Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > Political analysis | ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು?
ರಾಜಕೀಯ

Political analysis | ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು?

Dinamaana Kannada News
Last updated: July 7, 2025 3:11 am
Dinamaana Kannada News
Share
Political analysis
SHARE
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಬಿಜೆಪಿಯ ಇಬ್ಬರು ನಾಯಕರಿಗೆ ಒಂದು ಟಾಸ್ಕ್ ಕೊಟ್ಟಿದ್ದಾರೆ.ಹೀಗೆ ಮೋದಿ ಅವರಿಂದ ಟಾಸ್ಕ್ ಪಡೆದ ನಾಯಕರ ಪೈಕಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಒಬ್ಬರಾದರೆ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮತ್ತೊಬ್ಬರು. ಅಂದ ಹಾಗೆ ಈ ಇಬ್ಬರು ನಾಯಕರಿಗೆ ಮೋದಿಯವರು ಟಾಸ್ಕ್ ಕೊಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ.
‘ಈ ವರ್ಷದ ಕೊನೆಯ ವೇಳೆಗೆ ಕರ್ನಾಟಕದಲ್ಲಿ ರಾಜಕೀಯ ಸಂಘರ್ಷ ತಾರಕಕ್ಕೇರಲಿದೆ.ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆಯ ಸಮರ ವಿಕೋಪಕ್ಕೆ ಹೋಗುವುದರಿಂದ ಕೈ ಪಾಳಯ ಲಿಟರಲಿ ಒಡೆದು ಹೋಗಲಿದೆ. ನಮಗಿರುವ ಮಾಹಿತಿಯ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರು ಯಾವ ಕಾರಣಕ್ಕೂ ಅಧಿಕಾರ ಬಿಟ್ಟುಕೊಡುವುದಿಲ್ಲ. ಹಾಗಾದಾಗ ಸಿದ್ಧರಾಮಯ್ಯ ಅವರ ವಿರುದ್ಧ‌ ಒಂದು ಬಣ ತಿರುಗಿ ಬಿದ್ದು ಬಿಜೆಪಿಯ ಕಡೆ ನೋಡಲಿದೆ. ಹೀಗಾಗಿ ಈ ಸನ್ನಿವೇಶವನ್ನು ಎನ್ ಕ್ಯಾಶ್ ಮಾಡಿಕೊಳ್ಳಲು ಬಿಜೆಪಿಗೆ ಸಾಧ್ಯವಿದೆ.ಆದರೆ ಈ ಬಗ್ಗೆ ರಾಜ್ಯದ ಬಿಜೆಪಿ ನಾಯಕರಿಂದಲೇ ವಸ್ತುಸ್ಥಿತಿಯ ವರದಿ ಪಡೆಯಬೇಕು’ ಎಂದು ಅಮಿತ್ ಶಾ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಹೇಳಿದ್ದರಂತೆ.
