Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

Dinamaana Kannada News
Last updated: February 6, 2026 3:11 pm
Dinamaana Kannada News
Share
ಸಚಿವ ಕೃಷ್ಣಬೈರೇಗೌಡ
SHARE

ದಾವಣಗೆರೆ ಫೆ.06 : ರೈತರು ಮತ್ತು ಸಾರ್ವಜನಿಕರು ಕಂದಾಯ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಅವರ ಮನೆ ಬಾಗಿಲಿಗೇ ಸೇವೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯಲ್ಲಿ ಆಗಿರುವ ಪ್ರಮುಖ ಸುಧಾರಣೆಗಳನ್ನು ಹಂಚಿಕೊಂಡರು.

‘ನನ್ನ ಭೂಮಿ’ ಮತ್ತು ಪೋಡಿ ಮುಕ್ತ ಅಭಿಯಾನದಡಿ  ಕಳೆದ ಒಂದು ವರ್ಷದಲ್ಲಿ ರಾಜ್ಯಾದ್ಯಂತ 1,89,300 ರೈತರ ಜಮೀನುಗಳ ಪೋಡಿ ದುರಸ್ತನ್ನು ಮಾಡಿಕೊಡಲಾಗಿದೆ. ಮುಂದಿನ 3-4 ತಿಂಗಳಲ್ಲಿ ಈ ಸಂಖ್ಯೆಯನ್ನು 2.5 ರಿಂದ 3 ಲಕ್ಷಕ್ಕೆ ಹೆಚ್ಚಿಸುವ ಗುರಿ ಇದೆ.  ಜಿಲ್ಲೆಯಲ್ಲಿ ಮೃತಪಟ್ಟವರ ಹೆಸರಿನಲ್ಲಿದ್ದ ಸುಮಾರು 90,000 ಜಮೀನುಗಳ ಪೈಕಿ, ಮಾರ್ಚ್ ಅಂತ್ಯದೊಳಗೆ ಕನಿಷ್ಠ 50% ರಷ್ಟು ಪೌತಿ ಖಾತೆ ಆಂದೋಲನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ, ಇದಕ್ಕಾಗಿ ರೈತರು ಅರ್ಜಿ ಹಾಕುವಂತಿಲ್ಲ, ಅಧಿಕಾರಿಗಳೇ ರೈತರ ಮನೆ ಬಾಗಿಲಿಗೆ ಹೋಗಿ ಕನಿಷ್ಠ ದಾಖಲಾತಿಗಳನ್ನು ಪಡೆದು ಪೋಡಿ  ಖಾತೆ ದುರಸ್ತನ್ನು  ಮಾಡಿಕೊಡಲಾಗುತ್ತಿದೆ. ಈ ಹಿಂದೆ 2013 ರಿಂದ 2018 ರವರೆಗೆ 5840 ಪ್ರಕರಣಗಳು ಹಾಗೂ 2018 ರಿಂದ 2022 ರವರೆಗೆ 8500 ಪ್ರಕರಣ ಪೆÇೀಡಿ ಖಾತೆ ದುರಸ್ತನ್ನು ಮಾಡಲಾಗಿದೆ, ನನ್ನ ಅವಧಿಯಲ್ಲಿ ಕೇವಲ ಒಂದೇ ವರ್ಷದಲ್ಲಿ 1,89,300 ರೈತರ ಜಮೀನುಗಳ ಪೋಡಿ  ದುರಸ್ತನ್ನು ಮಾಡಲಾಗಿದೆ ಎಂದು ತಿಳಿಸಿದರು.

