ಹರಿಹರ: ಪ್ರೊ.ಬಿ.ಕೃಷ್ಣಪ್ಪನವರು ನಡೆಸಿದ ಹಲವಾರು ಹೋರಾಟಗಳ ಪರಿಣಾಮ ಕರ್ನಾಟಕದಲ್ಲಿ ದಲಿತ ಸಮುದಾಯದವರ ಆತ್ಮಸ್ಥೈರ್ಯ ಹೆಚ್ಚಾಯಿತೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಹೇಳಿದರು.
ನಗರದ ಎಸ್ಜೆವಿಪಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪರವರ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೋಬಳಿಗೊಂದು ವಸತಿ ಶಾಲೆ, ವಿದ್ಯಾರ್ಥಿ ವೇತನ, ದಲಿತರಿಗೆ ಭೂಮಿ ಮಂಜೂರಾತಿ, ಧರ್ಮದ ಹೆಸರಲ್ಲಿ ಮೌಢ್ಯಾಚರಣೆ ವಿರೋಧಿ, ಮೀಸಲಾತಿ ಸೇರಿದಂತೆ ಹತ್ತಾರು ಬಗೆಯ ನಿರಂತರ ಹೋರಾಟ ಆಡಳಿತಗಾರರ ಕಣ್ಣು ತೆರೆಸಿದವು ಎಂದರು.
20ನೇ ಶತಮಾನದ 4 ದಶಕಗಳ ಹೋರಾಟದ ಮೂಲಕ ರಾಜ್ಯದ ಸಾಂಸ್ಕøತಿಕ, ಸಾಮಾಜಿಕ, ಆರ್ಥಿಕ, ರಾಜಕೀಯ ಸಂರಕ್ಷಣೆಗಾಗಿ ಅತ್ಯಂತ ಸಮರ್ಥವಾಗಿ ಮುಖಾಮುಖಿಯಾದ ಕೃಷ್ಣಪ್ಪನವರು ರಾಜ್ಯದ ಬಹುದೊಡ್ಡ ಹೋರಾಟಗಾರರಾಗಿ ಹೊರಹೊಮ್ಮಿದರು. ಅಖಂಡ ಮಾನವತಾವಾದಿ ಡಾ.ಅಂಬೇಡ್ಕರ್ಅವರ ಆಲೋಚನೆಗಳನ್ನು ರಾಜ್ಯದ ಕೇರಿ, ಕೇರಿಗಳಲ್ಲಿ ಬಿತ್ತಿದಕೃಷ್ಣಪ್ಪನವರು ಒಂದು ಹೊಸ ಸಾಂಸಸಕೃತಿಕ ಪ್ರಜ್ಞೆಯ ವಲಯವನ್ನು ಕಟ್ಟುವ ಮೂಲಕ ದಲಿತರ ಬದುಕಿಗೆದಾರಿ ದೀಪವಾದರು ಎಂದರು.
ನಾಯಕತ್ವದಲ್ಲಿ ರಾಜ್ಯದಲ್ಲಿ ಜ್ವಾಲಾಮುಖಿಯಂತೆ ಸ್ಪೋಟಗೊಂಡ ಸಂಘಟನೆ ಅತಿಕಡಿಮೆ ಅವಧಿಯಲ್ಲಿ ರಾಜ್ಯದ ಮೂಲೆ, ಮೂಲೆಗಳಲ್ಲಿ ತನ್ನ ಶಾಖೆಗಳನ್ನು ಆರಂಭಿಸಿ ದೊಡ್ಡ ಶಕ್ತಿಯಾಗಿರೂಪಗೊಂಡಿದ್ದು ಜಾತಿವಾದಿಗಳಿಗೆ ಮತ್ತು ಆಳುವ ವರ್ಗಗಳಿಗೆ ಹಾಗೂ ಭೂ ಮಾಲಿಕರಿಗೆದೊಡ್ಡ ಸವಾಲಾಗಿ ಪರಿಣಮಿಸಿತು ಎಂದರು.