ಹೀಗೆ ಅಮಿತ್ ಶಾ ಅವರು ಹೇಳಿದ ವಿಷಯವನ್ನು ಮನಸ್ಸಿನಲ್ಲಿಟ್ಟುಕೊಂಡ ನರೇಂದ್ರ ಮೋದಿಯವರು ಇಂತಹ ವರದಿ ನೀಡಲು ಸೂಕ್ತ ನಾಯಕರು ಯಾರು? ಅಂತ ಗಮನಿಸಿದ್ದಾರೆ. ಅಂತಿಮವಾಗಿ ಈ ಕಾರ್ಯಕ್ಕೆ ತಮ್ಮ ಸಂಪುಟ ಸಹೋದ್ಯೋಗಿಯಾಗಿರುವ ಪ್ರಲ್ಹಾದ್ ಜೋಷಿ‌ ಮತ್ತು ಮಾಜಿ ಸಿಎಂ ಡಿ.ವಿ.ಸದಾನಂದಗೌಡರನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಅಂದ ಹಾಗೆ ಪ್ರಲ್ಹಾದ್ ಜೋಷಿ ಮತ್ತು ಡಿ.ವಿ.ಸದಾನಂದಗೌಡ ಅವರು ರಾಜ್ಯ ಬಿಜೆಪಿಯ ತಟಸ್ಥ ಬಣದಲ್ಲಿರುವವರು.ಅರ್ಥಾತ್, ಕರ್ನಾಟಕ ಬಿಜೆಪಿಯಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ದೂರ ಇರುವವರು. ಬಿಜೆಪಿ ರಾಜ್ಯಾಧ್ಯಕ್ಚ ವಿಜಯೇಂದ್ರ ಮತ್ತು ಅವರ ವಿರೋಧಿ ಬಣದ ನಡುವೆ ಸಂಘರ್ಷ ವಿಕೋಪಕ್ಕೆ ಹೋದಾಗಲೆಲ್ಲ ‘ಇದರಲ್ಲಿ ಪಲ್ಹಾದ್ ಜೋಷಿ ಅವರ ಆಟ ಇದೆ ಕಣ್ರೀ.ವಿಜಯೇಂದ್ರ ವಿರೋಧಿ ಪಡೆಯ ನಾಯಕರಿಗೆ ತೆರೆಯ ಹಿಂದೆ ಶಕ್ತಿ ತುಂಬುತ್ತಿರುವವರೇ ಅವರು’ ಅಂತ ಯಡಿಯೂರಪ್ಪ ಕ್ಯಾಂಪಿನ‌ ಕೆಲ ನಾಯಕರು ಅಲ್ಲಲ್ಲಿ ಪಿಸುಗುಡುವುದು ಇದೆಯಾದರೂ ಅದಕ್ಕೆ ಫೋರ್ಸು ಇಲ್ಲ.
ಇನ್ನು ಡಿ.ವಿ.ಸದಾನಂದಗೌಡರಾದರೂ ಅಷ್ಟೇ.ಪಕ್ಷದಲ್ಲಿ ಆಂತರಿಕ ಕಚ್ಚಾಟ ಉಲ್ಬಣವಾದಾಗಲೆಲ್ಲ ಇದಕ್ಕೇನು ಕಾರಣ? ಅಂತ ವರಿಷ್ಟರಿಗೆ ಸ್ಪಷ್ಟ ವರದಿಗಳನ್ನು ಕೊಡುತ್ತಾ ಬಂದಿದ್ದಾರೆ. ಇದೆಲ್ಲದರಷ್ಟೇ ಮುಖ್ಯವಾಗಿ ಪ್ತಲ್ಹಾದ್ ಜೋಷಿ ಮತ್ತು ಡಿ.ವಿ.ಸದಾನಂದಗೌಡರಿಗೆ ಹಿರಿತನವಿದೆ.ಕರ್ನಾಟಕದ ರಾಜಕಾರಣವನ್ನು ಅಳೆದು-ತೂಗಿ,ಅದರ ದಿಕ್ಕು ಯಾವ ಕಡೆ ಸಾಗುತ್ತಿದೆ?ಅಂತ ಹೇಳುವ ಜಾಣ್ಮೆ ಇದೆ.
ಹೀಗಾಗಿ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡ ಪ್ರಧಾನಿ ನರೇಂದ್ರಮೋದಿ ಅವರು ಈ ಇಬ್ಬರು ನಾಯಕರಿಗೆ ಆ ಜವಾಬ್ದಾರಿ ವಹಿಸಲು ನಿರ್ಧರಿಸಿದ್ದಾರೆ. ಅರ್ಥಾತ್, ಈ ವರ್ಷಾಂತ್ಯದ ಹೊತ್ತಿಗೆ ಕರ್ನಾಟಕದ ರಾಜಕಾರಣದಲ್ಲಿ ಸಂಭವಿಸಲಿರುವ ವಿಪ್ಲವ ಮತ್ತು ಈ ಸನ್ನಿವೇಶವನ್ನು ಬಿಜೆಪಿ ಎನ್ ಕ್ಯಾಶ್ ಮಾಡಿಕೊಳ್ಳುವ ಸಾಧ್ಯತೆ ಮತ್ತು ಪರಿಣಾಮಗಳ ಬಗ್ಗೆ ವಿವರ ಕೇಳಲು ಸೂಚಿಸಿದ್ದಾರೆ.
