Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್
ತಾಜಾ ಸುದ್ದಿ

ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್

Dinamaana Kannada News
Last updated: June 30, 2024 5:06 pm
Dinamaana Kannada News
Share
Harihara
ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮ
SHARE

ಹರಿಹರ:  ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ಹೇಳಿದರು.

ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಆಯೋಜಿಸಿದ್ದ ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೋ ಸಲ ನಾವು ಹೂಡಿರುವ ವ್ಯಾಜ್ಯ ದುಡುಕಿನಿಂದ ತೆಗೆದುಕೊಂಡ ನಿರ್ಧಾರವಾಗಿರುತ್ತದೆ, ದುರಾಸೆ, ದಾಯಾದಿ ಮತ್ಸರ ಅಥವಾ ದ್ವೇಷದಿಂದ ವ್ಯಾಜ್ಯಗಳನ್ನು ಮುಂದುವರಿಸುವುದರಿಂದ ನೆಮ್ಮದಿ ಭಂಗವೆ ಹೊರತು ಮತ್ತೇನು ಪ್ರಯೋಜನವಿಲ್ಲ ಎಂದರು.

ಜನರು ಸಕಾರಾತ್ಮಕವಾಗಿ ಆಲೋಚಿಸಬೇಕು, ಸಣ್ಣಪುಟ್ಟ ಸಮಸ್ಯೆಗಳಿಗೂ ಕೋರ್ಟ್ ಮೆಟ್ಟಿಲು ಹತ್ತಬಾರದು. ಕೋರ್ಟ್, ಕಚೇರಿ, ಪೊಲೀಸ್ ಠಾಣೆ ಅಲೆದಾಟದಿಂದ ಯಾವುದೇ ಪ್ರಯೋಜನವಿಲ್ಲ. ಪರಸ್ಪರ ಹೊಂದಾಣಿಕೆಯಿಂದ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಉಭಯ ಪಕ್ಷಗಾರರು ಉದಾರತೆಯಿಂದ ರಾಜಿ ಮಾಡಿಕೊಂಡು ಅನ್ಯೋನ್ಯತೆಯಿಂದಿರಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಯಾದ ನ್ಯಾಯಾಧೀಶ ಮಹಾವೀರ ಮಾತನಾಡಿ, ದೇಶದಲ್ಲಿ ಪ್ರತಿದಿನ ಲಕ್ಷ್ಯಾಂತರ ಪ್ರಕರಣಗಳ ವಿಚಾರಣೆ ನಡೆದು, ಸಾವಿರಾರು ಪ್ರಕರಣಗಳು ಇತ್ಯರ್ಥವಾಗುತ್ತಿವೆ, ಆದರೆ ಕಕ್ಷಿಗಾರರಲ್ಲಿ ಆತ್ಮತೃಪ್ತಿ, ನೆಮ್ಮದಿ ಕಾಣುತ್ತಿಲ್ಲ. ಆದ್ದರಿಂದ ರಾಜಿ ಮೂಲಕ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳುವುದೇ ಜಾಣತನ ಎಂದರು.

ಜೂ.13 ರಂದು ಹಮ್ಮಿಕೊಂಡಿರುವ ಬೃಹತ್ ಲೋಕ್ ಅದಾಲತ್‍ವರೆಗೆ ಪ್ರತಿದಿನ ಪ್ರತಿಯೊಂದು ನ್ಯಾಯಾಲಯದಲ್ಲೂ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ಖರ್ಚಿಲ್ಲದೆ, ಶೀಘ್ರವಾಗಿ ನ್ಯಾಯ ನಿರ್ಣಯ ಮಾಡುವ ಮಹತ್ವದ ಲೋಕ್ ಅದಾಲತ್ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ನ್ಯಾಯಾಧೀಶರಾದ ಪದ್ಮಶ್ರೀ ಮುನುವಳ್ಳಿ, ಪಕ್ಕೀರಮ್ಮ ಕೆಳಗೇರಿ, ಜ್ಯೋತಿ ಅಶೋಕ್ ಪತ್ತಾರ್, ವೀಣಾ ಕೋಳೇಕರ, ವಕೀಲರ ಸಂಘದ ಅಧ್ಯಕ್ಷ ಬಿ.ಆನಂದ್ ಕುಮಾರ್, ಉಪಾಧ್ಯಕ್ಷೆ ಕೆ.ಎಸ್.ಶುಭಾ, ಎಪಿಪಿಗಳಾದ ಪುರುಶೋತ್ತಮ, ಹೇಮಲತಾ, ಎಜಿಪಿ ನವೀನ್ ಕುಮಾರ್, ಹಿರಿಯ ವಕೀಲರು, ಕಕ್ಷಿದಾರರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Anagodu village-Davanagere Anagodu jana Spandana : “ಐದು ಗ್ಯಾರಂಟಿ” ಯೋಜನೆಗಳು ನಿಲ್ಲಲ್ಲ
Next Article Davanagere ಬರಿಗೈ ದಾಸ ‘ಸಸಿಕಾಂತ್ ಸೆಂಥಿಲ್’’ ರಾಜಕೀಯಗಾಥೆ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Cyber ​​crime | ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ : 11.32 ಲಕ್ಷ ವಂಚನೆ

ದಾವಣಗೆರೆ  (Davanagere) : ಇನ್‍ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ ಮಾಡಿ ದಾವಣಗೆರೆ ವ್ಯಕ್ತಿಯೊಬ್ಬರು 11.32 ಲಕ್ಷ ಹಣ ಕಳೆದುಕೊಂಡಿರುವ…

By Dinamaana Kannada News

Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere) :  ಅತ್ಯಾಚಾರದ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ…

By Dinamaana Kannada News

ಭಗಂದರ (Fistula in ano) ಸಮಸ್ಯೆ: ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ  

ಭಗಂದರ (Fistula) ವನ್ನು ಆಚಾರ್ಯ ಸುಶ್ರುತರು ಅಷ್ಟ ಮಹಾರೋಗಗಳಲ್ಲಿ (ಎಂಟು ಪ್ರಮುಖ ರೋಗಗಳು) ಒಂದು ಎಂದು ವಿವರಿಸಿದ್ದಾರೆ.  ಇದು ಗುಣಪಡಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?