Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಬೇಕಿದೆ
ತಾಜಾ ಸುದ್ದಿ

ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಬೇಕಿದೆ

Dinamaana Kannada News
Last updated: March 1, 2026 3:11 am
Dinamaana Kannada News
Share
Bengalore
SHARE

ಬೆಂಗಳೂರು : ಸಾಮಾಜಿಕವಾಗಿ ಜಾಗೃತರಾಗಿ ಸರ್ಕಾರದ ಮೇಲೆ ಒತ್ತಡ ಹೇರಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿ ಮಾಡಿಸಬೇಕು, ರಾಜ್ಯ ಮಕ್ಕಳಿಗೆ ಹಿಂದಿ ಹೇರಿಕೆಯಿಂದ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕಿದೆ ಎಂದು ಪತ್ರಕರ್ತ ಪಾರ್ವತೀಶ್ ಹೇಳಿದರು.

ಕರ್ನಾಟಕ ಶಾಲಾ ಶಿಕ್ಷಣದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಕನ್ನಡ ಪರ ಸಂಘಟನೆಗಳು ಸಭೆಯಲ್ಲಿ ಮಾತನಾಡಿದರು.

ಹಿಂದಿ ವಿಷಯವನ್ನು ಶಾಲಾ ಶಿಕ್ಷಣದಲ್ಲಿ ಅನವಶ್ಯಕವಾಗಿ ಹೇರಿಕೆ ಮಾಡಿ, ಕಡ್ಡಾಯವಾಗಿ ಪಾಸು ಮಾಡಬೇಕೆಂಬ ಕಾನೂನು ಮಾಡಿದ ಪರಿಣಾಮ ಕರ್ನಾಟಕದಲ್ಲಿ ಪ್ರತಿವರ್ಷ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಂದಿ ವಿಷಯದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಅವರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ವ್ಯಾಸಂಗದಿಂದ ವಂಚಿತರಾಗುತ್ತಿದ್ದಾರೆ. ಈ ಕಾಲಮಾನದಲ್ಲಿ ಎಜುಕೇಶನ್ ಡ್ರಾಪೌಟ್ ಆಗಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವುದು ದುರದೃಷ್ಟಕರ, ಅವರ ಜೀವನ ಸುಸ್ಥಿತಿಗೆ ಬರಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇಂತಹ ವಿದ್ಯಾರ್ಥಿಗಳು ಜಾತಿ ಮತದ ರಾಜಕೀಯಕ್ಕೆ ಬಲಿಯಾಗುತ್ತಾರೆ. ನೆಲದ ನುಡಿಯಾಗಿ ಕನ್ನಡ ಮತ್ತು ಸಂಪರ್ಕ ನುಡಿಯಾಗಿ ಇಂಗ್ಲೀಷನ್ನು ಕಲಿಸುವ ಎರಡು ನುಡಿ ಶಿಕ್ಷಣ ಪದ್ಧತಿ ಜಾರಿಯಾಗಬೇಕು ಎಂದರು.

ನಾವು ದ್ರಾವಿಡ ಕನ್ನಡಿಗರು ಚಳುವಳಿಯ ಮುಖಂಡ ಅಭಿ ಒಕ್ಕಲಿಗ ಮಾತನಾಡಿ, ಪ್ರಸ್ತುತದಲ್ಲಿ ಹಿಂದಿ ಹೇರಿಕೆ ತಡೆಯುವುದು ಮತ್ತು ಶಾಲಾ ಪಠ್ಯಕ್ರಮದಲ್ಲಿ ಹಿಂದಿ ತೆಗೆಸುವುದು ಮುಖ್ಯ ಆದ್ಯತೆ ಆಗಬೇಕು. ಹಿಂದಿ ಹೇರಿಕೆ ಎಲ್ಲ ಮಟ್ಟದಲ್ಲಿಯೂ ಆಗುತ್ತಿದೆ, ಹಿಂದಿ ಅನಾವಶ್ಯಕವಾಗಿ ಹೇರಿಕೆ ಮಾಡಿ ಕನ್ನಡ ಮಕ್ಕಳಿಗೆ ಶಿಕ್ಷಣವನ್ನು ಭಾರಗೊಳಿಸುವ ಕೆಲಸ ರಾಜ್ಯ ಸರ್ಕಾರದಿಂದ ಮತ್ತು ಒಕ್ಕೂಟ ಸರ್ಕಾರದಿಂದ ನಡೆಯುತ್ತಿದೆ. ನಮ್ಮ ಮಕ್ಕಳು ಹಿಂದಿ ಕಲಿತು ನಾರ್ತ್ ಇಂಡಿಯಾಗೆ ಹೋಗುತ್ತಿಲ್ಲ, ನಾರ್ತ್ ಇಂಡಿಯಾದವರೇ ಕರ್ನಾಟಕಕ್ಕೆ ಅತಿಯಾಗಿ ವಲಸೆ ಬರುತ್ತಿದ್ದಾರೆ.

