Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ
ತಾಜಾ ಸುದ್ದಿ

ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ

Dinamaana Kannada News
Last updated: November 27, 2024 1:03 pm
Dinamaana Kannada News
Share
davanagere
davanagere
SHARE

ದಾವಣಗೆರೆ. ನ.27 (Davanagere);  ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಡಿ.10 ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಸುವರ್ಣಸೌಧಕ್ಕೆ ಟ್ರ್ಯಾಕ್ಟರ್ ಗಳೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು  ಕೂಡಲಸಂಗಮದ ಗುರುಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಶಿಕ್ಷಣಕ್ಕಾಗಿ ಉದ್ಯೋಗಕ್ಕಾಗಿ ಮೀಸಲಾತಿ ಪಡೆಯಲು 2 ಎಗೆ ಸೇರ್ಪಡೆ ಮಾಡಬೇಕೆಂದು ನಾಲ್ಕು ವರ್ಷದಿಂದ ನಿರಂತರವಾಗಿ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಕೊನೆಗಳಿಗೆ ಯಲ್ಲಿ ನಿರ್ಧಾರ ತೆಗೆದುಕೊಂಡಿತಾದರೂ ಮೀಸಲಾತಿ ಪ್ರಸ್ತಾಪ ಅಲ್ಲಿಗೆ ಸ್ಥಗಿತವಾಗಿತು. ಆದರೆ, ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಿಸಬಾರದು ಹಾಗೂ ಹೋರಾಟ ಗಟ್ಟಿಗೊಳಿಸಲು ನಿರಂತರ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರ ನಮ್ಮ ಹೋರಾಟಕ್ಕೆ ಮನ್ನಣೆ ನೀಡುತ್ತಿಲ್ಲ ಮುಖ್ಯಮಂತ್ರಿಗಳು ಮೀಸಲಾತಿ ಕುರಿತು ಸಭೆ ಕರೆಯುವುದಾಗಿ ಹೇಳಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರಕ್ಕೆ ನಮ್ಮ ಕೂಗು ಮುಟ್ಟುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಈಗಾಗಲೇ ಹೆದ್ದಾರಿ ತಡೆದು, ರಸ್ತೆಯಲ್ಲೇ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಗುರುಗಳು ಹೋರಾಟ ಮಾಡಿ ಸರ್ಕಾರಕ್ಕೆ ಚುರುಕು ಮುಟ್ಟಿಸಿದರೂ ಕೂಡ  ನಮ್ಮ ಸಮಾಜದ  ಶಾಸಕರು ಅಧಿವೇಶನದಲ್ಲಿ ಮಾತನಾಡಲಿಲ್ಲ. ಆದರೆ,  ನಮ್ಮ ಹೋರಾಟ ನಿಂತಿಲ್ಲ ಕೊನೆಗೆ ಕಾನೂನು ಹೋರಾಟಕ್ಕೆ ಮುಂದಾದ ವೇಳೆ ಸಿಎಂ ಎರಡು ತಾಸು ಸಭೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಸಿಎಂ ಉಪಚುನಾವಣೆ ನೆಪ ಮಾಡಿಕೊಂಡು ಯಾವುದೇ ನಿರ್ಣಯ ತೆಗೆದುಕೊಳ್ಳಲಿಲ್ಲ. ಮೀಸಲಾತಿ ಘೋಷಣೆ ಮಾಡಿಲ್ಲ . ಕೊನೆಗೆ ಒಂದು ದಿನಾಂಕನಿಗಧಿ ಮಾಡಲು ಸಿಎಂಗೆ ಮನವಿ ಮಾಡಿದೆವು ಆದರೆ ಯಾವುದೇ ಪ್ರಯೋಜನ ವಾಗಿಲ್ಲ ಎಂದರು.

