Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಗ್ರಾಮೀಣ ಮೂಲ ಸೌಕರ್ಯಕ್ಕೆ ಒತ್ತು : ಡಾ; ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davanagere news | ಗ್ರಾಮೀಣ ಮೂಲ ಸೌಕರ್ಯಕ್ಕೆ ಒತ್ತು : ಡಾ; ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: September 3, 2024 3:33 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere)  : ಮಕ್ಕಳ ಭವಿಷ್ಯ ಉಜ್ವಲವಾಗಲು ಅವರಿಗೆ ಸರಿಯಾದ ಶಿಕ್ಷಣ ಲಭಿಸಿ ಉತ್ತಮ ಆರೋಗ್ಯ ಸಂರಕ್ಷಣೆ ಸಿಕ್ಕಾಗ ಅವರ ಸಂಪೂರ್ಣ ಅಭಿವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರ ಸಂಚರಿಸಿ ಶಾಲೆ, ಗ್ರಾಮದ ಮೂಲಭೂತ ಸೌಕರ್ಯದ ಕಡೆ ಹೆಚ್ಚು ಗಮನಿಸುತ್ತೇನೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಮಾಯಕೊಂಡ ಕ್ಷೇತ್ರದ ಗುಡ್ಡದಹಟ್ಟಿಯಲ್ಲಿ ಕೆ.ಎಸ್.ಆರ್.ಟಿ.ಸಿ.ಯಿಂದ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ ಸಮಾರಂಭದಲ್ಲಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣ ಸಿಗಬೇಕು. ಇದು ಲಭಿಸಿದಾಗ ಅವರ ಶಿಕ್ಷಣಕ್ಕೆ ಸರಿಯಾದ ಅಡಿಪಾಯ ಹಾಕಿದಂತಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಮಕ್ಕಳು ಸೇರಿದಂತೆ ಜನರಿಗೆ ಆರೋಗ್ಯ ಸೌಕರ್ಯಗಳು ಸಿಗಬೇಕೆಂದು ತಿಳಿಸಿದರು.

Read also : Davanagere | ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ

ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಇನ್ನೂ ಅಗತ್ಯವಾಗಿದೆ, ಸರ್ಕಾರಿ ಶಾಲೆಯಲ್ಲಿ ಓದಿದವರು ಅನೇಕ ಉನ್ನತ ಹುದ್ದೆ, ಸ್ಥಾನದಲ್ಲಿದ್ದಾರೆ. ಈ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಶಾಲಾಭಿವೃದ್ದಿ ಮಾಡಲು ಎಸ್.ಡಿ.ಎಂ.ಸಿ.ಯವರು ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಮಾಡುವ ಮೂಲಕ ಅವರಿಂದ ಆರ್ಥಿಕ ಸಹಕಾರ, ಸಲಹೆಗಳನ್ನು ಪಡೆದು ತಮ್ಮ ಶಾಲೆಯ ಕೊಠಡಿ, ಶಾಲಾಭಿವೃದ್ದಿ ಮಾಡಬಹುದಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಹೊಂದುವುದರಿಂದ ಇವರು ಉತ್ತಮ ಶಿಕ್ಷಕರಾಗಿರುವರು. ಶಿಕ್ಷಕರ ಸದ್ಬಳಕೆಯಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಮತ್ತು ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ದಿ ಮಾಡುವಲ್ಲಿ ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಕ್ಷೇತ್ರದ ಜನರ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಚೇರಿಯನ್ನು ಆರಂಭಿಸಲಾಗಿದ್ದು ಜನರು ಇಲ್ಲಿಗೆ ಬಂದು ಯಾವುದೇ ಹಿಂಜರಿಕೆ ಇಲ್ಲದೆ  ತಮ್ಮ ಕುಂದುಕೊರತೆಗಳ ಅಹವಾಲುಗಳನ್ನು ನೀಡಬಹುದಾಗಿದೆ. ಮುಂದಿನ ದಿನಗಳಲ್ಲಿ ನಾನು ಸಹ ದಾವಣಗೆರೆಯಲ್ಲಿರದೆ ಕ್ಷೇತ್ರದಲ್ಲಿ ಸಂಚರಿಸುವ ಮೂಲಕ ಜನರ ಅಹವಾಲುಗಳನ್ನು ಆಲಿಸಿ ಪರಿಹಾರಿಸಲಾಗುತ್ತದೆ ಎಂದರು.

