Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಿಎಸ್‌ಎನ್‌ಎಲ್ ಟವರ್ ಸ್ಥಾಪನೆ ಹಾಗೂ ನೌಕರರ ವೇತನ ಪರಿಷ್ಕರಣೆಗೆ ಅಧಿವೇಶನದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ
ತಾಜಾ ಸುದ್ದಿ

ಬಿಎಸ್‌ಎನ್‌ಎಲ್ ಟವರ್ ಸ್ಥಾಪನೆ ಹಾಗೂ ನೌಕರರ ವೇತನ ಪರಿಷ್ಕರಣೆಗೆ ಅಧಿವೇಶನದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

Dinamaana Kannada News
Last updated: December 3, 2025 9:24 am
Dinamaana Kannada News
Share
Davanagere
SHARE

ದಾವಣಗೆರೆ/ನವದೆಹಲಿ; ದಾವಣಗೆರೆಯ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಾಲೇಶಪುರ ಗ್ರಾಮದಲ್ಲಿ ಬಿಎಸ್ ಎನ್‌ಎಲ್ ಮೊಬೈಲ್ ಟವರ್ ಸ್ಥಾಪನೆಯ ಕುರಿತು ಬುಧವಾರ ನಡೆದ ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ದಾವಣಗೆರೆ ಕ್ಷೇತ್ರದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರದ ಗಮನ ಸೆಳೆದರು.

ಅಧಿವೇಶನದಲ್ಲಿ ಮಾತನಾಡಿದ ಅವರು ಡಿಜಿಟಲ್ ಇಂಡಿಯಾ ಮಿಷನ್‌ನ ಮೂಲಭೂತ ಉದ್ದೇಶಗಳಲ್ಲಿ ಪ್ರಮುಖವಾದುದು ಡಿಜಿಟಲ್ ಅಂತರವನ್ನು ನಿವಾರಿಸುವುದು ಮತ್ತು ಅಂತಿಮ ಹಂತದ ಸಂಪರ್ಕವನ್ನು ಖಚಿತಪಡಿಸುವುದಾಗಿದೆ ಆದರೆ ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ತಾಲ್ಲೂಕಿನ ಹಾಲೇಶಪುರ, ಅರಳಿಕಟ್ಟೆ, ಚಿಕ್ಕಕೋಗಲೂರು ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಮುಸ್ಸೇನಹಾಳು ಗ್ರಾಮ ಹಾಗೂ ಹರಪನಹಳ್ಳಿ ತಾಲ್ಲೂಕಿನ ಕೋಂಗನಹೊಸೂರು ಮತ್ತು ಒಳತಾಂಡ ಗ್ರಾಮಗಳ ಜನತೆ ಇಂದು ಕೂಡ ಮೂಲಭೂತ ಮೊಬೈಲ್ ನೆಟ್‌ವರ್ಕ್ ಸೌಲಭ್ಯವಿಲ್ಲದೆ ದೈನಂದಿನ ತೊಂದರೆ ಅನುಭವಿಸುತ್ತಿದ್ದಾರೆಂದರು.

Read also : ಕುರ್ಕಿ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

ಈ ವಿಷಯವನ್ನು ಹಲವಾರು ಬಾರಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ.ಈ ವಿಷಯದ ಬಗ್ಗೆ ಈಗಾಗಲೇ ಶಿವಮೊಗ್ಗ ವಲಯ ಕಚೇರಿಗೆ ನಾಲ್ಕು ಪತ್ರಗಳು, ಬಳ್ಳಾರಿ ವಲಯ ಕಚೇರಿಗೆ ಎರಡು ಪತ್ರಗಳು, ಹಾಗು ಸಂವಹನ ಸಚಿವಾಲಯಕ್ಕೆ 16/03/2025 ಮತ್ತು 20/09/2025 ರಂದು ಪತ್ರಗಳು ಕಳುಹಿಸಲಾಗಿದೆ. ಸಂವಹನ ಸಚಿವಾಲಯದಿಂದ 17/10/2025 ರಂದು ಉತ್ತರ ಬಂದಿದ್ದರೂ ಬಿಎಸ್ ಎನ್‌ಎಲ್ ಮೊಬೈಲ್ ಟವರ್ ಸ್ಥಾಪನೆ ಕುರಿತು ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ.

ಈ ಪರಿಣಾಮವಾಗಿ ಇಲ್ಲಿ ವಾಸಿಸುವ ವಿದ್ಯಾರ್ಥಿಗಳು, ರೈತರು, ಸಣ್ಣ ವ್ಯಾಪಾರಿಗಳು ಇವರೆಲ್ಲರಿಗೂ ಡಿಜಿಟಲ್ ಪೇಮೆಂಟ್, ಆನ್‌ಲೈನ್ ಶಿಕ್ಷಣ, ಟೆಲಿಮೆಡಿಸಿನ್, ತುರ್ತು ಸಂಪರ್ಕ ಸೇರಿದಂತೆ ಅನೇಕ ಸೇವೆಗಳಿಗೆ ಸಾಕಷ್ಟು ಅಡಚಣೆಯಾಗುತ್ತಿದೆ.ಈ ರೀತಿಯ ದೀರ್ಘಕಾಲದ ಸಂಪರ್ಕ ಕೊರತೆಯು ಗ್ರಾಮೀಣ-ನಗರ ಡಿಜಿಟಲ್ ಅಂತರವನ್ನು ಹೆಚ್ಚಿಸುತ್ತಿದ್ದು, ಮೂಲಭೂತ ಸೇವೆಗಳು ತೊಂದರೆಯನ್ನು ಎದುರಿಸುತ್ತಿವೆ.

