Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ
ತಾಜಾ ಸುದ್ದಿ

ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ

Dinamaana Kannada News
Last updated: March 25, 2024 5:24 pm
Dinamaana Kannada News
Share
davanagere vv
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿದರು.
SHARE

ದಾವಣಗೆರೆ:   ಸರಳವಾಗಿ, ಜನರಿಗೆ ಸುಲಭವಾಗಿ ಕೈಗೆಟಕುವ ರೀತಿಯಲ್ಲಿ ಸೌಲಭ್ಯಗಳು ಲಭಿಸುವಂತೆ ಮಾಡುವ ಬಹುಶಿಸ್ತೀಯ ಸಂಶೋಧನೆಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಆ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಯನ ವಿಭಾಗವು ನವದೆಹಲಿಯ ಐಸಿಎಸ್‌ಎಸ್‌ಆರ್ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ಸಂಶೋಧನೆ ಮತ್ತು ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗುಣಮಟ್ಟದ ಸಂಶೋಧನೆಗೆ ಆದ್ಯತೆ ನೀಡಿ

ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶಗಳು ಸಂಶೋಧನೆಯ ವಿಧಾನ ಮತ್ತು ಅಧ್ಯಯನ ಕ್ರಮವನ್ನು ಸುಲಭಗೊಳಿಸಿವೆ. ಅವುಗಳ ಪ್ರಯೋಜನ ಪಡೆದು ಗುಣಮಟ್ಟದ ಸಂಶೋಧನೆಗೆ ಆದ್ಯತೆ ನೀಡಬೇಕೇ ಹೊರತು ತಂತ್ರಜ್ಞಾನವನ್ನೇ ಅವಲಂಬಿಸಬಾರದು ಎಂದು ತಿಳಿಸಿದರು.

ಪದವಿಗಾಗಿ ಸಂಶೋಧನೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ

ಪದವಿಗಾಗಿ ಸಂಶೋಧನೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ. ಗ್ರಾಮೀಣ ಪ್ರದೇಶದ ಜನರು, ಬೀದಿಬದಿಯ ವ್ಯಾಪಾರಿಗಳು, ದಿನಗೂಲಿ ಉದ್ಯೋಗಿಗಳು, ಕೃಷಿಕರು, ಕಾರ್ಮಿಕರು ಮೊದಲಾದ ಅಸಂಘಟಿತ ತಳಮಟ್ಟದ ಜನರ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಅಗತ್ಯವಿರುವ ಮಾರ್ಗದರ್ಶನಗಳು, ಯೋಜನೆಗಳನ್ನು ಆಧರಿಸಿದ ಸಂಶೋಧನೆಗಳು ನಡೆಯಬೇಕು ಎಂದು ಹೇಳಿದರು.

ಕ್ಲಿಷ್ಟಕರ ಸಮಸ್ಯೆಗಳಿಗೂ ತಕ್ಷಣವೇ ಪರಿಹಾರ

ವಾಣಿಜ್ಯ ಮತ್ತು ಆಡಳಿತ ನಿಕಾಯದ ಡೀನ್ ಪ್ರೊ.ಆರ್.ಶಶಿಧರ್  ಮಾತನಾಡಿ, ಅತ್ಯಾಧುನಿಕ ತಂತ್ರಾಂಶಗಳು ಸಂಶೋಧನಾ ಕ್ರಮ, ದತ್ತಾಂಶ ಸಂಗ್ರಹಣೆ, ದತ್ತಾಂಶ ವಿಶ್ಲೇಷಣೆ ಹಾಗೂ ನಿರ್ವಹಣೆಗೆ ಹೆಚ್ಚು ಪ್ರಯೋಜನಕಾರಿಯಾಗಿವೆ. ಯಾವುದೇ ಕ್ಲಿಷ್ಟಕರ ಸಮಸ್ಯೆಗಳಿಗೂ ತಕ್ಷಣವೇ ಪರಿಹಾರ ಕಂಡುಕೊಳ್ಳುವ ಅವಕಾಶವನ್ನು ಕಲ್ಪಿಸಿವೆ. ಇಂಥ ತಂತ್ರಜ್ಞಾನ ಮತ್ತು ತಂತ್ರಾಂಶಗಳ ಬಳಕೆಯ ವಿಧಾನವನ್ನೂ ಸಂಶೋಧಕರು ಕಲಿತು ತಮ್ಮ ಅಧ್ಯಯನ ಮತ್ತು ಸಂಶೋಧನೆಯಲ್ಲಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವೃತ್ತಿ ಮತ್ತು ಸಂಶೋಧನಾ ಕೌಶಲ್ಯಗಳ ಅಳವಡಿಸಿಕೊಳ್ಳಿ

