Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ
ತಾಜಾ ಸುದ್ದಿ

ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ

Dinamaana Kannada News
Last updated: July 24, 2024 1:55 pm
Dinamaana Kannada News
Share
davanagere
ಜಿಲ್ಲಾ ಮಟ್ಟದ ವಕಾಲತ್ತಿನ ಸಭೆಯ ಕಾರ್ಯಸೂಚಿಯ ಉದ್ಘಾಟನೆ
SHARE

ದಾವಣಗೆರೆ, ಜು.24-  ಭಾರತದ ಎಲ್ಲಾ ನಾಗರೀಕರಿಗೆ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇದ್ದು ಅವನ್ನು ಅನುಭವಿಸುವ ಹಕ್ಕು ಅವರಿಗೂ ಇದೆ.  ಇದರ ಬಗ್ಗೆ ಇಲಾಖೆಗಳು ಪೋಲಿಸರು ಮತ್ತು ಇತರೆ ಕಾನೂನು ಸಂಸ್ಥೆಗಳು ಸಂವೇದನಾ ಶೀಲರಾಗಿರಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ ತಿಳಿಸಿದರು.

ನಗರದ ಪಿ.ಬಿ.ರಸ್ತೆಯಲ್ಲಿರುವ ಅಶೋಕ ಇನ್ ಹೊಟೇಲ್‍ನಲ್ಲಿ ಶ್ರೀ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದಿಂದ ಏರ್ಪಸಿದ್ದ ಜಿಲ್ಲಾ ಮಟ್ಟದ ವಕಾಲತ್ತಿನ ಸಭೆಯ ಕಾರ್ಯಸೂಚಿಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಲೈಂಗಿಕ ಕಾರ್ಯಕರ್ತರನ್ನು ಘನತೆಯಿಂದ ನಡೆಸಿಕೊಳ್ಳಬೇಕು, ಅವರನ್ನು ಮೌಖಿಕವಾಗಿ ಮತ್ತು ದೈಹಿಕವಾಗಿ ನಿಂದಿಸಬಾರದು, ಹಿಂಸೆಗೆ ಒಳಪಡಿಸಬಾರದು ಎಂದು ಪ್ರತಿಪಾದಿಸಿದರು. 2022ರಲ್ಲಿ ಸುಪ್ರೀಂಕೋರ್ಟ್ ಲೈಂಗಿಕ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಸಮಿತಿಯನ್ನು ಸ್ಥಾಪಿಸಿ ಆದೇಶಿಸಿರುವುದನ್ನು ನಾವೆಲ್ಲರೂ ಗಮನಿಸಬೇಕು.  ಸುಪ್ರೀಂಕೋರ್ಟ್ ಸಮಿತಿ ಮಾಡಿದ ಕೆಲವು ಶಿಫಾರಸುಗಳಿಗೆ ಸರ್ಕಾರಗಳು ಒಪ್ಪಿಗೆಯನ್ನು ನೀಡಿವೆ. ಲೈಂಗಿಕ ಕಾರ್ಯಕರ್ತರು ತಮ್ಮ ಆರೋಗ್ಯ ಮತ್ತು ಸುರಕ್ಷತೆಗಾಗಿ ಬಳಸಿಕೊಳ್ಳುವ ಕ್ರಮಗಳನ್ನು ಅಪರಾಧವೆಂದು ಪರಿಗಣಿಸಬಾರದು.