Read also : ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

ವಲಸಿಗರು ಕನ್ನಡ ಕಲಿಯದೇ ಹಿಂದಿ ಹೇರಿಕೆಯ ಜೊತೆ ದಬ್ಬಾಳಿಕೆಯನ್ನು ಸಹ ಮಾಡುತ್ತಿದ್ದಾರೆ. ಇವುಗಳನ್ನು ತಡೆಯಲು ಮೊದಲ ಹಂತವಾಗಿ ಕರ್ನಾಟಕ ಶಾಲಾ ಶಿಕ್ಷಣದಲ್ಲಿ ಹಿಂದಿ ವಿಷಯವನ್ನು ತೆಗೆಸಬೇಕು ಅದಕ್ಕೆ ಸಂಬಂಧಪಟ್ಟಂತೆ ಈ ವರ್ಷ ಹಿಂದಿ ವಿಥೌಟ್ ಪಾಸ್ ಕಾನೂನು ಜಾರಿ ಮಾಡಿಸುವುದು ಅತ್ಯವಶ್ಯಕ ಎಂದರು.

ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಜೈಶಂಕರ್, ರಾಧಾಕೃಷ್ಣ, ಮಂಜು ಗಣಪತಿಪುರ ,ಚೇತನ್ ಕರಪ, ಮಂಜು ಬುದ್ಧಿಸ್ಟ್, ಬಸವರಾಜ್ ನಾಯಕ್, ಸಚಿನ್ ಒಕ್ಕಲಿಗ ಮುಂತಾದ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು.

ವರದಿಗಾರಿಕೆ
ದರ್ಶನ್ ಕುರುಬಾಸ್
ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ
ಕೇರಳ ವಿಶ್ವವಿದ್ಯಾಲಯ, ತಿರುವನಂತಪುರಂ.

TAGGED:dinamaana.comKannada Newsಕನ್ನಡ ಸುದ್ದಿದಿನಮಾನ.ಕಾಂಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹ
Share This Article
Twitter Email Copy Link Print
Previous Article Benaga;ore ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ
Next Article Davanagere ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಿ : ಶಾಸಕ ಬಸವರಾಜ ವಿ.ಶಿವಗಂಗಾ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿಲ್ಲಿ ದೊರೆಗಳೇಕೆ ಬೆಚ್ಚಿ ಬೀಳಲಿದ್ದಾರೆ?  (Political analysis)

Kannada News | Dinamaana.com | 29-07-2024 ಕಳೆದ ವಾರ ವಿಧಾನಸಭೆಯ ಆಡಳಿತ ಪಕ್ಷದ ಮೊಗಸಾಲೆಯಲ್ಲಿ  ಇಬ್ಬರು ಶಾಸಕರು ಗಂಭೀರ…

By Dinamaana Kannada News

ರಾಜ್ಯದ ಮೇಲೆ‌ 3D ನೀತಿ ಅನುಸರಿಸಿದ ಕೇಂದ್ರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ 

ದಾವಣಗೆರೆ/ನವದೆಹಲಿ (Davanagere): ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ.…

By Dinamaana Kannada News

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

ಜಗಳೂರು: ತಾಲೂಕಿನಲ್ಲಿ ಈ ಹಿಂದೆ ನಡೆದಂತ ಘಟನೆಗಳಿಂದ ತಾಲೂಕಿಗೆ ಖರೀದಿ ಕೇಂದ್ರ ನೀಡುವುದಿಲ್ಲ ಎಂದು ಹೇಳಿದ್ದರು. ರಾಜೀನಾಮೆ ನೀಡುತ್ತೇನೆ ಎಂದಾಗ…

By Dinamaana Kannada News

You Might Also Like

District Collector G.M. Gangadharaswamy
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಿ : ಶಾಸಕ ಬಸವರಾಜ ವಿ.ಶಿವಗಂಗಾ

By Dinamaana Kannada News
Benaga;ore
ತಾಜಾ ಸುದ್ದಿ

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾರ್ಗದರ್ಶಕ ಎನ್.ಎಫ್.ಕಿತ್ತೂರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?