Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಜಾತಿಗಳ ಜನಗಣತಿ ವರದಿ ಬಿಡುಗಡೆ ಮಾಡಿ : ಪಿ.ಜೆ.ಮಹಾಂತೇಶ್
ತಾಜಾ ಸುದ್ದಿ

Harihara | ಜಾತಿಗಳ ಜನಗಣತಿ ವರದಿ ಬಿಡುಗಡೆ ಮಾಡಿ : ಪಿ.ಜೆ.ಮಹಾಂತೇಶ್

Dinamaana Kannada News
Last updated: October 15, 2024 1:46 pm
Dinamaana Kannada News
Share
P.J. Mahantesh Harihara
P.J. Mahantesh Harihara
SHARE

ಹರಿಹರ (Harihara) :  ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿ ಬಿಡುಗಡೆ ಮಾಡಬೇಕೆಂದು ಕರ್ನಾಟಕದಲಿತ ಸಂಘರ್ಷ ಸಮಿತಿ ಹರಿಹರ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಈಗಾಗಲೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು, ಇದು ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ, ಅ.18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ.

ಈ ಮಾತಿಗೆ ಬದ್ಧರಾಗಿ ಜಾತಿವಾರು ಸ್ಥಿತಿಗತಿಗಳ ಅರಿಯುವ ಜಾತಿಗಣತಿ ಎಂದೆ ಕರೆಯಲಾಗುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾವರದಿಯನ್ನು ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಲು ಕ್ರಮಕೈಗೊಳ್ಳಬೇಕು. 12ನೆ ಶತಮಾನದಲ್ಲೆ ರಾಜ್ಯವು ಸಮಸಮಾಜವನ್ನು ಪ್ರತಿಪಾದಿಸಿತ್ತು, ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರು ಸಂಸ್ಥಾನದಲ್ಲಿ ಮೀಸಲಾತಿ ಜಾರಿ ಮಾಡಲಾಗಿತ್ತು, ದೇವರಾಜು ಅರಸು ಅವರು ಹಾವನೂರು ಆಯೋಗ ರಚಿಸಿ ಹಿಂದುಳಿದ ವರ್ಗಗಳ ಅಧ್ಯಯನಕ್ಕೆ ಮುನ್ನುಡಿ ಬರೆದಿದ್ದರು.

ವೀರಪ್ಪ ಮೊಯ್ಲಿ ಮೀಸಲಾತಿ ಮಿತಿಯನ್ನು ಶೇ.73ಕ್ಕೇರಿಸಲು ಪ್ರಯತ್ನಿಸಿದ್ದರು. ಈಗ ರಾಜ್ಯದ ಎಲ್ಲಾ ಜಾತಿ ಜನಗಣತಿ ನಡೆಸಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ.

ರಾಜ್ಯದ ಜನಸಂಕ್ಯೆಯ ಮುಕ್ಕಾಲು ಭಾಗಕ್ಕೂ ಹೆಚ್ಚಿರುವ ಅಹಿಂದ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗ ಮತ್ತು ಶಿಕ್ಷಣದ ಅವಕಾಶಗಳು ಲಭಿಸಿಲ್ಲ. ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕೆ ಅಹಿಂದ ವರ್ಗಗಳಿಗೆ ಅವಕಾಶ ಸಿಕ್ಕಿಲ್ಲ ಎಂಬುದು ಹಾಗೂ ನಿರ್ಧಿಷ್ಟ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಹಿರಿಯ ನ್ಯಾಯವಾದಿ ಎಚ್.ಕಾಂತರಾಜು ಅವರ ನೇತೃತ್ವದ ಆಯೋಗ ನಡೆಸಿದ ಸಮೀಕ್ಷೆಗೆ ಅಂಕಿ-ಅಂಶಗಳನ್ನು ಸಂಗ್ರಹಿಸಿದ ವಿಧಾನವನ್ನು ತಜ್ಞರ ಸಮಿತಿ ಮತ್ತು ಐಐಎಂ ಸಂಸ್ಥೆಗಳು ದೃಢೀಕರಿಸಿವೆ. ಹೀಗಾಗಿ ಕೆಲವು ಪಟ್ಟಭದ್ರರು ಜಾತಿಗಣತಿ ಅವೈಜ್ಞಾನಿಕ ಎಂಬ ಆರೋಪ ಹುರುಳಿದ್ದಾಗಿದೆ.