ಯಾವಾಗ ಪ್ರಧಾನಿ ಮೋದಿಯವರಿಂದ ಈ ಸೂಚನೆ ಸಿಕ್ಕಿತೋ?ಇದಾದ ನಂತರ ಪ್ರಲ್ಹಾದ್ ಜೋಷಿ ಮತ್ತು ಡಿ.ವಿ.ಸದಾನಂದಗೌಡರು ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಒಂದು ಕೂಲಂಕುಷ ವರದಿ ತಯಾರಿಸಿದ್ದಾರೆ.ಮೂಲಗಳ ಪ್ರಕಾರ:’ಅಧಿಕಾರ ಹಸ್ತಾಂತರದ ಗೊಂದಲದಿಂದ ಒಂದು ಬಣ ಕಾಂಗ್ರೆಸ್ ತೊರೆದು ಬಿಜೆಪಿ ಕಡೆ ಬರಲು ಸಿದ್ದವಾದರೂ,ನಾವು ಆಸರೆ ನೀಡದಿರುವುದು ಒಳ್ಳೆಯದು.ಯಾಕೆಂದರೆ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಿಸಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡು ಬರುವ ಗುಂಪಿಗೆ ನಾವು ಆಸರೆ‌ ನೀಡಿದರೆ ಈಗಾಗಲೇ‌ ನಮ್ಮ ಜತೆ ಮೈತ್ರಿ ಸಾಧಿಸಿರುವ ಜೆಡಿಎಸ್ ಪಕ್ಷ ನಮ್ಮಿಂದ ದೂರ ಸರಿಯಬಹುದು.
Read also : Political analysis | ದಿಲ್ಲಿಯಲ್ಲಿ ಸಿದ್ದು ಗುದ್ದಿದ್ದು ಯಾರಿಗೆ?
ಇವತ್ತು ಕರ್ನಾಟಕದಲ್ಲಿ ಒಕ್ಕಲಿಗ ಮತ ಬ್ಯಾಂಕಿನ ಮೇಲೆ ಬಲವಾದ ಹಿಡಿತ ಹೊಂದಿರುವ ಜೆಡಿಎಸ್ ನಮ್ಮಿಂದ ದೂರ ಸರಿದರೆ ಅಗುವ ನಷ್ಟವನ್ನು ತುಂಬಿ ಕೊಡಲು ಕಾಂಗ್ರೆಸ್ ನಿಂದ ಹೊರಬರುವ ಬಣಕ್ಕೆ ಸಾಧ್ಯವಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಇವತ್ತು ಚುನಾವಣೆಗೆ ಹೋದರೂ ನೂರೈವತ್ತು ಸೀಟು ಗೆಲ್ಲುವುದು ಗ್ಯಾರಂಟಿ.ಹೀಗಾಗಿ ಸಿದ್ಧರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನಲ್ಲಿ ಸಂಘರ್ಷ ಶುರುವಾದರೆ ನಾವು ಮಧ್ಯೆ ಪ್ರವೇಶಿಸದೆ ಸುಮ್ಮನಿದ್ದರೆ ಸಾಕು’ ಎಂಬುದು ಪ್ರಲ್ಹಾದ್ ಜೋಷಿ ಮತ್ತು ಡಿ.ವಿ.ಸದಾನಂದಗೌಡರ ವರದಿ.
ಹೀಗೆ ಈ ಇಬ್ಬರು ನಾಯಕರು ಕಳಿಸಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮೋದಿ ಮತ್ತು ಅಮಿತ್ ಶಾ ಜೋಡಿ:ಸಧ್ಯಕ್ಕೆ ಕರ್ನಾಟಕ ಬಿಜೆಪಿಯ ಗೊಂದಲವನ್ನು ಪರಿಹರಿಸಿಕೊಳ್ಳೋಣ. ಮುಂದೇನಾಗುತ್ತದೋ ನೋಡೋಣ ಎಂಬ ತೀರ್ಮಾನಕ್ಕೆ ಬಂದಿದೆಯಲ್ಲದೆ,ಬಿಜೆಪಿ ಬಣಗಳ ಮಧ್ಯೆ ಸಾಮರಸ್ಯ ಮೂಡಿಸುವ ಜವಾಬ್ದಾರಿಯನ್ನೂ ಪ್ರಲ್ಹಾದ್ ಜೋಷಿ ಮತ್ತು ಡಿ.ವಿ.ಸದಾನಂದಗೌಡರ ಹೆಗಲಿಗೇರಿಸಿದೆ.

