Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ
ತಾಜಾ ಸುದ್ದಿ

ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ

Dinamaana Kannada News
Last updated: July 24, 2024 1:55 pm
Dinamaana Kannada News
Share
davanagere
ಜಿಲ್ಲಾ ಮಟ್ಟದ ವಕಾಲತ್ತಿನ ಸಭೆಯ ಕಾರ್ಯಸೂಚಿಯ ಉದ್ಘಾಟನೆ
SHARE

ದಾವಣಗೆರೆ, ಜು.24-  ಭಾರತದ ಎಲ್ಲಾ ನಾಗರೀಕರಿಗೆ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇದ್ದು ಅವನ್ನು ಅನುಭವಿಸುವ ಹಕ್ಕು ಅವರಿಗೂ ಇದೆ.  ಇದರ ಬಗ್ಗೆ ಇಲಾಖೆಗಳು ಪೋಲಿಸರು ಮತ್ತು ಇತರೆ ಕಾನೂನು ಸಂಸ್ಥೆಗಳು ಸಂವೇದನಾ ಶೀಲರಾಗಿರಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ ತಿಳಿಸಿದರು.

ನಗರದ ಪಿ.ಬಿ.ರಸ್ತೆಯಲ್ಲಿರುವ ಅಶೋಕ ಇನ್ ಹೊಟೇಲ್‍ನಲ್ಲಿ ಶ್ರೀ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದಿಂದ ಏರ್ಪಸಿದ್ದ ಜಿಲ್ಲಾ ಮಟ್ಟದ ವಕಾಲತ್ತಿನ ಸಭೆಯ ಕಾರ್ಯಸೂಚಿಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಲೈಂಗಿಕ ಕಾರ್ಯಕರ್ತರನ್ನು ಘನತೆಯಿಂದ ನಡೆಸಿಕೊಳ್ಳಬೇಕು, ಅವರನ್ನು ಮೌಖಿಕವಾಗಿ ಮತ್ತು ದೈಹಿಕವಾಗಿ ನಿಂದಿಸಬಾರದು, ಹಿಂಸೆಗೆ ಒಳಪಡಿಸಬಾರದು ಎಂದು ಪ್ರತಿಪಾದಿಸಿದರು. 2022ರಲ್ಲಿ ಸುಪ್ರೀಂಕೋರ್ಟ್ ಲೈಂಗಿಕ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಸಮಿತಿಯನ್ನು ಸ್ಥಾಪಿಸಿ ಆದೇಶಿಸಿರುವುದನ್ನು ನಾವೆಲ್ಲರೂ ಗಮನಿಸಬೇಕು.  ಸುಪ್ರೀಂಕೋರ್ಟ್ ಸಮಿತಿ ಮಾಡಿದ ಕೆಲವು ಶಿಫಾರಸುಗಳಿಗೆ ಸರ್ಕಾರಗಳು ಒಪ್ಪಿಗೆಯನ್ನು ನೀಡಿವೆ. ಲೈಂಗಿಕ ಕಾರ್ಯಕರ್ತರು ತಮ್ಮ ಆರೋಗ್ಯ ಮತ್ತು ಸುರಕ್ಷತೆಗಾಗಿ ಬಳಸಿಕೊಳ್ಳುವ ಕ್ರಮಗಳನ್ನು ಅಪರಾಧವೆಂದು ಪರಿಗಣಿಸಬಾರದು.

