Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  
ತಾಜಾ ಸುದ್ದಿ

ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  

Dinamaana Kannada News
Last updated: January 7, 2025 4:16 pm
Dinamaana Kannada News
Share
mailara jatare
mailara jatare
SHARE
ವಿಜಯನಗರ (ಹೊಸಪೇಟೆ), ಜ. 7 : ಭಕ್ತಿ ಪ್ರಧಾನವಾದ ಮೈಲಾರ ಕಾರ್ಣಿಕೋತ್ಸವದಲ್ಲಿ ಭಕ್ತರ ಭಾವನೆಗಳಿಗೆ ಧಕ್ಕೆ ಬಾರದಂತೆ ಜಾತ್ರೆ ಆಯೋಜಿಸಲು ವಿವಿಧ ಇಲಾಖೆಗಳ ಸಮನ್ವಯತೆ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.
ಮೈಲಾರ ಗ್ರಾಮದ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಶ್ರೀಮೈಲಾರ ಲಿಂಗೇಶ್ವರ ಜಾತ್ರೆ ಮತ್ತು ಕಾರ್ಣಿಕೋತ್ಸವದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು.
ಮೈಲಾರ ಜಾತ್ರೆಯು ಫೆಬ್ರವರಿ 4 ರಿಂದ ಆರಂಭವಾಗಿ 15 ವರೆಗೆ  ನಡೆಯಲಿದ್ದು ಫೆಬ್ರವರಿ 14 ರಂದು ಸಂಜೆ 5.30 ಕ್ಕೆ ಡೆಂಕನ ಮರಡಿಯಲ್ಲಿ ಕಾರ್ಣಿಕೋತ್ಸವ ನಡೆಯಲಿದೆ.
ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ, ವಿದ್ಯುತ್ ದೀಪ, ಸಾರಿಗೆ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಟೆಂಟ್ ವ್ಯವಸ್ಥೆಯಡಿ ಉಚಿತ ಆರೋಗ್ಯ ಸೇವೆ ಜತೆಗೆ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸುವ ಅಗತ್ಯ ವಿದೆ.
ಅಂಬ್ಯುಲೆನ್ಸ್ ಗಳ ಕೊರತೆ ಇದ್ದಲ್ಲಿ ವಿವಿಧ ತಾಲೂಕಿನ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಿ ಸೇವೆ ನೀಡುವಂತೆ ಡಿಎಚ್ಒ ಶಂಕರನಾಯ್ಕರಿಗೆ ಸೂಚಿಸಲಾಯಿತು. ಖಾಸಗಿ ಸಂಸ್ಥೆಯವರು ನೀಡುವ ಬ್ಲೀಚಿಂಗ್ ಪೌಡರ್, ಪೆನಾಯಿಲ್ ಬಳಸಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಿಸಿ ಟಿವಿ ಅಳವಡಿಕೆ, ವಿದ್ಯುತ್ ದೀಪಗಳನ್ನು ನಿಯಮಾನುಸಾರ ವ್ಯವಸ್ಥೆ   ನೀಡಬೇಕು. ಡೆಂಕನಮರಡಿ ಬಳಿ ಎಲ್ ಇಡಿ ಲೈಟ್ಸ್ ಅಳವಡಿಸಿ ಕತ್ತಲಿರದಂತೆ ನಿಗಾ ವಹಿಸಬೇಕು.
ಇಡೀ ಜಾತ್ರೆಯಲ್ಲಿ ಅಧಿಕಾರಿಗಳು ವೈಯಕ್ತಿಕ ಹಿತಾಸಕ್ತಿ ಪ್ರದರ್ಶಿಸಿದರೇ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಸಣ್ಣ ಅವಘಡ ನಡೆಯದಂತೆ ಇಚ್ಛಾಶಕ್ತಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ನಾಲ್ಕು ದಿನಗಳ ಮುಂಚಿತವಾಗಿ ಮದ್ಯಮಾರಾಟ ನೀಷೇಧಿಸಲು ಸೂಚಿಸಿದರು.
