Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ : ಡಿಎಸ್‍ಎಸ್ ಆಗ್ರಹ
ತಾಜಾ ಸುದ್ದಿ

10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ : ಡಿಎಸ್‍ಎಸ್ ಆಗ್ರಹ

Dinamaana Kannada News
Last updated: March 28, 2025 1:40 pm
Dinamaana Kannada News
Share
Davanagere
Davanagere
SHARE

ಹರಿಹರ (Harihara): ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸುವುದು ಹಾಗೂ ನದಿ ಖರಾಬ್ ಜಮೀನನ್ನು ರಕ್ಷಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕದಿಂದ ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿಯ ಶಿರಸ್ತೆದಾರ್ ಅಶೋಕ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ತುಂಗಭದ್ರ ನದಿಯು ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಜೀವ ನದಿಯಾಗಿದೆ.ಕಳೆದ 2 ದಶಕಗಳಿಂದ ಸಕ್ರಮ ಹಾಗೂ ಅಕ್ರಮ ವಿಧಾನದಲ್ಲಿ ಅತಿಯಾದ ಮರಳು ಗಾರಿಕೆ ನಡೆಸಿರುವುದು ಹಾಗೂ ನದಿ ದಡದ ನದಿ ಖರಾಬ್ ಪ್ರದೇಶದ ಜಮೀನಿನಲ್ಲಿಯೂ ಅತಿಯಾದ ಮಣ್ಣುಗಣಿಗಾರಿಕೆ ನಡೆಸಿದ ಪರಿಣಾಮ ಈ ನದಿಯ ಅಸ್ತಿತ್ವಕ್ಕೆ ತೀವ್ರಅಪಾಯಎದುರಾಗಿದೆಎಂದುನಂತರ ಮಾತನಾಡಿದ ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹೇಳಿದರು.

ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ, ಕೊಪ್ಪಳ ಹಾಗೂ ಇತರೆ ಜಿಲ್ಲೆಗಳಲ್ಲಿ ಈ ನದಿಯು ಹರಿದು ಬರುವ ಪ್ರದೇಶಗಳ ಬ್ಲಾಕ್‍ಗಳಿಗೆ ಸರ್ಕಾರದಿಂದಲೆ ಮರಳುಗಾರಿಕೆ ನಡೆಸಲು ಟೆಂಡರ್ ನೀಡಲಾಗುತ್ತಿದೆ. ಬಹುತೇಕ ಟೆಂಡರ್‍ದಾರರು ನಿಯಮ ಉಲ್ಲಂಘಿಸಿ ನದಿಯ ಒಡಲನ್ನು ಬಗೆದು ಮರಳುಗಾರಿಕೆ ನಡೆಸುತ್ತಿದ್ದಾರೆ. ಉಳಿದಂತೆ ಟೆಂಡರ್ ಪ್ರದೇಶಕ್ಕೆ ಒಳಪಡದ ಹಾಗೂ ಟೆಂಡರ್ ಅವಧಿ ಮುಗಿದಾಗ ಅಕ್ರಮ ಮರಳುಗಾರಿಕೆಯು ನಡೆಯುತ್ತಿರುವುದು ವಾಸ್ತವ ವಿಷಯವಾಗಿದೆ. ಹೀಗೆ ಅಕ್ರಮ ಮತ್ತು ಸಕ್ರಮರೂಪದಲ್ಲಿ ಅತಿಯಾದ ಮರಳುಗಾರಿಕೆಯು ನದಿ ದಡ ಹಾಗೂ ನದಿ ಒಡಲಿನ ರಚನೆಯನ್ನೆ ಹದಗೆಡಸಿದೆ. ನದಿ ಪಾತ್ರದಲ್ಲಿ ಮರಳಿಗಾಗಿ 10 ರಿಂದ 20 ಅಡಿ ಆಳದವರೆಗೆ ಗುಂಡಿಗಳನ್ನು ತೋಡಿದ್ದು ನದಿಯನ್ನು ಆಶ್ರಯಿಸಿದ ಜಲಚರ, ಪ್ರಾಣಿ,ಪಕ್ಷಿ, ಜನ, ಜಾನುವಾರುಗಳ ಅಸ್ತಿತ್ವಕ್ಕೆ ತೀವ್ರಧಕ್ಕೆ ಒದಗಿಸಿದೆ.

ನದಿಗೆ ಇಳಿಯುವ ಅಸಂಖ್ಯಾತ ಜನ, ಜಾನುವಾರುಗಳು ಈ ಗುಂಡಿಗಳಲ್ಲಿ ಸಿಲುಕಿ ಅಮೂಲ್ಯವಾದ ಪ್ರಾಣವನ್ನು ಕಳೆದುಕೊಂಡಿದ್ದಾರೆ.ಇದರಲ್ಲಿ ಬೆರಳೆಣಿಕೆಯಷ್ಟು ಪ್ರಕರಣಗಳು ದಾಖಲಾಗಿದ್ದರೆ, ಉಳಿದವುಗಳನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲಾಗಿದೆ. ಇನ್ನು ಈ ನದಿಯ ನೂರಾರು ಎಕರೆ ನದಿ ಬದಿಯ ನದಿ ಖರಾಬ್ ಜಮೀನಿನ ಫಲವತ್ತಾದ ಮಣ್ಣು, ಸಾವಿರಾರು ಗಿಡ,ಗಂಟಿ, ಕುರುಚಲು ಕಾಡುಗಳು ಮಣ್ಣು ಮಾಫಿಯಾಕ್ಕೆ ಬಲಿಯಾಗಿದೆ. ಅಕ್ರಮ ಹಾಗೂ ಅತಿಯಾದ ಮಣ್ಣು ಗಣಿಗಾರಿಕೆಯಿಂದಾಗಿ ಈ ನದಿಯ ಬಹುತೇಕ ನದಿ ಖರಾಬ್ ಜಮೀನು 10 ರಿಂದ 20 ಅಡಿ ಆಳದ ಗುಂಡಿಮಯವಾಗಿದೆ.