ಸಂಶೋಧನೆಯಲ್ಲಿ ವೈಯಕ್ತಿಕ ಹಿತಾಸಕ್ತಿಗಿಂತ ಸಮುದಾಯಿಕ ಹಿತಕ್ಕೆ ಆದ್ಯತೆ ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಶೋಧನೆಯ ವ್ಯಾಪ್ತಿ ವಿಶಾಲವಾಗಿ ಹರಡಿದೆ. ತಂತ್ರಜ್ಞಾನ, ತಂತ್ರಾಂಶಗಳನ್ನು ಬಳಸಿಕೊಂಡು ಗುಣಮಟ್ಟದ ಸಂಶೋಧನೆಯ ಮೂಲಕ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲು ಗಮನ ನೀಡಬೇಕಾಗಿದೆ. ವೃತ್ತಿ ಮತ್ತು ಸಂಶೋಧನಾ ಕೌಶಲ್ಯಗಳ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕುಲಸಚಿವ ಪ್ರೊ.ಯು.ಎಸ್.ಮಹಾಬಲೇಶ್ವರ, ಪ್ರೊ.ಸೆಲ್ವಿ, ಡಾ.ಡಿ.ಎಚ್.ಗಿರೀಶ ಉಪಸ್ಥಿತರಿದ್ದರು. ಕಲಾ ಮತ್ತು ಮಾನವಿಕ ಅಧ್ಯಯನ ನಿಕಾಯದ ಡೀನ್ ಪ್ರೊ.ಸುಚಿತ್ರಾ ಸ್ವಾಗತಿಸಿದರು. ಡಾ.ಸುಂದರಂ ವರದಿ ವಾಚಿಸಿದರು. ಕಾರ್ಯಾಗಾರದ ನಿರ್ದೇಶಕ ಹಾಗೂ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಹುಚ್ಚೇಗೌಡ ವಂದಿಸಿದರು

TAGGED:dinamaan.com.dinamaana.com.davanagere newsPrefer multidisciplinary researchದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ
Share This Article
Twitter Email Copy Link Print
Previous Article CityCorporation ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ
Next Article _Injustice to Panchmasali community ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ…

By Dinamaana Kannada News

ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ

ದಾವಣಗೆರೆ :  ಕುತಂತ್ರ, ತಂತ್ರಗಾರಿಕೆಗಳ ನಡುವೆ   ನೈ ತಿಕತೆಗೆ ಸೋಲಾಗಿದ್ದು, ಇದರಿಂದ ನಾನು ಕಂಗಾಲಾಗಿಲ್ಲ, ಆತ್ಮವಿಶ್ವಾಸ ವೃದ್ಧಿಯಾಗಿದ್ದು, ಶಿಕ್ಷಕರ ಸೇವೆಯನ್ನು…

By Dinamaana Kannada News

Davanagere news | ಮಕ್ಕಳ ಭವಿಷ್ಯಕ್ಕಾಗಿ ಬಾಲ್ಯದಲ್ಲೇ ಮೌಲ್ಯ ಬಿತ್ತಿ : ಎಚ್.ಕೆ.ಲಿಂಗರಾಜು

ದಾವಣಗೆರೆ (Davanagere ) : ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತುವ ಮುನ್ನ ಶಿಕ್ಷಕರು ಮೌಲ್ಯಗಳನ್ನು ಆಚರಿಸುತ್ತಿರಬೇಕು. ಬಾಲ್ಯದಲ್ಲಿಯೇ ಅಳಿಸಲಾಗದ ಮೌಲ್ಯಗಳನ್ನು ಬಿತ್ತಿದರೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?