ಆದ್ದರಿಂದ,ಉಲ್ಲೇಖಿತ ಗ್ರಾಮಗಳಲ್ಲಿ ತಕ್ಷಣ ಬಿಎಸ್ ಎನ್‌ಎಲ್ ಮೊಬೈಲ್ ಟವರ್ ಸ್ಥಾಪಿಸುವಂತೆ  ಸಂವಹನ ಸಚಿವರವರು ಬಿಎಸ್ ಎನ್‌ಎಲ್ ಸಂಸ್ಥೆಗೆ ತಕ್ಷಣ ನಿರ್ದೇಶನ ನೀಡುವಂತೆ ವಿನಂತಿಸಿದರು. ಇದರಿಂದ ನಮ್ಮ ಕ್ಷೇತ್ರದ ಗ್ರಾಮೀಣ ಪ್ರದೇಶಕ್ಕೆ ಸಮಾನ ಮತ್ತು ನಂಬಿಕೆಗೆ ಅರ್ಹವಾದ ಡಿಜಿಟಲ್ ಸಂಪರ್ಕ ದೊರೆಯುತ್ತದೆ ಎಂದು ಮನವಿ ಮಾಡಿದರು.

2017ರಿಂದ ಬಾಕಿ ಉಳಿದಿರುವ ಬಿಎಸ್ ಎನ್ ಎಲ್ ನೌಕರರ 3ನೇ ವೇತನ ಪರಿಷ್ಕರಣೆ ನೀಡುವುದರಲ್ಲಿ “ಅಫೋರ್ಡಬಿಲಿಟಿ ಕ್ಲಾಸ್” ಎಂಬ ಷರತ್ತು ವಿಧಿಸಲಾಗಿದೆ. ಈ ಷರತ್ತು ಅನ್ಯಾಯಕರವಾಗಿದೆ, ಏಕೆಂದರೆ ಬಿಎಸ್ ಎನ್‌ ಎಲ್ ಸಂಸ್ಥೆ ಲಾಭಕ್ಕಾಗಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲ. ಇದು ರಾಷ್ಟ್ರ ಸೇವೆಗೆ ಮೀಸಲಾಗಿರುವ ಸಾರ್ವಜನಿಕ ವಲಯದ ಸಂಸ್ಥೆ.ಆದ್ದರಿಂದ,ನ್ಯಾಯದ ದೃಷ್ಟಿಯಿಂದ ಈ ಅಫೋರ್ಡಬಿಲಿಟಿ ಷರತ್ತನ್ನು ರದ್ದುಪಡಿಸಿ, 3ನೇ ವೇತನ ಪರಿಷ್ಕರಣೆಯನ್ನು 31 ಮಾರ್ಚ್ 2026ರ ಒಳಗಾಗಿ ಬಿಎಸ್ ಎನ್ ಎಲ್ ನೌಕರರಿಗೆ ಅನುಗ್ರಹಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕುರ್ಕಿ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ
Next Article Daavanagere ದಿವ್ಯಾಂಗ್ಯ ಮಕ್ಕಳ ಸೇವೆಯೊಂದಿಗೆ ದೇವರನ್ನು ಕಾಣಿರಿ: ಶಾಸಕ ಕೆ.ಎಸ್‌.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಾಳೆಯಿಂದ 3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ

ದಾವಣಗೆರೆ ಡಿ.16   : ಕೆಯುಐಡಿಎಫ್‍ಸಿ ಇಲಾಖೆಯ ವತಿಯಿಂದ ದಾವಣಗೆರೆ ನಗರದಲ್ಲಿ 24/7 ಜಲಸಿರಿ ಯೋಜನೆಯನ್ನು ಕೈಗೊಳ್ಳಲಾಗಿದ್ದು ಅದರಂತೆ ರಾಜನಹಳ್ಳಿ ಜಾಕ್‍ವೆಲ್ ನಿಂದ…

By Dinamaana Kannada News

ಅಗತ್ಯ ಮೀರಿದ ಸಂಗ್ರಹವೂ ಪರಿಸರಕ್ಕೆ ಹಾನಿ: ಡಾ. ಲಕ್ಷ್ಮಿಕಾಂತ

ದಾವಣಗೆರೆ:  ಸುಲಭದ ಉತ್ಪಾದನೆ, ಕಡಿಮೆ ದರ ಅಥವಾ ರಿಯಾಯಿತಿ ದರದ ಮಾರಾಟದ ಹೆಸರಿನಲ್ಲಿ ನಡೆಯುವ ಮಾರುಕಟ್ಟೆ ಪ್ರಭಾವವೂ ಸಹ ಮನುಷ್ಯನ…

By Dinamaana Kannada News

ಸತೀಶ್ ಬೆಂಕಿಕೆರೆಗೆ ‘ವಿಶಿಷ್ಟ ರೈಲು ಸೇವಾ ಪುರಸ್ಕಾರ’ ಪ್ರದಾನ

ದಾವಣಗೆರೆ: ಹುಬ್ಬಳ್ಳಿಯ ರೈಲ್ವೆಸೌಧದಲ್ಲಿ ನೈರುತ್ಯ ರೈಲ್ವೆ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ದಾವಣಗೆರೆ ರೈಲ್ವೆ ನಿಲ್ದಾಣದ ಆರ್‌ಪಿಎಫ್ ಮುಖ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?