Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere judgement news | ಪತ್ನಿ ಕೊಲೆ ಪ್ರಕರಣ : ಗಂಡ,ಅತ್ತೆ, ಮಾವಗೆ ಜೀವಾವಧಿ ಶಿಕ್ಷೆ
ತಾಜಾ ಸುದ್ದಿ

Davanagere judgement news | ಪತ್ನಿ ಕೊಲೆ ಪ್ರಕರಣ : ಗಂಡ,ಅತ್ತೆ, ಮಾವಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: October 10, 2024 3:13 pm
Dinamaana Kannada News
Share
SHARE

ದಾವಣಗೆರೆ.ಅ.10 (Davanagere) : ಬ್ಯಾಂಕಿನಲ್ಲಿ ಅಡವಿಟ್ಟಿದ್ದ ಆಭರಣಗಳನ್ನು ಬಿಡಿಸಿಕೊಡುಂತೆ ಕೇಳಿದ ಹೆಂಡತಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಆಕೆಯ ಸಾವಿಗೆ ಕಾರಣನಾಗಿದ್ದ ಗಂಡ, ಮಾವ ಮತ್ತು ಅತ್ತೆಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ 2 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಹೊನ್ನಾಳಿ ತಾಲ್ಲೂಕು ಚಿಕ್ಕ ಬಾಸೂರು ತಾಂಡದ ಪತಿ ಗಿರಿಧರ್ (32), ತಂದೆ ಹಾಲಪ್ಪನಾಯ್ಕ(58) ಮತ್ತು ತಾಯಿ ಲಲಿತಾಬಾಯಿ(50) ಶಿಕ್ಷೆಗೆ ಗುರಿಯಾದ ಆರೋಪಿಗಳು.

ಚಿಕ್ಕ ಬಾಸೂರು ಗ್ರಾಮದ ಸುಮ(24)ಎಂಬ ಯುವತಿಯನ್ನು ಅದೇ ಗ್ರಾಮದ ಗಿರಿಧರ ಎಂಬ ಯುವಕನಿಗೆ 5 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭದಲ್ಲಿ 6 ತೊಲ ಬಂಗಾರ, 40 ಸಾವಿರ ರೂ ನಗದು, ಒಂದು ಬೈಕನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಮದುವೆಯ ನಂತರ 3 ವರ್ಷಗಳ ಕಾಲ ಅತ್ತೆ, ಮಾವ ಚೆನ್ನಾಗಿ ನೋಡಿಕೊಂಡರು.

ಮದುವೆ ಸಂದರ್ಭದಲ್ಲಿ ತವರು ಮನೆಯವರು ನೀಡಿದ್ದ 6 ತೊಲ ಬಂಗಾರದ ಆಭರಣಗಳನ್ನು ಗಿರಿಧರ ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದಿದ್ದ. ಈ ಆಭರಣಗಳನ್ನು ಬಿಡಿಸಿಕೊಡುವಂತೆ ಕೇಳಿದಾಗ ಸುಮಾಳಿಗೆ ಗಂಡ, ಅತ್ತೆ,ಮಾವ ಸೇರಿಕೊಂಡು ದೈಹಿಕವಾಗಿ ಹಲ್ಲೆ ಮಾಡಿ, ಮನೆಯಲ್ಲಿದ್ದ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಇದರಿಂದ ರಕ್ಷಣೆ ಮಾಡಿಕೊಳ್ಳಲು ಮನೆಯಲ್ಲಿದ್ದ ನೀರಿನ ಡ್ರಂನಲ್ಲಿ ಮುಳುಗಿ ಬೆಂಕಿ ನಂದಿಸಿಕೊಂಡಿದ್ದೆ. ನಂತರ ಅಕ್ಕಪಕ್ಕದ ಮನೆಯವರು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ನಂಥರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಗಾಯಾಳು ಸುಮ ಮರಣಪೂರ್ವ ಹೇಳಿಕೆ ನೀಡಿದ್ದರು.

Read also : Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಗಾಯಾಳು ಸುಮ ದೂರಿನ ಮೇರೆಗೆ ಪ್ರಕರಣ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಮಂಜುನಾಥ .ಕೆ ಗಂಗಲ್ ತನಿಖೆ ಕೈಗೊಂಡು ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣ್ ಕುಮಾರ್ ಆರ್.ಎನ್ ಅವರು, ಸಾಕ್ಷಿ ಆಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸುಮಳ ಗಂಡ ಗಿರಿಧರ, ಮಾವ ಹಾಲಪ್ಪನಾಯ್ಕ ಅತ್ತೆ ಲಲಿತಾಬಾಯಿ ಅವರಿಗೆ ಜೀವಾವಧಿ ಶಿಕ್ಷೆ ಮತ್ತು 38 ಸಾವಿರ ರೂ ದಂಡ ವಿಧಿಸಿ ಗುರುವಾರ ತೀರ್ಪು ನೀಡಿದರು. ಪ್ರಕರಣದಲ್ಲಿ ಪಿರ್ಯಾದಿಯವರ ಪರವಾಗಿ ಸರ್ಕಾರಿ ವಕೀಲ ಕೆ.ಜಿ ಜಯ್ಯಪ್ಪ ವಾದ ಮಂಡಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Leprosy campaign program davanagere Davanagere news | ಕುಷ್ಠರೋಗ, ಕ್ಷಯರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Next Article Vidyanagar Police Station Davanagere Davanagere | ಸುಲಿಗೆ ಪ್ರಕರಣ : ಆರೋಪಿಗಳ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಸೆ.22 ರಿಂದ ಅ.07 ರವರೆಗೆ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ : ಡಿಸಿ

ದಾವಣಗೆರೆ ಸೆ.17: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಇದೇ ಸೆ. 22 ರಿಂದ ಅ. 7 ರವರೆಗೆ…

By Dinamaana Kannada News

ಜೂ 9 ರಂದು ನುಡಿನಮನ ಕಾರ್ಯಕ್ರಮ

ದಾವಣಗೆರೆ : ನಗರದ ಕುವೆಂಪು ಕನ್ನಡ ಭವನದಲ್ಲಿ ಜೂ.9ರಂದು ಬೆಳಗ್ಗೆ 11 ಗಂಟೆಗೆ ಡಾ.ಎಂ.ಜಿ. ಈಶ್ವರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮ…

By Dinamaana Kannada News

Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ.ನ.5 (Davanagere)  : ಗ್ರಾಮೀಣಭಾಗದ ಸರ್ಕಾರಿ ಶಾಲೆ,ಆಸ್ಪತ್ರೆಗಳ ಸುಧಾರಣೆ ಮಾಡಬೇಕು.ಆರೋಗ್ಯ ಶಿಬಿರ ಹಾಗೂ ಸ್ವಚ್ಚತೆ ಮೂಲಕ ಮಾದರಿಯಾಗಬೇಕು ಎಂದು ಸಂಸದರಾದ…

By Dinamaana Kannada News

You Might Also Like

Devotee Kanakadasa
ಅಭಿಪ್ರಾಯ

ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಗೋವುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗ

By Dinamaana Kannada News
Davanagere
ಅಭಿಪ್ರಾಯ

ನವಜಾತ ಶಿಶುಗಳ ಸಂರಕ್ಷಣ ದಿನ : ಲೇಖನ ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?