Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಕ್ರಮ ಕ್ರಷರ್‌ಗಳಿಗೆ ಕಡಿವಾಣ ಹಾಕಲು ನ್ಯಾ. ಬಿ.ವೀರಪ್ಪ ಸೂಚನೆ
ತಾಜಾ ಸುದ್ದಿ

ಅಕ್ರಮ ಕ್ರಷರ್‌ಗಳಿಗೆ ಕಡಿವಾಣ ಹಾಕಲು ನ್ಯಾ. ಬಿ.ವೀರಪ್ಪ ಸೂಚನೆ

Dinamaana Kannada News
Last updated: April 24, 2025 12:57 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere)  : ನಗರದ ಗಣಿ ಮತ್ತು ಭೂ ವಿಜ್ಞಾನ, ಪ್ರಾದೇಶಿಕ ಸಾರಿಗೆ ಹಾಗೂ ಬೆಸ್ಕಾಂ ಕಚೇರಿಗಳಿಗೆ ಉಪಲೊಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ  ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲೆಯಲ್ಲಿನ ಕಲ್ಲು ಗಣಿಗಾರಿಕೆ ಹಾಗೂ ಅಕ್ರಮ ಕ್ರಷರ್‌ಗಳ ಆರ್ಭಟಕ್ಕೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಣಿ ಇಲಾಖೆ ಕಚೇರಿ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ಜಿಲ್ಲೆಯಲ್ಲಿ ಪರವಾನಿಗೆ ಪಡೆದ ಕಲ್ಲುಕ್ವಾರಿ ಹಾಗೂ ಕ್ರಷರ್‌ಗಳ ಮಾಹಿತಿಯನ್ನು ಎಷ್ಟು ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ 128 ಕ್ಕೂ ಹೆಚ್ಚು ಕ್ರಷರ್‌ಗಳಿಗೆ ಪರವಾನಿಗೆ ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಪರವಾನಗಿ ಪಡೆದ ಕಲ್ಲುಕ್ವಾರಿ ಹಾಗೂ ಕ್ರಷರ್‌ಗಳು ಸರಿಯಾಗಿ ರಾಜಧನ ಪಾವತಿಸಿವಿಯೇ.? ಎಷ್ಟು ರಾಜಧನ ಸರ್ಕಾರಕ್ಕೆ ಸಂದಾಯವಾಗಿದೆ, ಎಷ್ಟು ನಿಂತಿವೆ ಎನ್ನುವ ಮಾಹಿತಿಯನ್ನು ಲೋಕಾಯುಕ್ತಕ್ಕೆ ನೀಡುವಂತೆ ಅವರು ನಿರ್ದೇಶಿಸಿದರು.

ಕಲ್ಲುಕ್ವಾರಿಗಳ ಸುತ್ತ ತಂತಿ ಬೇಲಿ ಅಳವಡಿಸಬೇಕು. ಕ್ರಷರ್‌ಗಳು ಹೆಚ್ಚು ವಾಯುಮಾಲಿನ್ಯವಾಗದಂತೆ ಕಲ್ಲುಗಳನ್ನು ಪುಡಿ ಮಾಡಬೇಕು. ಈ ಸಂಬಂಧವಾಗಿ ಎಲ್ಲಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ನ್ಯಾ.ಬಿ.ವೀರಪ್ಪ ಹೇಳಿದರು. ಉಪಲೋಕಾಯುಕ್ತರ ಭೇಟಿ ವೇಳೆ ದಾವರಣಗೆರೆ ತಾಲ್ಲೂಕಿನ ಗಣಿ ಇಲಾಖೆ ಅಧಿಕಾರಿ ರಜೆ ಮೇಲೆ ತೆರಳಿದ್ದರು.

Read also : ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ

ಇತರೆ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ನ್ಯಾಯಮೂರ್ತಿಗಳಿಗೆ ನೀಡಲಿಲ್ಲ.

ಬಂಗಾರ ಹಾಗೂ ದುಬಾರಿ ವಾಚು :

ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪನವರ ಗಣಿ ಇಲಾಖೆ ಕಚೇರಿ ಭೇಟಿ ಸಂದರ್ಭದಲ್ಲಿ ಗಣಿ ಇಲಾಖೆಯ ಅಧಿಕಾರಿಯೊಬ್ಬರು ಲಕ್ಷ ಲಕ್ಷ ಬಂಗಾರ ಖರೀದಿಸಿದ ಬಿಲ್‌ಗಳು ಅವರ ವಾಹನದಲ್ಲಿ ದೊರತಿವೆ. ಇವುಗಳನ್ನು ಪರಿಶೀಲಿಸಿ, ಬಿಲ್‌ನ ಪ್ರತಿ ಪಡೆದುಕೊಂಡ ನ್ಯಾಯಮೂರ್ತಿಗಳು ಸಂಬಂಧ ಪಟ್ಟ ಅಧಿಕಾರಿಗೆ ಬಂಗಾರ ಖರೀದಿ ವ್ಯಾವಹಾರ ಸಂಪೂರ್ಣ ವಿವರವನ್ನು ಲೋಕಾಯಕ್ತಕ್ಕೆ ನೀಡುವಂತೆ ತಾಕೀತು ಮಾಡಿದರು.

