Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್.ಎಸ್.ಕೇರ್ ಟ್ರಸ್ಟ್ , ಐ.ಎ.ಎಸ್. ಬಾಬಾ ಸಂಸ್ಥೆಯೊಂದಿಗೆ ಸಂಕಲ್ಪ ಉಚಿತ ಸರ್ಧಾತ್ಮಕ ಪರೀಕ್ಷೆಗಳ ತರಬೇತಿ
ತಾಜಾ ಸುದ್ದಿ

ಎಸ್.ಎಸ್.ಕೇರ್ ಟ್ರಸ್ಟ್ , ಐ.ಎ.ಎಸ್. ಬಾಬಾ ಸಂಸ್ಥೆಯೊಂದಿಗೆ ಸಂಕಲ್ಪ ಉಚಿತ ಸರ್ಧಾತ್ಮಕ ಪರೀಕ್ಷೆಗಳ ತರಬೇತಿ

Dinamaana Kannada News
Last updated: July 18, 2025 11:41 am
Dinamaana Kannada News
Share
Free Competitive Exams Training
SHARE
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಉತ್ಕೃಷ್ಟ ಮಟ್ಟದ ತರಬೇತಿ ಕೇಂದ್ರ ಇಲ್ಲದಿರುವ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಶಾಮನೂರು ಶಿವಶಂಕರಪ್ಪ ಕೇರ್ ಟ್ರಸ್ಟ್ (ಎಸ್.ಎಸ್.ಕೇರ್ ಟ್ರಸ್ಟ್) ವತಿಯಿಂದ ಬೆಂಗಳೂರಿನ ಐ.ಎ.ಎಸ್. ಬಾಬಾ ಸಂಸ್ಥೆಯೊಂದಿಗೆ ಒಡಂಬಡಿ ಮಾಡಿಕೊಂಡು ದಾವಣಗೆರೆ ವಿಶ್ವವಿದ್ಯಾನಿಲಯ ಸಹಭಾಗಿತ್ವದಲ್ಲಿ ಸಂಕಲ್ಪ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿ ಆರ್ಟ್ ಗ್ಯಾಲರಿ ಕಟ್ಟಡದಲ್ಲಿ ವಿದ್ಯಾರ್ಥಿಗಳು ಬೇಕಾಗಿರುವ ತರಬೇತಿ ಕೇಂದ್ರ ಹಾಗೂ ಸುಸರ್ಜಿತ ಗ್ರಂಥಾಲಯ ಮತ್ತು ಅಗತ್ಯ ಮೂಲಭೂತ ಸೌಕರ್ಯವನು ಒದಗಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಐ.ಎ.ಎಸ್ ಬಾಬಾ ತರಬೇತಿ ಸಂಸ್ಥೆಯ ಮುಖ್ಯಸ್ಥ ಮೋಹನ್ ಅವರು ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿಯನ್ನು ನೀಡಲು ಮುಂದಾಗಿದ್ದಾರೆ.ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಕಾಲರ್ಶಿಪ್ ಟೆಸ್ಟ್  ನಡೆಸುವುದರ ಮೂಲಕ ಆಯ್ಕೆಯಾದ 300 ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು.
ನೊಂದಣಿ ಪ್ರಕ್ರಿಯೆಯು ಜುಲೈ 18ರಿಂದ ಪ್ರಾರಂಭವಾಗಿ 24ರವರೆಗೆ ಗೂಗಲ್ ಫಾರ್ಮ ಮೂಲಕ ಆಸಕ್ತ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ 27ರಂದು ಲಿಖಿತ ಪರೀಕ್ಷೆಯನ್ನು ಏರ್ಪಡಿಸಲಾಗುವುದು. ಜುಲೈ 29ರಂದು ಫಲಿತಾಂಶ ಪ್ರಕಟಿಸಲಾಗುವುದು. ಈ ತರಬೇತಿ ಶಿಬಿರದ ಉದ್ಘಾಟನೆಯನ್ನು ಆಗಸ್ಟ್  3ರ ಭಾನುವಾರ ಬೆಳಿಗ್ಗೆ 11ಘಂಟೆಗೆ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರ, ಬಿ.ಐ.ಇ.ಟಿ ಕಾಲೇಜು ಆವರಣ ದಾವಣಗೆರೆಯಲ್ಲಿ ನಡೆಸಲಾಗುವುದು. 4ರ ಸೋಮವಾರ ಬೆಳಿಗ್ಗೆ 10:30ಕ್ಕೆ ಸಂಕಲ್ಪ ತರಬೇತಿ ಕೇಂದ್ರ, ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯ ಆವರಣದಲ್ಲಿ ನಡೆಸಲಾಗುವುದು. ಈ ತರಬೇತಿಯ ಅವಧಿ ಎಂಟರಿಂದ ಒಂಬತ್ತು ತಿಂಗಳು ಇರುತ್ತದೆ ಎಂದು ಮಾಹಿತಿ ನೀಡಿದರು.
ದಾವಣಗೆರೆ ಜಿಲ್ಲೆಯಿಂದ ಪ್ರತಿ ವರ್ಷ ಹತ್ತರಿಂದ ಹದಿನೈದು ಸಾವಿರ ವಿದ್ಯಾರ್ಥಿಗಳು ವಿವಿಧ ಪದವಿ ಹಾಗು ಸ್ನಾತಕೋತ್ತರ ಪದವಿ ಮುಗಿದ ನಂತರ ಉದ್ಯೋಗ ಬಯಸಿ ಬೆಂಗಳೂರಿಗೆ ತೆರಳುತ್ತಿದ್ದಾರೆ. ಸದರಿ ವಿಧ್ಯಾರ್ಥಿಗಳಲ್ಲಿ ಸರ್ಕಾರಿ ಕೆಲಸ ಆಶಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ದೆಹಲಿ, ಬೆಂಗಳೂರು ಮತ್ತು ಧಾರವಾಡ ನಗರಗಳಲ್ಲಿ ಪ್ರತಿಷ್ಠಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಗಳಿಗೆ ಹೆಚ್ಚು ಶುಲ್ಕ ಪಾವತಿ ಮಾಡಿ ವರ್ಷಗಟ್ಟಲೆ ತಯಾರಿ ನಡೆಸುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.
Read also : ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಳ!
ಸುದ್ದಿಗೋಷ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಮಾನ್ಯ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ಐ.ಎ.ಎಸ್ ಬಾಬಾ ಸಂಸ್ಥಾಪಕ ಮೋಹನ್, ಸಂಕಲ್ಪ ಕೇಂದ್ರದ ಸಂಯೋಜಕ ಡಾ.ಪ್ರಶಾಂತ್.ಎನ್.ಸಿ, ವೀರೇಶ್ ಪಟೇಲ್, ದೃಶ್ಯಕಲಾ ಮಹಾವಿದ್ಯಾಲಯದ ಪ್ರಭಾರ ಪ್ರಾಚಾರ್ಯ ಡಾ.ಸತೀಶಕುಮಾರ್ ಪಿ ವಲ್ಲೇಪುರೆ ಇದ್ದರು.
TAGGED:IAS Baba InstituteS.S.Care Trustಉಚಿತ ಸರ್ಧಾತ್ಮಕ ಪರೀಕ್ಷೆಗಳ ತರಬೇತಿಎಸ್.ಎಸ್.ಕೇರ್ ಟ್ರಸ್ಟ್ಐ.ಎ.ಎಸ್. ಬಾಬಾ ಸಂಸ್ಥೆ
Share This Article
Twitter Email Copy Link Print
Previous Article Gold price ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಳ!
Next Article Bhadra dam ಭದ್ರಾ ಜಲಾಶಯದಲ್ಲಿ 178.9 ಅಡಿ ನೀರು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