ತಾಂಡಾ, ಹಟ್ಟಿ ಮತ್ತು ಆಡಿಗಳ ನಿವಾಸಿಗಳು ಸೇರಿದಂತೆ  ಕೆಲವು ವಸತಿ ಪ್ರದೇಶಗಳಲ್ಲಿ ಜನರ ಬಳಿ ದಾಖಲೆಗಳು ಇಲ್ಲದೆ ವಾಸಿಸುತ್ತಿದ್ದರು, ಅವುಗಳನ್ನು ಗುರುತಿಸಿ ಹೊಸ ಕಂದಾಯ ಗ್ರಾಮಗಳೆಂದು ಘೋಷಿಸಿ ಅವರಿಗೆಲ್ಲ ಹಕ್ಕುಪತ್ರ ನೀಡಲಾಗುತ್ತಿದೆ. ಕಳೆದ ಎರಡೂವರೆ ವರ್ಷಗಳಲ್ಲಿ ಒಟ್ಟು 2,70,000 ಹಕ್ಕು ಪತ್ರಗಳನ್ನು ಸಿದ್ಧಪಡಿಸಲಾಗಿದೆ. ಹೊಸಪೇಟೆಯಲ್ಲಿ ಸುಮಾರು 1,11,000 ಕಂದಾಯ ಗ್ರಾಮಗಳ ಹಕ್ಕು ಪತ್ರಗಳನ್ನು ವಿತರಿಸಲಾಗಿತ್ತು. ಫೆಬ್ರವರಿ 14 ರಂದು ಹಾವೇರಿಯಲ್ಲಿ ಸುಮಾರು 1,10,000 ಹಕ್ಕುಪತ್ರಗಳನ್ನು ವಿತರಿಸಲಾಗುವುದು. ರಾಜ್ಯದಲ್ಲಿ 49 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿವೆ, ಅವುಗಳನ್ನು ಗುರುತಿಸಿ ವಾರಸುದಾರ ಖಾತೆಗೆ ವರ್ಗಾವಣೆ ಮಾಡಲು ಕ್ರಮವಹಿಸಲಾಗಿದೆ, ಅದರಲ್ಲಿ 11 ಲಕ್ಷ ಜಮೀನನ್ನು ಇ-ಪೌತಿ ಅಭಿಯಾನದಡಿ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸಲಾಗಿದೆ ಎಂದರು.

ದಾವಣಗೆರೆ ಜಿಲ್ಲೆಯ ಪೋಡಿ  ಪ್ರಕರಣಗಳಂತಹ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 1960 ಮತ್ತು 70 ರ ದಶಕದಿಂದ ಬಾಕಿ ಇರುವ 8,000 ಪೋಡಿ  ಪ್ರಕರಣಗಳಲ್ಲಿ ಈಗಾಗಲೇ 4,300 ಪೂರ್ಣಗೊಂಡಿದ್ದು, ಉಳಿದ ಪ್ರಕರಣಗಳನ್ನು ಮುಂದಿನ ಎರಡು ತಿಂಗಳಲ್ಲಿ ಮುಗಿಸಲು ಗುರಿ ಹೊಂದಲಾಗಿದೆ.  ಭೂಮಿಗೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸಿ ಜನರಿಗೆ ಭೂ ಗ್ಯಾರಂಟಿ ನೀಡಲು ಸರ್ಕಾರ ಶ್ರಮಿಸುತ್ತಿದೆ, ಇಲಾಖೆಯಲ್ಲಿ ಇನ್ನೂ ಮಾಡಬೇಕಾದ ಕೆಲಸಗಳು ಸಾಕಷ್ಟಿದ್ದು, ಆದ್ಯತೆಯ ಮೇರೆಗೆ ಅವುಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ತಿಳಿಸಿದರು.

ಇಲಾಖೆಯ ಎಲ್ಲಾ ಮೂಲ ಕಡತ, ದಾಖಲೆಗಳನ್ನು ಸ್ಕ್ಯಾನ್ ಮಾಡುವ ‘ಭೂ ಸುರಕ್ಷಾ’ ಯೋಜನೆ ಅಡಿ ಇದುವರೆಗೆ 63 ಕೋಟಿ ಪುಟಗಳನ್ನು ಸ್ಕ್ಯಾನಿಂಗ್ ಮಾಡಲಾಗಿದೆ. ಇದರಿಂದ ಸಾರ್ವಜನಿಕರು ಕಚೇರಿಗೆ ಅಲೆಯುವುದು ತಪ್ಪುತ್ತದೆ ಅಲ್ಲದೆ ಕಡತಗಳು ಕಾಣೆಯಾಗುವುದು, ತಿದ್ದುಪಡಿ ಮಾಡುವುದು ತಪ್ಪಿಹೋಗುತ್ತದೆ. ಇವುಗಳನ್ನು ಸಂರಕ್ಷಿಸಿದಂತೆ ಆಗುತ್ತದೆ, ಇನ್ನು ಮುಂದೆ ಆನ್‍ಲೈನ್‍ನಲ್ಲಿ ಪ್ರಮಾಣೀಕೃತ ನಕಲುಗಳನ್ನು ಪಡೆಯಬಹುದು ಎಂದು ತಿಳಿಸಿದರು.

