Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ
ತಾಜಾ ಸುದ್ದಿ

Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ

Dinamaana Kannada News
Last updated: August 31, 2024 2:22 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) :  ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಏಪ್ರಿಲ್ ನಿಂದ ಆಗಸ್ಟ್‍ವರೆಗೆ ಜಿಲ್ಲೆಯಲ್ಲಿ 35 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. ಶಾಲೆ ಬಿಟ್ಟ ಮಕ್ಕಳ ವಿವರ ಸಂಗ್ರಹಿಸಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ನಿಯಂತ್ರಣ ಸಾಧ್ಯವಾಗಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ.ಕೊಳ್ಳಾ ತಿಳಿಸಿದರು.

ಶನಿವಾರ ವಿವಿಧ ಅಂಗನವಾಡಿ ಕೇಂದ್ರಗಳು, ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಈ ಅವಧಿಯಲ್ಲಿ 35 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ ಮಕ್ಕಳ ರಕ್ಷಣಾ ಘಟಕದಿಂದ 32 ವಿವಾಹಗಳನ್ನು ತಡೆಗಟ್ಟಲಾಗಿದೆ. ಇದರಲ್ಲಿ 2 ಕ್ಕೆ ತಡೆ ತರಲಾಗಿದ್ದು 3 ಬಾಲ್ಯ ವಿವಾಹಗಳು ನಡೆದಿದ್ದು ಅವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಸದಸ್ಯರು ಮಾತನಾಡಿ, ಬಾಲ್ಯ ವಿವಾಹಗಳು ನಡೆಯದಂತೆ ನೋಡಿಕೊಳ್ಳಬೇಕು, ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಿಖರವಾದ ಅಂಕಿ ಅಂಶಗಳಿದ್ದಲ್ಲಿ ಇವೆಲ್ಲವನ್ನು ತಡೆಗಟ್ಟಬಹುದಾಗಿದ್ದು ಶಿಕ್ಷಣ ಇಲಾಖೆಯಲ್ಲಿ ನಿಖರವಾದ ಮಾಹಿತಿ ಲಬ್ಯವಾಗಬೇಕು. ಶಾಲೆ ಬಿಟ್ಟ ಮಕ್ಕಳ ವಿವರವನ್ನು ವರದಿ ಮಾಡದ ಅಂತಹ ಶಾಲಾ ಮುಖ್ಯಸ್ಥರ ಮೇಲೆ ಪ್ರಕರಣ ದಾಖಲು ಮಾಡುವ ಎಚ್ಚರಿಕೆಯನ್ನು ನೀಡಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.
ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜೊತೆಗೆ ಇತರೆ 10 ಇಲಾಖೆಗಳ ಪಾತ್ರ ಇದ್ದು ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದೆ. ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕಾಗುತ್ತದೆ. ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕು, ಬಾಲ ಕಾರ್ಮಿಕ ಪದ್ದತಿ ನಿಷೇಧ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಬೇಕಾಗಿದೆ. ಇದರಿಂದ ಮಕ್ಕಳ ಭವಿಷ್ಯ ಉತ್ತಮವಾಗಲಿದೆ ಎಂದರು.
