Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅನ್ನದಾನದಿಂದ ಮಾತ್ರ ತೃಪ್ತಿಪಡಿಸಲು ಸಾಧ್ಯ : ಡಾ. ಡಿ.ವೀರೇಂದ್ರ ಹೆಗ್ಗಡೆ
ತಾಜಾ ಸುದ್ದಿ

ಅನ್ನದಾನದಿಂದ ಮಾತ್ರ ತೃಪ್ತಿಪಡಿಸಲು ಸಾಧ್ಯ : ಡಾ. ಡಿ.ವೀರೇಂದ್ರ ಹೆಗ್ಗಡೆ

Dinamaana Kannada News
Last updated: December 26, 2024 3:25 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (DAVANAGERE):  ದಾನ ಕೊಟ್ಟ ತೃಪ್ತಿಪಡಿಸಲು ಸಾದ್ಯವಿದ್ದರೆ ಅದು ಅನ್ನದಾನದಿಂದ ಮಾತ್ರ ಸಾಧ್ಯ” ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

ನಗರದ ಕೆಬಿ ಬಡಾವಣೆಯ ಕೆನಾರ ಬ್ಯಾಂಕ್ ಹಿಂಭಾಗದಲ್ಲಿರುವ ಅಬೇರು ಮಂಜಣ್ಣ ಶ್ರೀಮತಿ ಲತಾ ಮಂಜಣ್ಣ ಅವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ 25ನೇ ವರ್ಷದ ಅಕ್ಕಿ ಸಮರ್ಪಣೆ ಮತ್ತು ಶ್ರೀ ಮಂಜುನಾಥ ಸ್ವಾಮಿ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾರಿಗಾದರೂ ಹತ್ತು ಲಕ್ಷ ದುಡ್ಡ ಕೊಟ್ಟು ಕೇಳಿದರೆ. ಇನ್ನು ಸ್ವಲ್ಪ ಕೊಡಿ ಸ್ವಾಮಿ ಎನ್ನಬಹುದು. ಆದರೆ ಊಟ ಮಾಡಿ ತೃಪ್ತಿಯಾದವರಿಗೆ ಇನ್ನು ಸ್ವಲ್ಪ ಊಟ ಮಾಡಿ ಎಂದರೆ ಹೊಟ್ಟೆ ತುಂಬಿದೆ ವಾಂತಿಯಾಗುತ್ತದೆ ಬಿಟ್ಟುಬಿಡಿ ಎನ್ನುತ್ತಾರೆ. ಹಾಗಾಗಿ ದಾನ ಕೊಟ್ಟು ತೃಪ್ತಿಪಡಿಸಲು ಸಾಧ್ಯವಿದ್ದರೆ ಅದು ಅನ್ನದಾನದಿಂದ ಮಾತ್ರ ಸಾಧ್ಯ ಎಂದರು.

ಧರ್ಮಸ್ಥಳದಲ್ಲಿ ಹಿಂದಿನಿಂದಲೂ ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯ ದಾನ ಈ ನಾಲ್ಕು ದಾನವನ್ನು ಮಾಡಿಕೊಂಡು ಬರಲಾಗಿದ್ದು, ಅಭಯ ದಾನದಲ್ಲಿ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಸೇರಿಕೊಂಡಿದ್ದು, ಅನ್ನದಾನಕ್ಕೆ ಪ್ರತ್ಯೇಕವಾದ ಮಹತ್ವವಿದೆ. ದಾಸೋಹ ಎಂಬ ಪದದಲ್ಲಿ ಎಚ್ಚರಿಕೆಯಿಂದ ರುಚಿಕರವಾದ ಅಡುಗೆ ಮಾಡಿ ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಭಕ್ತರನ್ನು ಅನ್ನದ ಮೂಲಕ ತೃಪ್ತಿಪಡಿಸಲಾಗುತ್ತಿದೆ ಎಂದರು.