ಸರ್ವೆ ಇಲಾಖೆಯಲ್ಲಿ ‘ರೋವರ್ಸ್’ ನಂತಹ ಆಧುನಿಕ ಉಪಕರಣಗಳನ್ನು ಬಳಸಲಾಗುತ್ತಿದೆ. ಚೈನ್ ಹಿಡಿದು ಅಳೆಯುವುದಕ್ಕಿಂತ ಈ ತಂತ್ರಜ್ಞಾನದ ಬಳಕೆಯಿಂದ ಕೇವಲ 10% ಶ್ರಮದಲ್ಲಿ ಕೆಲಸ ಮುಗಿಸಬಹುದು. ಈಗಾಗಲೇ 600 ರೋವರ್ಸ್‍ಗಳನ್ನು ಖರೀದಿಸಲಾಗಿದ್ದು, ಇನ್ನೂ 1,000 ರೋವರ್ಸ್‍ಗಳನ್ನು ಖರೀದಿಸಲಾಗುತ್ತಿದೆ. ಇದು ಸರ್ವೇಯರ್‍ಗಳ ಒತ್ತಡವನ್ನು ಕಡಿಮೆ ಮಾಡಿ, ಅವರ ಕೆಲಸದ ವೇಗವನ್ನು ಹೆಚ್ಚಿಸುತ್ತದೆ ಎಂದರು.

Read also : ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

ಉತ್ತಮವಾಗಿ ಕೆಲಸ ಮಾಡುವ ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರುಗಳಿಗೆ ಸರ್ಕಾರದಿಂದಲೇ 7 ರಿಂದ 8 ಕೋಟಿ ರೂ. ಗಳಷ್ಟು ಪೆÇ್ರೀತ್ಸಾಹಧನ ನೀಡಲು ನಿರ್ಧರಿಸಲಾಗಿದೆ. ಆದರೆ, ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಮಾರ್ಚ್ ತಿಂಗಳ ವೇಳೆಗೆ ಗ್ರಾಮ ಲೆಕ್ಕಿಗರಿಂದ ಹಿಡಿದು ಮಂತ್ರಿಗಳವರೆಗೆ ಎಲ್ಲರೂ ಶೇ. 100 ರಷ್ಟು  ಇ-ಆಫೀಸ್ ಮೂಲಕವೇ ಕೆಲಸ ಮಾಡಬೇಕು.  ಈ ವ್ಯವಸ್ಥೆಯ ಮೂಲಕ ಯಾವ ಕಡತ ಯಾರ ಬಳಿ ಎಷ್ಟು ದಿನಗಳಿಂದ ಬಾಕಿ ಇದೆ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.  ಇ-ಆಫೀಸ್ ವ್ಯವಸ್ಥೆಯಿಂದ ಇ-ಆಫೀಸ್‍ನಲ್ಲಿ ಫೈಲ್‍ಗಳನ್ನು ಕಳೆದುಹಾಕಲು ಸಾಧ್ಯವಿಲ್ಲ. ಹಿಂದೆ ಒಂದು ಮೇಜಿನಿಂದ ಇನ್ನೊಂದು ಮೇಜಿಗೆ ಹೋಗಲು ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತಿದ್ದ ಕಡತಗಳು ಈಗ ಒಂದು ಕ್ಷಣದಲ್ಲಿ ವರ್ಗಾವಣೆಯಾಗುತ್ತವೆ. ಈ ವ್ಯವಸ್ಥೆಯು ಕೆಲಸದಲ್ಲಿ ವೇಗವನ್ನು ತರುತ್ತದೆ, ಕಡತಗಳನ್ನು ಮುಚ್ಚಿಡಲು ಬರುವುದಿಲ್ಲ ಮತ್ತು ಪಾರದರ್ಶಕತೆಯಿಂದ ಕೆಲಸಗಳು ಆಗುತ್ತವೆ ಎಂದರು.

