ಹರಿಹರ: ಹಲವರ ವಿರೋಧದ ನಡುವೆಯೂ ನಗರದ ಆಯಕಟ್ಟಿನ ಜಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು ಮಾಡಿಸಿದೆ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು.
ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ತಾಲ್ಲೂಕು ಸಮಿತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಹಾಗೂ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಾಣಿಜ್ಯ ಪ್ರದೇಶವಾಗುವುದರಿಂದ ಹಳೆ ಕೋರ್ಟ್ ಜಾಗದಲ್ಲಿ ಅಂಬೇಡ್ಕರ್ ಭವನಕ್ಕೆ ನಿವೇಶನ ಕೊಡಿಸುವುದು ಬೇಡ ಎಂದು ಹಲವರು ತಕರಾರು ಮಾಡಿದರು. ಆದರೆ, ಆಗ ಶಾಸಕನಿದ್ದ ನಾನು ಸರ್ಕಾರದ ಮೇಲೆ ಒತ್ತಡ ಹೇರಿ ವಾಣಿಜ್ಯ ಪ್ರದೇಶದಲ್ಲೆ ನಿವೇಶನ ಮಂಜೂರು ಮಾಡಿಸಿದೆ ಎಂದರು.
ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ದಲಿತರು, ಹಿಂದುಳಿದವರ ಆಶಾ ಕಿರಣವಾದ ಪ್ರೊ.ಬಿ.ಕೃಷ್ಣಪ್ಪರು ಜನಿಸಿದ ಬೀದಿಯಲ್ಲೆ ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಮಾಡಿ ಅವರನ್ನು ಸ್ಮರಿಸುವ ಕಾರ್ಯ ಸಂಘಟನೆಯಿಂದ ನಡೆಸಲಾಗುತ್ತಿದೆ ಎಂದರು.
ದೂಡ ಮಾಜಿ ಸದಸ್ಯ ಜಿ.ವಿ.ವೀರೇಶ್ ಮಾತನಾಡಿ, ದೇಶದಲ್ಲಿ ಅಂಬೇಡ್ಕರ್ರವರು, ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪರು ಮಾಡಿದ ಹೋರಾಟವನ್ನು ನಾವು ಸದಾ ಸ್ಮರಿಸಬೇಕು ಎಂದರು.
ಶ್ರೀಶೈಲ ಶಿಕ್ಷಣ ಕಾಲೇಜಿನ ಪ್ರಾಚಾರ್ಯಬಿ.ಆರ್.ಗುರುದೇವ ಸಂವಿಧಾನ ಪೀಠಿಕೆ ವಾಚಿಸಿದರು.
Read also : ದಾವಣಗೆರೆ|ಬ್ಯಾಂಕಿಂಗ್,ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ
1000 ನೋಟ್ಬುಕ್ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಸಹನಾ ಆರ್ಕೇಷ್ಟ್ರಾ ತಂಡದವರಿಂದ ರಸ ಮಂಜರಿ ಕಾರ್ಯಕ್ರಮ ನಡೆಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ.ಹನುಮಂತಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಸುರೇಶ್, ಎಚ್.ಜೆ. ಮರಿದೇವ,ಯಶವಂತಪ್ಪ,ಮೂಕ ಮೈಲಪ್ಪ, ನೋಟದವರ ಕರಿಲಿಂಗಪ್ಪ, ಹಾಲೇಶಪ್ಪ ಡಿ.,ರಾಜೂ ಜೆ., ಶಣ್ಮುಖಪ್ಪ, ಮಾರುತಿ ಪಿ.ಬಿ., ಕುಮಾರ್ ಡಿ., ಗೋಣಿಬಸಪ್ಪ, ಗಾಯಕರಾದ ಬಿ.ಆರ್.ಹನುಮಂತಪ್ಪ, ಚಂದ್ರಶೇಖರ್ ಇದ್ದರು.
