Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೌರ್ಜನ್ಯಕ್ಕೊಳಗಾದ ಮಹಿಳೆ, ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ; ನ್ಯಾ. ರಾಜೇಶ್ವರಿ ಎನ್.ಹೆಗಡೆ
ತಾಜಾ ಸುದ್ದಿ

ದೌರ್ಜನ್ಯಕ್ಕೊಳಗಾದ ಮಹಿಳೆ, ಬಾಲಕಿಯರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ; ನ್ಯಾ. ರಾಜೇಶ್ವರಿ ಎನ್.ಹೆಗಡೆ

Dinamaana Kannada News
Last updated: January 6, 2025 9:44 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ,ಜ.06 (Davanagere) :  ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಬಾಲಕಿಯರಿಗೆ ಅಪ್ತ ಸಮಾಲೋಚನೆ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು.

ಸೋಮವಾರ(ಜ.6)ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ವಿಧಾನ್ ಸೆ ಸಮಾಧಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.

ದೌರ್ಜನ್ಯಕ್ಕೆ ಒಳಪಟ್ಟ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಯಂಪ್ರೇರಣೆಯಿಂದ ಸ್ವಾವಲಂಬಿಯಾಗಿ ಬದುಕಲು ಅನುಕೂಲವಾಗುವಂತೆ ತರಬೇತಿ ನೀಡುವುದರೊಂದಿಗೆ ಇಂತಹ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವುದೇ ‘ವಿಧಾನ್ ಸೆ ಸಮಾಧಾನ್ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ.
ಕಾನೂನಿನ ಅರಿವು ಇದ್ದರೆ ಅದರ ಆಳ, ಅಗಲ ಅರ್ಥವಾಗುತ್ತದೆ. ಬದುಕಿನ ವ್ಯವಹಾರದಲ್ಲಿ ಕಾನೂನು ಚೌಕಟ್ಟಿನ ವಿಚಾರಕ್ಕೆ ಬಂದಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಆಶ್ರಯದ ಅಗತ್ಯವಿರುವ ಮಹಿಳೆಯರಿಗೆ ಅಲ್ಪಾವಧಿ ವಸತಿಗೃಹಗಳಲ್ಲಿ ಹಾಗೂ ಅಲ್ಪಾವಧಿ ಗೃಹಗಳು ಇಲ್ಲದೇ ಇರುವ ಸ್ಥಳಗಳಲ್ಲಿ ಇಲಾಖೆಯ ಸ್ವೀಕಾರ ಕೇಂದ್ರ ಅಥವಾ ರಾಜ್ಯ ಮಹಿಳಾ ನಿಲಯಗಳಲ್ಲಿ ತಾತ್ಕಾಲಿಕವಾಗಿ ಆಶ್ರಯ ನೀಡಲಾಗುವುದು ಎಂದರು.

