Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರು? : ಮೋದಿ  
ತಾಜಾ ಸುದ್ದಿ

ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರು? : ಮೋದಿ  

Dinamaana Kannada News
Last updated: April 28, 2024 5:08 pm
Dinamaana Kannada News
Share
Supreme Court
ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಾವೇಶದಲ್ಲಿ ಮಾತನಾಡಿದರು.
SHARE

ದಾವಣಗೆರೆ : ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ ಇಂಡಿಯಾ ಒಕ್ಕೂಟದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು.

ದಾವಣಗೆರೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ   ಮಾತನಾಡಿದ ಅವರು, ಇಂಥವರಿಗಾಗಿ ಮತವನ್ನು ಹಾಳು ಮಾಡಬೇಕೇ ಎಂದು ಪ್ರಶ್ನಿಸಿದರು. ಮೌಲ್ಯಯುತ ಮತವನ್ನು ಹಾಳು ಮಾಡದಿರಿ ಎಂದು ವಿನಂತಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಎಸ್‍ಸಿ, ಎಸ್‍ಟಿಗಳಿಗಾಗಿ ಮೀಸಲಿಟ್ಟ 11 ಸಾವಿರ ಕೋಟಿ ಹಣವನ್ನು ಬೇರೆಡೆ ವರ್ಗಾಯಿಸಿದೆ. ಕಿಸಾನ್ ಸಮ್ಮಾನ್ ನಿಧಿಯಡಿ ಬಿಜೆಪಿ ಸರಕಾರ 4 ಸಾವಿರ ಕೊಡುತ್ತಿತ್ತು. ಆ 4 ಸಾವಿರ ಕೊಡುವುದನ್ನು ಕಾಂಗ್ರೆಸ್ ಸರಕಾರ ರದ್ದು ಮಾಡಿತು. ಈಗ ಕೇವಲ 6 ಸಾವಿರ ಮಾತ್ರ ಸಿಗುತ್ತಿದೆ. ಕಾಂಗ್ರೆಸ್ಸಿನವರಿಗೆ ರೈತರ ಮೇಲೆ ದ್ವೇಷ ಇದೆಯೇ? ಎಂದು ಕೇಳಿದರು. ಒಬಿಸಿ ಮೀಸಲಾತಿಯಡಿ ಅಲ್ಪಸಂಖ್ಯಾತರನ್ನು ತಂದಿದೆ ಎಂದು ಆಕ್ಷೇಪಿಸಿದರು.

ನೂತನ ಶಿಕ್ಷಣ ನೀತಿಗೆ (ಎನ್‍ಇಪಿ) ಬ್ರೇಕ್ ಹಾಕಲಾಗಿದೆ. ಇದರಿಂದ ಯುವಜನರಿಗೆ ದೊಡ್ಡ ನಷ್ಟ ಉಂಟಾಗಿದೆ. ರಾಜಕೀಯ ಮತಭೇದ ಇರಲಿ; ಆದರೆ ಯುವಜನರ ಭವಿಷ್ಯದ ಮೇಲೆ ತೊಂದರೆ ಆಗದಂತೆ ನೋಡಿಕೊಳ್ಳಬೇಕಲ್ಲವೇ ಎಂದು ಕೇಳಿದರು.

ಕಾಂಗ್ರೆಸ್ ಪಕ್ಷವು ಪಾಪ- ತಪ್ಪು ಮಾಡುತ್ತಿದೆ. ಗರಿಷ್ಠ ಭ್ರಷ್ಟಾಚಾರ, ಲಕ್ಷಗಟ್ಟಲೆ ಮೊತ್ತದ ಹಗರಣಗಳನ್ನು ಕಾಂಗ್ರೆಸ್ ಪಕ್ಷ ಮಾಡಿತ್ತು. ಇವರ ಮೇಲೆ ಭರವಸೆ ಇಡಲು ಸಾಧ್ಯವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನನ್ನನ್ನು 10 ವರ್ಷಗಳಿಂದ ನೋಡಿದ್ದೀರಿ.  ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ಕೇವಲ 25 ಇದ್ದುದು 47ಕ್ಕೆ ಏರಿದೆ.  ರೈಲ್ವೆ ಲೈನ್‍ಗಳ ಅಭಿವೃದ್ಧಿ,  ದಾವಣಗೆರೆಯಲ್ಲಿ ಯುವಜನರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.  ಮೇ 7ರಂದು ದೇಶ ವಿಕಾಸಕ್ಕಾಗಿ ಮತ ಕೊಡಿ ಎಂದು ಮನವಿ ಮಾಡಿದರು.

