Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ
ತಾಜಾ ಸುದ್ದಿ

ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ

Dinamaana Kannada News
Last updated: May 20, 2024 4:47 am
Dinamaana Kannada News
Share
davanagere
ಲೇಖಕ ಶಿವಪ್ರಸಾದ ಕರ್ಜಗಿ ಅವರ ಪ್ರಸಾದವಾಣಿ ಕೃತಿ ಬಿಡುಗಡೆ ಸಮಾರಂಭ
SHARE

ದಾವಣಗೆರೆ: ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಚತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಲೇಖಕ ಡಾ. ನಾ. ಸೋಮೇಶ್ವರ ಸಲಹೆ ನೀಡಿದರು.

ನಗರದ ದೇವರಾಜ ಅರಸು ಬಡಾವಣೆಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮತ್ತು ಸಿಹಿ ಪ್ರಕಾಶನದ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಶಿವಧ್ಯಾನ ಮಂದಿರದಲ್ಲಿ   ನಡೆದ `ಸ್ವಚ್ಛ ಮತ್ತು ಸ್ವಸ್ಥ ಸಮಾಜಕ್ಕಾಗಿ ಆಧ್ಯಾತ್ಮಿಕ ಸಬಲೀಕರಣ’ ಸೇವಾ ಯೋಜನೆಯ ಪ್ರಾರಂಭೋತ್ಸವ ಮತ್ತು ಲೇಖಕ ಶಿವಪ್ರಸಾದ ಕರ್ಜಗಿ ಅವರ ಪ್ರಸಾದವಾಣಿ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದ್ದು, ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ನೈರ್ಮಲ್ಯ ಕುರಿತು ಪೋಷಕರು ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಮಕ್ಕಳ ಮುಂದೆ ಭಾಷಣ ಬಿಗಿಯದೆ, ಸ್ವಚ್ಛತಾ ಕಾರ್ಯ ಕೈಗೊಂಡು ತೋರಿಸಬೇಕು. ಸ್ವಚ್ಛ ಮತ್ತು ಸ್ವಸ್ಥ ಸಮಾಜದ ಮಹತ್ವವನ್ನು ತಿಳಿಸಿ ಮರು ಜಾಗೃತಿಗೊಳಿಸಬೇಕಾದ ಅವಶ್ಯಕತೆ ಇದೆ ಎಂದರು.

ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಮಾತನಾಡಿ, ಮನುಷ್ಯನಲ್ಲಿರುವ ದುರ್ಬುದ್ಧಿಯ ವರ್ತನೆಯಿಂದ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಯಂತಹ ದುಷ್ಕøತ್ಯ ನಡೆಯುತ್ತಿವೆ. ಬುದ್ಧಿ ಶುದ್ಧಿಯಾದರೆ ಸಿದ್ಧಿ ಸಿಗಲಿದೆ. ಆಧ್ಯಾತ್ಮದಲ್ಲಿ ಪ್ರವೇಶಿಸಿದರೆ ಸಾತ್ವಿಕತೆ ಬರಲಿದೆ. ಇದರಿಂದ ಕೆಟ್ಟ ಗುಣಗಳು ಕಡಿಮೆಯಾಗಿ, ಒಳ್ಳೆ ಗುಣಗಳು ವೃದ್ಧಿಯಾಗಲಿದೆ. ಸಾತ್ವಿಕತೆಯ ಕಾರಣಕ್ಕಾಗಿಯೇ ಬುದ್ಧ, ಬಸವ, ಅಕ್ಕಮಹಾದೇವಿ ಪ್ರಸಿದ್ಧಿಯಾಗಿದ್ದಾರೆ ಎಂದರು.

