Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ: ಸೂರಿಲ್ಲದವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ತಾಜಾ ಸುದ್ದಿ

ಹರಿಹರ: ಸೂರಿಲ್ಲದವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Dinamaana Kannada News
Last updated: September 2, 2025 1:39 pm
Dinamaana Kannada News
Share
DSS PROTEST
SHARE

ಹರಿಹರ: ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ಸೂರಿಲ್ಲದವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಮಂಗಳವಾರ ಹೊರವಲಯದ ಪ್ರೊ.ಬಿ.ಕೃಷ್ಣಪ್ಪರ ಸಮಾಧಿ ಸ್ಥಳದಿಂದ ತಾಲ್ಲೂಕು ಕಚೇರಿವರೆಗೆ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನೂರಾರು ನಿರ್ವಸತಿಕರು ಪಾದಯಾತ್ರೆ ಮೂಲಕ ಆಗಮಿಸಿ ತಹಶೀಲ್ದಾರ್ ಗುರುಬಸವರಾಜ್ ಅವರಿಗೆ ಮನವಿ ಸಲ್ಲಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು, ಗಾಂಧಿ ಸರ್ಕಲ್‍ನಲ್ಲಿ ಮಾನವ ಸರಪಳಿ ರಚಿಸಿದರು, ನಂತರ ತಾಲ್ಲೂಕು ಕಚೇರಿಗೆ ಆಗಮಿಸಿದರು.

ಕದಸಂಸಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, ಕಡ್ಲೆಗೊಂದಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಬಡಕುಟುಂಬಗಳು ಅತ್ಯಂತ ಚಿಕ್ಕಗುಡಿಸಲು, ನೆರಿಕೆ ಮನೆಗಳಲ್ಲಿ ಅನಾರೋಗ್ಯಕರ, ಕಲುಷಿತ ವಾತಾವರಣದಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಲಭ್ಯವಿರುವ ಸರ್ಕಾರಿ ಜಮೀನನ್ನು ನಿವೇಶನಗಳನ್ನಾಗಿ ವಿಂಗಡಿಸಿ ಬಡಜನರಿಗೆ ವಿತರಿಸಲು ನಮ್ಮ ಸಂಘಟನೆ ಕಳೆದ ಹಲವು ವರ್ಷಗಳಿಂದ ವಿವಿಧರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದರೂ ತಾಲ್ಲೂಕು ಮತ್ತು ಜಿಲ್ಲಾಡಳಿತ ಸಮಸ್ಯೆ ನಿವಾರಣೆ ಮಾಡಿಲ್ಲ. ಗ್ರಾಮದ ಸರ್ವೆ ನಂ.37ರಲ್ಲಿನ 10 ಎಕರೆ ಸರ್ಕಾರಿ ಜಮೀನಿನಲ್ಲಿ ವಿವಿಧ ಯೋಜನೆಗಳಿಗೆ ನೀಡಿದ ನಂತರ ಇನ್ನೂ 5 ಎಕರೆ 35 ಗುಂಟೆ ಜಮೀನು ಉಳಿದಿದ್ದು ಅದರಲ್ಲಿ ಕೂಡಲೆ ವಸತಿ ಯೋಜನೆ ರೂಪಿಸಬೇಕೆಂದು ಆಗ್ರಹಿಸಿದರು.

ಕದಸಂಸತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಈ ಹಿಂದೆಯೂ ವಸತಿ ಯೋಜನೆಗಾಗಿ ಪಾದಯಾತ್ರೆ, ರಸ್ತೆತಡೆ, 60 ದಿನ ತಾಲ್ಲೂಕು ಕಚೇರಿಎದುರು ಧರಣಿ ಸತ್ಯಾಗ್ರಹ ಸೇರಿದಂತೆ ಹಲವು ರೀತಿಯ ಪ್ರತಿಭಟನೆಯನ್ನು ಮಾಡಿದ್ದರೂ ತಾಲ್ಲೂಕು ಆಡಳಿತದವರು ಭೂ ನ್ಯಾಯ ಮಂಡಳಿ ರಚಿನೆಯಾಗಬೇಕೆಂದು ಕಾರಣ ಹೇಳಿತ್ತು ಈಗ ಮಂಡಳಿ ರಚನೆಯಾಗಿದ್ದು ಸಮಸ್ಯೆಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Read also : ಸೆ.3 ರಿಂದ 14ರ ವರೆಗೆ ‘ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್’ ಶೀರ್ಷಿಕೆಯಡಿ ಸೀರತ್ ಅಭಿಯಾನ-2025

