Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾರ್ಕ್ ನಲ್ಲಿ ಕಸ ವಿಲೇವಾರಿ ಘಟಕ : ಪ್ರತಿಭಟನೆ
ತಾಜಾ ಸುದ್ದಿ

ಪಾರ್ಕ್ ನಲ್ಲಿ ಕಸ ವಿಲೇವಾರಿ ಘಟಕ : ಪ್ರತಿಭಟನೆ

Dinamaana Kannada News
Last updated: June 11, 2024 4:44 pm
Dinamaana Kannada News
Share
Davanagere
ದಾವಣಗೆರೆ ಲೋಕಿಕೆರೆ ರಸ್ತೆಯಲ್ಲಿರುವ ಎಸ್.ಎ.ರವೀಂದ್ರನಾಥ ಬಡಾವಣೆಯ ಪಾರ್ಕ್ ಜಾಗೆಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಹೊರಟಿರುವ ಮಹಾನಗರ ಪಾಲಿಕೆ ನಡೆಯನ್ನು ಖಂಡಿಸಿ ಸ್ಥಳೀಯ ನಾಗರಿಕರು ಮಂಗಳವಾರ ಪ್ರತಿಭಟನೆ ನಡೆಸಿದರು.
SHARE

ದಾವಣಗೆರೆ: ಪಾಲಿಕೆ ವ್ಯಾಪ್ತಿಯ 41ನೇ ವಾರ್ಡ್ನ ಸರ್ವೆ ನಂಬರ್ 62ರ ಸೈಟ್ ನಂಬರ್ 154ರ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಹೊರಟಿರುವ ಪಾಲಿಕೆ ಅಧಿಕಾರಿಗಳ ಕ್ರಮವನ್ನು ಎಸ್.ಎ.ರವೀಂದ್ರನಾಥ್ ನಗರ ನಾಗರಿಕ ಹಿತರಕ್ಷಣಾ ಸಮಿತಿ ತೀವ್ರವಾಗಿ ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿತು
.
ಜಿಲ್ಲಾ ಬಿಜೆಪಿ ಮುಖಂಡ ಹಾಗೂ ಚೌಡೇಶ್ವರಿ ದೇವಸ್ಥಾನದ ಟ್ರಸ್ಟಿ ಎಂ.ಆನಂದ್ ಮಾತನಾಡಿ, ಮಹಾನಗರ ಪಾಲಿಕೆಯ ಅವೈಜ್ಞಾನಿಕವಾದ ಯೋಜನೆಯಿಂದ ಎಸ್.ಎ.ರವೀಂದ್ರನಾಥ ನಗರದ ನಿವಾಸಿಗಳಿಗೆ ಹಾಗೂ ಕೈಗಾರಿಕೆ ಪ್ರದೇಶದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತೀವ್ರ ತೊಂದರೆ ಆಗಲಿದ್ದು, ತಕ್ಷಣ ಈ ನಿರ್ಧಾರವನ್ನು ಕೈಬಿಡಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ಆಗ್ರಹಿಸಿದರು.

ನಗರದ ಲೋಕಿಕೆರೆ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಎದುರಿಗೆ ಅತಿದೊಡ್ಡ ಪಾರ್ಕ್ ಇದಾಗಿದ್ದು, ಪಕ್ಕದಲ್ಲಿಯೇ ಕೈಗಾರಿಕಾ ಪ್ರದೇಶ ಇದೆ, ಚೌಡೇಶ್ವರಿ ದೇವಸ್ಥಾನ, ಭೂತಪ್ಪ ದೇವಸ್ಥಾನ ಇವೆ. ಸುತ್ತಮುತ್ತ ಜನವಸತಿ ಪ್ರದೇಶ ಇದೆ. ಅಲ್ಲದೆ ಈ ಜಾಗೆಯನ್ನು ಟೌನ್‌ಹಾಲ್ ಮತ್ತು ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಲು ಕಾಯ್ದಿರಿಸಲಾಗಿದೆ ಎಂದು ನಕಾಶೆಯಲ್ಲೇ ತಿಳಿಸಲಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರ ವಸತಿಗೃಹ ನಿರ್ಮಿಸಲು ಸಹ ಯೋಜನೆ ಸಿದ್ಧವಾಗಿತ್ತು, ಅದೂ ಕೂಡ ನೆನೆಗುದಿಗೆ ಬಿದ್ದಿದೆ.