ಇದೇ ವೇಳೆ ಸಿಕ್ಕ ವಾಚು ನ್ಯಾ.ಬಿ.ವೀರಪ್ಪ ಅವರ ಗಮನ ಸೆಳೆಯಿತು. ನೋಡಲು ಲಕ್ಷ ಲಕ್ಷ ಬೆಲೆಬಾಳುವಂತೆ ವಾಚು ಕಂಡುಬರುತ್ತಿತ್ತು. ಈ ಕುರಿತು ಸಿಬ್ಬಂದಿಯನ್ನು ವಿಚಾರಿಸಿ, ಆನ್‌ಲೈನ್‌ನಲ್ಲಿ ವಾಚಿನ ಬೆಲೆ ಪರಿಶೀಲಿಸಿದಾಗ ಹೆಚ್ಚಿತ್ತು, ಆದರೆ ಅಂಗಡಿಯಲ್ಲಿ ಪರಿಶೀಲಿಸಿದಾಗ ಅಷ್ಟೊಂದು ಬೆಲೆ ಬಾಳದ ವಾಚು ಎಂಬುದು ಕಂಡುಬಂದಿತು.

ನಂತರ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳ ಕಚೇರಿ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ, ಜಿಲ್ಲೆಯಲ್ಲಿ ಒಟ್ಟು ನೊಂದಾಯಿತ ವಾಹನಗಳ ಸಂಖ್ಯೆ, ಶಾಲಾ ವಾಹನಗಳು ಹಾಗೂ ಅದಿರು ಸಾಗಾಣಿಕೆ ವಾಹನಗಳ ಮಾಹಿತಿ ಪಡೆದುಕೊಂಡರು.

ಕಲ್ಲುಕ್ವಾರಿ ಹಾಗೂ ಕ್ರಷರ್‌ಗಳಿಂದ ಕಲ್ಲಿನ ಪುಡಿಗಳನ್ನು ಸಾಗಾಟ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸುವಂತೆ ಹಾಗೂ ಅವುಗಳ ಓಡಾಟದ ಬಗ್ಗೆ ನಿಖರ ಮಾಹಿತಿ ಪಡೆದುಕೊಳ್ಳುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬೆಸ್ಕಾಂ ಕಚೇರಿಗೆ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ರೈತರಿಗೆ ಸರಬರಾಜು ಮಾಡುವ ಉಚಿತ ವಿದ್ಯುತ್ ಕುರಿತು ಮಾಹಿತಿ ಪಡೆದರು. ರಾತ್ರಿ ವೇಳೆ ಕ್ರಷರ್‌ಗಳು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದು ಕಾರ್ಯಾಚರಣೆ ನಡೆಸುತ್ತಿರುವುದಾಗಿ ಆರೊಪಗಳು ಕೇಳಿ ಬಂದಿವೆ. ಬೆಸ್ಕಾಂ ಅಧಿಕಾರಿಗಳು ಇದಕ್ಕೆ ಅವಕಾಶ ನೀಡದಂತೆ ಅವರು ಸೂಚಿಸಿದರು.

ವೇಳೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್, , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಮಂಜುನಾಥ್, ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಉಪ ನಿಬಂಧಕರಾದ ಅರವಿಂದ.ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಪೂರೆ, ಉಪವಿಭಾಗಾಧಿಕಾರಿ ಸಂತೋಷ್ ಸೇರಿದಂತೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಮತ್ತಿತರರು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ
Next Article Davanagere ನಾಲ್ಕು ಕಳ್ಳತನ ಪ್ರಕರಣ : 5.85 ಲಕ್ಷ ರೂ ಬಂಗಾರದ ಅಭರಣ ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೋಲು..

ಆಚೆ ಯಾರದೋ ಬಿಕ್ಕು ಮತ್ಯಾರದೋ ರಕ್ತ ಹೆತ್ತವರ ಮುಂದೆಯೇ ಹರಿಯುತಿದೆ ಮಕ್ಕಳ ನೆತ್ತರು! ಸಾಲಿಗೆ ಹೋದರೂ ಜೊತೆಯಲಿರಲೇಬೇಕೀಗ ಅಸಹಾಯಕ ದೇವರು!…

By Dinamaana Kannada News

Davanagere | ಕನ್ನಡ ಜ್ಯೋತಿ ರಥ ಯಾತ್ರೆಗೆ ಕುರ್ಕಿ ಗ್ರಾಮದಲ್ಲಿ ಅದ್ದೂರಿ ಸ್ವಾಗತ

ದಾವಣಗೆರೆ  (Davanagere) :  ಮಂಡ್ಯ ದಲ್ಲಿ ಡಿಸೇಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ…

By Dinamaana Kannada News

Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ

ದಾವಣಗೆರೆ (Davanagere) :  ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಏಪ್ರಿಲ್ ನಿಂದ ಆಗಸ್ಟ್‍ವರೆಗೆ ಜಿಲ್ಲೆಯಲ್ಲಿ 35 ಬಾಲ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?