Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ತಾಜಾ ಸುದ್ದಿ

Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Dinamaana Kannada News
Last updated: June 17, 2025 3:31 pm
Dinamaana Kannada News
Share
Davanagere Protest
Davanagere Protest
SHARE
ದಾವಣಗೆರೆ (Davanagere): ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿರುವ ದಾಳಿಯನ್ನು ಖಂಡಿಸಿ ದಾವಣಗೆರೆಯಲ್ಲಿ ಸಿಪಿಐ, ಸಿಪಿಐ(ಎಂ), ಎಸ್.ಯು.ಸಿ. ಐ, ಕರ್ನಾಟಕ ಜನಶಕ್ತಿ, ಕಟ್ಟಡ ಕಾರ್ಮಿಕ ಸಂಘಟನೆ ಮತ್ತು ಪ್ರಗತಿಪರ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು,ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಿರಂತರ ನಡೆಸಿದ ವಾಯುದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 400 ದಾಟಿದೆ. ಸಶಸ್ತ್ರ ಗುಂಪು ಹಮಾಸ್ ನಡೆಸುತ್ತಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು, ದಾಳಿಯಲ್ಲಿ 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದು, ಇದು ಇಸ್ರೇಲ್ ನಡೆಸಿದ ಪೈಶಾಚಿಕ ಕೃತ್ಯ ಎಂದು ಕಿಡಿಕಾರಿದರು.
ಅಂತರರಾಷ್ಟ್ರೀಯ ನೀರು ಗಡಿಯಲ್ಲಿ ಗಾಜಾಕ್ಕೆ ಆಹಾರ ಸಹಾಯವನ್ನು ಮಾಡಲು ತೆರಳುತ್ತಿದ್ದ ಮೆಕ್ಲೀನ್ ಆಫ್ ದಿ ಫ್ರೀಡಂ ಫ್ಲಾಟಿಲ್ಲಾ ಗಾಜಾ ಹಡಗಿನ ಮೇಲೆ ಇಸ್ರೇಲ್ ದಾಳಿ ಮಾಡಿರುವುದು ಅತ್ಯಂತ ಹೇಯ ಮತ್ತು ಖಂಡನೀಯ. ಅಮೇರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಬೆಂಬಲದಿಂದ ವಿಶ್ವಸಂಸ್ಥೆ ಮತ್ತು ಜಾಗತಿಕ ಸಮುದಾಯದ ಯಾವ ಎಚ್ಚರಿಕೆಗಳನ್ನೂ ಗೌರವಿಸದೆ ಇಸ್ರೇಲ್ ಮಾನವ ಹತ್ಯೆಗಳ ಚಟುವಟಿಕೆಗಳಲ್ಲಿ ತೊಡಗಿದೆ. ದುರದೃಷ್ಟವಶಾತ್ ಭಾರತ ಸರ್ಕಾರವು ತನ್ನ ಚಾರಿತ್ರಿಕವಾದ – ಪ್ಯಾಲೆಸ್ತೀನ್ ಪರವಾದ – ಧೋರಣೆಯನ್ನು ಕೈಬಿಟ್ಟು ಇಸ್ರೇಲನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ಸಾಮ್ರಾಜ್ಯಶಾಹಿ-ವಿರೋಧಿ ನಿಲುವಿಗೆ ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಭಾರತ ಸರ್ಕಾರದ ನಿಲುವು ಬದಲಾಗಿರುವುದು ಅವಮಾನಕರ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ, ಜೂನ್ 17 ರಂದು ಪ್ಯಾಲೆಸ್ತೀನ್ ಜನರ ಪರವಾಗಿ ರಾಷ್ಟ್ರೀಯ ಸೌಹಾರ್ಧತಾ ದಿನವನ್ನು ದೇಶಾದ್ಯಂತ ಆಚರಿಸಲು ಎಡ ಪಕ್ಷಗಳು ಕರೆ ನೀಡಿವೆ. ಶಾಂತಿಪ್ರಿಯ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಶಕ್ತಿಗಳು ಈ ಕರೆಯನ್ನು ಯಶಸ್ವಿ ಮಾಡಬೇಕು. ಬೆಂಗಳೂರಿನಲ್ಲಿ ಜೂನ್ 17 ರಂದು ಮಧ್ಯಾನ್ನ 3 ಗಂಟೆಗೆ ಸಿಪಿಐ ರಾಜ್ಯ ಕಚೇರಿ ಘಾಟೆ ಭವನ, ಮಲ್ಲೇಶ್ವರ ಇಲ್ಲಿ ಸೌಹಾರ್ಧತಾ ಕಾರ್ಯಕ್ರಮವನ್ನು ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
Read also : Davanagere | ಅಲ್ಪಸಂಖ್ಯಾತರ ಇಲಾಖೆಯಿಂದ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಆವರಗೆರೆ ಚಂದ್ರು, ಆವರಗೆರೆ ಹೆಚ್.ಜಿ.ಉಮೇಶ್, ಕೆ.ಹೆಚ್. ಆನಂದರಾಜ್, ಕೈದಾಳ್ ಮಂಜುನಾಥ್, ಪವಿತ್ರ, ಸತೀಶ್ ಅರವಿಂದ್, ಕುಕ್ಕವಾಡ ಮಂಜುನಾಥ್, ತಿಪ್ಪೇಸ್ವಾಮಿ, ವಿ.ಲಕ್ಷ್ಮಣ್, ಯಾರಗುಂಟೆ ಸುರೇಶ್, ಷಣ್ಮುಖ ಸ್ವಾಮಿ, ಮಹಮ್ಮದ್ ರಫೀಕ್, ಭಾರತಿ, ಸರೋಜಾ, ಅನಿಲ್, ಐರಣಿ ಚಂದ್ರು, ಸೋಮಶೇಖರ್, ತಿಪ್ಪೇಶ್, ಯಲ್ಲಪ್ಪ, ಪರಶುರಾಮ, ರಾಜು, ರಂಗನಾಥ್ ಮುಂತಾದವರು ಭಾಗಿಯಾಗಿದ್ದರು.
TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article UPSC Davanagere | ಅಲ್ಪಸಂಖ್ಯಾತರ ಇಲಾಖೆಯಿಂದ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ
Next Article Davanagere Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೆ.3 ರಿಂದ 14ರ ವರೆಗೆ ‘ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್’ ಶೀರ್ಷಿಕೆಯಡಿ ಸೀರತ್ ಅಭಿಯಾನ-2025

