Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖ : ನ್ಯಾ. ರಾಜೇಶ್ವರಿ ಎನ್. ಹೆಗಡೆ
ತಾಜಾ ಸುದ್ದಿ

DAVANAGERE : ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖ : ನ್ಯಾ. ರಾಜೇಶ್ವರಿ ಎನ್. ಹೆಗಡೆ

Dinamaana Kannada News
Last updated: August 6, 2024 1:12 pm
Dinamaana Kannada News
Share
DAVANAGERE
ಜಿಲ್ಲಾ  ವಕೀಲರ ಸಂಘಕ್ಕೆ ಕರ್ನಾಟಕ ಹೈಕೋರ್ಟ್‍ನಿಂದ ಪ್ರಶಂಸಾ ಪತ್ರ
SHARE

ದಾವಣಗೆರೆ, ಆ.6 (DAVANAGERE ):- ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದು ಅವರಿಗೆ ಸೂಕ್ತ ಸಮಯದಲ್ಲಿ ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ಜಿಲ್ಲಾ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಜುಲೈನಲ್ಲಿ ನಡೆದ ಲೋಕ್ ಅದಾಲತ್ನಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಕ್ಕಾಗಿ ಏರ್ಪಡಿಸಲಾಗಿದ್ದ ವಕೀಲರಿಗೆ ಅಭಿನಂದನಾ ಸಮಾರಂಭ ಹಾಗೂ ಸೆಪ್ಟಂಬರ್ನಲ್ಲಿ ನಡೆಯಲಿರುವ ಲೋಕ್ ಅದಾಲತ್ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸಾ ಪತ್ರ ನೀಡಿ ಮಾತನಾಡಿದರು.

Read also : DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದಲ್ಲಿ ಧರ್ಮ, ವರ್ಗ, ಜಾತಿ, ಲಿಂಗ ಹಾಗೂ ಲಿಂಗಬೇಧವನ್ನು ಮೀರಿ ಜನತೆ ನ್ಯಾಯಾಲಯಗಳನ್ನು ನ್ಯಾಯ ದೇಗುಲಗಳೆಂದು ಭಾವಿಸಿದ್ದಾರೆ . ಅವರ ನಂಬಿಕೆಯನ್ನು ಉಳಿಸಲು ಅತ್ಯಂತ ಪರಿಣಾಮಕಾರಿಯಾಗಿ ನ್ಯಾಯಾಲಯಗಳು ವಕೀಲರ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ ಅವರು, ಹಸಿದವರಿಗೆ ಅನ್ನ, ಕಷ್ಟದಲ್ಲಿರುವವರಿಗೆ ಸಹಾಯ, ತಪ್ಪು ಮಾಡಿದವರನ್ನು ಸರಿದಾರಿಗೆ ತರುವ ಮೂಲಕ ಸೋಲಿನಲ್ಲೂ ಧೈರ್ಯ, ಉತ್ಸಾಹ ತುಂಬುವ ಮೂಲಕ, ಕಕ್ಷಿದಾರರಿಗೆ ತಾಯಿಬೇರುಗಳಾಗಿ ವಕೀಲರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು. ಕಳೆದ ಲೋಕ್ ಅದಾಲತ್ನಲ್ಲಿ 25 ಕುಟುಂಬಗಳನ್ನು ಒಂದು ಮಾಡುವ ಮೂಲಕ ಕೌಟುಂಬಿಕ ನ್ಯಾಯಾಲಯ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.

ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿದ ಜಿಲ್ಲಾ ಸೇವಾ ಮತ್ತು ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ್ ಮ. ಕರೆಣ್ಣವರ ಅವರು, ದಾವಣಗೆರೆ ಜಿಲ್ಲಾ ವಕೀಲರ ಸಂಘವು ಲೋಕ್ ಅದಾಲತ್ನಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿದ್ದಕ್ಕಾಗಿ ನಿರಂತರವಾಗಿ ಕರ್ನಾಟಕ ಹೈಕೋರ್ಟ್ನಿಂದ ಪ್ರಶಂಸಾ ಪತ್ರವನ್ನು ಪಡೆಯುತ್ತಿರುವುದು ಅಭಿನಂದನೀಯ ಎಂದು ಶ್ಲಾಘಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ  ಎಲ್.ಹೆಚ್. ಅರುಣ್ಕುಮಾರ್ ಮಾತನಾಡಿ, ಭಾರತದಲ್ಲಿ ನ್ಯಾಯಾಂಗವು ಇಂದಿಗೂ ಜನತೆಯ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಂಡಿದ್ದು ಆ ನಿಟ್ಟಿನಲ್ಲಿ ನ್ಯಾಯಾಂಗದ ಭಾಗವಾಗಿರುವ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಂಗ ಸಿಬ್ಬಂದಿ ಹೆಚ್ಚು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕಾಗಿದೆ. ಲೋಕ್ ಅದಾಲತ್ನಲ್ಲಿ ವಕೀಲರ ಸಹಕಾರದಿಂದ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು ಕರ್ನಾಟಕ ಹೈಕೋರ್ಟ್ ನೀಡಿರುವ ಪ್ರಶಂಸಾ ಪತ್ರ ದಾವಣಗೆರೆ ವಕೀಲ ಸಮುದಾಯಕ್ಕೆ ಸಂದ ಗೌರವವಾಗಿದೆ ಎಂದು ಪ್ರತಿಪಾದಿಸಿದರು.

ಸಮಾರಂಭದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರವೀಣ್ಕುಮಾರ್ ಆರ್.ಎನ್, ಮಕ್ಕಳ ಸ್ನೇಹಿ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪ್ಪ ಗಂಗಪ್ಪ ಸಲಗರೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ, ನ್ಯಾಯಾಧೀಶರಾದ ಶ್ರೀಮತಿ ರೇಷ್ಮಾ, ಅಮರ್ ವಿ.ಎಲ್., ಸಿ. ನಾಗೇಶ್, ಶ್ರೀಮತಿ ಗಾಯಿತ್ರಿ ಹೆಚ್.ಡಿ., ಮಲ್ಲಿಕಾರ್ಜುನ್, ಸಿದ್ಧರಾಜು, ನಾಜಿಯಾ ಕೌಸರ್ ಉಪಸ್ಥಿತರಿದ್ದರು.

ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳ್ ಸ್ವಾಗತಿಸಿದರು, ಕಾರ್ಯದರ್ಶಿ ಎಸ್. ಬಸವರಾಜ್ ನಿರೂಪಿಸಿದರು, ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ, ಭಾಗ್ಯಲಕ್ಷ್ಮಿ ಆರ್., ಮಧುಸೂದನ್ ಟಿ.ಹೆಚ್., ರಾಘವೇಂದ್ರ ಎಂ., ಸಂತೋಷ್ ಕುಮಾರ್ ಜಿ.ಜೆ., ನಾಗರಾಜ್ ಎಲ್., ನೀಲಕಂಠಯ್ಯ ಕೆ.ಎಂ, ಅಜಯ್ ಬಿ., ಚೌಡಪ್ಪ ಎಂ., ಇನ್ನಿತರ ವಕೀಲರು ಪಾಲ್ಗೊಂಡಿದ್ದರು.

TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Next Article DAVANAGERE Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಇಹಲೋಕಕ್ಕೆ ವಿದಾಯ ಹೇಳಿದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಕಿರು ಪರಿಚಯ

ಮನಮೋಹನ್ ಸಿಂಗ್ ವಿಶ್ವದ ಅತ್ಯಂತ ಪ್ರಮುಖ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಭಾರತೀಯ ಅರ್ಥಶಾಸ್ತ್ರಜ್ಞರಾಗಿದ್ದರು ಹಾಗೂ ನಂತರ ದೇಶದ ರಾಜಕೀಯ…

By Dinamaana Kannada News

Davanagere | ಚಲಿಸುವ ರೈಲಿಗೆ ಸಿಲುಕುತ್ತಿದ್ದ ಯುವಕನ ಪ್ರಾಣ ಉಳಿಸಿದ ಆರ್‌ಪಿಎಫ್ ಮುಖ್ಯ ಪೇದೆ!

ದಾವಣಗೆರೆ (Davanagere news) : ಆರ್‌ಪಿಎಫ್ ಮುಖ್ಯ ಪೇದೆಯೊಬ್ಬ ಚಲಿಸುವ ರೈಲಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿದ್ದ ಯುವಕನ ಜೀವ ಉಳಿಸಿದ…

By Dinamaana Kannada News

ಕಾಡಾನೆ ದಾಳಿ: ಹೊಟ್ಯಾಪುರ ಕಾರ್ಮಿಕ ಮಹಿಳೆ ಸಾವು    

ದಾವಣಗೆರೆ :  ಬದುಕು ಕಟ್ಟಿಕೊಳ್ಳಲು ಹೋದ ದಂಪತಿ ಮೇಲೆ ಕಾಡಾನೆ ಎಂದು ದಾಳಿ ನಡೆಸಿದ್ದು, ಪತ್ನಿ ಮೃತಪಟ್ಟು ಪತಿ ಪ್ರಾಣಾಪಾಯದಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?