ಗಾಯತ್ರಿ ಸಿದ್ದೇಶ್ವರ, ಬಸವರಾಜ ಬೊಮ್ಮಾಯಿ ಅವರಿಗೆ ಮತ ಕೊಟ್ಟು ಗೆಲ್ಲಿಸಿ ಎಂದು ವಿನಂತಿಸಿದರು.

ಕರ್ನಾಟಕವು ಏ.26ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಿದೆ. ಇಲ್ಲಿನ ಮಾತೆಯರು, ಸೋದರಿಯರು, ಮೊದಲ ಬಾರಿ ಮತದಾನ ಮಾಡಿದವರಿಂದ ಕಾಂಗ್ರೆಸ್ ಪಕ್ಷ ಆತಂಕಗೊಂಡಿದೆ.  ಮೇ 7ರಂದು ಏನಾದರೂ ಮಾಡಿ ಖಾತೆ ತೆರೆಯಬೇಕೆಂದು ಕಾಂಗ್ರೆಸ್ ಪ್ರಯತ್ನದಲ್ಲಿದೆ.  ದೆಹಲಿಯಲ್ಲಿ ಖಾತೆ ತೆರೆಯುವುದೇ ಅವರಿಗೆ ಕಷ್ಟವಾಗಿದೆ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್ ಮಿತ್ರ ಪಕ್ಷಗಳ ನಡುವೆ ಬೀದಿಕಾಳಗ ನಡೆಯಲಿದೆ. ಹಿಂದೆ ಇವಿಎಂ ಮೇಲೆ ಆರೋಪ ಹೊರಿಸುತ್ತಿದ್ದರು. ಸುಪ್ರೀಂ ಕೋರ್ಟ್ ಇವರಿಗೆ ತಕ್ಕ ಏಟು ನೀಡಿದೆ. ಈಗ ಸೋಲಿಗೆ ಯಾರನ್ನು ಹೊಣೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಪ್ರೀತಿ, ಆಶೀರ್ವಾದ ಅನೇಕ ಜನ್ಮಗಳ ಪುಣ್ಯದಂತೆ ಲಭಿಸುತ್ತಿದೆ. ಪರಮಾತ್ಮನಿಗೆ ಅಭಾರಿ ಎನ್ನಲೇ? ಜನರು, ಯುವಜನರಿಗೆ ಧನ್ಯವಾದ ಹೇಳಲೇ? ಕೃತಜ್ಞ ಎನ್ನಲು ಶಬ್ದಗಳ ಕೊರತೆ ನನ್ನನ್ನು ಕಾಡುತ್ತಿದೆ ಎಂದು ತಿಳಿಸಿದರು. ದೇಶವಾಸಿಗಳಿಗೆ ಸದಾ ಸರ್ವದಾ ತಲೆ ಬಗ್ಗಿಸಿ ಪ್ರಣಾಮ ಸಲ್ಲಿಸುತ್ತೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಜಿ.ಎಂ.ಸಿದ್ದೇಶ್ವರ್, ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್,  ಮಾಜಿ ಡಿಸಿಎಂ ಗೋವಿಂದ ಕಾರಜೋಳ,  ಸಂಸದರು, ಮಾಜಿ ಸಚಿವರು,   ಶಾಸಕರು, ಜಿಲ್ಲಾಧ್ಯಕ್ಷರು,  ರಾಜ್ಯ- ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ವೇದಿಕೆಯಲ್ಲಿದ್ದರು.

 

TAGGED:Dinamana.comKannada NewsSupreme Court.ಕನ್ನಡ ಸುದ್ದಿಕಾಂಗ್ರೆಸ್‌ನಿಂದ ಇವಿಎಂ ಮೇಲೆ ಆರೋಪ : ಸುಪ್ರೀಂ ಚಾಟಿ.ದಿನಮಾನ.ಕಾಂ
Share This Article
Twitter Email Copy Link Print
Previous Article sanduru mining dvg ಸೊಂಡೂರಿನ ಕಗ್ಗತ್ತಲೆಯ ಕಥನಗಳು – 7 ಬಡವರೇ ಇರದ ಊರು
Next Article nsui davanagere ಕಪ್ಪುಬಟ್ಟೆ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್

ದಾವಣಗೆರೆ,ಜ.09 (Davanagere): ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಬೂನಾದಿ ಹಾಕುವುದು ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವುದು ಇದೆಲ್ಲವು ಶಾಲಾ ಹಂತದಲ್ಲಿಯೇ…

By Dinamaana Kannada News

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  : ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ…

By Dinamaana Kannada News

ದಾವಣಗೆರೆ|ಪ್ಲಾಸ್ಟಿಕ್ ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕ

ದಾವಣಗೆರೆ : ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಮಾರಕವಾಗಿವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?