Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ
ತಾಜಾ ಸುದ್ದಿ

ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ

Dinamaana Kannada News
Last updated: March 19, 2025 1:04 pm
Dinamaana Kannada News
Share
ಜಿ. ಬಿ. ವಿನಯ್ ಕುಮಾರ್
ಜಿ. ಬಿ. ವಿನಯ್ ಕುಮಾರ್
SHARE

ದಾವಣಗೆರೆ (Davanagere): ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರೆಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ದಾವಣಗೆರೆ ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್, ಉಪವಿಭಾಗಾಧಿಕಾರಿ ಅಭಿಷೇಕ್, ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.

ಸ್ಥಳಕ್ಕೆ ಭೇಟಿ ಮಾಡಿ ಜನರ ಸಂಕಷ್ಟ ಆಲಿಸಿ ಪರಿಶೀಲನೆ ನಡೆಸಿದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಅವರು, ಕೂಡಲೇ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಕ್ರಷರ್ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಜಿ. ಬಿ. ವಿನಯ್ ಕುಮಾರ್ ಅವರು, ಊರಿನ ಸಮಸ್ಯೆಯನ್ನು ಅಧಿಕಾರಿಗಳು ಹತ್ತಿರದಿಂದ ಗಮನಿಸಿದ್ದಾರೆ. ಜನರ ಸಮಸ್ಯೆಗಳು ಅನುಭವಕ್ಕೆ ಬರುತ್ತಿವೆ. ನಾನು ಹಲವು ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಆದ್ರೆ, ಇಲ್ಲಿ ಬರುತ್ತಿರುವ ಧೂಳು ಹೆಚ್ಚಾಗಿದೆ. ಮಕ್ಕಳು ಈ ವಾತಾವರಣದಲ್ಲಿ ಪಾಠ ಕಲಿಯಲು ಆಗದು. ಯಾವುದೇ ರಸ್ತೆಯಾದರೂ ಅಲ್ಲಿಂದ ನೂರು ಮೀಟರ್ ಆಚೆ 100 ಮೀಟರ್ ಆಚೆ ಇರಬೇಕು. ಈ ಬಗ್ಗೆ ಪರಿಶೀಲಿಸಬೇಕು. ಜನರು ತೊಂದರೆಗಳ ಬಗ್ಗೆ ಹೇಳಿದಾಗ ಸೇಫ್ ಜೋನ್ 500 ಮೀಟರ್ ದೂರದವರೆಗೆ ಇರಬೇಕು. ಇದೆಲ್ಲಾ ಕಾನೂನು ಬದ್ದವಾಗಿ ನೀಡಬೇತು. 2011ರಲ್ಲಿ ಕ್ರಷರ್ ಆಕ್ಟ್ ಅಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲೇಬೇಕಾಗುತ್ತದೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೆಂಚಿಕೊಪ್ಪ ಗ್ರಾಮ ಪಂಚಾಯಿಯ ಆರುಂಡಿ ಗ್ರಾಮದ ವ್ಯಾಪ್ತಿಯಲ್ಲಿನ ಕಲ್ಲಿನ ಕ್ಯಾರೆ ಕ್ರಷರ್ ಹಾಗೂ ಗಣಿಗಾರಿಕೆ ಕಾನೂನು ನಿಯಮಬಾಹಿರವಾಗಿ ನಡೆಯುತ್ತಿದ್ದು, ಗ್ರಾಮದ ರಸ್ತೆ ಹಾಳಾಗಿದೆ. ಧೂಳಿನಿಂದ ಗ್ರಾಮಸ್ಥರಿಗೆ ಅನಾನುಕೂಲವಾಗಿದೆ. ರೈತರು ಬೆಳೆದ ಬೆಳೆಗಳು ಹಾಳಾಗಿವೆ. ನೀರು ಕುಡಿಯಲು ಯೋಗ್ಯವಲ್ಲದಂತಾಗಿದೆ. ಅಂತರ್ಜಲ ಮಟ್ಟವೂ ಕುಸಿದಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಗ್ರಾಮದ ದೇವನ್ಮಾನಗಳು ಹಾಗೂ ಆರುಂಡಿ ಗ್ರಾಮದ ವಾಸದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಮನೆಗಳಲ್ಲಿ ವಾಸ ಮಾಡುವುದೇ ಕಷ್ಟದಂತಿದೆ ಎಂದು ತಿಳಿಸಿದರು.

