Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ್ಯಾಮತಿ ಎಸ್‍ಬಿಐ ದರೋಡೆ ಪ್ರಕರಣ : 17.5 ಕೆಜಿ ಚಿನ್ನಾಭರಣ ವಶಕ್ಕೆ, ಆರೋಪಿಗಳ ಸೆರೆ
ತಾಜಾ ಸುದ್ದಿ

ನ್ಯಾಮತಿ ಎಸ್‍ಬಿಐ ದರೋಡೆ ಪ್ರಕರಣ : 17.5 ಕೆಜಿ ಚಿನ್ನಾಭರಣ ವಶಕ್ಕೆ, ಆರೋಪಿಗಳ ಸೆರೆ

Dinamaana Kannada News
Last updated: March 31, 2025 12:27 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ನ್ಯಾಮತಿ ಪಟ್ಟಣದ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸರುವ ದಾವಣಗೆರೆ ಪೊಲೀಸರು 13 ಕೋಟಿ ರೂ. ಮೌಲ್ಯದ 17.5 ಕೆ.ಜಿ. ಚಿನ್ನಾಭರಣ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಹೇಳಿದರು.

ತಾಲೂಕಿನ ಸುರಹೊನ್ನೆಯಲ್ಲಿ ಸಿಹಿ ತಿಂಡಿ ವ್ಯಾಪಾರ ಮಾಡುತ್ತಿದ್ದ ಮೂಲತಃ ತಮಿಳುನಾಡು ಮಧುರೈನ ವಿಜಯಕುಮಾರ್(30), ಅಜಯ್‍ಕುಮಾರ್(28) ಇಬ್ಬರು ಸಹೋದರರಾಗಿದ್ದು, ಪರಮಾನಂದ (30) ತಂಗಿಯ ಗಂಡ, ಸುರಹೊನ್ನೆಯ ಅಭಿಷೇಕ(23), ಚಂದ್ರು (23), ಮಂಜುನಾಥ್ (32) ಬಂಧನಕ್ಕೆ ಒಳಗಾದ ಪ್ರಮುಖ ಆರೋಪಿಗಳು ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ್ ವರ್ಗೀಸ್ ಅವರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ತನಿಖೆಯಲ್ಲಿ ಸಹಕರಿಸಲು ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಬಿ.ಎಸ್.ಬಸವರಾಜ್ ಅವರನ್ನೊಳಗೊಂಡ ಐದು ತಂಡ ರಚಿಸಲಾಗಿತ್ತು.

ಮೊದಲ ದಿನದಿಂದ ಪ್ರತಿ ತಂಡಕ್ಕೂ ಪ್ರತ್ಯೇಕ ಕೆಲಸ ವಹಿಸಲಾಗಿತ್ತು. ಆರಂಭದಲ್ಲಿ ಎಲ್ಲಾ ರೀತಿಯ ತಾಂತ್ರಿಕ ಮತ್ತು ಭೌತಿಕ ಸಾಕ್ಷಾಧಾರ ಪರಿಶೀಲಿಸಿದರೂ ಯಾವುದೇ ಉಪಯುಕ್ತ ಮಾಹಿತಿ ಲಭ್ಯವಾಗಲಿಲ್ಲ. ಈ ಹಿಂದೆ ಬ್ಯಾಂಕ್ ದರೋಡೆ, ಎಟಿಎಂ ಕಳ್ಳತನ ಪ್ರಕರಣಗಳ ವಿವರ, ಹಳೆಯ ಆರೋಪಿಗಳ ವಿವರ, ಅಂತರ್ ರಾಜ್ಯ ಗ್ಯಾಂಗ್ ವಿವರ ಪಡೆದು ಈ ಪ್ರಕರಣದೊಂದಿಗೆ ತಾಳೆ ಹಾಕಿ ಪೊಲೀಸ್ ಅಧಿಕಾರಿಗಳ ತಂಡ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.

ತಾಂತ್ರಿಕ ಮೂಲಗಳಿಂದ ದೊರೆತ ಸುಳಿವಿನಿಂದ ಹಾಗೂ ಹಿಂದೆ ನಡೆದ ಬ್ಯಾಂಕ್ ದರೋಡೆ ಪ್ರಕರಣಗಳ ತಾಳೆಯಿಂದ ಎಸ್‍ಬಿಐ ಬ್ಯಾಂಕ್ ಪ್ರಕರಣದ ಯುಪಿನ ಬದಾಯ ಜಿಲ್ಲೆಯ ಕಕ್ರಾಳ ಗ್ಯಾಂಗ್ ಇರಬಹುದು ಎಂದು ಶಂಕಿಸಿ ತಂಡಗಳು ಯುಪಿಯ ಕಕ್ರಾಳಕ್ಕೆ ಹೋಗಿ 15ಕ್ಕೂ ಹೆಚ್ಚು ಅಂತರ್ ರಾಜ್ಯ ಸಂಶಯಾತ್ಮಕ ವ್ಯಕ್ತಿಗಳನ್ನು ವಶಕ್ಕೆ ಪಡೆದು ಸಂಪೂರ್ಣ ವಿವರ ಪಡೆದಿದ್ದರು.

