Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere news : ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ
ತಾಜಾ ಸುದ್ದಿ

Davangere news : ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ

Dinamaana Kannada News
Last updated: August 10, 2024 5:42 pm
Dinamaana Kannada News
Share
DAVANAGERE
ಹರಿಹರದ ಮುಖ್ಯ ಅಂಚೆ ಕಚೇರಿಯಲ್ಲಿ ಶನಿವಾರ ನಡೆದ ಅಂಚೆ ಜನಸಂಪರ್ಕ ಅಭಿಯಾನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹಿರಿಯ ಪತ್ರಕರ್ತ ಐರಣಿ ಹನುಮಂತಪ್ಪ ಮಾತನಾಡಿದರು. ದಾವಣಗೆರೆ ವಿಭಾಗದ ಅಂಚೆ ಅಧೀಕ್ಷಕ ಚಂದ್ರಶೇಖರ್, ನರೇಂದ್ರ ನಾಯ್ಕ್ ಕೆ.ಎಂ., ಜೆ.ಎಸ್.ಗುರುಪ್ರಸಾದ್, ಆರ್.ಶ್ರೀನಿವಾಸ್ ಪ್ರಸಾದ್ ಇದ್ದರು.
SHARE

ಹರಿಹರ (Davangere District) : ನಗರದಲ್ಲಿರುವ ಮೀಸಲು ನಿವೇಶನದಲ್ಲಿ ಹೊಸ ಅಂಚೆ ಕಚೇರಿ ನಿರ್ಮಾಣಕ್ಕೆ ಅಂಚೆ ಇಲಾಖೆ ಅನುದಾನ ಬಿಡುಗಡೆಮಾಡಬೇಕೆಂದು ಹಿರಿಯ ಪತ್ರಕರ್ತ ಐರಣಿ ಹನುಮಂತಪ್ಪ ಆಗ್ರಹಿಸಿದರು.

ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಶನಿವಾರ ನಡೆದ ಅಂಚೆ ಜನಸಂಪರ್ಕ ಅಭಿಯಾನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ನಗರದ ಮುಖ್ಯ ರಸ್ತೆಯಲ್ಲಿರುವ ಮುಖ್ಯ ಅಂಚೆ ಕಚೇರಿ ಕಟ್ಟಡ ಹಲವು ದಶಕಗಳ ಹಿಂದೆ ನಿರ್ಮಿಸಿದ್ದು ಅದು ಈಗಿನ ಕಾರ್ಯ ಒತ್ತಡಕ್ಕೆ ಸಾಕಾಗುತ್ತಿಲ್ಲ. ಗ್ರಾಹಕರ ವಾಹನ ನಿಲುಗಡೆಗೆ ಅವಕಾಶವಿಲ್ಲ, ಗ್ರಾಹಕರಿಗೆ ನಿಲ್ಲಲೂ ಜಾಗವಿಲ್ಲದಂತೆ ಕಿಷ್ಕಿಂದೆಯಾಗಿದೆ.

ಆಧಾರ್ ಕಾರ್ಡ್ ಹೊಸತಾಗಿ ಪಡೆಯಲು, ತಿದ್ದುಪಡಿ ಮಾಡಿಸಲು ಬರುವ ಜನರಿಗೆ ನಿಲ್ಲಲೂ ಜಾಗವಿಲ್ಲ, ಇತರೆ ಹತ್ತಾರು ಸೇವೆ ಪಡೆಯಲು ಬರುವವರಿಗೆ ಕಿರಿಕಿರಿಯಾಗುತ್ತಿದೆ. ಭಾರತ್ ಆಯಿಲ್ ಮಿಲ್ ಕಾಂಪೌಂಡ್‍ನಲ್ಲಿರುವ ವಿಶಾಲವಾದ ನಿವೇಶನದಲ್ಲಿ ಸುಸಜ್ಜಿತ ಅಂಚೆ ಕಚೇರಿ ಕಟ್ಟಡ ನಿರ್ಮಿಸಬೇಕೆಂದರು.

ಭಾರತ್ ಆಯಿಲ್ ಮಿಲ್ ಕಾಂಪೌಂಡ್‍ನಲ್ಲಿರುವ ನಿವೇಸನದಲ್ಲಿ ಕಚೇರಿಗೆ ಹೊಸ ಕಟ್ಟಡ ನಿರ್ಮಿಸಲು ಅನುದಾನಕ್ಕೆ ಇಲಾಖೆಯ ಹಿರಿಯರ ಗಮನ ಸೆಳೆಯಲಾಗಿದೆ. ಅನುದಾನ ಬಿಡುಗಡೆಯಾದರೆ ಆ ಕಾರ್ಯ ನೆರೆವೇರಲಿದೆ ಎಂದು ಉದ್ಘಾಟಿಸಿದ ದಾವಣಗೆರೆ ವಿಬಾಗದ ಅಂಚೆ ಅಧೀಕ್ಷಕ ಚಂದ್ರಶೇಖರ್ ಹೇಳಿದರು.

