Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವಂಚನೆ ಮಾಡಿದರೆ ಕಾನೂನಾತ್ಮಕ ಹೋರಾಟ ನಡೆಸಿ : ಜಿ.ಟಿ. ವಿಜಯಲಕ್ಷ್ಮಿ
ತಾಜಾ ಸುದ್ದಿ

Davanagere | ವಂಚನೆ ಮಾಡಿದರೆ ಕಾನೂನಾತ್ಮಕ ಹೋರಾಟ ನಡೆಸಿ : ಜಿ.ಟಿ. ವಿಜಯಲಕ್ಷ್ಮಿ

Dinamaana Kannada News
Last updated: December 29, 2024 3:30 am
Dinamaana Kannada News
Share
Davangere
Davangere
SHARE

ದಾವಣಗೆರೆ (Davanagere) : ಮಾರಾಟಗಾರರು ಗ್ರಾಹಕರಿಗೆ ಸರಕು ಮತ್ತು ಸೇವೆ ಸೂಕ್ತ ರೀತಿಯಲ್ಲಿ ನೀಡದೆ ವಂಚನೆ ಮಾಡಿದರೆ ಅದರ ವಿರುದ್ಧ ಬಳಕೆದಾರರು ನ್ಯಾಯಕ್ಕಾಗಿ ಕಾನೂನಾತ್ಮಕ ಹೋರಾಟ ನಡೆಸಬೇಕು ಎಂದು ತುಮಕೂರು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಜಿ.ಟಿ. ವಿಜಯಲಕ್ಷ್ಮಿ ಹೇಳಿದರು.

ನಗರದ ಆರ್.ಎಲ್ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರ ಹಕ್ಕುಗಳು ಮತ್ತು ಹಿತರಕ್ಷಣೆ ಎಲ್ಲರ ಹೊಣೆಯಾಗಿದೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳುವ ಮೂಲಕ ಗ್ರಾಹಕರ ಹಿತರಕ್ಷಣೆಯನ್ನು ಕಾಪಾಡಬೇಕು. ಜೀವನದಲ್ಲಿ ನಿತ್ಯ ಬಳಕೆಗಾಗಿ ಅನೇಕ ಸಾಮಗ್ರಿ ಕೊಳ್ಳುವ ನಾವೆಲ್ಲರೂ ಗ್ರಾಹಕರೇ. ಗ್ರಾಹಕರ ರಕ್ಷಣೆಗಾಗಿ ಸರ್ಕಾರ ಕಾನೂನು ರೂಪಿಸಿ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ನೀಡಿದೆ. ಗ್ರಾಹಕರಿಗೆ ಸುರಕ್ಷತೆ, ವಸ್ತುವಿನ ಬಗ್ಗೆ ಮಾಹಿತಿ, ಆಯ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಸರಕು ಮತ್ತು ಸೇವೆ ಸೂಕ್ತ ರೀತಿಯಲ್ಲಿ ನೀಡದೆ ಮೋಸ ಮಾಡಿದರೆ ಅದರ ವಿರುದ್ಧ ಬಳಕೆದಾರರು ನ್ಯಾಯಕ್ಕಾಗಿ ಕಾನೂನಾತ್ಮಕ ಹೋರಾಟ ನಡೆಸಬೇಕು’ ಎಂದರು.

ಗ್ರಾಹಕರ ರಕ್ಷಣಾ ಕಾಯ್ದೆ 1986ರಕ್ಕೆ ಮತ್ತಷ್ಟು ಬಲ ತುಂಬಿ ಗ್ರಾಹಕರ ರಕ್ಷಣಾ ಕಾಯ್ದೆ-2019 ರೂಪಿಸಲಾಗಿದೆ. ಈ ಕಾಯ್ದೆಗೆ ಆ.9ರಂದು ರಾಷ್ಟ್ರಪತಿಯ ಅಂಕಿತ ಬಿದ್ದಿದೆ. ಹೊಸ ಕಾಯ್ದೆ ಅನ್ವಯ ಜಿಲ್ಲಾ ಗ್ರಾಹಕರ ವೇದಿಕೆಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ರೂ.20 ಲಕ್ಷ ಮೌಲ್ಯದ ವಸ್ತುಗಳ ನಷ್ಟದ ಪರಿಮಿತಿಯನ್ನು ರೂ.1 ಕೋಟಿಗೆ ಹೆಚ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್ ಅರುಣ್ ಕುಮಾರ್ ಮಾತನಾಡಿ, `ಜಾಗತಿಕವಾಗಿ ಬದಲಾದ ವ್ಯವಸ್ಥೆಯಲ್ಲಿ ಆನ್‍ಲೈನ್ ಖರೀದಿ ಹೆಚ್ಚುತ್ತಿದೆ. ಗ್ರಾಹಕರು ನೀಡುವ ಹಣಕ್ಕೆ ಸರಿಯಾದ ರೀತಿಯ ಮತ್ತು ಗುಣಮಟ್ಟದ ಸರಕು ನೀಡಬೇಕು. ಖರೀದಿಸಿದ ವಸ್ತುವಿನ ಪ್ರಮಾಣ, ಗುಣಮಟ್ಟದಲ್ಲಿ ವಂಚನೆಯಾದರೆ ಗ್ರಾಹಕರ ರಕ್ಷಣಾ ಕಾಯ್ದೆಯಡಿ ಪ್ರಶ್ನಿಸುವ ಅಧಿಕಾರ ನೀಡಲಾಗಿದೆ. ಸಾರ್ವಜನಿಕರು ಗ್ರಾಹಕರ ವೇದಿಕೆ ಮೆಟ್ಟಿಲೇರಿ ಪರಿಹಾರ ಪಡೆಯುವ ಅವಕಾಶವಿದೆ’ ಎಂದು ವಿವರಿಸಿದರು.

ನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿ ಗ್ರಾಹಕ ಹಕ್ಕುಗಳು ಅವಶ್ಯಕತೆ ಇದೆ. ಮಾರುಕಟ್ಟೆ ವ್ಯವಸ್ಥೆಯು ಇಂದು ನೈತಿಕತೆಗಳು ಹಾಗೂ ಮೌಲ್ಯಗಳ ಮೇಲೆ ನಡೆಯಬೇಕು. ಆಗ ಮಾತ್ರ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಮಾಧ್ಯಮಗಳಲ್ಲಿ ತೋರಿಸುವ ಕೆಲವೊಂದು ಜಾಹಿರಾತುಗಳು ಉದಾಹರಣೆಗೆ ತಂಪು ಪಾನೀಯ ಕುಡಿದು ನೀರಿಗೆ ಹಾರುವುದು, ಗುಟುಕ ತಂಬಾಕುಗಳಂತಹ ಜಾಹೀರಾತುಗಳಿಂದ ಯುವಕರು ಮತ್ತು ಮಕ್ಕಳ ಮೇಲೆ ಅನೇಕ ಪ್ರಭಾವ ಬೀರುತ್ತಿದೆ, ``ಗ್ರಾಹಕರೇ ಎಚ್ಚರ ಎನ್ನುವ ಬದಲು ಮಾರಾಟಗಾರರೇ ಎಚ್ಚರ” ಎಂಬ ಸಂದೇಶ ಸಾರುವ ಅವಶ್ಯಕತೆ ಇದೆ ಎಂದರು.

ವೇದಿಕೆಯಲ್ಲಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಡಾ.ಜಿ.ಎಸ್.ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಹೈ ಕೋರ್ಟ್ ವಕೀಲರಾದ ರಾಜಶೇಖರ್ ಉಪಸ್ಥಿತರಿದ್ದರು.

ಕಾನೂನು ವಿದ್ಯಾರ್ಥಿ ಶ್ರೀನಿವಾಸ್ ಪ್ರಾರ್ಥಿಸಿದರು, ಸಹಾಯಕ ಪ್ರಾಧ್ಯಾಪಕ ವಿದ್ಯಾಧರ ವೇದಮೂರ್ತಿ ಟಿ. ಸ್ವಾಗತಿಸಿದರು,

ಕಾನೂನೂ ವಿದ್ಯಾರ್ಥಿ ಪ್ರಶಾಂತ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಬಿ.ಪಿ.ಬಸವನಗೌಡ, ದೈಹಿಕ ಶಿಕ್ಷಕ ಪವನ್ ಸೇರಿದಂತೆ ಕಾಲೇಜಿನ ಬೋಧಕ ಭೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read also  : Davanagere | ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಎಸ್ಎಎಸ್ಸೆಸ್ ಕೇಂದ್ರದ 15 ಯೋಗಪಟುಗಳು ಭಾಗಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಎಸ್ಎಎಸ್ಸೆಸ್ ಕೇಂದ್ರದ 15 ಯೋಗಪಟುಗಳು ಭಾಗಿ
Next Article Davanagere DAVANAGERE | ಸಂಸದರ ಆಸರೆ : ಮಕ್ಕಳಿಗೆ ಸಂಸತ್ ವೀಕ್ಷಣೆ ಭಾಗ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere):  ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ…

By Dinamaana Kannada News

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ  

ಚಿತ್ರದುರ್ಗ ಜು 20:  ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು  ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್…

By Dinamaana Kannada News

ಸರ್ಕಾರಿ ಐಟಿಐ ಕಾಲೇಜಿನಿಂದ ಚುನಾವಣಾ ಮತದಾನ ಜಾಥಾ

ದಾವಣಗೆರೆ :  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಅವರು ಮತದಾನ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?