ಆರ್.ಸಿ.ಹೆಚ್.ಪೋರ್ಟಲ್ ಅನ್ವಯ ಹದಿಹರೆಯದ ಗರ್ಭಿಣಿಯರ ವಿವರದನ್ವಯ ಜಿಲ್ಲೆಯಲ್ಲಿ 254 ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಮನೆ ಸಮೀಕ್ಷೆಯ ನಂತರ ಸಂಖ್ಯೆ 231 ಕ್ಕೆ ಇಳಿಕೆಯಾಗಿದ್ದು ಇದರಲ್ಲಿ 23 ತಾಯಂದಿರು 18 ವರ್ಷ ದಾಟಿದ್ದಾರೆ ಎಂದಾಗ ವಯಸ್ಸನ್ನು ತಿಳಿಯಲು ಆಧಾರ್ ಪರಿಗಣಿಸದೇ ಅವರ ಜನನ ಪ್ರಮಾಣ ಪತ್ರ ಪರಿಶೀಲನೆ ಮತ್ತು ಅಗತ್ಯವಿದ್ದಲ್ಲಿ ವೈದ್ಯಕೀಯ ತಪಾಸಣೆ ಮಾಡಲು ತಿಳಿಸಿ ಇಲ್ಲಿ ಪೋಷಕರೇ ಹೇಳಿದರೂ ಸಹ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹದಿಹರೆಯದವರು ಗರ್ಭಿಣಿಯಾಗದಂತೆ ತಡೆಗಟ್ಟಬೇಕಾಗಿದ್ದು ಇದಕ್ಕೆ ಬೇಕಾದ ಎಲ್ಲಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.
Read also : Davanagere news | ರೈತರನ್ನು ಒಕ್ಕಲೆಬ್ಬಿಸದಂತೆ ಶಾಸಕ ಕೆ.ಎಸ್.ಬಸವಂತಪ್ಪ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಮನವಿ
ಇಲಾಖೆಯಿಂದ ಮತ್ತು ಆಯೋಗದಿಂದ ಮಕ್ಕಳ ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯಿದೆ, ಬಾಲ ಕಾರ್ಮಿಕ ಪದ್ದತಿ ನಿಷೇಧದ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇಕಾಗಿರುವುದು ಉಲ್ಲಂಘನೆ ಮಾಡುವವರ ಮೇಲೆ ಕಠಿಣ ಕ್ರಮಗಳ ಮೂಲಕ ಅನುಷ್ಠಾನವಾಗಬೇಕಾಗಿದೆ. ಕೆಲವು ಕೋಚಿಂಗ್ ಸೆಂಟರ್ ಮತ್ತು ಹಾಸ್ಟೆಲ್‍ಗಳು, ಮಕ್ಕಳ ಪಾಲನೆ ಬಗ್ಗೆ ಅನುಮತಿ ಪಡೆಯದೇ ಅನಧಿಕೃವಾಗಿ ನಡೆಯುತ್ತಿರುವ ಸಂಸ್ಥೆಗಳ ಬಗ್ಗೆ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪೋಕ್ಸೋ ಕಾಯ್ದೆಯಡಿ 2013 ರಿಂದ 2024 ರವರೆಗೆ 731 ಪ್ರಕರಣಗಳು ದಾಖಲಾಗಿದ್ದು ಇದರಲ್ಲಿ 86 ರಲ್ಲಿ ಶಿಕ್ಷೆಯಾಗಿದ್ದು 368 ಖುಲಾಸೆಯಾಗಿವೆ. 14 ಪ್ರಕರಣಗಳು ವರ್ಗಾವಣೆಗೊಂಡಿದ್ದು 11 ಸುಳ್ಳು ಪ್ರಕರಣಗಳಾಗಿವೆ. 252 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಬಾಲ ನ್ಯಾಯ ಮಂಡಳಿಯಲ್ಲಿ 2024 ರ ಏಪ್ರಿಲ್ ನಿಂದ ಜುಲೈವರೆಗೆ 60 ಬಾಕಿ ಸೇರಿ 8 ಹೊಸದಾಗಿ ಸೇರಿದಂತೆ 68 ಪ್ರಕರಣಗಳಿವೆ. ಇದರಲ್ಲಿ 15 ಇತ್ಯರ್ಥವಾಗಿದ್ದು 1 ವರ್ಷ ಮೇಲ್ಪಟ್ಟ 7 ಗಂಭೀರ ಹಾಗೂ 9  ಘೋರ ಪ್ರಕರಣಗಳಿವೆ. ವರ್ಷದೊಳಗೆ 7 ಸಣ್ಣ ಸ್ವರೂಪ, 4 ಗಂಭೀರ, 26 ಘೋರ ಸೇರಿ ಒಟ್ಟು 53 ಪ್ರಕರಣಗಳಿವೆ. ಬಾಲ ನ್ಯಾಯ ಮಂಡಳಿಯಲ್ಲಿ ಇದೇ ಅವಧಿಯಲ್ಲಿ ಬಾಕಿ 10 ಹಾಗೂ 5 ಹೊಸ ಪ್ರಕರಣ ಸೇರಿ 15 ಇದ್ದು ಇತ್ಯರ್ಥವಾಗಬೇಕಾಗಿದೆ. ಈ ವೇಳೆ ಸದಸ್ಯರು ಮಾತನಾಡಿ ಪ್ರಕರಣಗಳಲ್ಲಿ ತಪ್ಪಿತಸ್ಥರು ಖುಲಾಸೆಯಾಗದಂತೆ ನೋಡಿಕೊಳ್ಳಲು ತಿಳಿಸಿದರು.