ಇದನ್ನು ಓದಿ : Davanagere : ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ವಿಶೇಷ ಆಭರಣಗಳ ಪ್ರದರ್ಶನ

ವ್ಯವಹಾರ, ವಹಿವಾಟಿನಲ್ಲಿ ದಾವಣಗೆರೆ ವಿಬಾಗವು ರಾಜ್ಯದಲ್ಲಿ ಹಾಗೂ ಹರಿಹರ ಉಪ ವಿಭಾಗವು ದಾವಣಗೆರೆ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದೆ. ಬ್ಯಾಂಕಿಂಗ್ ಹಾಗೂ ಇತರೆ ಆರ್ಥಿಕ ಚಟುವಟಿಕೆಗಳನ್ನು ನಡೆಸುತ್ತಾ ಅಂಚೆ ಇಲಾಖೆ ಜನರಿಗೆ ಹತ್ತಿರವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಕೆಇಟಿ ಸಿಬಿಎಸ್‍ಸಿ ಶಾಲೆ ಪ್ರಾಚಾರ್ಯ ಮಂಜುನಾಥ ಕುಲಕರ್ಣಿ ಮಾತನಾಡಿ, ಅಂಚೆ ಬಟವಾಡೆಗೆ ಸೀಮಿತವಾಗಿದ್ದ ಅಂಚೆ ಇಲಾಖೆ ಈಗ ವಿಮೆ, ಬ್ಯಾಂಕಿಂಗ್, ನಿವೃತ್ತರಿಗೆ, ಮಹಿಳೆ, ಮಕ್ಕಳಿಗೆ ಹೆಚ್ಚು ವರಮಾನದ ಠೇವಣಿ, ಮಾಸಿಕ ಪಾವತಿಯ ಯೋಜನೆಗಳನ್ನು ರೂಪಿಸಿದೆ. ಹಣ ಪಡೆದ ಹಲವು ಖಾಸಗಿ ಫೈನಾನ್ಸ್ ಸಂಸ್ಥೆಗಳು ಜನರಿಗೆ ಮೋಸ ಮಾಡಿವೆ, ಆದರೆ ಅಂಚೆ ಇಲಾಖೆಯು ದೇಶದ ಜನರ ವಿಶ್ವಾಸ ಹೊಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಅಂಚೆ ಪಾಲಕ ಆರ್.ಶ್ರೀನಿವಾಸ್ ರಾವ್, ಸಹಾಯಕ ಅಂಚೆ ಅಧೀಕ್ಷಕರಾದ ಜೆ.ಎಸ್.ಗುರುಪ್ರಸಾದ್, ನರೇಂದ್ರನಾಯ್ಕ ಕೆ.ಎಂ., ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವ್ಯವಸ್ಥಾಪಕ ಶ್ರೀನಿವಾಸ್ ಮಾತನಾಡಿದರು. ಸಾಧಕ ಸಿಬ್ಬಂದಿಗಳನ್ನು ಸತ್ಕರಿಸಲಾಯಿತು.

ಶ್ವೇತಾ ಶ್ರೀನಿವಾಸ್ ಪ್ರಾರ್ಥಿಸಿದರು, ಕಾವ್ಯ ಸ್ವಾಗತಿಸಿದರು. ಪ್ರದೀಪ್ ನಿರೂಪಿಸಿದರು. ನಿವೃತ್ತ ಅಂಚೆ ಪಾಲಕ ಸಂಗನಾಳಮಠ ಹಾಗೂ ಸಿಬ್ಬಂದಿ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere Davanagere : ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ವಿಶೇಷ ಆಭರಣಗಳ ಪ್ರದರ್ಶನ
Next Article DAVANAGERE Davanagere news : ಸಾಕ್ಷರತಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಿ : ಡಾ. ಸುರೇಶ್ ಇಟ್ನಾಳ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಬಿ.ಪಿ.ಹರೀಶ್

ಹರಿಹರ (Harihara): ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚು ಪ್ರತಿಭಾವಂತರಿದ್ದು ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಶಾಸಕ ಬಿ.ಪಿ.ಹರೀಶ್ ಕೋರಿದರು.…

By Dinamaana Kannada News

ಇವಿಎಂ ಬೇಡ -ಬ್ಯಾಲೆಟ್ ಪೇಪರ್ ಬೇಕು: ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಪಾರದರ್ಶಕ ಮತದಾನ ಬೇಕು, ಎಲೆಕ್ಟ್ರಾನಿಕ್ ಮಿಷಿನ್ ಯಿಂದ ಮತದಾನ ದುರ್ಬಳಕೆ ಬೇಡ, ಇವಿಎಂ ಬದಲು ಬ್ಯಾಲೆಟ್ ಪೇಪರ್ ಬೇಕು ಎಂದು…

By Dinamaana Kannada News

Davangere news | ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ, ಆ.23 (Davangere District) : ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?