ಎಲ್ಲಾ ಇಲಾಖೆಗಳಿಗೆ ಮತ್ತು ಸಾರ್ವಜನಿಕರಿಗೆ ಲೈಂಗಿಕ ಕಾರ್ಮಿಕರ ಸಮುದಾಯವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮತ್ತು ಅವರು ಅನುಭವಿಸುತ್ತಿರುವ ಕಿರುಕುಳ ಹಿಂಸೆಗಳ ಬಗ್ಗೆ ಸಮಾಜಕ್ಕೆ ಮನವರಿಕೆ ಮಾಡಲು ಮತ್ತು ಪರಿಹಾರ ದೊರಕಿಸಲು ಇಲಾಖೆಗಳು ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ  ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್. ಅರುಣ್‍ಕುಮಾರ್ ಅವರು ಮಾತನಾಡಿ,ಭಾರತ ಸಂವಿಧಾನದ 21ನೇ ವಿಧಿ ಅಡಿಯಲ್ಲಿ ಘನತೆಯಿಂದ ಬದುಕುವ ಹಕ್ಕನ್ನು ಎಲ್ಲರಿಗೂ ನೀಡಿದ್ದು, ಸಮಾಜ ಲೈಂಗಿಕ ಕಾರ್ಮಿಕರನ್ನು, ಏಡ್ಸ್ ಪೀಡಿತರನ್ನು, ಮಂಗಳಮುಖಿಯರನ್ನು ಕೂಡ ಸಂವಿಧಾನದ ಆಶಯದಂತೆ ಸಮಾನತೆಯಿಂದ ಕಾಣಬೇಕು. ಮಲೈಂಗಿಕ ಕಾರ್ಯಕರ್ತರ, ಮಂಗಳಮುಖಿಯರ ಸಮಸ್ಯೆಗಳನ್ನು ಪರಿಹರಿಸುವ ಹೊಣೆ ಸರ್ಕಾರ ಮತ್ತು ಸಮುದಾಯಗಳ ಮೇಲಿದೆ ಹಾಗೂ ಅವರ ಹಕ್ಕುಗಳನ್ನು ರಕ್ಷಿಸುವುದು, ಪುನರ್ವಸತಿ ಕಲ್ಪಿಸುವುದು, ಸಮಾಜದಲ್ಲಿ ಉತ್ತಮ  ಶಿಕ್ಷಣ ವನ್ನು ನೀಡಿ ಇತರರಂತೆ ಸಮಾಜದ ಮುಖ್ಯವಾಹಿನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಬೇಕಾಗಿದೆ.  ಅವರು ಪ್ರಗತಿಹೊಂದಲು ಬೇಕಾದ ಯೋಜನೆಗಳನ್ನು ಜಾರಿಗೆ ತರುವ ಅಗತ್ಯ ಇದ್ದು, ಈ ಬಗ್ಗೆ ಸಂಘಟಿತವಾಗಿ ಹೋರಾಟದ ಮೂಲಕ ಸರ್ಕಾರಗಳಿಗೆ ಒತ್ತಾಯ ತರಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಜಗದೀಶ್ ಎ.ಪಿ. ಅವರು ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿರುವ ಲೈಂಗಿಕ ಕಾರ್ಯಕರ್ತರು, ಏಡ್ಸ್‍ಪೀಡಿತರು ಮತ್ತು ಸಲಿಂಗಿಗಳ ಬಗ್ಗೆ ನಿರಂತರವಾದ ಅಧ್ಯಯನವನ್ನು ನಡೆಸುತ್ತಿದ್ದು, ಅವರ ಹಕ್ಕುಗಳ ಬಗ್ಗೆ ಮತ್ತು ಅವರ ಪರವಾಗಿರುವ ಕಾನೂನುಗಳು ಮತ್ತು ಯೋಜನೆಗಳ ಬಗ್ಗೆ ತಿಳಿಸುವ ಕೆಲಸವನ್ನು ಮತ್ತು ಶೋಷಣೆಯಿಂದ ರಕ್ಷಿಸುವ ಕಾರ್ಯವನ್ನು ನಿಯಂತ್ರಣ ಘಟಕದ ಅಡಿಯಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸಂಘಟನೆಯ ಹುಚ್ಚೆಂಗೆಮ್ಮ ಅವರ ಪ್ರಾರ್ಥನೆಯಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘದ ಆಪ್ತ ಸಮಾಲೋಚಕರಾದ ಡಾ. ಗುರುಸವಣೂರು ಸ್ವಾಗತಿಸಿದರು. ಸಂಘಟನೆಯ ಸಮುದಾಯ ಮಹಿಳೆ ಶ್ರೀಮತಿ ಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಿರೂಪಣೆಯನ್ನು ಸಂಘಟನೆಯ ಸಮುದಾಯ ಮಹಿಳೆ ಶ್ರೀಮತಿ ರೇಣುಕಾ ನಿರ್ವಹಿಸಿದರು, ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಂಜುಳ, ಸಂಘಟನೆಯ ರಾಜಶ್ರೀನಿವಾಸ್, ಮುಕ್ತಪೂಜಾರ್, ಶ್ರೀಮತಿ ವಿಜಯಲಕ್ಷ್ಮಿ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಕೀಲರು, ಲಾ ಕಾಲೇಜಿನ ವಿದ್ಯಾರ್ಥಿಗಳು,ಪೋಲಿಸ ಇಲಾಖೆಯವರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ
Next Article davanagere ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Job fair | ಉದ್ಯೋಗ ಮೇಳ

ದಾವಣಗೆರೆ ಡಿ.16 (Davanagere)  : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10…

By Dinamaana Kannada News

Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ದಾವಣಗೆರೆ (Davanagere):  ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪೇನಿಲ್ಲ ಎಂದಿರುವ ಮಾಜಿ ಡಿಸಿಎಂ, ಹಾಲಿ ಸಂಸದ ಗೋವಿಂದ ಕಾರಜೋಳ ನಿಲುವು…

By Dinamaana Kannada News

ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಿ

ಚಿತ್ರದುರ್ಗ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ  ಕಾರ್ಯದರ್ಶಿ ಹಾಗೂ ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್…

By Dinamaana Kannada News

You Might Also Like

Chitradurga
ತಾಜಾ ಸುದ್ದಿ

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

By Dinamaana Kannada News
Dr. Prabha Mallikarjun
ತಾಜಾ ಸುದ್ದಿ

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?