Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮ ಪಂಚಾಯತ್‍ಗಳ ಸ್ವಾಯತ್ತತೆ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ತಾಜಾ ಸುದ್ದಿ

ಗ್ರಾಮ ಪಂಚಾಯತ್‍ಗಳ ಸ್ವಾಯತ್ತತೆ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

Dinamaana Kannada News
Last updated: February 7, 2026 1:56 pm
Dinamaana Kannada News
Share
Davanagere
SHARE
ದಾವಣಗೆರೆ : ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಗ್ರಾಮ ಪಂಚಾಯತ್‍ಗಳ ಅಧಿಕಾರವನ್ನು ಮೊಟಕುಗೊಳಿಸುವ ಪ್ರಯತ್ನಗಳನ್ನು ರಾಜ್ಯ ಸರ್ಕಾರ ಬಲವಾಗಿ ವಿರೋಧಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ  ಪ್ರಿಯಾಂಕ್ ಖರ್ಗೆ ಹೇಳಿದರು.
ಹೊನ್ನಾಳಿ ತಾಲ್ಲೂಕಿನ ಹೆಚ್.ಗೋಪಗೊಂಡನಹಳ್ಳಿಯಲ್ಲಿ ನಿರ್ಮಾಣ ಮಾಡಿರುವ ನೂತನ ಗ್ರಾಮ ಪಂಚಾಯತ್ ಕಟ್ಟಡ ಹಾಗೂ ಅಂಗನವಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ವಿಕೇಂದ್ರೀಕರಣ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಸ್ವತಃ ಕೇಂದ್ರ ಸರ್ಕಾರದ ಅಧ್ಯಯನ ವರದಿಯೇ ದೃಢಪಡಿಸಿದೆ. ಆದರೆ ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ‘ವಿಕಸಿತ ಭಾರತ್ ಜಿ.ರಾಮ್‍ಜಿ’ ಕಾಯ್ದೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಹಳ್ಳಿಗಳ ಉದ್ಯೋಗದ ಹಕ್ಕನ್ನು ಮತ್ತು ಪಂಚಾಯತ್‍ಗಳ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಕಸಿದುಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪಂಚಾಯತ್‍ಗಳಿಗಿದ್ದ ಸ್ವಾಯತ್ತತೆಯನ್ನು ಹೊಸ ಕಾಯ್ದೆಯ ಮೂಲಕ ನಿಯಂತ್ರಿಸಲು ಹೊರಟಿದೆ. ಕೃಷಿ ಚಟುವಟಿಕೆಗಳ ಅವಧಿಯಲ್ಲಿ 60 ದಿನಗಳ ಕಾಲ ನರೇಗಾ ಕೆಲಸ ನಿಷೇಧಿಸಿರುವುದು ಮತ್ತು ಗುತ್ತಿಗೆದಾರರ ಹಸ್ತಕ್ಷೇಪಕ್ಕೆ ಅವಕಾಶ ನೀಡಿರುವುದು, ಗ್ರಾಮೀಣ ಕಾರ್ಮಿಕರ ಹಿತಾಸಕ್ತಿಗೆ ಮಾರಕವಾಗಿದೆ.  ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 15ನೇ ಹಣಕಾಸು ಆಯೋಗದ ಅನುದಾನ, ಜೆಜೆಎಂ ಪಾಲಿನ ಹಣ ಹಾಗೂ ನರೇಗಾ ಬಾಕಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಆರ್ಥಿಕ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಕ್ರಮಗಳ ವಿರುದ್ಧ ರಾಜ್ಯ ಸರ್ಕಾರವು ಕಾನೂನಾತ್ಮಕ ಮತ್ತು ರಾಜಕೀಯ ಹೋರಾಟವನ್ನು ಮುಂದುವರಿಸಲಿದೆ. ಹಳ್ಳಿಗಳ ಅಭಿವೃದ್ಧಿಯು ಸ್ಥಳೀಯ ತೀರ್ಮಾನಗಳ ಮೂಲಕವೇ ಆಗಬೇಕು ಎಂಬುದು ಸರ್ಕಾರದ ದೃಢ ನಿಲುವಾಗಿದೆ ಎಂದು ಸಮರ್ಥಿಸಿಕೊಂಡರು.
ಗ್ಯಾರಂಟಿ ಯೋಜನೆಗಳ ಸಬಲೀಕರಣ: ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುತ್ತಿದೆ. ಈ ಯೋಜನೆಗಳಿಂದ ಕೋಟ್ಯಂತರ ಕುಟುಂಬಗಳು ಆರ್ಥಿಕ ಶಕ್ತಿಯನ್ನು ಪಡೆದಿದ್ದು, ಇದು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
Read also : ಮಾಜಿ ಸೈನಿಕರ ಕೋಟಾದಡಿ ಸರ್ಕಾರಿ ಜಮೀನು, ನಿವೇಶನಕ್ಕೆ ಅರ್ಜಿ ಆಹ್ವಾನ
ಸಮಾರಂಭದಲ್ಲಿ ಶಾಸಕ ಜಿ.ಡಿ.ಶಾಂತನಗೌಡ,  ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ ,  ಡಿ.ಎಸ್.ಅರುಣ್  ಡಾ; ಧನಂಜಯ್ ಸರ್ಜಿ, ಬಯಲು ಸೀಮೆ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪ , ಮಾಜಿ ಶಾಸಕರಾದ ಡಾ; ಗಂಗಪ್ಪ, ಆರ್.ಡಿ.ಪಿ.ಆರ್.ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ , ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಸಿಇಒ ಗಿತ್ತೆ ಮಾಧವ್ ವಿಠ್ಠಲ ರಾವ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ  ಪ್ರಮೀಳಾ  ರಮೇಶ್ ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಚಿವ ಪ್ರಿಯಾಂಕ್ ಖರ್ಗೆ
Share This Article
Twitter Email Copy Link Print
Previous Article Applications invited ಮಾಜಿ ಸೈನಿಕರ ಕೋಟಾದಡಿ ಸರ್ಕಾರಿ ಜಮೀನು, ನಿವೇಶನಕ್ಕೆ ಅರ್ಜಿ ಆಹ್ವಾನ
Next Article Judge Mahavir M. Karennavara ಮಾರ್ಚ್ 14 ರಂದು ‘ರಾಷ್ಟ್ರೀಯ ಲೋಕ ಅದಾಲತ್’:ಸಾರ್ವಜನಿಕರು ಸದುಪಯೋಗಕ್ಕೆ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಣ್ಣು ಮಾಫಿಯಾ : ವಿದ್ಯುತ್ ಪ್ರಸರಣದ ಬೃಹತ್ ಟವರ್ ಗೆ ಗಂಡಾಂತರ