ರಾಹುಲ್ ಕಿವಿಗೆ  ಸಿದ್ಧು ಸಂದೇಶ? (Political analysis)

ಇನ್ನು ಪಕ್ಷದ ವರಿಷ್ಟರು ತಮಗೆ ಪದೇ ಪದೇ ಅಡ್ಡಗಾಲು ಹಾಕುತ್ತಿರುವ ಬೆಳವಣಿಗೆಯಿಂದ ಕ್ರುದ್ದರಾದ ಸಿಎಂ ಸಿದ್ದರಾಮಯ್ಯ ದಿಲ್ಲಿಗೆ ಹೋಗಿ ಬಂದರಲ್ಲ? ಇದಾದ ನಂತರ ರಫ್ ಅಂಡ್ ಟಫ್ ಆಗಿರುವ ಅವರು‌ ಕರ್ನಾಟಕದಲ್ಲಿ ನಾಯಕತ್ವದ ಪ್ರಶ್ನೆ ಪದೇ ಪದೇ ಮೇಲೇಳಬಾರದು ಅಂತ ವರಿಷ್ಟರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರಂತೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ದಿಲ್ಲಿಗೆ ಹೋಗುವ ಮುನ್ನ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಅಧಿಕಾರ ಹಸ್ತಾಂತರದ ಬಗ್ಗೆ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಿದ್ದಾರೆ. ವರಿಷ್ಟರ ಯೋಚನೆಯ ಬಗ್ಗೆ ವಿವರಿಸಿದ್ದಾರೆ. ಅದರೆ ಸುರ್ಜೇವಾಲಾ ಮಾತಿಗೆ ತಪ್ಪಿಯೂ ಪ್ರತಿಕ್ರಿಯಿಸದ ಸಿದ್ಧರಾಮಯ್ಯ ಅವರು ತದನಂತರ ರಾಹುಲ್ ಗಾಂಧಿ ಅವರ ಬಳಿ ಮಾತನಾಡಿದ್ದಾರೆ. ಐದು ವರ್ಷದ ಅಧಿಕಾರಾವಧಿಯನ್ನು ಪೂರೈಸಲು ಬಿಡಿ.ಅಲ್ಲಿಯವರೆಗೆ ನಾಯಕತ್ವದ ಬಗ್ಗೆ ಚರ್ಚೆ ಮಾಡುವುದು ಬೇಡ ಅಂತ ಅವರು ಹೇಳಿದ ಮೇಲೆ ಎಐಸಿಸಿ ಮಟ್ಟದಲ್ಲೀಗ ಮೌನ ನೆಲೆಸಿದೆ ಎಂಬುದು ದಿಲ್ಲಿ ಮೂಲಗಳ ಹೇಳಿಕೆ.
ಹೀಗೆ ಒಂದು ಕಡೆ ದಿಲ್ಲಿಯ ಕಾಂಗ್ರೆಸ್ ಪಾಳಯದಲ್ಲಿ ಮೌನ ನೆಲೆಸಿದ‌ ಕಾಲಕ್ಕೆ ಸರಿಯಾಗಿ ಸಿದ್ದರಾಮಯ್ಯ ಇಲ್ಲಿ ಟಫ್ ಆಗಿ ಮಾತನಾಡತೊಡಗಿದ್ದಾರೆ. ಕಳೆದ ವಾರ ನಂದಿ ಬೆಟ್ಟದಲ್ಲಿ ನಡೆದ ಸಂಪುಟ ಸಭೆಗೂ ಮುನ್ನ: ನಾನೇ ಐದು ವರ್ಷ ಸಿಎಂ ಅಂತ ಅವರು ಗುಡುಗಿದ್ದೇ ಇದಕ್ಕೆ ಸಾಕ್ಷಿ. ಅವರ ಆಪ್ತರ ಪ್ರಕಾರ:ನಾಯಕತ್ವದ ವಿಷಯದಲ್ಲಿ ಇನ್ನು ಚರ್ಚೆಗೆ ಅವಕಾಶ ನೀಡಲು ಸಿದ್ದರಾಮಯ್ಯ ಸಿದ್ಧರಿಲ್ಲ. ಹೀಗಾಗಿ ಅಧಿಕಾರ ಹಸ್ತಾಂತರದ ಮಾತು ರಿಪೀಟ್ ಆದರೆ ನಿರ್ಣಾಯಕ ಸಂಘರ್ಷಕ್ಕಿಳಿಯಲು ಅವರು ಸಜ್ಜಾಗಿ ನಿಂತಿದ್ದಾರೆ.

