Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ
ತಾಜಾ ಸುದ್ದಿ

Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ

Dinamaana Kannada News
Last updated: December 1, 2024 12:47 pm
Dinamaana Kannada News
Share
Saint Paul's Girls' High School
Saint Paul's Girls' High School
SHARE

ದಾವಣಗೆರೆ (Davanagere) : ಪ್ರತಿಯೊಬ್ಬ ಮಕ್ಕಳಲ್ಲೂ ಒಂದೊಂದು ಬಗೆಯ ಪ್ರತಿಭೆ ಇರುತ್ತದೆ. ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಮನೆಯಲ್ಲಿ ಪೋಷಕರು, ಶಾಲೆಗಳಲ್ಲಿ ಶಿಕ್ಷಕರು ಪ್ರೋತ್ಸಾಹ ನೀಡಿದಾಗ ಅವರಿಗೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಸಂತ ಪೌಲರ ಬಾಲಕಿಯರ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಸಿಸ್ಟರ್ ವೆನಿಸಾ ಹೇಳಿದರು.

ನಗರದ ಪಿ.ಜೆ.ಬಡಾವಣೆಯ ಸಂತ ಪೌಲರ ಬಾಲಕಿಯರ ಪ್ರೌಢಶಾಲೆಯಲ್ಲಿ  ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಕುರಿತು ಎಲ್‍ಇಡಿ ಮೂಲಕ ಜನಜಾಗೃತಿ ಕಾರ್ಯಕ್ರಮದಲ್ಲಿ ಶಾಲೆಯ ಸ್ಯಾಕ್ಸೋಫೋನ್ ವಾದಕಿ, 5ನೇ ತರಗತಿ ವಿದ್ಯಾರ್ಥಿನಿ ಪುಣ್ಯಶ್ರೀಗೆ ಅಭಿನಂದಿಸಿ ಅವರು ಮಾತನಾಡಿದರು.

ಇಂತಹ ಕಲೆಗಳು ಮದುವೆ, ಶುಭ ಸಮಾರಂಭಗಳಿಗೆ ಮೆರುಗನ್ನು ತರುತ್ತವೆ. ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು ಸೂಕ್ತ ವೇದಿಕೆ ಅವಶ್ಯಕವಾಗಿರುತ್ತದೆ. ತಮ್ಮ ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆಯೊ ಅಂತಹ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಕಾರ್ಯವನ್ನು ಪೋಷಕರು ಮಾಡಬೇಕು. ಬೆಳೆಯುವ ಪೈರು ಮೊಳಕೆಯಲ್ಲಿಯೇ ಎಂಬಂತೆ ಈ ಪುಟ್ಟ ಬಾಲಕಿಗೆ ಸ್ಯಾಕ್ಸೋಫೋನ್ ನುಡಿಸುವಂತಹ ಕಲೆಯನ್ನು ದೇವರು ನೀಡಿದ್ದಾನೆ. ನಮ್ಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಈ ಬಾಲಕಿ ಇಡೀ ಜಿಲ್ಲೆಯಲ್ಲದೇ ರಾಜ್ಯ, ರಾಷ್ಟ್ರಮಟ್ಟದಲ್ಲಿಯೂ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು.

ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಬಸವರಾಜ, ವಾರ್ತಾ ಇಲಾಖೆಯ ರಮ್ಯ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ, 18 ವರ್ಷವಾಗದೇ ವಾಹನಗಳನ್ನು ಚಲಾಯಿಸಬಾರದು, ದ್ವಿಚಕ್ರ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಪರವಾನಿಗೆ ಪತ್ರ ಇಲ್ಲದೇ ವಾಹನ ಚಲಾಯಿಸಬಾರದು. ಮೂರು ಜನರು ದ್ವಿಚಕ್ರವಾಹನದಲ್ಲಿ ಹೋಗಬಾರದು, ಸೇರಿದಂತೆ ಅಪಘಾತವಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದು, ಸೈನ್ ಬೋರ್ಡ್‍ಗಳ ಬಗ್ಗೆ, ಅಪಘಾತಗಳಿಂದ ಸಾವುಗಳಾಗುವ ಬಗ್ಗೆ, ಸಂಚಾರಿ ದಟ್ಟಣೆ ತಡೆಗಟ್ಟುವ ಬಗ್ಗೆ ಮಕ್ಕಳಿಗೆ ಎಲ್‍ಇಡಿಯಲ್ಲಿ ಪರದೆಯ ಮೂಲಕ ಮಕ್ಕಳಿಗೆ ಮಾಹಿತಿ ನೀಡಿದರು. ನಂತರ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ ಉತ್ತರಿಸಿದವರಿಗೆ ಪ್ರಮಾಣ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಸಿಬಿಎಸ್‍ಇ ವಿಭಾಗದ ಸಿಸ್ಟರ್ ಮೆಟಿಲ್ಡಾ, ಕನ್ನಡ ಮಾಧ್ಯಮ ವಿಭಾಗದ ಸಿಸ್ಟರ್ ಸುಪ್ರಿಯ, ಪ್ರೈಮರಿ ವಿಭಾಗದ ಮುಖ್ಯೋಪಾಧ್ಯಾಯಿನಿ ವೈಲೆಟ್, ಕ್ಲೆಮೆನ್ಸಿಯಾ, ಅಮಲ, ಎಂ.ಕೆ.ಮಂಜುಳ, ಜಸ್ಸಿ, ರಾಗಿಣಿ, ಸುಸಿಮೆರಿ, ಎಲಿಜಾ, ಕಿರಣ್‍ಕುಮಾರ, ಟಿ.ಎಂ.ರವೀಂದ್ರಸ್ವಾಮಿ, ವಿವಿಧ ವಿಭಾಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

Read also : Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article MLA K.S.Basavanatappa Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ
Next Article DAVANAGERE Davanagere | ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ

ಬೆಂಗಳೂರು,  ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು (Chief Minister…

By Dinamaana Kannada News

DAVANAGERE NEWS : ವಯನಾಡಿಗಾಗಿ ಮಿಡಿದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ

ಹರಿಹರ  (DAVANAGERE) :  ಕೇರಳದ ವಯನಾಡು ದುರಂತ ಸಂತ್ರಸ್ತರಿಗಾಗಿ  ಹರಿಹರದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ ವಯನಾಡಿಗಾಗಿ ಮಿಡಿಯಲಿ ಮನ; ನೀಡೋಣ…

By Dinamaana Kannada News

harihara | ಅಣಕು ಶವ ಧರಣಿ ಸತ್ಯಾಗ್ರಹ

ಹರಿಹರ (harihara) : ಹರಿಹರದ ಕ್ರೀಡಾಂಗಣದ ವಾಣಿಜ್ಯ ಮಳಿಗೆಗಳನ್ನು ಮರು ಹರಾಜು ಮಾಡಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ನಗರದ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?