ಗ್ರಾಮದಲ್ಲಿ ನಡೆಸುತ್ತಿರುವ ಪ್ರತಿಯೊಂದು ಕ್ಯಾರೆಗಳಲ್ಲಿ ಯಾವುದೇ ತಡೆಗೋಡೆ ಇಲ್ಲ. ಮರಗಿಡಗಳನ್ನು ಬೆಳೆಸಿಲ್ಲ. ತಂತಿ ಬೇಲಿ ಹಾಕುವುದೂ ಸೇರಿದಂತೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಊರಿಗೆ ಹತ್ತಿರವಾಗಿ ಕ್ರಷರ್, ಗಣಿಗಾರಿಕೆ ನಡೆಯುತ್ತಿರುವುದರಿಂದ ಸಮಸ್ಯೆಗಳು ಹೆಚ್ಚಾಗುತ್ತಲೇ ಇವೆ. ಆರುಂಡಿ ಗ್ರಾಮದ ಶಾಲಾ ಮಕ್ಕಳಿಗೆ ಕಲ್ಲುಗಳನ್ನು ಪುಡಿ ಮಾಡಲು ಬಳಸುವ ಸ್ಫೋಟಕಗಳಿಂದ ಶ್ರವಣ ಶಕ್ತಿ ಕುಂದಿದ್ದು ಮತ್ತು ಧೂಳಿನಿಂದ ಉಸಿರಾಟದ ತೊಂದರೆಯೂ ಆಗುತ್ತಿದೆ. ಅನೇಕ ಕಾಯಿಲೆಗಳು, ಚರ್ಮರೋಗಗಳು ಬಾಧಿಸುತ್ತಿವೆ. ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಅಧಿಕಾರಿಗಳು ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಆರುಂಡಿ ಗ್ರಾಮ ಕೃಷಿ ಅವಲಂಬಿತ ಪ್ರದೇಶ. ಇಲ್ಲಿರುವ ಕ್ಯಾರಿಗಳಿಂದ ಬರುತ್ತಿರುವ ಧೂಳಿನ ಕಣಗಳು ಬೆಳಗಳ ಮೇಲೆ ಬಿದ್ದು ಬೆಳೆದ ಫಸಲು ಕೈಗೆ ಬರದಂಥ ಸ್ಥಿತಿ ನಿರ್ಮಾಣವಾಗಿದೆ. ಉಪಕಸುಬು ಪಶುಸಂಗೋಪನೆಯ ಮೇಲೂ ನೇರ ಪರಿಣಾಮ ಬೀರಿದೆ. ಕೂಡಲೇ ಕ್ರಷರ್ ನಿಲ್ಲಿಸುವಂತೆ ಈ ಹಿಂದೆ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಲ್ಲು ಕೋರೆಯ ಲಾರಿಗಳು, ಹಿಟಾಚಿಗಳನ್ನೂ ಊರಿನ ಮುಂದೆ ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ.  ಪ್ರತಿಭಟನೆಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಹಶಿಲ್ದಾರ್ ಅವರನ್ನು ಗ್ರಾಮಕ್ಕೆ ಕರೆಯಿಸಿ ಮನವಿ ನೀಡಿದ್ದಾರೆ. ಆದರೂ ಅಧಿಕಾರಿಗಳು ಕ್ರಮ ತೆಗೆದುಕೊಳ್ಳದಿರುವುದು ಬೇಸರದ ಸಂಗತಿ ಎಂದು ವಿನಯ್ ಕುಮಾರ್ ತಿಳಿಸಿದರು.