ರೆಡಿ ಆಗುತ್ತಿದೆ ಸುರ್ಜೇವಾಲ ರಿಪೋರ್ಟು? (Political analysis)

ಈ ಮಧ್ಯೆ ಪಕ್ಷದ ಶಾಸಕರ ಅಹವಾಲನ್ನು ಕೇಳಲು ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪುನ: ಕರ್ನಾಟಕಕ್ಕೆ ಬರುತ್ತಿದ್ದಾರಲ್ಲ? ಈ ಬೆಳವಣಿಗೆ ಸಿಎಂ ಸಿದ್ದರಾಮಯ್ಯ ಅವರ ಪಾಳಯದಲ್ಲಿ ಅನುಮಾನ ಮೂಡಿಸಿದೆ.ಕಾರಣ? ಶಾಸಕರ ಕುಂದು ಕೊರತೆಗಳ ಬಗ್ಗೆ ಮಾತನಾಡುವ ನೆಪದಲ್ಲಿ ಇವರೆಲ್ಲ ನಾಯಕತ್ವದ ಬಗ್ಗೆ ಅಸಮಾಧಾನಿತರು ಎಂದು ಪ್ರತಿಬಿಂಬಿಸಲು ಸುರ್ಜೇವಾಲ ತಂತ್ರ ಎಂಬುದು ಸಿದ್ದರಾಮಯ್ಯ ಬಣದ ಶಂಕೆ.
ಅಂದ ಹಾಗೆ ಹೀಗೆ ಸುರ್ಜೇವಾಲ ಸಭೆ ನಡೆಸುವಾಗ ಒನ್ ಟು ಒನ್ ಮಾತನಾಡುವ ಬಹುತೇಕ ಶಾಸಕರು ಸಹಜವಾಗಿಯೇ ತಮಗೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಎಂದು ಹೇಳಿಯೇ ಹೇಳುತ್ತಾರೆ. ಅದೇ ಕಾಲಕ್ಕೆ ನಿಗದಿ ಮಾಡಿದ ಶಾಸಕರು ಹೋಗಿ ಸಿ.ಎಂ ಬದಲಾವಣೆ ಆಗಬೇಕು ಅಂತ ಬೇಡಿಕೆ ಮಂಡಿಸುತ್ತಾರೆ.  ಅಂದ ಹಾಗೆ ಇದು ನಾಯಕತ್ವದ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ಸಭೆಯೇನೂ ಅಲ್ಲ.  ಹೀಗಾಗಿ ಸುರ್ಜೇವಾಲಾರನ್ನು ಭೇಟಿ ಮಾಡುವ ಬಹುತೇಕರು ತಮ್ಮ ಕೊರತೆಯನ್ನು ಹೇಳಲು ಮಾತ್ರ  ಲಿಮಿಟ್ ಅಗುತ್ತಾರೆ.  ಅದರೆ ನಾಳೆ ಇದನ್ನೇ ಶಾಸಕರು ಅಸಮಾದಾನಗೊಂಡಿದ್ದಾರೆ.   ನಾಯಕತ್ವ ಬದಲಾವಣೆಯನ್ನು ಬಯಸಿದ್ದಾರೆ ಅಂತ ಸುರ್ಜೇವಾಲಾ ಪ್ರತಿಬಿಂಬಿಸಿದರೆ?  ಎಂಬುದು ಈ ಕ್ಯಾಂಪಿನ ಅನುಮಾನ.
