಲು ಕಾರ್ಯಪ್ರವೃತ್ತರಾಗಿ ಅತ್ಯಂತ ಚಾಕಚಕ್ಯತೆಯಿಂದ ಕರ್ತವ್ಯವನ್ನು ನಿರ್ವಹಿಸಬೇಕು. ಕಟ್ಟಡಕ್ಕೆ ಹೊತ್ತಿಕೊಂಡಿರುವ ಅಗ್ನಿಯನ್ನು ಆರಿಸುವುದು ಮಾತ್ರವಲ್ಲದೇ, ಈ ಅಗ್ನಿ ಅವಘಡದಿಂದ ತೊಂದರೆಗೊಳಗಾಗಿರುವ ನಾಗರೀಕರ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಂಡು, ಹೆಚ್ಚಿನ ಪ್ರಾಣಹಾನಿಯಾಗದಂತೆ ಗಾಯಾಳುಗಳನ್ನು ಸ್ಥಳಾಂತರಿಸಬೇಕು.
ಅಗ್ನಿಶಾಮಕ ದಳದ ಈ ರಕ್ಷಣಾ ಕಾರ್ಯಕ್ಕೆ ಗೃಹರಕ್ಷಕ ದಳ, ಎನ್.ಸಿ.ಸಿ ಮತ್ತು ಸೌಟ್ಸ್ & ಗೈಡ್ಸ್ ಸಂಸ್ಥೆಗಳ ಸ್ವಯಂ ಸೇವಕರು ಸಹ ಸಾಥ್ ನೀಡುತ್ತಿದ್ದು, ದಾಳಿಗೀಡಾದವರನ್ನು ಶೀಘ್ರವಾಗಿ ಸ್ಥಳಾಂತರ ಮಾಡುತ್ತಿರುವ ಸನ್ನಿವೇಶ ಇದೀಗ ಅಗ್ನಿಶಾಮಕ ದಳದವರು ಕಟ್ಟಡಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಈ ತುರ್ತು ಸ್ಪಂದನಾ ಕಾರ್ಯಕ್ಕೆ ಎಲ್ಲರೂ ಜೋರಾದ ಚಪ್ಪಾಳೆಯೊಂದಿಗೆ ಅಭಿನಂದಿಸೋಣ.
ಎಸ್.ಡಿ.ಆರ್.ಎಫ್ ತಂಡದ ಆಗಮನ: ರಾಜ್ಯ ವಿಪತ್ತು ಸ್ಪಂದನಾ ಪಡೆ ಇದೀಗ ಘಟನಾ ಸ್ಥಳಕ್ಕೆ ಧಾವಿಸಿದ್ದು, ಈ ಕಟ್ಟಡದ ಅವಶೇಷಗಳಲ್ಲಿ ಸಿಲುಕಿಕೊಂಡಿರುವ ಸಾರ್ವಜನಿಕರನ್ನು ರಕ್ಷಿಸುವ ಸಲುವಾಗಿ, ಹಾಗೂ ಸಂರಕ್ಷಿಸಲು ಸಾಧ್ಯವಾಗದ ಸ್ಥಳದಲ್ಲಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಇದೀಗ ಗೋಡೆಯನ್ನು ಕೊರೆದು, ತುರ್ತಾಗಿ ಹೊಸ ಮಾರ್ಗವನ್ನು ಸೃಷ್ಟಿಸಬೇಕು. ಸಾಮಾನ್ಯ ಜನರು ತಲುಪಲು ಸಾಧ್ಯವಾಗದಂತಹ ಸಂದರ್ಭದಲ್ಲಿ ಭರವಸೆಯ ಬೆಳಕಾಗಿ ಬಂದು ನೆರವಾಗಿರುವುದು ನಮ್ಮ ಕರ್ನಾಟಕ ರಾಜ್ಯ ವಿಪತ್ತು ಸ್ಪಂದನಾ ಪಡೆ. ತನ್ನ ವಿಶೇಷ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿ ಸಂಕಷ್ಟದಲ್ಲಿದ್ದ ಸಾರ್ವಜನಿಕರ ರಕ್ಷಣೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಸೋಕೋ ಸೀನ್ ಆಫ್ ಕ್ರೈಮ್ ಆಫೀಸರ್ ಗಳ ಆಗಮನ: ಘಟನಾ ಸ್ಥಳದಲ್ಲಿ ಲಭ್ಯವಿರುವ ಅಪಾಯಕಾರಿ ಸ್ಪೋಟಕ ವಸ್ತುಗಳ ಮಾದರಿಯನ್ನು ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಸಾಕ್ಷ್ಯಗಳನ್ನು ಸಂಗ್ರಹಣೆ ಮಾಡಿ, ಈ ದುಷ್ಕೃತ್ಯದ ಹಿಂದಿನ ಸೂತ್ರಧಾರಿಗಳ ಪತ್ತೆ ಹಚ್ಚಲು ನೆರವಾಗುವುದಲ್ಲದೇ, ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲು ಸ್ಥಳದಲ್ಲಿ ಸಿಗುವ ಸೂಕ್ಷ್ಮ, ಸಾಕ್ಷ್ಯಾಧಾರಗಳು ಪ್ರಮುಖ ಪಾತ್ರ ವಹಿಸುತ್ತದೆ.