ದಾವಣಗೆರೆ (Davanagere) : ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೆಚ್ಚಾಗಿ ದುಶ್ಚಟಗಳಿಗೆ ಬಲಯಾಗುತ್ತಿದ್ದಾರೆ. ಇದು ಸ್ಪರ್ಧಾತ್ಮಕ ಯುಗ. ಇಂತಹ ಯುಗದಲ್ಲಿ…

By Dinamaana Kannada News

DAVANAGERE NEWS : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

ಹರಿಹರ   (Davangere district ) :  ಪೌರಕಾರ್ಮಿಕ ನೇಮಕ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ  ಕರುನಾಡ ಕದಂಬ ರಕ್ಷಣಾ…

By Dinamaana Kannada News

Davanagere news | ನಗರ ಸ್ವಚ್ಚಗೆ ನಾಗರಿಕರು ಕೈಜೋಡಿಸಬೇಕು: ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಸೆ.3  (Davanagere ):  ನಾವು ಆರೋಗ್ಯವಾಗಿರಲು ನಮ್ಮ ಮನೆ, ಮನಸ್ಸು ಸದಾ ಸ್ವಚ್ಚವಾಗಿರಬೇಕು. ಅದೇ ರೀತಿ ನಮ್ಮ ಪರಿಸರವು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?