ಗುಡ್ಡದಹಳ್ಳಿಗೆ ಬಸ್ ಬೇಡಿಕೆ ಸಾಕಷ್ಟು ದಿನಗಳಿಂದ ಇದ್ದು ಇದನ್ನು ಪರಿಹರಿಸಲಾಗಿದೆ. ಮಾಯಕೊಂಡ ರಸ್ತೆ ಅಭಿವೃದ್ದಿಯಾಗಬೇಕೆಂದು ಜನರು ಕೇಳುತ್ತಿದ್ದು ರಸ್ತೆ ನಿರ್ಮಾಣಕ್ಕೆ ರೂ.8 ಕೋಟಿ ಮಂಜೂರಾಗಿದ್ದು ಮುಂದಿನ ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದರು.

ಮಾಯಕೊಂಡ ಶಾಸಕ  ಕೆ.ಎಸ್.ಬಸವಂತಪ್ಪ ಮಾತನಾಡಿ, ಗುಡ್ಡದಹಳ್ಳಿ ತಾಲ್ಲೂಕಿನ ಕೊನೆಯ ಭಾಗದಲ್ಲಿದ್ದು ಇಲ್ಲಿಗೆ ಬಸ್ ಸಂಪರ್ಕವಿಲ್ಲದೆ ಜನರಿಗೆ ಸಾಕಷ್ಟು ಅನಾನುಕೂಲವಾಗಿತ್ತು. ಬಸ್ ಸೌಕರ್ಯ ಕಲ್ಪಿಸಿದ್ದರಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ಮೂಡಿದೆ. ಭಾವಿಹಾಳ್ ಮೂಲಕ ಗುಡ್ಡದಹಳ್ಳಿ, ನರಗÀನಹಳ್ಳಿ ಮೂಲಕ ದಾವಣಗೆರೆಗೆ ಪ್ರಯಾಣಿಸಬಹುದು. ಈ ಬಸ್ ಗ್ರಾಮಕ್ಕೆ ಬೆಳಗ್ಗೆ 8.45 ಕ್ಕೆ ಬರಲಿದ್ದು ಮಧ್ಯಾಹ್ನ 1.30 ಕ್ಕೆ ದಾವಣಗೆರೆಯಿಂದ ಗ್ರಾಮಕ್ಕೆ ಮತ್ತು ಸಂಜೆ 4 ಗಂಟೆಗೆ ದಾವಣಗೆರೆಯಿಂದ ಬಾವಿಹಾಳ್ ಮಾರ್ಗವಾಗಿ ಗುಡ್ಡದಹಳ್ಳಿ ತಲುಪಲಿದೆ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ತಾಯಂದಿರು ಮೊದಲನೆಯದಾಗಿ ಈ ಸೌಲಭ್ಯ ಪಡೆಯುವಂತಾಗಲಿ ಎಂದರು.,

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ,  ಗ್ರಾಮದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಎಲ್ಲೆಂದರಲ್ಲಿ ಹಾಕಿರುವ ಪ್ಲಾಸ್ಟಿಕ್ ತೆಗೆದು ಸ್ವಚ್ಚತೆ ಕಾಪಾಡಬೇಕು. ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಶಾಸಕರು, ಸಂಸದರು ಕಲ್ಪಿಸಲಿದ್ದು ತಾವುಗಳು ಗ್ರಾಮವನ್ನು ಸಂಪೂರ್ಣವಾಗಿ ಸ್ವಚ್ಚವಾಗಿಟ್ಟುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಕರಾದ ಸಿದ್ದೇಶ್ ಹೆಬ್ಬಾಳ್, ತಹಶೀಲ್ದಾರ್ ಡಾ; ಅಶ್ವಥ್, ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ ನಾಗರಾಜ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ
Next Article DAVANAGERE Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ (davanagere)  : ನಗರದ ಸಿಎಂಸಿ ಕಾಂಪ್ಲೆಕ್ಸ್ ನಲ್ಲಿ ದಾವಣಗೆರೆ ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ…

By Dinamaana Kannada News

Political analysis|ವಿಜಯೇಂದ್ರ ಬೆನ್ನಿಗೆ ಈಗ ಸಂತೋಷ್ ನಿಂತರು

ಕಳೆದ ವಾರ ಯಲಹಂಕದ 'ರಮಡ' ರೆಸಾರ್ಟ್ ನಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆಯಿತು.ಈ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ…

By Dinamaana Kannada News

ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ

ದಾವಣಗೆರೆ  : ಆ.  5 ರಿಂದ ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಕರೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?