ಹೀಗಾಗಿಯೇ ಈ ಕ್ಯಾಂಪಿನ ಕೆಲ ಶಾಸಕರು ಹಿರಿಯ ಸಚಿವರೊಬ್ಬರ ಬಳಿ ತಮ್ಮ ಅನುಮಾನ ವ್ಯಕ್ತಪಡಿಸಿದಾಗ:’ಅಯ್ಯೋ ಅವೆಲ್ಲ ನಡಿಯಲ್ಲ ಬಿಡ್ರೀ. ಇವತ್ತು ಸರ್ಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ?  ಹಿಂದಿದ್ದ ಬಿಜೆಪಿ ಸರ್ಕಾರ ನಮ್ಮ ಮೇಲೆ ಹೊರೆ ಹೇರಿ ಹೋಗಿದೆ. ಇನ್ನು ಕುಮಾರಸ್ವಾಮಿ ಮಾಡಿದ ರೈತರ ಸಾಲ ಮನ್ನಾದ ಬಾಬ್ತು ಎಂಟು ಸಾವಿರ ಕೋಟಿ ರೂಪಾಯಿ ಬಾಕಿ ಇದೆ.ಅದೇ ರೀತಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಕೊಡಬೇಕು?ಹೀಗೆ ಎಲ್ಲ ಕಡೆಯಿಂದ ಸರ್ಕಾರದ ಮೇಲಿರುವ ಹೊರೆಯ ಬಗ್ಗೆ ವರಿಷ್ಟರಿಗೇ ಗೊತ್ತಿದೆ.ಇದರ ಮಧ್ಯೆಯೇ ಶಾಸಕರಿಗೆ ಸಾಧ್ಯವಾದಷ್ಟು ಅನುದಾನ ಕೊಡಲಾಗುತ್ತಿದೆ.
ಇಷ್ಟಾದ ಮೇಲೂ ಶಾಸಕರಿಗೆ ಅಸಮಾಧಾನವಿದೆ ಅಂತಲೋ?ನಾಯಕತ್ವ ಬದಲಾವಣೆ ಅಗಬೇಕು ಅಂತಲೋ ವರದಿ ಕೊಟ್ಟರೆ ವರಿಷ್ಟರಿಗೆ ಗೊತ್ತಾಗಲ್ವಾ?ಎಲ್ಲರಿಗಿಂತ ಮುಖ್ಯವಾಗಿ ಖರ್ಗೆಯವರಿಗೇ ಇಲ್ಲಿನ ವಿಷಯ ಗೊತ್ತಿರುವಾಗ ಸುರ್ಜೇವಾಲ ರಿಪೋರ್ಟು ತಗೊಂಡು ಏನು ಮಾಡ್ತಾರೆ?’ಅಂತ ಕೇಳಿದರಂತೆ. ಹೀಗೆ ಸುರ್ಜೇವಾಲ ಅವರ ಬಗ್ಗೆ ಸಿದ್ಧರಾಮಯ್ಯ ಪಡೆಯ ಹಿರಿಯ ಸಚಿವರು ನಿರಾತಂಕವಾಗಿದ್ದರೂ ಉಳಿದವರು ಮಾತ್ರ ಸುರ್ಜೇವಾಲ ಹೆಜ್ಜೆಗಳ ಮೇಲೆ ಹದ್ದುಗಣ್ಣಿಟ್ಟೇ‌ ಕುಳಿತುಕೊಂಡಿದ್ದಾರೆ. ಹೀಗಾಗಿ ಈ ವಾರ ಶಾಸಕರ ಕುಂದುಕೊರತೆ ಆಲಿಸಲು ಅಂತ ರಾಜ್ಯಕ್ಕೆ ಬರುತ್ತಿರುವ ಸುರ್ಜೇವಾಲ ಉಲ್ಟಾ ವರದಿಯ ಸುಳಿವೇನಾದರೂ ಕೊಟ್ಟರೋ? ಆಗ ರಪ್ಪಂತ ತಿರುಗಿ ಬೀಳಲು ನಿರ್ಧರಿಸಿದ್ದಾರೆ.