ಹಡಗಲಿ ಶಾಸಕರಾದ ಕೃಷ್ಣನಾಯ್ಕ ಮಾತನಾಡಿ, ಸಾರಿಗೆ ಇಲಾಖೆಯಿಂದ ಎಲ್ಲಾ ಭಾಗದ ಭಕ್ತರು ಆಗಮಿಸಲು ಹೆಚ್ಚಿನ ಬಸ್ ಗಳನ್ನು ನಿಯೋಜಿಸಬೇಕು. ಹರಿಹರ, ದಾವಣಗೆರೆ, ಹಾವೇರಿ, ಹಡಗಲಿ, ಘಟಕಗಳಿಂದ ಬಸ್ ನೀಡಲು ವ್ಯವಸ್ಥೆ ಮಾಡಿಕೊಳ್ಳಬೇಕು.
ರಾತ್ರಿ ವೇಳೆಯಲ್ಲಿ ಭಕ್ತರ ಬೇಡಿಕೆಯಂತೆ ಬಸ್ ಸಂಚಾರ ವ್ಯವಸ್ಥೆ ನೀಡಬೇಕು.  ಸಮಯ ನಿಗಧಿಪಡಿಸದಂತೆ ನಿರಂತರ ಸೇವೆ ಸಾರಿಗೆ ಇಲಾಖೆ ನೀಡಲಿ. ಮೈಲಾರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳ ದುರಸ್ತಿ ಕಾರ್ಯ ಶೀಘ್ರದಲ್ಲೇ ಆರಂಭಿಸಲಾಗುವುದು.
ಜಾತ್ರೆಯ ವೇಳೆಗೆ ರಸ್ತೆ  ಕಾಮಗಾರಿ ಪೂರ್ಣಗೊಳಿಸಲಾಗುವುದು. ಮೈಲಾರ ಡೆಂಕನಮರಡಿ ರಸ್ತೆ ತಾತ್ಕಾಲಿಕವಾಗಿ ಆಗಲೀಕರಣಗೊಳಿಸಿ ಭಕ್ತರಿಗೆ ಅನುಕೂಲವಾಗುವಂತೆ ವ್ಯವಸ್ಥೆ ನೀಡಲು ಸೂಚಿಸಿದರು. ಅಗ್ನಿಶಾಮಕ ದಳದಿಂದ ಕನಿಷ್ಠ ಎರಡು ವಾಹನಗಳು ತುರ್ತು ಸೇವೆ ನೀಡಲು ಸಿದ್ದವಿರಲಿ ಎಂದು ಸೂಚಿಸಿದರು.
ಈ ವೇಳೆ ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ ಅಲಿ, ದೇವಸ್ಥಾನದ ವಂಶ ಪಾರಂಪರ್ಯ ಧರ್ಮಕರ್ತ ಗುರುವೆಂಕಪ್ಪಯ್ಯ ಒಡೆಯರ್, ತಹಶೀಲ್ದಾರ ಸಂತೋಷ ಕುಮಾರ್, ಡಿವೈಎಸ್ಪಿ ವೆಂಕಟಪ್ಪ ನಾಯಕ, ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಸಿಪಿಐ ದೀಪಕ್ ಭೂಸರೆಡ್ಡಿ, ಗ್ರಾಪಂ ಅಧ್ಯಕ್ಷೆ ಜಾನಕಮ್ಮ ಇತರರಿದ್ದರು.
Read also : ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಅಕ್ರಮ : ಡಿಸಿ ಕಚೇರಿ ಎದುರು ಪ್ರತಿಭಟನೆ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಅಕ್ರಮ : ಡಿಸಿ ಕಚೇರಿ ಎದುರು ಪ್ರತಿಭಟನೆ
Next Article Davangere Davanagere| ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಸಜೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-20 ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?

ಹೊಲ ಕಳೆದುಕೊಂಡ ಕುಟುಂಬಗಳ ಮನೆಗಳಲ್ಲಿ ಟೀವಿಗಳು ಮಾತಾಡುತಿವೆ. ಕಾಯಿಲೆಗೆ ಸತ್ತ ಹೆಂಡತಿ, ಟಿಪ್ಪರಿನ  ಗಾಲಿಗೆ ಸಿಕ್ಕು ಸತ್ತ ಹರೆಯದ ಮಗನ…

By Dinamaana Kannada News

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ (Davanagere) : ವೃದ್ಧ ದಂಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್…

By Dinamaana Kannada News

Davanagere | ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read also :…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?