ಜಿಲ್ಲಾ ಮಹಿಳಾ ಸಂಚಾಲಕಿ ವಿಜಯಲಕ್ಷ್ಮಿ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮಾತಂಗೆಮ್ಮತಿಮ್ಮಣ್ಣ, ಜಿಲ್ಲಾ ಸಂಘಟನಾ ಸಂಚಾಲಕ ಚೆನ್ನಗಿರಿ ಚಿತ್ರಲಿಂಗಪ್ಪ, ನ್ಯಾಮತಿ ತಾಲ್ಲೂಕು ಸಂಚಾಲಕ ಚಂದ್ರಪ್ಪ, ಹೊನ್ನಾಳಿ ತಾಲ್ಲೂಕು ಸಂಚಾಲಕ ಪರಮೇಶ್ ಬೆನಕನಾಳ್, ಜಗಳೂರು ತಾಲ್ಲೂಕು ಸಂಚಾಲಕ ಕುಬೇರಪ್ಪ, ಪದಾಧಿಕಾರಿಗಳಾದ ನಾಗರಾಜ್ ಚಿತ್ತನಹಳ್ಳಿ, ಶಿವಶಂಕರ್ ಎಸ್.ಎಂ., ಪ್ರದೀಪ್‍ಕೆಟಿಜಿ ನಗೆರ, ಮಂಜುನಾಥಎಲೆಕ್ಟ್ರಿಕಲ್, ಉಮೇಶ್ ಹಿರೇಬಿದರಿ, ಸಂಜೀವಪ್ಪ, ಭಾನುವಳ್ಳಿ ಚೌಡಪ್ಪ ಸಿ., ರಂಗಪ್ಪ, ಕೊಟ್ರಪ್ಪ, ಬಸವರಾಜ್, ರಾಜಪ್ಪ, ನಾಗರಾಜ್, ಹನುಮಂತಪ್ಪ ನಂದಿಗಾವಿ, ಹನುಮಂತಪ್ಪಕೆ.ಎಚ್., ಸಣ್ಣ ನಿಂಗಪ್ಪ, ಹಾಲಪ್ಪ, ಜ್ಯೋತಿ, ಚಂದ್ರಶೇಖರ್, ನಾಗರತ್ನ, ಅಣ್ಣಪ್ಪ ಶೈಲೂ, ಶಿವರಾಜ್ ವೈ., ರಘು, ಮಲ್ಕಾಬಿ, ಮುಬೀನಾ, ಫಾತೀಮಾ, ನಾಗಮ್ಮ, ಟಿಪ್ಪುಸಾಬ್ ಹಾಗೂ ಇತರರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸೆ.3 ರಿಂದ 14ರ ವರೆಗೆ ‘ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್’ ಶೀರ್ಷಿಕೆಯಡಿ ಸೀರತ್ ಅಭಿಯಾನ-2025
Next Article Traffic route changes ಸೆ.5ರಂದು ಈದ್‌ಮಿಲಾದ್ ಹಬ್ಬದ ಆಚರಣೆ: ಸಂಚಾರ ಮಾರ್ಗ ಬದಲಾವಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನೀರು ಹರಿಸುವ ಕಾಮಗಾರಿ ವೀಕ್ಷಿಸಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಹೆಗ್ಗೆರಿ ಕೆರೆಯಿಂದ ನಗರದ ಅಕ್ಕಮಹಾದೇವಿ ಹೊಂಡಕ್ಕೆ ನೀರು ಹರಿಸುವ ಯೋಜನೆ ಕಾಮಗಾರಿಯನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

By Dinamaana Kannada News

ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಸರ್ಕಾರಗಳೇ ಸರ್ಕಾರಿ ಶಾಲೆಗಳನ್ನು ಸಾಯಿಸುತ್ತಿವೆ. ಕಣ್ಮುಂದೆ ನಡೆಯುತ್ತಿರುವ ಕ್ರೈಂ ಹಾಗೂ ದುರಂತ. ವಿದ್ಯಾವಂತರು ರಾಜಕಾರಣಕ್ಕೆ ಬರಬೇಕು. ವಿದ್ಯಾವಂತರು,…

By Dinamaana Kannada News

Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ

ದಾವಣಗೆರೆ ನ.12 (Davanagere) : ಸಾರ್ವಜನಿಕರ ಕೆಲಸವನ್ನು ಮಚ್ಚಿಸುವುದಕ್ಕಾಗಿ  ಮಾಡದೆ, ಆತ್ಮ ಸಾಕ್ಷಿಗನುಗುಣವಾಗಿ ಮಾಡಿದಾಗ ಉತ್ತಮ ಕೆಲಸವಾಗಲು ಸಾಧ್ಯ ಎಂದು…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?