ಕೆಪಿಸಿಸಿ ಪಟ್ಟಕ್ಕೆ ಜಾರ್ಕಿ ಏಕೆ ಬೇಕು? (Political analysis)

ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತರಬೇಕು ಅಂತ ಸಿಎಂ ಸಿದ್ದರಾಮಯ್ಯ ಪಕ್ಷದ ವರಿಷ್ಟರಿಗೆ ಹೇಳಿ ಬಂದಿದ್ದರಲ್ಲ? ಅದಕ್ಕೆ‌ ಪೂರಕವಾಗಿ ಜಾರಕಿಹೊಳಿ ಮಾಸ್ ಲೀಡರ್ ಅಂತ ಪ್ರತಿಬಿಂಬಿಸಲು ಅವರ ಟೀಮು ಸಜ್ಜಾಗಿದೆ. ಅರ್ಥಾತ್ ,ಕರ್ನಾಟಕದ ವಾಲ್ಮೀಕಿ ಮತ ಬ್ಯಾಂಕಿಗೆ ಸತೀಶ್ ಜಾರಕಿಹೊಳಿ ಟಾಪೆಸ್ಟ್ ಲೀಡರು ಅಂತ ತೋರಿಸುವುದು ಅದರ‌ ಲೆಕ್ಕಾಚಾರ. ಇವತ್ತು ರಾಯಚೂರು,ಕೊಪ್ಪಳ,ಬಳ್ಳಾರಿ,ಬೆಳಗಾಂ ಸೇರಿದಂತೆ‌ ಉತ್ತರ‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರಭಾವಿಯಾಗಿರುವ ವಾಲ್ಮೀಕಿ ಮತ ಬ್ಯಾಂಕು ಹಳೆ ಮೈಸೂರಿನ‌ ಚಾಮರಾಜನಗರ,ಮೈಸೂರು ಜಿಲ್ಲೆಗಳಲ್ಲಿ ಸಾಲಿಡ್ಡು ಶಕ್ತಿ ಹೊಂದಿದೆ.
ಇದೇ ರೀತಿ ಚಿತ್ರದುರ್ಗ,ತುಮಕೂರು,ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಕ್ಕ ಮಟ್ಟಿಗೆ ಪವರ್‌ ಹೊಂದಿರುವ ವಾಲ್ಮೀಕಿ ಸಮುದಾಯ ಇನ್ನು ಸತೀಶ್ ಸಿಗ್ನಲ್ಲಿಗೆ ಕಾದು ರಾಜಕೀಯ ಹೆಜ್ಜೆ ಇಡಲಿದೆ ಎಂಬ ವಾತಾವರಣ ನಿರ್ಮಿಸುವುದು ಸಿದ್ದು ಗ್ಯಾಂಗಿನ ಬಯಕೆ. ಹೀಗೆ ಒಂದು ಸಲ ಅವರು ಸಮುದಾಯದ ನಿರ್ವಿವಾದ ನಾಯಕರಾಗಿ ಹೊರಹೊಮ್ಮಿದರೆ ಒಂದು ಡೆಡ್ಲಿ ಕಾಂಬಿನೇಷನ್ ಬಗ್ಗೆ ವರಿಷ್ಟರು ಕನ್ವಿನ್ಸ್ ಅಗುವಂತೆ ಮಾಡಬಹುದು.
ಅದೆಂದರೆ ಕುರುಬ ಪ್ಲಸ್ ನಾಯಕ ಕಾಂಬಿನೇಶನ್. ಇವತ್ತು ಕರ್ನಾಟಕದಲ್ಲಿ ಕುರುಬ ಸಮುದಾಯದಷ್ಟೇ ಜನಸಂಖ್ಯೆ‌ಇರುವ ನಾಯಕ ಸಮುದಾಯದಲ್ಲಿ ರಾಜಕೀಯ ಪ್ರಜ್ಞೆ ತೀವ್ರವಾಗಿ ಬೆಳೆಯುತ್ತಿದೆ.ಹೀಗಾಗಿ ಈ ಎರಡು ಮತ ಬ್ಯಾಂಕುಗಳು ಸಾಲಿಡ್ಡಾಗಿ ಸೇರಿದರೆ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭುಜ‌ ಬಲಿಷ್ಟವಾಗಲಿದೆ ಅಂತ ವರಿಷ್ಟರಿಗೆ ಕನ್ವಿನ್ಸ್ ಮಾಡುವುದು ಸಿದ್ದು ಟೀಮಿನ ಲೆಕ್ಕಾಚಾರ.
ಆರ್.ಟಿ.ವಿಠ್ಠಲಮೂರ್ತಿ
TAGGED:CM SiddaramaiahMinister Pralhad JoshiNarendra Modiಕೇಂದ್ರ ಗೃಹ ಸಚಿವ ಅಮಿತ್ ಶಾನರೇಂದ್ರ ಮೋದಿಸಚಿವ ಪ್ರಲ್ಹಾದ್ ಜೋಷಿಸಿಎಂ ಸಿದ್ದರಾಮಯ್ಯ
Share This Article
Twitter Email Copy Link Print
Previous Article Davangere Crime, PSI Suicide, Davangere News, Davangere, ದಾವಣಗೆರೆ ಕೆಟೆಜೆ ನಗರ ಪಿಎಸ್‌ಐ ಆತ್ಮಹತ್ಯೆ; ಕುಟುಂಬಸ್ಥರು ಹೇಳಿದ್ದೇನು?
Next Article Yoga Guru Dr. Raghavendra Guruji Davanagere ಆರೋಗ್ಯದ ಸುಯೋಗವು ಬ್ರಾಹ್ಮೀ ಮುಹೂರ್ತದಲ್ಲಿದೆ : ಹಿರಿಯ ಯೋಗಗುರು ಡಾ|| ರಾಘವೇಂದ್ರ ಗುರೂಜಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

