ದಾವಣಗೆರೆ (Davanagere): ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರಕಾರ ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಆರ್ಥಿಕ ಸಂಕಷ್ಟ ತಂದಟ್ಟಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Read also : Davanagere| ಬೈಕ್ ವೀಲಿಂಗ್ : 05 ಬೈಕ್ ವಶಕ್ಕೆ
ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾಬಾಯಿ ಮಾಲತೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಂಗಳಮ್ಮ ಮತ್ತು ಮಂಜಮ್ಮ, ಶುಭಮಂಗಳ, ಸಲ್ಮಾ ಬಾನು, ಕಾವ್ಯ, ಹರೀಶ್ ಹೆಚ್ ಇತರರು ಇದ್ದರು.