ಹರಿಹರ: ಪ್ರವಾದಿ ಮುಹಮ್ಮದ್‌ರವರ ಸರ್ವಕಾಲಿಕ ಬೋಧನೆಗಳನ್ನು ಪ್ರಚುರಪಡಿಸಲು ಜಮಾ ಅತೆ ಇಸ್ಲಾಮಿ ಹಿಂದ್ ಮತ್ತು ರಾಬಿತಾ-ಎ-ಮಿಲ್ಲತ್ ವತಿಯಿಂದ ತಾಲ್ಲೂಕಿನಲ್ಲಿ ಸೆ.3…

By Dinamaana Kannada News

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

ದಾವಣಗೆರೆ  : ಬೆಂಗಳೂರಿನ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಕೇಂದ್ರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ದಾವಣಗೆರೆಯ ಐಟಿವಲಯಕ್ಕೆ ಸಂಬಂಧಿಸಿದ…

By Dinamaana Kannada News

ಟಿವಿ ಸ್ಟೇಷನ್‌ ಕರೆಗೆ  ಡಿಸಿ ಭೇಟಿ ಪರಿಶೀಲನೆ 

ದಾವಣಗೆರೆ -  ಟಿವಿ ಸ್ಟೇಷನ್ ಕೆರೆಗೆ ಬುಧವಾರ ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತೆರಳಿ ಪರಿಶೀಲನೆ ಮಾಡಿದರು. ನಗರಕ್ಕೆ ಕುಡಿಯುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?