Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೂಲಭೂತ ಸಮಸ್ಯೆ ನೀಗಿಸಲು ನಿಖರ ಅಂಕಿ-ಅಂಶ ಕೊಡಿ:ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಮೂಲಭೂತ ಸಮಸ್ಯೆ ನೀಗಿಸಲು ನಿಖರ ಅಂಕಿ-ಅಂಶ ಕೊಡಿ:ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: November 24, 2025 4:01 pm
Dinamaana Kannada News
Share
Davanagere
SHARE
ದಾವಣಗೆರೆ: ಗ್ರಾಮೀಣ ಪ್ರದೇಶ ಹೆಚ್ಚಾಗಿರುವ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಮೂಲಭೂತ ಸೌಲಭ್ಯಗಳನ್ನು ಜನರಿಗೆ ಸರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿ ವರ್ಗ ಕೆಲಸ ಮಾಡಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದರು.
ನಗರದ ಅರುಣಾ ಟಾಕೀಸ್ ವೃತ್ತದಲ್ಲಿರುವ ಪಶು ಇಲಾಖೆ ಆವರಣದ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ ಅಗತ್ಯ ಇರುವ ಎಲ್ಲ ಸರ್ಕಾರಿ ಇಲಾಖೆಗಳ ಕಟ್ಟಡ, ಜ್ವಲಂತ ಸಮಸ್ಯೆಗಳು ಸೇರಿದಂತೆ ಮೂಲಭೂತ ಕೊರತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ನಿಖರವಾದ ಅಂಕಿ-ಅಂಶ ನೀಡಿದರೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಸಹಾಯವಾಗುತ್ತದೆ ಎಂದರು.
ಸಿಡಿಪಿಒ ಅಭಿಕುಮಾರ್ ಮಾತನಾಡಿ, ಕ್ಷೇತ್ರದಲ್ಲಿ 44 ಹೊಸ ಅಂಗನವಾಡಿ ಕಟ್ಟಡಗಳು ಅಗತ್ಯವಿದ್ದು, ಈ ಸಂಬಂಧ ಈಗಾಗಲೇ ತಮ್ಮ ಗಮನಕ್ಕೆ ತರಲಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ 197 ಬಾಡಿಗೆ ಕಟ್ಟಡಗಳಲ್ಲಿ ಅಂಗನವಾಡಿಗಳು ನಡೆಯುತ್ತಿವೆ. ಈ ಪೈಕಿ ನಗರ ಪ್ರದೇಶದಲ್ಲಿ 157, ಗ್ರಾಮೀಣ ಪ್ರದೇಶದಲ್ಲಿ 38 ಇವೆ. ಶಿಥಿಲಗೊಂಡಿರುವ 44 ಕಟ್ಟಡಗಳನ್ನು ಹೊಸದಾಗಿ ನಿರ್ಮಾಣ ಮಾಡಬೇಕಿದೆ ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಹೊಸ ಕಟ್ಟಡ ನಿರ್ಮಾಣದ ವೇಳೆ ಶೌಚಾಲಯ ಮತ್ತು ಅಡುಗೆ ಮನೆಗೆ ಮೊದಲ ಆದ್ಯತೆ ನೀಡಬೇಕು. ಮಕ್ಕಳು ಹಾಗೂ ತಾಯಂದಿರಿಗೆ ಹೆಚ್ಚಿನ ಪೌಷ್ಠಿಕ ಆಹಾರ ಧಾನ್ಯಗಳ ಅಗತ್ಯಇದ್ದರೆ ಇದರ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಮಾತನಾಡಿ, ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲ ಕಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಟ್ಟಡಗಳಿವೆ. ಆದರೆ ಆಲೂರು ಗ್ರಾಮದಲ್ಲಿ ಪಿಎಚ್‌ಸಿ ಕಟ್ಟಡ ಶಿಥಿಲಗೊಂಡಿದ್ದು, ಇಲ್ಲಿ ಹೊಸ ಕಟ್ಟಡದ ಅಗತ್ಯವಿದೆ. ಈ ಬಗ್ಗೆ ತಮ್ಮ ಗಮನಕ್ಕೆ ತರಲಾಗಿದೆ ಎಂದರು.
Read also : Political analysis|ಕೂಲ್ ಆಗಿರ್ರೀ ಡಿಕೆ ಅಂದ್ರಾ ಖರ್ಗೆ?
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಕ್ಷೇತ್ರದಲ್ಲಿ ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು. ಅಧಿಕಾರಿಗಳು ನೀಡುವ ಸಮರ್ಪಕ ಮಾಹಿತಿ ಆಧರಿಸಿ ಸರ್ಕಾರದ ಮೇಲೆ ಒತ್ತಡ ಹೇರಿ ಅಗತ್ಯ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಪೂರಕ ಕೆಲಸ ಮಾಡಲು ಅವಕಾಶವಾಗುತ್ತದೆ ಎಂದರು.
