ದಾವಣಗೆರೆ (Davanagere): ಸರಣಿ ಸರಗಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿರುವ ವಿದ್ಯಾ ನಗರ ಪೊಲೀಸರು ಬಂಧಿತರಿAದ 14,50,000/- ರೂ ಬೆಲೆಯ ಬಂಗಾರದ ಆಭರಣಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.
ಅರುಣ ಕುಮಾರ, ಬಕ್ಕೇಶ ಬಂಧಿತರು.
ಏ.24 ರಂದು ಎಸ್.ಎಸ್ ಲೇಔಟ್ ‘ಬಿ’ ಬ್ಲಾಕ್ ನಲ್ಲಿರುವ ಚೌಡಮ್ಮನ ದೇವಸ್ಥಾನಕ್ಕೆ ಹೋಗಿ ವಾಪಾಸ್ ಮನೆಗೆ ಬರುವ ಎಸ್.ಎಸ್ ಲೇಔಟ್ ಬಿ ಬ್ಲಾಕ್ 4 ನೇ ಮೇನ್ 12 ನೇ ಕ್ರಾಸ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.00 ಗಂಟೆಗೆ ಸ್ಕೂಟರ್ ಸವಾರ ಹಿಂದಿನಿAದ ಬಂದು ಕೊರಳಲ್ಲಿದ್ದ 30 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ಪುಷ್ಪ ಡಿ ಪಿ ದೂರು ನೀಡಿದ್ದರು.
ಪ್ರಕರಣದ ಆರೋಪಿತರ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ. ಎಎಸ್ಪಿ ವಿಜಯಕುಮಾರ.ಎಂ. ಸಂತೋಷ್ ಜಿ..ಮಂಜುನಾಥ ದಾವಣಗೆರೆ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕಾರ್ಯಚರಣೆ ನಡೆಸಿ ಒಟ್ಟು 06 ಸರಗಳ್ಳತನ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು 176 ಗ್ರಾಂ ತೂಕದ 14,00,000/-ರೂ ಬೆಲೆಯ ಬಂಗಾರದ ಆಭರಣ ಹಾಗು ಕೃತ್ಯಕ್ಕೆ ಉಪಯೋಗಿಸಿದ 50 ಸಾವಿರ ರೂ ಬೆಲೆಯ ಒಂದು ಹೊಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಶಿಲ್ಪಾ ವೈ.ಎಸ್., ಪಿಎಸ್ಐಗಳಾದ ವಿಶ್ವನಾಥ ಜಿ ಎನ್, ವಿಜಯ ಎಮ್, ನಾಗರಾಜ ಹಾಗೂ ಸಿಬ್ಬಂದಿಗಳಾದ ಶಂಕರ್ ಜಾಧವ್, ಆನಂದ ಎಮ್, ಮಲ್ಲಿಕಾರ್ಜುನ ಚಂದ್ರಪ್ಪ, ಬೋಜಪ್ಪ, ಆಕಾಶ ಪಿ, ಬಸವರಾಜ, ರವಿಕುಮಾರ, ಗುಡ್ಡಪ್ಪ, ಮಾರುತಿ, ಸೋಮು ಆರ್, ರಾಘವೇಂದ್ರ ಹಾಗು ಜಿಲ್ಲಾ ಪೋಲೀಸ್ ಕಛೇರಿಯ ರಾಮಚಂದ್ರ ಜಾಧವ, ಶಿವಕುಮಾರ ಹಾಗು ರಮೇಶರವರನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.