ದಾವಣಗೆರೆ ಸೆ.10 : ಪ.ಜಾತಿ, ಪ.ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್. ಅಂಬೇಡ್ಕರ್ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸುವ ಬಗ್ಗೆ ಸರ್ಕಾರದಿಂದ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಈ ಬಗ್ಗೆ ಆನ್ಲೈನ್ ತಂತ್ರಾಂಶವನ್ನು ಅಭಿವೃದ್ದಿಪಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ http://swd.karnataka.gov.in ವೆಬ್ಸೈಟ್ನಲ್ಲಿ ದೀಕ್ಷಾಭೂಮಿ ಯಾತ್ರೆ ಸೆ.30 ರಿಂದ ಅ.4 ರವರೆಗೆ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಆಸಕ್ತಿವುಳ್ಳವರು ಈ ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದು. ಸೆ.15 ನೋಂದಣಿ ಮಾಡಿಕೊಳ್ಳಲು ಕೊನೆಯ ದಿನ.
Read also : ನಾಯಿ ಕಡಿತದ ಲಸಿಕೆಗೆ ಸಹಾಯವಾಣಿ ಸ್ಥಾಪನೆಗೆ ಡಿಸಿ ಸೂಚನೆ
ವಿವಿಧ ಜಿಲ್ಲೆಗಳಿಂದ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುವ ಸಂಬಂಧ ಬಸ್ಸು ಹಾಗೂ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.