ನ್ಯಾಮತಿ ಪ್ರಕರಣಕ್ಕಿಂತ ಹಿಂದೆ 2024ರಲ್ಲಿ ನಡೆದ ವಿವಿಧ ರಾಜ್ಯಗಳಲ್ಲಿ ಬ್ಯಾಂಕ್ ಕಳ್ಳತನ, ದರೋಡೆ ಮತ್ತು ದರೋಡೆಗೆ ಪ್ರಯತ್ನ ಪ್ರಕರಣ ಪರಿಶೀಲಿಸಲಾಯಿತು. ಅಲ್ಲದೇ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಠಾಣೆ ವ್ಯಾಪ್ತಿಯ ಎಸ್‍ಬಿಐ ಬ್ಯಾಂಕ್ ಕಳ್ಳತನದ ಪ್ರಯತ್ನ ಪ್ರಕರಣ ಪರಿಶೀಲಿಸಿದಾಗ ನ್ಯಾಮತಿಗೆ 30 ಕಿ.ಮೀ. ಹತ್ತಿರವಿರುವುದು ಮತ್ತು ಬ್ಯಾಂಕ್ ಪ್ರಕರಣಕ್ಕೆ ಸಾಮ್ಯತೆ ಇತ್ತು. ಹೀಗಾಗಿ ಮತ್ತೆ ಯುಪಿಯ ಕಕ್ರಾಳ ಗ್ಯಾಂಗ್ ಕಡೆಗೆ ಹೋಯಿತು.

ಹೀಗೆ ಆರು ತಿಂಗಳ ಕಾಲ ಪರಿಶೀಲಿಸಿದಾಗ, ಸ್ಥಳೀಯರಿಂದಲೇ ಈ ಕೃತ್ಯ ನಡೆದಿದೆ ಅಂಶ ಕೊನೆಗೆ ಸಿಕ್ಕಿತು ಎಂದು ಪ್ರಕರಣದ ಇಡೀ ತನಿಖೆಯ ವಿವರವನ್ನು ಐಜಿಪಿ ರವಿಕಾಂತೇಗೌಡ ಬಿಚ್ಚಿಟ್ಟರು.

Read also : Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿಗಳಾದ ವಿಜಯಕುಮಾರ್ ಸಂತೋಷ,ಬಿ.ಮಂಜುನಾಥ್, ತನಿಖಾಧಿಕಾರಿಗಳಾದ ಶ್ಯಾಮ್ ವರ್ಗೀಸ್, ಬಿ.ಎಸ್.ಬಸವರಾಜ್ ಸೇರಿದಂತೆ ಐದು ತಂಡ ಅಧಿಕಾರಿಗಳು, ಸಿಬ್ಬಂದಿಗಳು ಗೋಷ್ಠಿಯಲ್ಲಿ ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ
Next Article Applications invited ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ

ಚಿತ್ರದುರ್ಗ : ಒಳ ಮೀಸಲು ಜಾರಿಗೆ ಸಿದ್ಧರಾಮಯ್ಯ ನೇತತ್ವದ ಕಾಂಗ್ರೆಸ್ ಸರಕಾರ ಬದ್ಧವಾಗಿದ್ದು, ಮಾದಿಗ ಸಮುದಾಯದ ಹೋರಾಟಗಾರರು ಪ್ರತಿಭಟನೆ, ಬಂದ್…

By Dinamaana Kannada News

ಸಡಗರ,ಸಂಭ್ರಮದಿಂದ ಈದ್ ಮಿಲಾದ್ ಆಚರಣೆ

ದಾವಣಗೆರೆ: ನಗರದ ಪ್ರವಾದಿ ಮುಹಮ್ಮದ್ ಜನ್ಮದಿನದ ಹಿನ್ನಲೆಯಲ್ಲಿ ಮುಸ್ಲಿಂ ಬಾಂದವರು ಈದ್ ಮಿಲಾದ್ ಹಬ್ಬವನ್ನು  ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.…

By Dinamaana Kannada News

ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು

ಏಳನೆಯ ಕ್ಲಾಸಿಗೆ ಬರುವಷ್ಟೊತ್ತಿಗೆ ನಾವು ಓದುತ್ತಿದ್ದ ಶಾಲೆಯ ಋಣ ತೀರಿತ್ತೆಂದು ಕಾಣುತ್ತೆ ,ಆ ಶಾಲೆಯನ್ನು ಬಿಟ್ಟು ಹೋಗಲೇಬೇಕಾದ ಪರಿಸ್ಥಿತಿ ಒದಗಿಬಂದಿತು.ನಾನು‌…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?