 ಆರೋಗ್ಯ ಸೌಲಭ್ಯ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಸೂಚನೆ;  ಹಾಸ್ಟೆಲ್‍ನಲ್ಲಿ ಮಕ್ಕಳಿಗೆ ಬೇಕಾದ ಸೋಪ್ ಕಿಟ್, ನ್ಯಾಪ್‍ಕಿನ್ ಸೇರಿದಂತೆ ಗುಣಮಟ್ಟದ ಆಹಾರ ಒದಗಿಸಬೇಕು ಮತ್ತು ತರಕಾರಿ, ಗುಣಮಟ್ಟದ ಬೇಳೆಕಾಳು ಒದಗಿಸಬೇಕು. ಭೇಟಿ ನೀಡಿದ ಕೆಲವು ಹಾಸ್ಟೆಲ್ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಕೆಲವು ನ್ಯೂನ್ಯತೆಗಳು ಕಂಡು ಬಂದಿದ್ದು ಮಕ್ಕಳ ಆರೋಗ್ಯದ ಕಾರ್ಡ್ ಸರಿಯಾಗಿ ದಾಖಲು ಮಾಡಬೇಕು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಹಾಸ್ಟೆಲ್, ಅಂಗನವಾಡಿಯಲ್ಲಿನ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಎಲ್ಲಾ ವಿವರ ದಾಖಲು ಮಾಡಬೇಕು. ಹಾಸ್ಟೆಲ್, ಅಂಗನವಾಡಿಗಳಿಗೆ ವೈದ್ಯರು ಭೇಟಿ ನೀಡಿದ ಬಗ್ಗೆ ಸಹಿ ಮಾಡಲಾಗಿದೆ, ಆದರೆ ತಪಾಸಣೆ ಮಾಡಿದ ವಿವರಗಳ ದಾಖಲು ಮಾಡಿರುವುದಿಲ್ಲ. ಆರೋಗ್ಯ ಇಲಾಖೆಯಿಂದ ಎಬಿಆರ್‍ಕೆಯಡಿ 300 ಶಾಲೆಗಳ ಭೇಟಿ ಇದೆ, ಶಿಕ್ಷಣ ಇಲಾಖೆ ಅಂಕಿ ಅಂಶದಡಿ 2015 ಶಾಲೆಗಳಿದ್ದು ಒಂದೊಕ್ಕೊಂದು ತಾಳೆಯಾಗುತ್ತಿಲ್ಲ. ಇದಾಗದಂತೆ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲು ತಿಳಿಸಿ ಹಾಸ್ಟೆಲ್‍ಗಳಲ್ಲಿನ ಮಕ್ಕಳ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕೆಂದಿದ್ದು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ ಅವರು ಮಾತನಾಡಿ, ಕೆಲವು ಶಾಲೆಗಳಲ್ಲಿ ಮಕ್ಕಳ ಟಿ.ಸಿ.ಕೊಡಲು ಸತಾಯಿಸುತ್ತಿದ್ದಾರೆ ಎಂಬ ದೂರುಗಳು ಪ್ರಾಧಿಕಾರಕ್ಕೆ ಬಂದಿವೆ, ಆನಗೋಡು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಕ್ಕೆ ಮಕ್ಕಳು ಶಾಲೆಗೆ ಹೋಗುವ ಹಾಗೂ ಬರುವ ಸಮಯಕ್ಕೆ ಕೆಎಸ್‍ಆರ್‍ಟಿಸಿ ಯಿಂದ ಬಸ್ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ರೈತರನ್ನು ಒಕ್ಕಲೆಬ್ಬಿಸದಂತೆ ಶಾಸಕ ಕೆ.ಎಸ್.ಬಸವಂತಪ್ಪ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಮನವಿ
Next Article davanagere Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು   

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

{Harihara Nagarasabe} ಖಾತೆ ಬದಲಾವಣೆ ವಿಳಂಬ: ಪೌರಾಯುಕ್ತಗೆ ನಗರಸಭೆ ಸದಸ್ಯ ಜಾವೀದ್ ತರಾಟೆ

ಹರಿಹರ: ನಗರದ ನಗರಸಭೆ ಕಚೇರಿಯಲ್ಲಿ (Harihara Nagarasabe) ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಖಾತೆ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ನಗರಸಭೆ…

By Dinamaana Kannada News

Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ

ಹರಿಹರ (Harihara) : ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯೋತ್ಸವವನ್ನು ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ…

By Dinamaana Kannada News

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ.…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?