ಬಗರ್ ಹುಕುಂ ಸಾಗುವಳಿ ಒತ್ತುವರಿ ಜಮೀನು, ಹೆಚ್ಚುವರಿ ಜಮೀನು, ಸಿ ಮತ್ತು ಡಿ ಭೂಮಿ ವಿತರಣೆಯ ಬಾಪ್ತು 28,000 ಎಕರೆ ಜಮೀನು ಸೇರಿದಂತೆ 1980ರಲ್ಲಿ ಚೆಂಡೆಗೋಡು, 1981ರಲ್ಲಿ ಬಿದರೆಕಾವಲು, 1983ರಲ್ಲಿ ದೇವಲಾಪುರಚರಗುತ್ತಿ ಭೂ ಹೋರಾಟಗಳು ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ತಲೆಎತ್ತಿ ನಿಲ್ಲುವಂತೆ ಮಾಡಿತು ಎಂದರು.
ರಿಪ್ಪನಪೇಟೆ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಆಂಗ್ಲಬಾಷಾ ಪ್ರಾಧ್ಯಾಪಕ ಪ್ರೊ.ಬಿ.ಎಲ್. ರಾಜು ಡಾ.ಅಂಬೇಡ್ಕರ್ರವರ ಕುರಿತು ಉಪನ್ಯಾಸ ನೀಡಿ, ವಿವಿಧ ವಿಷಯಗಳಲ್ಲಿ ಭಾರತವೂ ಸೇರಿದಂತೆ ಲಂಡನ್, ಅಮೇರಿಕಾ ವಿಶ್ವವಿದ್ಯಾನಿಲಯಗಳಿಂದ 30 ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದ ಅಂಬೇಡ್ಕರ್ರವರಿಗೆ ಸಹಜವಾಗಿ ಸಂವಿಧಾನ ರಚನೆ ಜವಾಬ್ದಾರಿ ವಹಿಸಲಾಯಿತು. ದಲಿತ, ಹಿಂದುಳಿದ, ಅಂಲ್ಪಸಂಖ್ಯಾತರ ಹಾಗೂ ಮಹಿಳೆಯರ ನಿಕೃಷ್ಟ ಬದುಕನ್ನು ಗಮನಿಸಿದ ಅಂಬೇಡ್ಕರ್ರವರುಇವರ ಸಂರಕ್ಷಣೆಗಾಗಿಯೆ ವಿಶೇಷ ಕಾಳಜಿಯನ್ನು ವಹಿಸಿದರು. ನೈಪುಣ್ಯತೆ, ಜ್ಞಾನವನ್ನಾಧರಿಸಿ ದೇಶದಲ್ಲಿ ವ್ಯಕ್ತಿಗಳಿಗೆ ಆಧ್ಯತೆ ಸಿಗಬೇಕೆ ಹೊರತು ಜಾತಿಯನ್ನಾಧರಿಸಿ ಅಲ್ಲಎಂದುಅವರು ಪ್ರಬಲವಾಗಿ ಪ್ರತಿಪಾದಿಸಿದರು ಎಂದರು.
Read also : ದಾವಣಗೆರೆ : ಗ್ರಾಮಾಂತರ ಪ್ರದೇಶಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ಅಧ್ಯಕ್ಷತೆವಹಿಸಿದ್ದ ಪ್ರಾಧ್ಯಾಪಕ ಪ್ರೊ.ರಮೇಶ್ ಕೆ.ಪರ್ವತಿ, ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಪ್ರಸ್ತಾವನೆ ಮಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಎನ್.ಎಚ್.ಪಾಟೀಲ ಮಾತನಾಡಿದರು. ಕಡ್ಲೆಗೊಂದಿ ತಿಮ್ಮಣ್ಣ, ಕಡತಿ ನಾಗರಾಜಪ್ಪ, ಸಂಜೀವ್, ಅಣ್ಣಪ್ಪ, ಬಸವರಾಜ್, ರಾಜಪ್ಪ ಇದ್ದರು.
ವಿದ್ಯಾರ್ಥಿನಿ ಕಾವ್ಯ ಪ್ರಾರ್ಥಿಸಿದರು. ಸಂಜನಾ ಸ್ವಾಗತಿಸಿದರು.ಅಧ್ಯಾಪಕ ಸಿದ್ದಯ್ಯ ನಿರೂಪಿಸಿದರು.ದಿವ್ಯ ವಂದಿಸಿದರು.