ಎಲ್ಲಾ ಇಲಾಖೆಗಳಿಗೆ ಮತ್ತು ಸಾರ್ವಜನಿಕರಿಗೆ ಲೈಂಗಿಕ ಕಾರ್ಮಿಕರ ಸಮುದಾಯವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮತ್ತು ಅವರು ಅನುಭವಿಸುತ್ತಿರುವ ಕಿರುಕುಳ ಹಿಂಸೆಗಳ ಬಗ್ಗೆ ಸಮಾಜಕ್ಕೆ ಮನವರಿಕೆ ಮಾಡಲು ಮತ್ತು ಪರಿಹಾರ ದೊರಕಿಸಲು ಇಲಾಖೆಗಳು ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ  ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್. ಅರುಣ್‍ಕುಮಾರ್ ಅವರು ಮಾತನಾಡಿ,ಭಾರತ ಸಂವಿಧಾನದ 21ನೇ ವಿಧಿ ಅಡಿಯಲ್ಲಿ ಘನತೆಯಿಂದ ಬದುಕುವ ಹಕ್ಕನ್ನು ಎಲ್ಲರಿಗೂ ನೀಡಿದ್ದು, ಸಮಾಜ ಲೈಂಗಿಕ ಕಾರ್ಮಿಕರನ್ನು, ಏಡ್ಸ್ ಪೀಡಿತರನ್ನು, ಮಂಗಳಮುಖಿಯರನ್ನು ಕೂಡ ಸಂವಿಧಾನದ ಆಶಯದಂತೆ ಸಮಾನತೆಯಿಂದ ಕಾಣಬೇಕು. ಮಲೈಂಗಿಕ ಕಾರ್ಯಕರ್ತರ, ಮಂಗಳಮುಖಿಯರ ಸಮಸ್ಯೆಗಳನ್ನು ಪರಿಹರಿಸುವ ಹೊಣೆ ಸರ್ಕಾರ ಮತ್ತು ಸಮುದಾಯಗಳ ಮೇಲಿದೆ ಹಾಗೂ ಅವರ ಹಕ್ಕುಗಳನ್ನು ರಕ್ಷಿಸುವುದು, ಪುನರ್ವಸತಿ ಕಲ್ಪಿಸುವುದು, ಸಮಾಜದಲ್ಲಿ ಉತ್ತಮ  ಶಿಕ್ಷಣ ವನ್ನು ನೀಡಿ ಇತರರಂತೆ ಸಮಾಜದ ಮುಖ್ಯವಾಹಿನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕಾಗಿದೆ.  ಅವರು ಪ್ರಗತಿಹೊಂದಲು ಬೇಕಾದ ಯೋಜನೆಗಳನ್ನು ಜಾರಿಗೆ ತರುವ ಅಗತ್ಯ ಇದ್ದು, ಈ ಬಗ್ಗೆ ಸಂಘಟಿತವಾಗಿ ಹೋರಾಟದ ಮೂಲಕ ಸರ್ಕಾರಗಳಿಗೆ ಒತ್ತಾಯ ತರಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಜಗದೀಶ್ ಎ.ಪಿ. ಅವರು ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿರುವ ಲೈಂಗಿಕ ಕಾರ್ಯಕರ್ತರು, ಏಡ್ಸ್‍ಪೀಡಿತರು ಮತ್ತು ಸಲಿಂಗಿಗಳ ಬಗ್ಗೆ ನಿರಂತರವಾದ ಅಧ್ಯಯನವನ್ನು ನಡೆಸುತ್ತಿದ್ದು, ಅವರ ಹಕ್ಕುಗಳ ಬಗ್ಗೆ ಮತ್ತು ಅವರ ಪರವಾಗಿರುವ ಕಾನೂನುಗಳು ಮತ್ತು ಯೋಜನೆಗಳ ಬಗ್ಗೆ ತಿಳಿಸುವ ಕೆಲಸವನ್ನು ಮತ್ತು ಶೋಷಣೆಯಿಂದ ರಕ್ಷಿಸುವ ಕಾರ್ಯವನ್ನು ನಿಯಂತ್ರಣ ಘಟಕದ ಅಡಿಯಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸಂಘಟನೆಯ ಹುಚ್ಚೆಂಗೆಮ್ಮ ಅವರ ಪ್ರಾರ್ಥನೆಯಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಆಪ್ತ ಸಮಾಲೋಚಕರಾದ ಡಾ. ಗುರುಸವಣೂರು ಸ್ವಾಗತಿಸಿದರು. ಸಂಘಟನೆಯ ಸಮುದಾಯ ಮಹಿಳೆ ಶ್ರೀಮತಿ ಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಿರೂಪಣೆಯನ್ನು ಸಂಘಟನೆಯ ಸಮುದಾಯ ಮಹಿಳೆ ಶ್ರೀಮತಿ ರೇಣುಕಾ ನಿರ್ವಹಿಸಿದರು, ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಂಜುಳ, ಸಂಘಟನೆಯ ರಾಜಶ್ರೀನಿವಾಸ್, ಮುಕ್ತಪೂಜಾರ್, ಶ್ರೀಮತಿ ವಿಜಯಲಕ್ಷ್ಮಿ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಕೀಲರು, ಲಾ ಕಾಲೇಜಿನ ವಿದ್ಯಾರ್ಥಿಗಳು,ಪೋಲಿಸ ಇಲಾಖೆಯವರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ
Next Article davanagere ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಿಸ್ವಾರ್ಥತೆಯಿಂದ ಕೆಲಸ ಮಾಡುವವರ ಸಂಖ್ಯೆ ಕಡಿಮೆ : ನ್ಯಾ.ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ:   ಸಾರ್ವಜನಿಕ ಜೀವನದಲ್ಲಿ ಸ್ಥಾನಮಾನಗಳು ಸಮಾಜ ಸೇವೆಗೆ ದೊರೆತ ಅವಕಾಶ ಎಂದು ಭಾವಿಸಿ, ಕರ್ತವ್ಯ ನಿರ್ವಹಿಸಿದಾಗ ಮಾತ್ರ ದೇಶದ ಅಭಿವೃದ್ದಿಯಾಗಲು…

By Dinamaana Kannada News

ಗಲಭೆ ಸೃಷ್ಠಿಸಲು ಬಿಜೆಪಿ ಮತ್ತದರ ಅಂಗಸಂಸ್ಥೆಗಳ ಪ್ರಯತ್ನ

ದಾವಣಗೆರೆ: ದಾವಣಗೆರೆ ನಗರದಲ್ಲಿ ಕೆಲವು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಯುವಕರು ಹಾಗೂ ಮತ್ತು ಅದರ ಅಂಗಸಂಸ್ಥೆಗಳ ಪದಾಧಿಕಾರಿಗಳು ಗಲಭೆ ಸೃಷ್ಠಿಸುವ…

By Dinamaana Kannada News

ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

ದಾವಣಗೆರೆ.ಮಾ.11 (Davanagere); ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ‌ 300 ರೂಪಾಯಿ ನೀಡಲಾಗುತ್ತಿದೆ.ಇದರಿಂದ ಮೂಲಭೂತ ಅಗತ್ಯಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?