Read also  : Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸುವುದಾಗಿ ವಾಗ್ದಾನ ನೀಡಿತ್ತು, ಕೊಟ್ಟ ಮಾತಿನಂತೆ ಈಗ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಿ ನಾವು ನುಡಿದಂತೆ ನಡೆಯುವವರು ಎನ್ನುವುದನ್ನು ಸಾಬೀತು ಮಾಡಬೇಕೆಂದು ಅವರು ಹೇಳಿದ್ದಾರೆ. ಸಂಪುಟ ಸಭೆಯಲ್ಲಿ ಸಭೆಯಲ್ಲಿ ವರದಿ ಮಂಡಿಸಿದಾಗ ಕೆಲವರು ಆಕ್ಷೇಪ ಎತ್ತಿದಾಗ ಒಪ್ಪಬೇಕೋ ಬೇಡವೋ ಎಂದು ನಿರ್ಧರಿಸುವ ಅಭಿಪ್ರಾಯ ಸಂಪುಟ ಸಭೆಯ ಅಧಿಕಾರ, ಆದರೆ ಸಂಪುಟ ಸಭೆಯಲ್ಲಿ ಮಂಡಿಸಬಾರದು ಎಂಬುದು ಗುಂಡಾ ಪ್ರವೃತ್ತಿ, ಸರ್ವಾಧಿಕಾರಿ ಧೋರಣೆಯಾಗುತ್ತದೆ ಎಂದು ಅವರು ಟೀಕಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಬೆಂಗಳೂರಿನ ಬಿಡಿಎ ಮಾದರಿಯಲ್ಲಿ ಗೃಹಗಳ‌ ನಿರ್ಮಾಣಕ್ಕೆ ಸಚಿವರಿಂದ ಸೂಚನೆ
Next Article Boil water, strain and drink advice Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಬದುಕಿನ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ಎಸ್ಪಿ

ಹರಿಹರ (Davanagere): ಉನ್ನತ ಶಿಕ್ಷಣ ಪೊರೈಸಿ ಉದ್ಯೋಗ ಪಡೆದು ನಂತರ ಮದುವೆ ಬಗ್ಗೆ ನಿರ್ಣಯಿಸಬೇಕು. ಎಸ್.ಎಸ್.ಎಲ್.ಸಿ., ಪಿಯುಸಿ ಹಂತದಲ್ಲೆ ಪ್ರೀತಿ,…

By Dinamaana Kannada News

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

ದಾವಣಗೆರೆ (Davanagere): ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು…

By Dinamaana Kannada News

Davanagere | ಜೂನ್ 10 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ (Davanagere) : 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುವ  ಸಿದ್ದವೀರಪ್ಪ ಬಡಾವಣೆ,ಎಸ್.ಎಸ್. ಲೇಔಟ್ ಎ…

By Dinamaana Kannada News

You Might Also Like

Davangere University
ತಾಜಾ ಸುದ್ದಿ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ

By Dinamaana Kannada News
fisheries beneficiary-based projects
ತಾಜಾ ಸುದ್ದಿ

ದಾವಣಗೆರೆ | ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Applications are invited for the post of Physiotherapist on paid basis.
ತಾಜಾ ಸುದ್ದಿ

ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Former Minister H. Anjaneya
ತಾಜಾ ಸುದ್ದಿ

ಒಳಮೀಸಲಾತಿ | ಪ್ರತಿಭಟನೆ, ಬಂದ್ ಹೇಳಿಕೆ ಕೈ ಬಿಟ್ಟು ಆಗಸ್ಷ್ ತಿಂಗಳವರೆಗೆ ಕಾಯಿರಿ : ಎಚ್.ಆಂಜನೇಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?