ಧರ್ಮಸ್ಥಳ ಕ್ಷೇತ್ರದ ಉಗ್ರಾಣದಲ್ಲಿ ಆಹಾರ ಧಾನ್ಯಗಳು ಇದೆಯೇ ಎಂಬ ಚಿಂತೆ ಇಲ್ಲ. ತಮಿಳುನಾಡು, ದಾವಣಗೆರೆ ಸೇರಿದಂತೆ ಕರ್ನಾಟಕದ ಎಲ್ಲಾ ಭಾಗಗಳಿಂದ ಭಕ್ತರ ಅಕ್ಕಿ, ತರಕಾರಿ ಸೇರಿದಂತೆ ಎಲ್ಲಾ ಆಹಾರ ಧಾನ್ಯಗಳು ಕಳುಹಿಸಿಕೊಡುತ್ತಾರೆ. ತಿರುಪತಿಯಿಂದ ಬಂದು ಅನ್ನದಾನದ ವ್ಯವಸ್ಥೆ ಕುರಿತು ಸಲಹೆ ಪಡೆದುಕೊಂಡು ಹೋಗಿದ್ದು, ಈ ಸ್ವತಂತ್ರ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಅದರಂತೆ ಅನ್ನದಾನದಷ್ಟು ಶ್ರೇಷ್ಠ ಇನ್ನೊಂದಿಲ್ಲ ಎಂದು ಕಂಡಿರುವುದುರಿಂದ ಎಲ್ಲಾ ಕ್ಷೇತ್ರದಲ್ಲಿ ಅನ್ನದಾನ ಶುರುವಾಗಿದೆ ಎಂದರು.
ಧರ್ಮಸ್ಥಳದಲ್ಲಿ ಅನ್ನ ಸ್ವೀಕರಿಸಿದವರು ಹೊಟ್ಟೆ ತುಂಬಿಸಿಕೊಳ್ಳುವುದರ ಜೊತೆಗೆ ಸಂತೋಷವನ್ನು ಹೊಂದುತ್ತಾರೆ.

ಯಾವುದೇ ದೇವರಿಗೆ ಹೋಮದ ಅಗ್ನಿ ಮೂಲಕವೇ ಭಕ್ತಿಯನ್ನು ಸಮರ್ಪಣೆ ಮಾಡುತ್ತೇವೆ. ಅದೇ ರೀತಿ ನಮ್ಮ ಒಳಗೂ ಒಂದು ಜಟರಾಗ್ನಿ ಇದ್ದು, ನಾವು ಯಾವುದೇ ಆಹಾರ ತಿಂದರು ಅದು ಜಿರಣ ಮಾಡುವ ಶಕ್ತಿಯನ್ನು ಹೊಂದಿರುತ್ತದೆ. ಹಾಗಾಗಿ ನಾಲಿಗಿಯ ರುಚಿತ ನೋಡದೆ ಜಟರಾಗ್ನಿಯನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆಯನ್ನು ನೆರವೇರಿಸಲಾಯಿತು.

ವೀರೇಂದ್ರ ಹೆಗ್ಗಡೆ ಅವರನ್ನು ಮಹಿಳೆಯರು ಪೂರ್ಣಕುಂಬ ಮೇಳದೊಂದಿಗೆ ವೇದಿಕೆಗೆ ಕರೆತರಲಾಯಿತು. ಅಣಬೇರು ಮಂಜಣ್ಣ ಅವರ ಕುಟುಂಬದಿಂದ ವೀರೇಂದ್ರ ಹೆಗಡೆ ಅವರಿಗೆ ಗೌರವ ಸಮರ್ಪಿಸಿದ ನಂತರ ಕಲ್ಪವೃಕ್ಷ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್., ಕುಸುಮ ಶ್ರೇಷ್ಠಿ, ಬಸವರಾಜ್ ಬಾಬಣ್ಣ ಹರಿಹರ ಸೇರಿದಂತೆ ಇತರರು ಇದ್ದರು.

Read also : ಹಜರತ ಸೈಯದ್ ಚಮನ್ ಷಾ ವಲಿ ದರ್ಗಾಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹಜರತ ಸೈಯದ್ ಚಮನ್ ಷಾ ವಲಿ ದರ್ಗಾಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ
Next Article DAVANAGERE ಸೆನೆಟ್ ಚುನಾವಣೆಯಲ್ಲಿ ಜಯ : ಪ್ರೊ. ಡಾ.ಶ್ರೀನಿವಾಸ್ ಎಲ್.ಡಿ ಅವರಿಗೆ ಅಭಿನಂದಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ; ಮಾ.18  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ,…

By Dinamaana Kannada News

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ.…

By Dinamaana Kannada News

ಸೊಂಡೂರಿನ  ಮಳೆ!

ಊರಿನ ರಮ್ಯ , ಆಹ್ಲಾದಕರ ನಿಸರ್ಗವನ್ನು ಕಂಡು "ಸುಂದರಪುರ"ಎಂದು ವರ್ಣಿಸಿದ್ದಕ್ಕೆ ಸೊಂಡೂರು ಎಂದು ಹೆಸರಾಯಿತೆಂದು ಹೇಳುವವರು ಇದ್ದಾರೆ. ರಾಜಮಹಾರಾಜರನ್ನು ಮೆಚ್ಚಿಸಲಿಕ್ಕೆ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?