ಸ್ವತಂತ್ರವಾಗಿ, ಶುದ್ಧ ಪರಿಸರದಲ್ಲಿ ಬದುಕುವ ಹಕ್ಕು ಪ್ರತಿಯೊಬ್ಬ ಭಾರತೀಯನ ಕನಸು. ಆದ್ರೆ, ಆರುಂಡಿ ಗ್ರಾಮಸ್ಥರಿಗೆ ಮರೀಚಿಕೆಯಾಗಿದೆ. ಶುದ್ಧ ಮತ್ತು ಆರೋಗ್ಯಕರವಾದ ಪರಿಸರದಲ್ಲಿ ಗ್ರಾಮಸ್ಥರು, ಮಕ್ಕಳು, ಜಾನುವಾರುಗಳು ಜೀವಿಸಬೇಕಾದರೆ ಕ್ರಷರ್ ನಿಲ್ಲಬೇಕು ಎಂದು ಅವರು ಆಗ್ರಹಿಸಿದರು.

Read also : ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಗ್ರಾಮಕ್ಕೆ ಭೇಟಿ ನೀಡಿದ ವಿನಯ್ ಕುಮಾರ್ ಅವರು ಬಿರುಕುಬಿಟ್ಟ ಮನೆಗಳು, ಮಕ್ಕಳಿಗೆ ಆಗುತ್ತಿರುವ ತೊಂದರೆ, ಹಾಳಾಗಿರುವ ಬೆಳೆಗಳನ್ನು ವೀಕ್ಷಿಸಿದರು. ಗ್ರಾಮದ ಮುಖಂಡರು, ಮಹಿಳೆಯರು, ಯುವಕರು, ಯುವತಿಯರು ಈ ವೇಳೆ ಹಾಜರಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
Next Article Honnalli Police Station ಪ್ರಕರಣ ದಾಖಲಾಗಿ 48 ಗಂಟೆಯಲ್ಲಿ ಆರೋಪಿ ಬಂಧನ : 5.50 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸರಳ ವಿವಾಹಗಳಿಗೆ ಇಸ್ಲಾಂ ಧರ್ಮ ಬೆಂಬಲ : ಸೈಯದ್ ಶಂಷುದ್ದೀನ್ ಬರ್ಕಾತಿ

ಹರಿಹರ (Davanagere) : ವಿವಾಹ ಮಹೋತ್ಸವಗಳ ಸರಳೀಕರಣಕ್ಕೆ ಇಸ್ಲಾಂ ಧರ್ಮ ಬೆಂಬಲ ನೀಡುತ್ತದೆ ಎಂದು ಮೌಲಾನಾ ಖಾಜಿ ಸೈಯದ್ ಶಂಷುದ್ದೀನ್…

By Dinamaana Kannada News

ಮೋದಿ ಮೆಚ್ಚಿಸಲು ಓನ್ ನೇಷನ್ ಓನ್ ಎಲಕ್ಷನ್ ತರಲಾಗುತ್ತಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಟೀಕೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ “ಒಂದು ದೇಶ- ಒಂದು ಚುನಾವಣೆ” ಜಾರಿಯ ಉದ್ದೇಶವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಿ, ದೇಶವನ್ನು ಏಕಚಕ್ರಾಧಿಪತ್ಯದತ್ತ…

By Dinamaana Kannada News

ನವೋದ್ಯಯ ಸ್ಥಾಪನೆಗೆ ಹತ್ತು ಹಲವು ಅವಕಾಶ : ಸಿ.ಎಂ.ಪಾಟೀಲ್

ದಾವಣಗೆರೆ:  ಸ್ಟಾರ್ಟಅಪ್ ಅಂದರೆ ನವೋದ್ಯಮ ಸ್ಥಾಪನೆಗೆ ಈಗ ಸುವರ್ಣಯುಗ ಇದಕ್ಕೆ ಹತ್ತು ಹಲವು ಅವಕಾಶಗಳು ಇವೆ ಆದುದರಿಂದ ಮೊದಲಿಗೆ ಯಾವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?