ಸಲಹಾ ಸೇವಾ ಆಗತ್ಯವಿದ್ದಲ್ಲಿ ತರಬೇತಿ ಹೊಂದಿದ ಸಲಹೆಗಾರರ ಮೂಲಕ ಸಮಾಲೋಚನೆಯ ಸೇವೆಯನ್ನು ನೀಡಲಾಗುವುದು. ಕಾನೂನು ನೆರವು ಅವಶ್ಯಕತೆ ಇರುವ ಪ್ರತಿಯೊಂದು ಪ್ರಕರಣಗಳಿಗೆ ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕ ನೆರವು ನೀಡಲಾಗುವುದು.  ರಕ್ಷಣೆ ಕೋರಿ ಬಂದ ಮಹಿಳೆಯರು ವಿದ್ಯಾಭ್ಯಾಸವನ್ನು ಮುಂದುವರೆಸಲು ಇಚ್ಚಿಸಿದಲ್ಲಿ ಅಂತಹವರಿಗೆ ಆರ್ಥಿಕ ನೆರವು ಒದಗಿಸಿ ವಸತಿಗೃಹಗಳಲ್ಲಿ ಆಶ್ರಯ ನೀಡಲಾಗುವುದು.  ಸಾಂತ್ವನ ಕೇಂದ್ರದಲ್ಲಿ ದೂರು ದಾಖಲಿಸಿದ ಮಹಿಳೆಗೆ ಆರ್ಥಿಕ ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಸಮಿತಿಯ ನಿರ್ಧಾರದ ಪ್ರಕಾರ ಆರ್ಥಿಕ ಪರಿಹಾರ ನೀಡಲಾಗುವುದು.  ದೌರ್ಜನ್ಯಕ್ಕೆ ಒಳಗಾದ ಮಹಿಳೆಯು ಮರಣ ಹೊಂದಿದ ಪಕ್ಷದಲ್ಲಿ ಅಂತಹ ಮಹಿಳೆಯರ ಮಕ್ಕಳ ಶಿಕ್ಷಣ ಹಾಗೂ ಪುನರ್ವಸತಿಗಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಠೇವಣಿ ಇಡಲಾಗುವುದು.  ಈ ಮಹಿಳೆಯರು ಉದ್ಯೋಗಸ್ಥ ಮಹಿಳೆಯರ ವಸತಿಗೃಹದಲ್ಲಿ ಗರಿಷ್ಠ ವರ್ಷದವರೆಗೆ ಇರಲು ಅವಕಾಶವಿದೆ  ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ,  ಸಂವಿಧಾನದ ಆಶಯದಂತೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿಶೇಷವಾದ ಯೋಜನೆಗಳನ್ನು ಜಾರಿಗೆ ತಂದಿದೆ. 1990ರಲ್ಲಿ ನ್ಯಾಷನಲ್ ವುಮೆನ್ಸ್ ಆಕ್ಟ್ ಎಂಬ ಕಾನೂನು ಮಾಡಲಾಗಿದೆ. ಈ ಕಾನೂನು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರ ಉದ್ದೇಶ ಸಾಮಾಜಿಕ ಶೋಷಣೆಗಳಾದ ವರದಕ್ಷಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ವೈವಾಹಿಕ ಜೀವನಲ್ಲಿ ತೀವ್ರತರಹ ಸಮಸ್ಯೆಗಳು, ಅತ್ಯಾಚಾರ, ದೌರ್ಜನ್ಯದ ವಿರುದ್ದ ಮಹಿಳೆಯರಿಗೆ ಸೂಕ್ತ ಸಲಹೆ ಸಹಕಾರಕ್ಕೆ ಇಲಾಖೆಯ ನೆರವನ್ನು ನೀಡಲಾಗುವುದು ಎಂದರು.

1987ರಲ್ಲಿ ಕಲ್ಪಿಸಿದಂತೆ ಸಮಾಜದ ದುರ್ಬಲ ಮತ್ತು ವಂಚಿತ ವರ್ಗಗಳಿಗೆ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳನ್ನು ಒದಗಿಸುವ ಮನೋಭಾವ ಮತ್ತು ಉದ್ದೇಶವು ದುರ್ಬಲ ವರ್ಗದವರಿಗೆ ಅವರ ವಿವಿಧ ಕಾನೂನು ಮತ್ತು ಸಾಂವಿಧಾನಿಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗದಿದ್ದಲ್ಲಿ ಸೋಲುತ್ತದೆ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು.    ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಪನಿರ್ದೇಶಕ  ಡಾ.ಕೆ.ಕೆ ಪ್ರಕಾಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಿಬ್ಬಂದಿ ಗುರುಪ್ರಸಾದ್, ಹಿರಿಯ ವಕೀಲರಾದ ಸುಧಾ.ಹೆಚ್.ಎನ್, ಅನಿತಾ ಸಿ.ಪಿ ಉಪಸ್ಥಿತರಿದ್ದರು.

Read also : ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Youth Festival -davanagere ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ
Next Article Davanagere ಬಿಜೆಪಿ ಕೊಳಕು ಮನಸ್ಥಿತಿಗೆ ಜನತೆ ತಕ್ಕ ಪಾಠ ಕಲಿಸುವುದು ಖಚಿತ: ಬಿ. ಎನ್. ವಿನಾಯಕ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೆನೆಟ್ ಚುನಾವಣೆಯಲ್ಲಿ ಜಯ : ಪ್ರೊ. ಡಾ.ಶ್ರೀನಿವಾಸ್ ಎಲ್.ಡಿ ಅವರಿಗೆ ಅಭಿನಂದಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ (DAVANAGERE) : ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಜಯದಾಖಲಿಸಿದ ದಾವಣಗೆರೆ…

By Dinamaana Kannada News

THE TEAM ACADEMY ವಿದ್ಯಾರ್ಥಿ ಫಕ್ಕಿರೇಶ್‌ ಟಿ ರಾಜ್ಯಕ್ಕೆ 160 ನೇ ರ‍್ಯಾಂಕ್

ದಾವಣಗೆರೆ :  2023-24 ನೇ ಸಾಲಿನಲ್ಲಿ ನಡೆಸಲಾದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ದಿ.ಟೀಮ್‌ ಅಕಾಡಮಿಯ ವಿದ್ಯಾರ್ಥಿ ಫಕ್ಕಿರೇಶ್‌ ಟಿ 160 ನೇ…

By Dinamaana Kannada News

JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?