ಮಣ್ಣು ಮಾಫಿಯಾಕ್ಕೆ ನದಿ ದಡದ ಹಲವು ರುದ್ರಭೂಮಿ, ಖಬರಸ್ತಾನ್‍ಗಳು ಅಸಿತ್ವ ಕಳೆದುಕೊಂಡಿವೆ, ನದಿಗೆ ತಲುಪಲುಇದ್ದ ಬಂಡಿರಸ್ತೆ, ಕಾಲುದಾರಿಗಳು ಮಾಯವಾಗಿವೆ. ಒಟ್ಟಾರೆನೂರಾರು ವರ್ಷಗಳಿಂದ ಮಧ್ಯ ಮತ್ತು ಕಲ್ಯಾಣಕರ್ನಾಟಕದ ಜೀವ ನದಿ ಎನಿಸಿದ ಈ ನದಿಯು ಅಳಿವಿನ ಅಂಚಿಗೆತಲುಪುತ್ತಿದೆ. ಹೀಗಾಗಿ ಸರ್ಕಾರಕ್ಕೆ ಕೆಲವು ವರ್ಷಗಳ ಕಾಲ ಆದಾಯಕ್ಕೆ ತೊಂದರೆಯಾದರೂ ಪರವಾಯಿಲ್ಲ, ನದಿಯನ್ನು ಉಳಿಸುವ ಸಲುವಾಗಿ ಈ ನದಿಯ ಬ್ಲಾಕ್‍ಗಳಲ್ಲಿ 10 ವರ್ಷಗಳ ಅವಧಿಗೆ ಮರಳು ಗಣಿಗಾರಿಕೆಯನ್ನೂ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಹಾಗೂ ನದಿ ಖರಾಬ್ ಜಮೀನಿನ ರಕ್ಷಣೆಗಾಗಿ ಸೂಕ್ತ ತುರ್ತು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

Read also : ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್

ಸಂಘಟನೆಯ ಪದಾಧಿಕಾರಿಗಳಾದ ಚೌಡಪ್ಪ ಸಿ.ಭಾನುವಳ್ಳಿ, ಭಾನುವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಮಂಜಪ್ಪ, ರಾಜಪ್ಪ ಬೆಣ್ಣೆ, ಜಿಗಳಿಯ ಚೌಡಪ್ಪ, ಸ್ವಾಮಿ ಲಿಂಗಪ್ಪ, ಪರಶುರಾಮ್, ರಾಜಪ್ಪ, ಹನುಮಂತರಾಜ್‍ಎಚ್.ಯಲವಟ್ಟಿ, ಎಳೆಹೊಳೆ ಹನುಮಂತಪ್ಪ, ಕೀರ್ತಿ ಟಿ., ರಾಜು, ಮಹೇಶ್, ಸೋಮಶೇಖರ್, ಯುವರಾಜ್ ಹೊಸಪಾಳ್ಯ, ಕಡ್ಲೆಗೊಂದಿ ತಿಮ್ಮಣ್ಣಇದ್ದರು.

TAGGED:Davanagere districtDavanagere NewsDinamana.comಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್
Next Article Davanagere Davanagere | ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

LG Havanur | ಹಿಂದುಳಿದ ವರ್ಗಗಳ ಆಯೋಗದ ವರದಿ ರೂಪುಗೊಂಡ ಬಗೆ..

Kannada News | Dinamaana.com |28 -08-2024 ಸ್ವತಂತ್ರ ಭಾರತದಲ್ಲಿ ಸಂವಿಧಾನ ಅನುಷ್ಠಾನಗೊಂಡ ನಂತರ,ಉದ್ಯೋಗದಲ್ಲಿ,ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಸಾಧ್ಯವಾಗದಂತಹ…

By Dinamaana Kannada News

Political analysis | ಇತಿಹಾಸ ಮರೆಯದ ಕೌತುಕದ ಕ್ಷಣಗಳು..

ಅವತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ತಮ್ಮ ಪುತ್ರ ಸಂಜಯ್ ಗಾಂಧಿ ಅವರೊಂದಿಗೆ ಕರ್ನಾಟಕಕ್ಕೆ ಬಂದರು. ರಾಜಕೀಯವಾಗಿ ಬಸವಳಿದಿದ್ದ ಅವರಿಗೆ ತುರ್ತು…

By Dinamaana Kannada News

Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ

ಹರಿಹರ (Harihara):  ಮೈಸೂರಿನಲ್ಲಿ ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್, ಆಕ್ಸಿಜನ್ ಫಿಟ್‍ನೆಸ್ 365, ಸೂಪರ್‍ನೋವಾ ಫಿಟ್‍ನೆಸ್ 365 ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?