Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸತೀಶ್ ಪೂಜಾರಿ ಬಂಧಿಸಲು ಆಗ್ರಹಿಸಿ ಎಸ್ ಡಿ ಪಿ ಐಯಿಂದ ಮನವಿ
ತಾಜಾ ಸುದ್ದಿ

Davanagere | ಸತೀಶ್ ಪೂಜಾರಿ ಬಂಧಿಸಲು ಆಗ್ರಹಿಸಿ ಎಸ್ ಡಿ ಪಿ ಐಯಿಂದ ಮನವಿ

Dinamaana Kannada News
Last updated: September 20, 2024 3:53 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere ) : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ನಾಯಕರು ಎಡಿಜಿಪಿ ಆರ್. ಹಿತೇಂದ್ರ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅವರನ್ನು ಭೇಟಿ ಮಾಡಿ ದಾವಣಗೆರೆ ನಗರದಲ್ಲಿ ಆಶಾಂತಿ ಸೃಷ್ಟಿಸಿದವರನ್ನು ಶೀಘ್ರವಾಗಿ ಬಂಧಿಸಿ ಗಡಿಪಾರು ಮಾಡಬೇಕು ಹಾಗೂ ಯಾವುದೇ ಅಮಾಯಕರನ್ನು ಬಂಧಿಸದೆ ಕೇವಲ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನಗರದಲ್ಲಿ ಶಾಂತಿ ಕಾಪಾಡಬೇಕು ಎಂದು ಮನವಿ ಸಲ್ಲಿಸಿದರು.

ಸೆ.15ರಂದು ಅಹ್ಮದ್ ನಗರದಲ್ಲಿ ಬಾವುಟ ಕಟ್ಟುವ ವಿಚಾರದಲ್ಲಿ ನಡೆದ ಗಲಾಟೆಯ ವಿಚಾರವನ್ನು ಪೊಲೀಸರು ದೂರು ದಾಖಲಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಆದರೆ ಮರುದಿನ ನಗರದ ಮಹಾನಗರ ಪಾಲಿಕೆ ಎದುರು ನಡೆದ ಪ್ರತಿಭಟನೆಯಲ್ಲಿ ಸತೀಶ್ ಪೂಜಾರಿ ಹಾಗೂ ಇತರರು ಒಂದು ಕೋಮಿನ ವಿರುದ್ಧ ನೀಡಿದ ಹೇಳಿಕೆ ವಿಡಿಯೋ ವೈರಲ್ ಆದ ನಂತರ ಮುಸ್ಲಿಂ ಮುಖಂಡರು, ಮಂಡಕ್ಕಿ ಭಟ್ಟಿಗಳ ಅಧ್ಯಕ್ಷರು ಓಟ್ಟುಗೂಡಿ ದಾವಣಗೆರೆ ನಗರದ ಅಜಾದ್ ನಗರ ಮತ್ತು ಪಿಜೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದರು. ಪೊಲೀಸ್ ಅಧಿಕಾರಿಗಳು ಕಾನೂನು ಕ್ರಮಕೈಗೂಳ್ಳುವ ಆಶ್ವಾಸನೆ ನೀಡಿದ್ದರು ಎಂದು ಮುಖಂಡರು ಹೇಳಿದರು.

ಇದೇ ವೇಳೆ ಮರುದಿನ ಬೇತೂರು ರಸ್ತೆಯಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲೂ ಸತೀಶ್ ಪೂಜಾರಿ ಕಾಣಿಸಿಕೊಂಡಾಗ ಮತ್ತೆ ಪ್ರಚೋದನಕಾರಿ ಹೇಳಿಕೆ ನೀಡಲು ಬಂದಿದ್ದಾನೆಂದು ತಿಳಿದು ಹಾಗೂ ಕೋಮು ಸಂಘರ್ಷವನ್ನು ಉಂಟು ಮಾಡುವ ಹೇಳಿಕೆ ನೀಡಿದ ಮೇಲೆ ಎಫ್.ಐ.ಆರ್ ಆದರೂ ಅವನನ್ನು ಬಂಧಿಸದೆ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಲು ಅವಕಾಶ ನೀಡಿದ್ದಕ್ಕೆ, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೆಲವರ ಮೇಲೆ ಹಲ್ಲೆಗಳು ನಡೆದಿದ್ದವು ಎಂದಿದ್ದಾರೆ.