ಭೂಮಿಯ ಮಾಲೀಕತ್ವವು ಆರ್ಥಿಕ ಶಕ್ತಿಯನ್ನು ನೀಡುವ ಬದಲು, ಇಂದು ಅನೇಕರಿಗೆ ಗೊಂದಲ ಮತ್ತು ವ್ಯಾಜ್ಯದ ಮೂಲವಾಗಿದೆ. ವ್ಯವಸ್ಥೆಯಲ್ಲಿನ ಗೊಂದಲಗಳಿಗೆ ಕಾರಣಗಳನ್ನು ಹುಡುಕಿ ಅವುಗಳನ್ನು ಸರಿಪಡಿಸುವ ಮೂಲಕ “ಭೂ ಗ್ಯಾರಂಟಿ” ನೀಡುವತ್ತ  ಸರ್ಕಾರ ಸಂಕಲ್ಪ ಮಾಡಿದೆ ಎಂದು ತಿಳಿಸಿದರು.

ಕಳೆದ ವರ್ಷ 1,000 ಗ್ರಾಮ ಲೆಕ್ಕಿಗರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಪ್ರಸ್ತುತ 750 ಸರ್ವೇಯರ್‍ಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.  5,000 ಗ್ರಾಮ ಲೆಕ್ಕಿಗರಿಗೆ ಲ್ಯಾಪ್‍ಟಾಪ್ ನೀಡಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಉಳಿದ 2,000 ಜನರಿಗೂ ವಿತರಿಸಲಾಗುವುದು. ಇದು ಹೊಸ ತಂತ್ರಜ್ಞಾನ ಬಳಸಿ ಕೆಲಸ ಮಾಡಲು ಸಹಕಾರಿಯಾಗಿದೆ. ಹಿಂದೆ 8,345 ಗ್ರಾಮ ಲೆಕ್ಕಿಗರಲ್ಲಿ ಕೇವಲ 2,000 ಜನರಿಗೆ ಮಾತ್ರ ಕಚೇರಿಗಳಿದ್ದವು ನಾನು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ನಂತರ, ಗ್ರಾಮ ಪಂಚಾಯಿತಿಗಳಲ್ಲೇ 7,850 ಗ್ರಾಮ ಲೆಕ್ಕಿಗರಿಗೆ ಕಚೇರಿ ವ್ಯವಸ್ಥೆ ಮಾಡಿಕೊಡಲಾಗಿದೆ. ಇದರಿಂದ ಜನರಿಗೆ ಗ್ರಾಮ ಲೆಕ್ಕಿಗರು ಸುಲಭವಾಗಿ ಲಭ್ಯವಾಗುತ್ತಾರೆ ಎಂದರು.

ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ  ನ್ಯಾಯಾಲಯಗಳಲ್ಲಿ ಹೆಚ್ಚು ಸುಧಾರಣೆಯನ್ನು ತಂದು ತಹಶೀಲ್ದಾರರ ನ್ಯಾಯಾಲಯದಲ್ಲಿ ಬಾಕಿ ಇದ್ದ 10774 ಪ್ರಕರಣಗಳಲ್ಲಿ ಈಗ 480 ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ. ಮತ್ತು ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 73624 ಪ್ರಕರಣಗಳಲ್ಲಿ 10800  ಮಾತ್ರ ಬಾಕಿ ಇದ್ದು ಇವುಗಳನ್ನು ಸಹ ತ್ವರಿತವಾಗಿ ವಿಲೇವಾರಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಸಿಇಓ ಗಿತ್ತೆ ಮಾಧವ ವಿಠಲ್ ರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada NewsMinister Krishna Byre Gowdaಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article JOGALURE ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ

ದಾವಣಗೆರೆ (Davanagere):  ಮನೆಯ ಕಿಟಿಕಿ, ಬಾಗಿಲು ಮುರಿದು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1 ಕೆಜಿ 600 ಗ್ರಾಂ…

By Dinamaana Kannada News

ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davanagere ):  ವಿಶ್ವಗುರು ಬಸವಣ್ಣನವರ ಹೆಸರು ಇಡೀ ಕರ್ನಾಟಕ, ಭಾರತಕ್ಕೆ ಅಲ್ಲ. ಇಡೀ ವಿಶ್ವಕ್ಕೇ ಮುಟ್ಟಿದೆ ಅದಕ್ಕೆ ಕಾರಣ…

By Dinamaana Kannada News

Davanagere | ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ

ದಾವಣಗೆರೆ (Davanagere): ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಘಟನೆ …

By Dinamaana Kannada News

You Might Also Like

JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Court
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ದಾವಣಗೆರೆ ನ್ಯಾಯಾಲಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?