ಆಲೂರು ಪಿಎಚ್‌ಸಿಗೆ ಭೇಟಿ ನೀಡಿದಾಗ ಅವಧಿ ಮೀರಿದ ಔಷಧಿಗಳು ಇರುವುದು ನಮ್ಮ ಗಮನಕ್ಕೆ ಬಂದಿದೆ. ಅಗತ್ಯಕ್ಕೆ ಅನುಗುಣವಾಗಿ ಔಷಧಿಗಳನ್ನು ತರಿಸಬೇಕು. ಗ್ರಾಮೀಣ ಪ್ರದೇಶಗಳ ಜನರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಇಂತಹ ಪ್ರಕರಣಗಳು ಮರುಕಳಿಸಿದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಪ್ರತಿ ಮಾಸಿಕ ಅಗತ್ಯ ಇರುವಷ್ಟು ಔಷದಿಗಳನ್ನು ಮಾತ್ರ ತರಿಸಿಕೊಳ್ಳಬೇಕು. ಒಂದು ವೇಳೆ ಅವುಗಳ ಅವಧಿ ಮುಗಿದಿದ್ದರೆ ವಾಪಾಸು ಕಳಿಸಬೇಕು ಎಂದು ತಾಕೀತು ಮಾಡಿದರು.
ಕಳೆದ 4 ವರ್ಷದಿಂದ ಆಶ್ರಯ ಮನೆಗಳನ್ನು ಸರ್ಕಾರ ನೀಡಿಲ್ಲ. ಬರುವ ಮಾರ್ಚ್ ವೇಳೆಗೆ ಆಶ್ರಯ ಮನೆಗಳನ್ನು ಸರ್ಕಾರ ನೀಡುವ ಉತ್ಸಾಹದಲ್ಲಿದೆಯಲ್ಲದೇ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನರ ಪ್ರತಿ ಮನೆಗೆ ನೀಡುವ ಅನುದಾನ ಕೂಡ ಹೆಚ್ಚಾಗಲಿದೆ. ಹಾಗಾಗಿ ನೈಜ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಶಾಸಕರು ಹೇಳಿದರು.
ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ, ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಕೆಗಳ ಅಧಿಕಾರಿಗಳು‌ ಅಗತ್ಯ ಬೇಡಿಕೆಗಳ ಪಟ್ಟಿ ಮಂಡಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್. ತಾಪಂ ಇಪ ರಾಮಭೋವಿ, ಸಮಿತಿ ಸದಸ್ಯರಾದ ರೇಣುಕಮ್ಮ, ಸಾಕಮ್ಮ, ಮಂಜುನಾಥ್ , ಬಸಣ್ಣ ಇತರರು ಉಪಸ್ಥಿತರಿದ್ದರು.
ಸಭೆಗೆ ಬಿಇಒ ಗೈರು: ಶಿಸ್ತು ಕ್ರಮಕ್ಕೆ ಸೂಚನೆ….
ಕಳೆದ ನಾಲ್ಕು ಸಭೆಗಳಿಗೆ ನಿರಂತರ ಗೈರು ಹಾಜರಾಗಿರುವ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಯ ಪರವಾಗಿ ಸಭೆಗೆ ಆಗಮಿಸಿದ್ದ ಇಲಾಖೆಯ ಅಧಿಕಾರಿಯನ್ನು ಸಭೆಯಿಂದ ಹೊರಗೆ ಹೋಗುವಂತೆ ಸೂಚಿಸಿದ ಶಾಸಕರು, ಸತತ ಗೈರು ಹಾಜರಿ ಕುರಿತು ಕಾರಣ ಕೇಳಿ ಅಂತಿಮ ನೋಟಿಸ್ ಜಾರಿ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರಾಮಭೋವಿ, ಜಿಪಂ ಉಪಕಾರ್ಯದರ್ಶಿ ಮಮತಾ ಹೊಸಗೌಡರ್ ಅವರಿಗೆ ಸೂಚನೆ ನೀಡಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis|ಕೂಲ್ ಆಗಿರ್ರೀ ಡಿಕೆ ಅಂದ್ರಾ ಖರ್ಗೆ?
Next Article Davanagere ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.21 (Davanagere); ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‌ನಡಿಯಲ್ಲಿ 80% ಮನೆಗಳಿಗೆ ನಳದ ಮೂಲಕ ನೀರಿನ ಸಂಪರ್ಕವಿದೆ ಎಂದು ಹೇಳುತ್ತದೆ.…

By Dinamaana Kannada News

ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ

ದಾವಣಗೆರೆ ನ.15  (Davanagere)  : ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?