Read also :  Davanagere | ಮದ್ಯ ಮಾರಾಟ ನಿಷೇಧ 

ನಂತರ ಪೊಲೀಸ್ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ಆದಕಾರಣ ತಾವುಗಳು ಈ  ಕೂಡಲೇ ಕೋಮು ಸೌಹಾರ್ದ ಕೆಡಿಸುವಂತಹ ಸನ್ನಿವೇಶ ಸೃಷ್ಟಿಯಾಗಲು ಕಾರಣರಾದ, ಪ್ರಚೋದನಕಾರಿ ಹೇಳಿಕೆ ನೀಡಿರುವಂತಹ ಸತೀಶ್ ಪೂಜಾರಿ  ಹಾಗೂ ದಾವಣಗೆರೆಯ ಶಾಂತಿಗೆ ಭಂಗ ತಂದತಹ ಪ್ರತಿಭಟನೆ ಗೆ ನೇತೃತ್ವ ವಹಿಸಿದ್ದ ಎಸ್ ಟಿ ವೀರೇಶ್, ರಾಜನಹಳ್ಳಿ ಶಿವಕುಮಾರ್, ಜೋಳ್ಳಿಗುರು, ಎಂ.ವೀರೇಶ್, ಲೋಕಿಕೆರೆ ನಾಗರಾಜ್ ಮತ್ತು ಇತರರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು. ಅಮಾಯಕರನ್ನು ಶೀಘ್ರವಾಗಿ ಬಿಡುಗಡೆಗೊಳಿಸಬೇಕು‌ ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಯಹಿಯಾ, ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಝ್ ಅಹಮದ್, ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಅಜರುದ್ದೀನ್, ಜಿಲ್ಲಾ ಸಮಿತಿ ಸದಸ್ಯರಾದ ಇಸ್ಮಾಯಿಲ್ ಜಬಿವುಲ್ಲಾ, ಮನ್ಸೂರ್ ಆಲಿ, ಹಾಗೂ 2ನೇ ವಾರ್ಡಿನ ಕಾರ್ಪೊರೇಟರ್ ದಾದಾಪೀರ್ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಏಜಾಜ್ ಅಹಮದ್, ಕಾರ್ಯದರ್ಶಿ ಇಸಾಕ್ ಅಹಮದ್, ಮತ್ತು ಹರಿಹರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಮಿಉಲ್ಲಾ ಮುಜಾವರ್, ಪದಾಧಿಕಾರಿಗಳಾದ ರಫೀಕ್, ಶಫಿ ಮತ್ತು ಇತರರು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಮದ್ಯ ಮಾರಾಟ ನಿಷೇಧ 
Next Article Karnataka Davanagere | ಮಲೇಬೆನ್ನೂರು : ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ವಾಹನಗಳ ಮಾರ್ಗ ಬದಲಾವಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ

ಬೆಂಗಳೂರು,  ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು (Chief Minister…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-34 ಮಗು, ತಾಯಿ ಮತ್ತು ಸಾವು

Kannada News | Dinamaana.com | 25-05-2024 ಮುಕ್ತಿ ಯಾವಾಗ? ಎಂದು ಯಾರನ್ನಾದರೂ ನೀವು ಕೇಳಿ ನೋಡಿ. ಅವರು ಎರಡೂ…

By Dinamaana Kannada News

ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ : ಜನರಿಂದ ಉತ್ತಮ ಸ್ಪಂದನೆ

ಹರಿಹರ:  ಜಮಾತೆ ಇಸ್ಲಾಂ ಹಿಂದ್ ಹರಿಹರ ಘಟಕದಿಂದ ಶುಕ್ರವಾರ ನಗರದ ಪ್ರಶಾಂತನಗರದ ಮಸ್ಜಿದ್-ಎ-ಅಲಿ ಮಸೀದಿಯಲ್ಲಿ ಆಯೋಜಿಸಿದ್ದ ‘ನಮ್ಮೂರ ಮಸೀದಿ ನೋಡಬನ್ನಿ’…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?