ದಾವಣಗೆರೆ (Davanagere) :   ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27…

By Dinamaana Kannada News

Davanagere | ನಮ್ಮ ದೇಶದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ : ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ದಾವಣಗೆರೆ (Davanagere) :  ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಸೃಷ್ಟಿಸಿ ಬದುಕು ಕಟ್ಟಿಕೊಡುತ್ತಿರುವ ಶಿಕ್ಷಣ ಸಂಸ್ಥೆಯಾಗಿರುವ ಜಿಎಂಐಟಿ ಪ್ರಸ್ತುತ ಜಿಎಂ…

By Dinamaana Kannada News

ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ  ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಿ ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ

ಬೆಂಗಳೂರು : ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ…

By Dinamaana Kannada News

You Might Also Like

siddaramaiah,Rahul Gandhi, DK Sivakumar
ರಾಜಕೀಯ

Political analysis | ಸಿದ್ದು ದಿಲ್ಲಿಯಲ್ಲಿ  ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ?

By Dinamaana Kannada News
Srinivas congress davanagere dinamaana
ರಾಜಕೀಯ

ಬಡವರ ಕಲ್ಪತರು ಶ್ರೀನಿವಾಸ್: ದಾವಣಗೆರೆ ಕಾಂಗ್ರೆಸ್ ನಲ್ಲಿ ಗಮನ ಸೆಳೆಯುತ್ತಿರುವ ಯುವ ನಾಯಕ

By Dinamaana Kannada News
Political analysis
ರಾಜಕೀಯ

Political analysis | ದಿಲ್ಲಿಯಲ್ಲಿ ಸಿದ್ದು ಗುದ್ದಿದ್ದು ಯಾರಿಗೆ?

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?