ನಮಗೆ ಮೀಸಲಾತಿ ಕೂಲಿ ಕೊಡಿ ಅನುದಾನ ಬೇಡ,ಅಧಿಕಾರ ಬೇಡ ನಮ್ಮ ಮಕ್ಕಳ ವಿದ್ಯಾಭ್ಯಾಸ ಕ್ಕೆ ಮೀಸಲಾತಿ ಕೂಲಿ ಕೇಳಿದ್ದೇವೆ. ಎಲ್ಲಾ ಲಿಂಗಾಯತ ಉಪ ಸಮುದಾಯಗಳಿಗೆ ಮೀಸಲಾತಿ ಕೇಳಿದ್ದೇವೆ.ಆದರೆ ಯಾವುದೇ ಮನ್ನಣೆ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಉಗ್ರ ಹೋರಾಟದ ಮೂಲಕ ಹಕ್ಕೊತ್ತಾಯ ಮಾಡಲು ಡಿ.10 ರಂದು ಬೆಳಗಾವಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ತೀರ್ಮಾನ ಕೈಗೊಂಡಿದ್ದೇವೆ ನಮ್ಮ ಹೋರಾಟಕ್ಕೆ ಪಕ್ಷಾತೀತ ಬೆಂಬಲ ನೀಡಬೇಕು ಎಂದರು.

ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇವೆ. ಪ್ರತಿಭಟನೆಯ ಮುಂದಾಳತ್ವವನ್ನು ಪಂಚಮಸಾಲಿ ಹೋರಾಟ ಸಮಿತಿ ವಹಿಸಿಕೊಳ್ಳಲಿದೆ..ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಹೋರಾಟಕ್ಕೆ ಬರಬೇಕೆಂದು ಮನವಿ ಮಾಡಿದರು.

ದಾವಣಗೆರೆಯಲ್ಲಿ ನಮ್ಮ ಹೋರಾಟ ಯಶಸ್ವಿಯಾಗಿದೆ ಅದಕ್ಕಾಗಿ ಜಿಲ್ಲೆಯಿಂದ ಹೆಚ್ಚು ಸಮಾಜಬಾಂಧವರು ಆಗಮಿಸಬೇಕೆಂದರು. ಸರ್ಕಾರ ಅಧಿಕಾರ ವಹಿಸಿಕೊಂಡು ಎರಡು ವರ್ಷವಾಗಿದೆ. ಸರ್ಕಾರ ವಿಳಂಬ ಮಾಡದೆ ಮೀಸಲಾತಿ ಜಾರಿಗೊಳಿಸಬೇಕು.ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಕಾಣಬೇಕು. ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮಾಜವೂ ಕಾರಣ ಎಂಬುದನ್ನು ಸಿಎಂ ಮರೆಯಬಾರದು ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದರು.

ಡಿ.10 ರಂದು ಬೆಳಗ್ಗೆ 10 ಕ್ಕೆ ಬೆಳಗಾವಿ ಸುವರ್ಣ ಸೌಧಕ್ಕೆ ಶಾಂತಿಯುತ ಮುತ್ತಿಗೆ ಹಾಕಲಾಗುವುದು ಹಾಗೂ ಅಹಿಂಸಾತ್ಮಕ  ಪ್ರತಿಭಟನೆ ಮಾಡುತ್ತೇವೆ ಎಂದರು. ರಾಜ್ಯ ಸರ್ಕಾರ ಮೀಸಲಾತಿ ಕಲ್ಪಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಪಂಚಮಸಾಲಿನಡಿಗೆ ಬೆಳಗಾವಿ ಸುವರ್ಣಸೌಧದ ವರೆಗೆ ಘೋಷವಾಕ್ಯದೊಂದಿಗೆ ನಮ್ಮ ಹೋರಾಟ ನಡೆಯಲಿದೆ ಎಂದರು.

ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್ ಮಾತನಾಡಿ,  ಪಂಚಮಸಾಲಿ ಹೋರಾಟ ಕವಲು ದಾರಿಯಲ್ಲ. ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಯಾರು ಮಾಡಬಾರದು. ನಮ್ಮ ನಾಯಕರು ಸರ್ಕಾರ ಬಡಿದೆಬ್ಬಿಸುವ ಕೆಲಸ ಮಾಡಬೇಕು.  ಸಮಾಜದ ಒಳಿತಿಗಾಗಿ ಎಲ್ಲರೂ ಒಗ್ಗೂಡಬೇಕು. ಸಮಾಜ 2 ಎ ಮೀಸಲಾತಿ ಪಡೆಯುವ ಉದ್ದೇಶ ಮುಖ್ಯ. ವೈಯಕ್ತಿಕ ವಿಚಾರ ಪ್ರಸ್ತಾಪ ಬೇಡ. ಹೋರಾಟದ ತೀಕ್ಷ್ಣತೆಗೆ ತಣ್ಣಿರು ಎರಚಬಾರದು. ಶ್ರೀಗಳು ಯಾವ ಹೋರಾಟದ ನಾಯಕರ ಪರ ಅಲ್ಲ. ಶ್ರೀಗಳು ನಿರಂತ ಹೋರಾಟ ಮಾಡುತ್ತಿದ್ದಾರೆ. ಕೆಲವರು ಶ್ರೀಗಳ ಮೇಲೆ ಆರೋಪಮಾಡಿದರು .ಶ್ರೀ ಗಳು ಪೀಠ ಬಿಟ್ಟು ನಿರಂತ ಹೋರಾಟ ಮಾಡುತ್ತಿದ್ದಾರೆ.  ಶ್ರೀಗಳ ಬಗ್ಗೆ ಅಪನಂಬಿಕೆ ಬೇಡ, ಶ್ರೀಗಳಿಗೆ ಸಮಾಜದ ಕಳಕಳಿ ಇದೆ ಎಂದರು.

ಮಾಜಿ ಮೇಯರ್ ಬಿ.ಜಿ ಅಜಯಕುಮಾರ್, ಕಾರಿಗನೂರು ಕಲ್ಲೇಶಪ್ಪ, ಚನ್ನಬಸವನಗೌಡ್ರು, ಮಯೂರ್, ಆನಂದ ಜಿರ್ಲೆ, ಬಿ.ಜಿ ಭರತ್, ಕೊಟ್ರೆಶ್, ಚಂದ್ರು ಮಹೇಶ್ ಉಪಸ್ಥಿತರಿದ್ದರು.

Read also : Davanagere | ಚಳಿಗಾಲ ಅಧಿವೇಶನದಲ್ಲಿ ಸೇವೆ ಖಾಯಂಗೆ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ನೌಕರರ ಮನವಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಚಳಿಗಾಲ ಅಧಿವೇಶನದಲ್ಲಿ ಸೇವೆ ಖಾಯಂಗೆ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ನೌಕರರ ಮನವಿ
Next Article davanagere Davanagere | ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ

ಹರಿಹರ (HARIHARA )  :   ದುರುದ್ದೇಶದಿಂದ ಮಹಿಳೆ, ಪುರುಷ ಅಥವಾ ಮಕ್ಕಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯು…

By Dinamaana Kannada News

ವಾಷಿಂಗ್ಟನ್ ಯೂನಿವರ್ಸಿಟಿಯಿಂದ ಪ್ರೀತಿ ಗೆ ಡಾಕ್ಟರೇಟ್ ಪದವಿ

ದಾವಣಗೆರೆ, ಮಾ. 12: ನಗರದ ಪ್ರೀತಿಯವರಿಗೆ ಶಿಕ್ಷಣ, ಆಡಳಿತ ಹಾಗೂ ಮಾರ್ಕೆಟಿಂಗ್ ಸಾಧನೆಯನ್ನು ಗುರುತಿಸಿ ಅಮೆರಿಕದ ವಾಷಿಂಗ್ಟನ್ ಯೂನಿವರ್ಸಿಟಿ ಯು (ಡಿಜಿಟಲ್…

By Dinamaana Kannada News

Davanagere | ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ.ಅ..07 (Davanagere) : ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?