Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಾಲಾ ಸಂಸತ್ತು ಕೇವಲ ಹಕ್ಕಲ್ಲ ಜವಾಬ್ದಾರಿ : ಎಸ್ಪಿ ಉಮಾ ಪ್ರಶಾಂತ್
ತಾಜಾ ಸುದ್ದಿ

ಶಾಲಾ ಸಂಸತ್ತು ಕೇವಲ ಹಕ್ಕಲ್ಲ ಜವಾಬ್ದಾರಿ : ಎಸ್ಪಿ ಉಮಾ ಪ್ರಶಾಂತ್

Dinamaana Kannada News
Last updated: July 19, 2025 12:04 pm
Dinamaana Kannada News
Share
Davanagere police
SHARE

ದಾವಣಗೆರೆ : ಶಾಲೆಗಳಲ್ಲಿ ನಡೆಯುವ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನೆನಪು ಮಾಡುತ್ತದೆ ಎಸ್ಪಿ ಉಮಾ ಪ್ರಶಾಂತ್ ಹೇಳಿದರು.

ಜಿಲ್ಲೆಯ ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ಸಂಸತ್ತಿನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುತ್ತದೆ. ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಅತ್ಯಂತ ಸರಳ ರೀತಿಯಲ್ಲಿ ಮಕ್ಕಳಿಗೆ ತಿಳಿಸುವಂತೆ ಮಾಡುವುದಲ್ಲದೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗುತ್ತದೆ ಎಂದರು.

ಪೊಲೀಸ್ ಪಬ್ಲಿಕ್ ಶಾಲೆಯು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಶ್ರಮಿಸುತ್ತಿದೆ. ಅಷ್ಟೇ ಅಲ್ಲದೆ ಮಕ್ಕಳು ಕಲಿಕೆಯಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮೂಲಕ ಪ್ರಗತಿಯನ್ನು ಕಾಣುತ್ತಾ ರಾಷ್ಟ್ರದ ಸಂಪತ್ತಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಮಕ್ಕಳು ಎದುರಿಸುವ ಮಾನಸಿಕ ಹಾಗೂ ದೈಹಿಕ ಸವಾಲುಗಳನ್ನು ಶಿಕ್ಷಕರು ಅರಿತು ಪರಿಹಾರ ಕಂಡುಕೊಳ್ಳುವ ಮೂಲಕ ಮಕ್ಕಳ ಸಾಮಾಜಿಕ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸಿ ಕೊಡಬೇಕೆಂದು ಶಿಕ್ಷಕರಿಗೆ ತಿಳಿ ಹೇಳಿದರು.

ಡಿಎಆರ್‌ ಡಿವೈಎಸ್‌ಪಿ ಪ್ರಕಾಶ್ ಪಿ ಬಿ ಮಾತನಾಡಿ, ಪ್ರಜಾಪ್ರಭುತ್ವ ಎಂಬುದು ನೀವು ಜಗತ್ತಿನಲ್ಲಿ ನೋಡಲು ಬಯಸುವ ಬದಲಾವಣೆಯಾಗಬೇಕು ಎಂಬ ಗಾಂಧೀಜಿಯವರ ಮಾತನ್ನು ನೆನಪಿಸುತ್ತ ಶಾಲಾ ಸಂಸತ್ತು ಚುನಾವಣಾ ಆಯೋಗದ ನೈಜ ಕಾರ್ಯ ಮಾದರಿಯನ್ನು ನೆನಪಿಸುತ್ತದೆ ಎಂದರು.

ಮಕ್ಕಳು ಶಿಸ್ತು ಮತ್ತು ಜವಾಬ್ದಾರಿಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕೆಂದು ಹೇಳಿದರು.

ಶಾಲಾ ವಿದ್ಯಾರ್ಥಿ ಮಂಡಳಿಯ ನಾಯಕನಾಗಿ ಸಾತ್ವಿಕ್ ಎಸ್ ಕಾಡಜ್ಜಿ, ನಾಯಕಿಯಾಗಿ ವೇದ ಎಂ, ಕ್ರೀಡಾ ನಾಯಕಿಯಾಗಿ ಯಶಸ್ವಿನಿ ಬಿ ,ಎಸ್ ಹಾಗೂ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘದ ನಾಯಕನಾಗಿ ಗಣೇಶ್ ಯು ಎಸ್ ರವರು ಆಯ್ಕೆಯಾಗಿದ್ದು ಇವರಿಗೆ ಪದವಿ ಪ್ರಧಾನ ಮಾಡಲಾಯಿತು.

ಶಾಲೆಯ ನಾಲ್ಕು ಹೌಸ್ ಗಳಾದ ಕಾವೇರಿ, ಶರಾವತಿ, ನೇತ್ರಾವತಿ ಹಾಗೂ ಕೃಷ್ಣ ಹೌಸ್ ಗಳ ನಾಯಕ ಮತ್ತು ಉಪನಾಯಕರನ್ನು ಆಯ್ಕೆ ಮಾಡಲಾಯಿತು.

Read also : ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ

ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಮಂಜುಳಾ ಮಾಗೋಡ್, ದೈಹಿಕ ಶಿಕ್ಷಕ ಹಾಲೇಶ್ ಹಾಗೂ ಸವಿತಾ ,ಹರ್ಷಿಯ, ರಾಜು ಶಾಲೆಯ ಪ್ರಭಾರ ಪ್ರಾಂಶುಪಾಲ ವಿನುತ ಆರ್ ಎನ್, ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ಪೋಷಕರು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ
Next Article Applications invited for annual financial assistance to weavers ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್

ಹರಿಹರ:  ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ (ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು…

By Dinamaana Kannada News

ಗೀತಾ ಮಂಜುರವರ ಕಿರು ಬೆಳಕಿನ ಸೂಜಿ” ಕೃತಿಗೆ 2024ರ “ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ”

"ಕಿರು ಬೆಳಕಿನ ಸೂಜಿ" ಕೃತಿಗೆ 2024ರ "ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ" ಸಂದಿದೆ. ದಿನಾಂಕ 30.05.2025 ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ…

By Dinamaana Kannada News

You Might Also Like

Alur Ningaraj
ತಾಜಾ ಸುದ್ದಿ

ಮೈಸೂರು ಅಭಿವೃದ್ಧಿಗೆ 2578 ಕೋಟಿ : ದಲಿತ,ಅಹಿಂದ ವರ್ಗಕ್ಕೆ ಕೊಡುಗೆ ಶೂನ್ಯ

By Dinamaana Kannada News
Applications invited for annual financial assistance to weavers
ತಾಜಾ ಸುದ್ದಿ

ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ

By Dinamaana Kannada News
Bhadra dam
Blog

ಭದ್ರಾ ಜಲಾಶಯದಲ್ಲಿ 178.9 ಅಡಿ ನೀರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?