ವಿಧ್ವಂಸವಾಗಿದ್ದ ಕಟ್ಟಡದ ಸುತ್ತಮುತ್ತಲಿನ ಪ್ರದೇಶವನ್ನು ಸಂರಕ್ಷಿಸಿ, ಪುನರ್ ನಿರ್ಮಿಸಿ, ಸ್ವಚ್ಛವಾಗಿ, ಸುಂದರವಾಗಿಡಲು ಇದೀಗ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ತಂಡ ಆಗಮಿಸಿ ತನ್ನ ಕಾಯಕವನ್ನು ಪ್ರಾರಂಭಿಸಿದೆ.
Read also : ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ
ಸ್ವಚ್ಛ ಸುಂದರ ಪರಿಸರದ ನಿರ್ಮಾಣದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುವ ಪೌರ ಕಾರ್ಮಿಕರು, ಸದಾ ಎಲೆಮರೆಯ ಕಾಯಿಯಂತೆ ತಮ್ಮ ಕಾರ್ಯವನ್ನು ನಿರ್ವಹಿಸಿ ನಮ್ಮೆಲ್ಲರಿಗಾಗಿ ಅಚ್ಚುಕಟ್ಟಾದ ಶುಚಿಯಾದ ನಗರವನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಪಾಲಿಕೆ ಆಯುಕ್ತೆ ರೇಣುಕ, ಬೆಸ್ಕಾಂ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ವಿಪತ್ತು ಸ್ಪಂದನಾ ಪಡೆ, ಗೃಹ ರಕ್ಷಕ ಪಡೆ, ಎನ್.ಸಿ.ಸಿ ಮತ್ತು ಸೌಟ್ಸ್ & ಗೈಡ್ಸ್, ಪೌರ ಕಾರ್ಮಿಕರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ
Next Article Political analysis Political Analysis | ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಲೇಬೆನ್ನೂರು : ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ವಾಹನಗಳ ಮಾರ್ಗ ಬದಲಾವಣೆ

ಮಲೇಬೆನ್ನೂರು (Davanagere):   ಪಟ್ಟಣ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನೆಯು  ಸೆ. 21-09-2024 ರಂದು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 10-00…

By Dinamaana Kannada News

ಚದುರಂಗ ಆಟ ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ : ದಿನೇಶ್ ಕೆ ಶೆಟ್ಟಿ

ದಾವಣಗೆರೆ : ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ನಗರದ ಗುರುಭವನದಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು  ದಾವಣಗೆರೆ ಜಿಲ್ಲಾ…

By Dinamaana Kannada News

ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ

ಹರಿಹರ:   ಹರಿಹರದ ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಜೂನ್ ೯ ರಂದು ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ, ಪ್ರೊ.ಬಿ.ಕೃಷ್ಣಪ್ಪ ನವರ ೮೬ನೇ ಜನ್ಮ ದಿನಾಚರಣೆ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?