ಇಂತಹ ಪ್ರಮುಖ ಪ್ರದೇಶದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಸ ವಿಲೇವಾರಿ ಘಟಕ ಸ್ಥಾಪಿಸಲು ಹೊರಟಿರುವುದು ಸ್ಥಳೀಯ ನಾಗರಿಕರನ್ನು ಆತಂಕಕ್ಕೀಡು ಮಾಡಿದೆ. ಒಂದು ವೇಳೆ ಹಠಕ್ಕೆ ಬಿದ್ದು ಪಾಲಿಕೆ ಏನಾದರೂ ಇಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಿದರೆ, ಸುತ್ತಮುತ್ತಲಿನ ನಿವಾಸಿಗಳು ರೋಗ-ರುಜಿನಗಳಿಗೆ ತುತ್ತಾಗುವ ಸಾಧ್ಯತೆ ಇದೆ, ಘಟಕದಿಂದ ಹೊರಸೂಸುವ ದುರ್ವಾಸನೆ, ಕ್ರಿಮಿಕೀಟಗಳಿಂದಾಗಿ ಯಾವ ನಾಗರಿಕರು ಇಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಕ್ಷಣ ಪಾಲಿಕೆ ತನ್ನ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಹೋರಾಟ ತೀವ್ರಗೊಳಿಸುವ ಎಚ್ಚರಿಕೆ
ಈ ಸ್ಥಳದಲ್ಲಿ ಏನಾದರೂ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಮುಂದಾದರೆ ನಮ್ಮ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ, ತಕ್ಷಣ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಮಂಗಳವಾರ ಸ್ಥಳಕ್ಕೆ ಆಗಮಿಸಿದ್ದ ಮಹಾನಗರ ಪಾಲಿಕೆಯ ಇಂಜಿನಿಯರ್‌ಗಳಿಗೆ ನಾಗರಿಕರು ಎಚ್ಚರಿಕೆ ನೀಡಿದರು.

ಎಸ್.ಎ.ರವೀಂದ್ರನಾಥ ನಗರ ನಾಗರಿಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ಮಲ್ಲನಗೌಡ್ರು, ಅಧ್ಯಕ್ಷ ಎನ್.ಸಿದ್ಧರಾಮಪ್ಪ, ಪದಾಧಿಕಾರಿಗಳಾದ ಎಸ್.ಆರ್.ಸೋಮಶೇಖರಪ್ಪ, ಎನ್.ಎಸ್.ಮಹೇಶ್ವರಪ್ಪ, ಜಿ.ಕರಿಬಸಪ್ಪ, ಸಿ.ಕೆ.ಶಿವಪ್ಪ ಸೇರಿದಂತೆ ಸ್ಥಳೀಯ ನಾಗರಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 51 : ನೀವು ಊರು ಬಿಟ್ಟು ಯಾಕೆ ಹೋಗುತ್ತಿದ್ದೀರಿ ಎಂದು ಅವರನ್ನು  ಕೇಳುವುದಾದರೂ ಹೇಗೆ?
Next Article Davanagere AIDSO ನೀಟ್‌ ಹಗರಣ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಜಗಳೂರು: ಹೊಲಕ್ಕೆ ಹೋಗಿ ಮೋಟಾರ್ ಆನ್ ಮಾಡಿ ಮನೆಗೆ ವಾಪಾಸ್ಸಾಗುವ ಸಂದರ್ಭದಲ್ಲಿ ಕರಡಿ ದಾಳಿ ನಡೆಸಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ…

By Dinamaana Kannada News

Political analysis | ಚಕ್ರವ್ಯೂಹದಿಂದ ಪಾರಾದರಾ ಸಿಎಂ ಸಿದ್ದು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದ ವಾರ ಕರ್ನಾಟಕಕ್ಕೆ ಬಂದರು.ಹೀಗೆ ಬಂದವರು ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ…

By Dinamaana Kannada News

ಅ.25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಅ.24 :  ದಾವಣಗೆರೆ ಕಾರ್ಯಾಚರಣೆ ವಿಭಾಗ ವ್ಯಾಪ್ತಿಯಲ್ಲಿನ ಯರಗುಂಟೆ ಆವರಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?