ಪ್ರಸಾದವಾಣಿ ಕೃತಿಯ ಲೇಖಕ ಶಿವಪ್ರಸಾದ ಕರ್ಜಗಿ ಅವರಂತಹ ಯುವ ಲೇಖಕರನ್ನು ಬೆಳೆಸಬೇಕಾದರೆ ಕೃತಿಗಳನ್ನು ಖರೀದಿಸಿ ಓದಬೇಕು. ಈ ನಿಟ್ಟಿನಲ್ಲಿ ನಾವು 100 ಕೃತಿ ಖರೀದಿಸಿ, ಮಠಕ್ಕೆ ಬರುವ ಭಕ್ತರಿಗೆ ನೆನಪಿನ ಕಾಣಿಕೆ ನೀಡುತ್ತೇವೆ. ನೀವು ಸಹ ಪುಸ್ತಕ ಖರೀದಿಸಿ ಶುಭ ಸಮಾರಂಭಗಳಿಗೆ ಹೋದಾಗ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು ಸಲಹೆ ನೀಡಿದರು.

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಿ ರಾಜಯೋಗಿನಿ ಲೀಲಾಜಿ ಮಾತನಾಡಿ, ನಮ್ಮ ಸಂಸ್ಥೆಯು ಯಾವುದೇ ಮತ, ಜಾತಿ, ಲಿಂಗ ಭೇದವಿಲ್ಲದೇ ಆಧ್ಯಾತ್ಮಿಕ ಶಿಕ್ಷಣ ನೀಡುತ್ತಿದೆ. ಪ್ರಸ್ತುತ ಕೆಲವರು ಆಧ್ಯಾತ್ಮ ಮತ್ತು ಧರ್ಮ ಬೇರೆ, ಬೇರೆಯಾಗಿದ್ದರೂ ಅವುಗಳನ್ನು ಬೆರೆಸಿ ಕಚ್ಚಾಡುತ್ತಿದ್ದಾರೆ. ಶಾಂತಿಯೇ ನಿಜವಾದ ಧರ್ಮವಾಗಿದೆ ಎಂದರು.

ಡಾ.ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಚರಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ಸ್ವಾಮಿ ನಾರಾಯಣಾನಂದ ಸರಸ್ವತಿ ಸಾನ್ನಿಧ್ಯವನ್ನು ರಾಜಯೋಗಿನಿ ಅನಸೂಯಾಜಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಕೆ.ಮಂಜುನಾಥ್, ಬೆಂಗಳೂರಿನ ಕಸಾಪದ ನೇ.ಭ. ರಾಮಲಿಂಗ ಶೆಟ್ಟಿ, ಸಾಹಿತಿ ಶಿವಯೋಗಿ ಹಿರೇಮಠ, ರಾಜೇಂದ್ರಪ್ರಸಾದ್ ನೀಲಗುಂದ, ಕೆ.ವಿ. ಧರಣೇಶ್ ಉಪಸ್ಥಿತರಿದ್ದರು.

TAGGED:dinamaana.comLatest Kannada NewsSpiritual Empowerment for a Clean and Healthy Society.ಕನ್ನಡ ಸುದ್ದಿದಿನಮಾನ.ಕಾಂಸ್ವಚ್ಛ ಮತ್ತು ಸ್ವಸ್ಥ ಸಮಾಜಕ್ಕಾಗಿ ಆಧ್ಯಾತ್ಮಿಕ ಸಬಲೀಕರಣ.
Share This Article
Twitter Email Copy Link Print
Previous Article Chess Association ಚದುರಂಗ ಆಟ ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ : ದಿನೇಶ್ ಕೆ ಶೆಟ್ಟಿ
Next Article ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ದಾವಣಗೆರೆ (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್…

By Dinamaana Kannada News

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯ

ಹರಿಹರ:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಚಿತ್ರ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ…

By Dinamaana Kannada News

Davanagere | ಅನುದಾನ ಸಂಪೂರ್ಣ ಸದ್ಬಳಕೆ AIMIM ಒತ್ತಾಯ

ದಾವಣಗೆರೆ (Davanagere): ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲು ಮೀಸಲಿಟ್ಟಿರುವ ಅನುದಾನ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?