ಹರಿಹರ (Harihara) : ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‍ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲ್ಲೂಕಿನ ರಾಜನಹಳ್ಳಿ…

By Dinamaana Kannada News

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ : ಕಬೀರ್ ಅಹ್ಮದ್ ಖಾನ್ ಬಂಧನ

ದಾವಣಗೆರೆ (Davanagere): ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿಧೇಯಕ ಜಾರಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟು, "ರೈಲು,ವಾಹನ…

By Dinamaana Kannada News

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಜೂ.23 (Davqanagere) : ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು…

By Dinamaana Kannada News

You Might Also Like

Court
ತಾಜಾ ಸುದ್ದಿ

ಅಪ್ರಾಪ್ತೆ ಅಪಹರಣ,ಅತ್ಯಾಚಾರ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

ಮಾಕುಂಟೆ ಗೊಲ್ಲರಹಟ್ಟಿಗೆ ನುಗ್ಗಿದ ಕರಡಿ ಭಯಭೀತರಾದ ಗ್ರಾಮಸ್ಥರು

By Dinamaana Kannada News
Judge Mahavir M. Karennavara
ತಾಜಾ ಸುದ್ದಿ

ಮಾರ್ಚ್ 14 ರಂದು ‘ರಾಷ್ಟ್ರೀಯ ಲೋಕ ಅದಾಲತ್’:ಸಾರ್ವಜನಿಕರು ಸದುಪಯೋಗಕ್ಕೆ ಮನವಿ

By Dinamaana Kannada News
Applications invited
ತಾಜಾ ಸುದ್ದಿ

ಮಾಜಿ ಸೈನಿಕರ ಕೋಟಾದಡಿ ಸರ್ಕಾರಿ ಜಮೀನು, ನಿವೇಶನಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?