Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ : ಶಾಸಕ ಬಿ.ಪಿ.ಹರೀಶ್
ತಾಜಾ ಸುದ್ದಿ

Davanagere | ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ : ಶಾಸಕ ಬಿ.ಪಿ.ಹರೀಶ್

Dinamaana Kannada News
Last updated: September 22, 2024 1:09 pm
Dinamaana Kannada News
Share
davanagere
davanagere
SHARE

ಹರಿಹರ (Davanagere):  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಗಳ ಮೂಲಕ ಶಿಕ್ಷಕರು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುವ ಕಾರ್ಯ ಮಾಡಬೇಕು ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.

ನಗರದ ಸೆಂಟ್ ಮೇರಿಸ್ ಕಾನ್ವೆಂಟ್ ಶಾಲಾವರಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿರಳ ಅವಕಾಶಗಳಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ತಾಲ್ಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಹಂತ ಹಂತವಾಗಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ರಾಜ್ಯದ ಮೂಲೆ ಮೂಲೆಗಳಿಂದಲೂ ಪ್ರತಿಭಾವಂತರನ್ನು ಗುರುತಿಸುವ ಕಾರ್ಯಕ್ರಮವಾಗಿದೆ. ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಬೇಕೆಂದು ಆಶಿಸಿದರು.

ಪಠ್ಯ ಅಧ್ಯಯನದ ಜೊತೆ ವಿದ್ಯಾರ್ಥಿಗಳಲ್ಲಿ ಸೂಪ್ತವಾಗಿರುವ ಕ್ರೀಡಾಸಕ್ತಿ, ಕಲಾಸಕ್ತಿಗಳನ್ನು ಪೋಷಿಸಿ ಬೆಳೆಸಲು ಪ್ರತಿಭಾ ಕಾರಂಜಿ ನೆರವಾಗಿದೆ. ವಿದ್ಯಾರ್ಥಿಗಳಲ್ಲಿ ಸೂಪ್ತವಾಗಿರುವ ಜಾನಪದ ಕಲೆ, ಗಾಯನ, ಬಯಲಾಟ, ಯಕ್ಷಗಾನ, ಅಭಿನಯ, ನಿರ್ದೇಶನ ಮುಂತಾದ ಕೌಶಲ್ಯವನ್ನು ಗುರ್ತಿಸಿ, ಪ್ರೋತ್ಸಾಹಿಸುವುದು ಶಿಕ್ಷಕರು, ಪೋಷಕರ ಜವಾಬ್ದಾರಿ ಎಂದು ತಹಶೀಲ್ದಾರ್ ಕೆ.ಎಂ.ಗುರುಬಸವರಾಜ ಹೇಳಿದರು.

Read also : Davanagere | ಲಕ್ಷ್ಮಣ್  ಬಿ. ಹೆಚ್. ಅವರಿಗೆ ಡಾಕ್ಟರೇಟ್ ಪದವಿ

ಮಕ್ಕಳಲ್ಲಿ ಅಡಗಿರುವ ಕಲೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಬಲವರ್ಧನೆ ಕಾರ್ಯಕ್ರಮ ಆಯೋಜಿಸುತ್ತಿದೆ. ಇಂದಿನ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ 10 ಸಮೂಹ ಸಂಪನ್ಮೂಲ ಕೇಂದ್ರಗಳ ವಿದ್ಯಾರ್ಥಿಗಳ ಭಾಗವಹಿಸಿದ್ದಾರೆ. ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ, ಅಲ್ಲಿ ಪ್ರಥಮ ಸ್ಥಾನ ಪಡೆದರೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಹೇಳಿದರು.

ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ನಗರಸಭೆ ಸದಸ್ಯ ಆಟೋ ಹನುಮಂತಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೀರೇಶ್, ಚಂದ್ರಪ್ಪ, ಶರಣ್ ಕುಮಾರ್ ಹೆಗಡೆ, ಈಶಪ್ಪ ಬೂದಿಹಾಳ್, ಮಾಲತಿ ಮೆನನ್, ಪ್ರಭಾಕರ್ ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಲಕ್ಷ್ಮಣ್  ಬಿ. ಹೆಚ್. ಅವರಿಗೆ ಡಾಕ್ಟರೇಟ್ ಪದವಿ
Next Article davanagere Davanagere : ಹೈಟೆಕ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಮುಕ್ತ, ಜಿಲ್ಲಾ ಉಸ್ತುವಾರಿ ಸಚಿವರಿಂದ ಹಸಿರು ನಿಶಾನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ…

By Dinamaana Kannada News

Davanagere | ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯ : ನ್ಯಾ. ಶ್ರೀರಾಮ್ ಹೆಗಡೆ

ದಾವಣಗೆರೆ (Davanagere);  ನಮ್ಮ ದೇಶದಲ್ಲಿ ಇರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ಹೆಗಡೆ…

By Dinamaana Kannada News

ನಿಸ್ವಾರ್ಥತೆಯಿಂದ ಕೆಲಸ ಮಾಡುವವರ ಸಂಖ್ಯೆ ಕಡಿಮೆ : ನ್ಯಾ.ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ:   ಸಾರ್ವಜನಿಕ ಜೀವನದಲ್ಲಿ ಸ್ಥಾನಮಾನಗಳು ಸಮಾಜ ಸೇವೆಗೆ ದೊರೆತ ಅವಕಾಶ ಎಂದು ಭಾವಿಸಿ, ಕರ್ತವ್ಯ ನಿರ್ವಹಿಸಿದಾಗ ಮಾತ್ರ ದೇಶದ ಅಭಿವೃದ್ದಿಯಾಗಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?