ದಾವಣಗೆರೆ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ ಶನಿವಾರ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 9360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು 14,04,66,571/- ಹಣದ ಪರಿಹಾರ ಆಗಿದೆ ಮತ್ತು 2,62,712 ವ್ಯಾಜ್ಯಪೂರ್ವ ಪ್ರಕರಣಗಳು ಮುಕ್ತಾಯಗೊಂಡು 72,62,10,788/- ಹಣದ ವ್ಯವಹಾರ ನಡೆದಿದ್ದು, ಸರ್ಕಾರಿ ವಸೂಲಾತಿ ಮತ್ತು ಪರಿಹಾರ ಇತ್ಯಾದಿಯಾಗಿ ರಾಜೀ ಮೂಲಕ ಮುಕ್ತಾಯಗೊಂಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮಕರಣ್ಣವರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 23 ವೈವಾಹಿಕ ಪ್ರಕರಣಗಳ ರಾಜೀ
ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 20 ಜೋಡಿಗಳು ಒಂದಾಗಿ ಮತ್ತೊಮ್ಮೆ ಸಹಬಾಳ್ವೆ ನಡೆಸಲು ತೆರಳಿದ್ದಾರೆ. ಅದರಂತೆ ಹರಿಹರ ತಾಲ್ಲೂಕು ನ್ಯಾಯಾಲಯಗಳಲ್ಲಿ 01, ಚನ್ನಗಿರಿ ತಾಲ್ಲೂಕು ನ್ಯಾಯಾಲಯಗಳಲ್ಲಿ 01, ಹೊನ್ನಾಳಿ ನ್ಯಾಯಾಲಯಗಳಲ್ಲಿ 01 ಪ್ರಕರಣದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ ಪ್ರಕರಣ ಹೀಗೆ ಜಿಲ್ಲೆಯಲ್ಲಿ ಒಟ್ಟಾರೆ 23 ಜೋಡಿಗಳು ಒಂದಾಗಿ ಮತ್ತೊಮ್ಮೆ ಸಹಬಾಳ್ವೆ ನಡೆಸಲು ನ್ಯಾಯಾಧೀಶರ ಮುಂದೆ ಸಮ್ಮತಿ ವ್ಯಕ್ತಪಡಿಸಿದ್ದಾರೆ.
ಮರು ಹೊಂದಾಣಿಕೆಯಾದ ಜೋಡಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ರ್ಕಾಯದರ್ಶಿಗಳು ಮತ್ತು ಇತರ ನ್ಯಾಯಾಧೀಶರು ಅಭಿನಂಧನೆ ಸಲ್ಲಿಸಿ ಒಂದಾದ ಜೋಡಿಗಳ ಮುಂಬರುವ ಜೀವನ ಸುಖಕರವಾಗಲೀ ಎಂದು ಸಿಹಿ ಹಂಚಿ ಹಾರೈಸಿದರು.
Read also : ದಾವಣಗೆರೆ | ಸಾಲದ ಹಣ ಜಮೆಗಾಗಿ ನಡೆದ ಜಗಳದಲ್ಲಿ ಪತ್ನಿ ಮೂಗು ಕಚ್ಚಿ ಗಾಯಗೊಳಿಸಿದ ಪತಿರಾಯ
77 ಅಪರಾಧಿಕ ಪ್ರಕರಣಗಳು, 195 ಚಕ್ ಅಮಾನ್ಯ ಪ್ರಕರಣಗಳು, 43 ಬ್ಯಾಂಕ್ ವಸೂಲಾತಿ ಕೇಸ್ಗಳು, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ ಪ್ರಕರಣಗಳು, 144 ವಿದ್ಯುತ್ ಕಳ್ಳತನದ ಪ್ರಕರಣಗಳು, 02 ಅಕ್ರಮ ಮರಳು ಗಣಿಗಾರಿಕೆ ಪ್ರಕರಣಗಳು, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆಗಳು, 26 ಭೂ ಸ್ವಾಧೀನ ಪಾರಿಹಾರ ಜಾರಿ ಅರ್ಜಿಗಳು, 132 ಇತರೆ ಜಾರಿ ಅರ್ಜಿಗಳು ಅಲ್ಲದೆ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ ದಾವೆಗಳು 50 ರಾಜೀ ಮೂಲಕ ಇತ್ಯರ್ಥಗೊಂಡಿವೆ. ಇದಲ್ಲದೇ ಇತರೆ ಪ್ರಕರಣಗಳು ಸೇರಿ ಒಟ್ಟು 9,350 ಜಾರಿಯಲ್ಲಿದ್ದ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸುಮಾರು 1,747 ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಶ್ಯಕ್ಕಾಗಿ ಮತ್ತು ಅವರುಗಳಿಗೆ ಸರ್ಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರೆ ಅನುಕೂಲತೆಗಳಿಗೆ ಅನುವು ಮಾಡಿಕೊಟ್ಟಂತಾಯಿತು.
ವ್ಯಾಜ್ಯ ಪೂರ್ವ ಪ್ರಕರಣಗಳಾದ ಬ್ಯಾಂಕ್ ಸಾಲ ವಾಸೂಲಾತಿ, ಕಾರ್ಮಿಕ ವ್ಯಾಜ್ಯಾಗಳು, ನೀರಿನ ಬಾಕಿ ವಸೂಲಾತಿ, ಕಂದಾಯ ಪ್ರಕರಣಗಳು, ಟ್ರಾಫಿಕ್ ಪ್ರಕರಣಗಳು ಇತ್ಯಾದಿ ಸೇರಿದಂತೆ ಒಟ್ಟಾರೆಯಾಗಿ 2,62,712 ಪ್ರಕರಣಗಳು ಇತ್ಯರ್ಥಗೊಂಡು ಮೇಲ್ಕಾಣಿಸಿದ ಎಲ್ಲಾ ಪ್ರಕರಣಗಳಿಂದಾಗಿ 72,62,10,788/-ವಸೂಲಾತಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮಕರಣ್ಣವರ ತಿಳಿಸಿದ್ದಾರೆ.