Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಜ್ಯಮಟ್ಟದ ಭಜನೆ, ಕೋಲಾಟ ಮತ್ತು ಸೋಬಾನೆ ಗಾಯನ ಸ್ಪರ್ಧೆ  
ತಾಜಾ ಸುದ್ದಿ

Davanagere | ರಾಜ್ಯಮಟ್ಟದ ಭಜನೆ, ಕೋಲಾಟ ಮತ್ತು ಸೋಬಾನೆ ಗಾಯನ ಸ್ಪರ್ಧೆ  

Dinamaana Kannada News
Last updated: October 23, 2024 12:34 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ಜಾನಪದ, ಸಾಂಸ್ಕೃತಿಕ ಕಲಾ ಪ್ರಕಾರಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯಬೇಕಾದ ಅಗತ್ಯವಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಹೇಳಿದರು.

ನಗರದ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ  ಶ್ರೀ ವಾಲ್ಮೀಕಿ ಪ್ರತಿಷ್ಠಾನ ಹಾಗೂ ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಭಜನೆ, ಕೋಲಾಟ ಮತ್ತು ಸೋಬಾನೆ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಕಲಾವಿದರು ಆಗಮಿಸಿರುವುದನ್ನು ಗಮನಿಸಿದರೆ ಜನಪದ ಕಲೆಗಳ ಮಹತ್ವ ಇನ್ನೂ ನಮ್ಮ ನಡುವೆ ಹಾಸು ಹೊಕ್ಕಾಗಿದೆ ಈ ಕಲೆಗಳನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವ ಕೆಲಸವಾಗಬೇಕಿದೆ. ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗಬೇಕೆಂದರು.

ಕಲಾ ಪ್ರದರ್ಶನ ವೀಕ್ಷಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಈ ರೀತಿಯ ಗ್ರಾಮೀಣ ಕಲಾ ಪ್ರದರ್ಶನಗಳನ್ನು ಇದೇ ಮೊದಲ ಬಾರಿಗೆ ವೀಕ್ಷಿಸಿದ್ದು, ಮನಸಿಗೆ ತುಂಬಾ ಸಂತೋಷವಾಯಿತು. ಈ ರೀತಿಯ ಕಲೆಗಳನ್ನು ಸ್ಪರ್ಧೆಗಳ ಇರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಗ್ರಾಮೀಣ ಸೊಗಡಿನ ಕಲೆಗಳನ್ನು ಉಳಿಸಿ, ಬೆಳೆಸುವ ಸಲುವಾಗಿ ಮುಕ್ತ ಸ್ಪರ್ಧೆ ನಡೆಯುತ್ತಿರುವುದು ಶ್ಲಾಘನೀಯ. ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧೆ ಅತ್ಯಂತ ಮುಖ್ಯ ಎಂದರು.

ಸಮಿತಿ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ಎಲ್ಲ ಜಾತಿ, ಜನಾಂಗದವರು ಸೇರಿ ವಾಲ್ಮೀಕಿ ಜಯಂತಿ ಆಚರಿಸಬೇಕೆನ್ನುವುದೇ ಕಾರ್ಯಕ್ರಮದ ಉದ್ದೇಶವಾಗಿದ್ದು, ಅದಕ್ಕಾಗಿಯೇ ಭಜನೆ, ಸೋಬಾನೆ, ಕೋಲಾಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಕಲಾವಿದರು ಆಗಮಿಸಿದ್ದಾರೆ. 20 ಕ್ಕೂ ಹೆಚ್ಚು ಸೋಬಾನೆ ತಂಡಗಳು ಆಗಮಿಸಿವೆ. ಬರುವ ವರ್ಷದಿಂದ ಸೋಬಾನೆ ಸ್ಪರ್ಧೆಗಾಗಿಯೇ 1 ದಿನ ಮೀಸಲಿಟ್ಟು ಪ್ರಶಸ್ತಿಯ ಮೊತ್ತ 50 ಸಾವಿರ ನಿಗಧಿಪಡಿಸಲು ನಿರ್ಧರಿಸಲಾಗಿದೆ ಎಂದರು.

Read also : Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

ತಹಶೀಲ್ದಾರ್ ಅಶ್ವಥ್, ಎಪಿಎಂಸಿ ತರಕಾರಿ ದಲ್ಲಾಳರ ಸಂಘದ ಅಧ್ಯಕ್ಷ ಎನ್.ಎನ್.ತಿಪ್ಪೇಸ್ವಾಮಿ ಮಾತನಾಡಿದರು

ಉದ್ಯಮಿ ಪಾಮೇನಹಳ್ಳಿ ಗೌಡರ ಮಂಜುನಾಥ್, ಕಾವೇರಿ ಬೇಕರಿ ಮಾಲಿಕ ರವಿಚಂದ್ರ, ಸಮಿತಿಯ ಪದಾಧಿಕಾರಿಗಳಾದ ಎಲೋದಹಳ್ಳಿ ರವಿಕುಮಾರ್, ಆಲೂರು ಪರಶುರಾಮ್, ಹೂವಿನ ಮಡು ನಾಗರಾಜ್, ಚಿಕ್ಕಮಲ್ಲನಹೊಳೆ ಚಿರಂಜೀವಿ, ರಾಜನಹಟ್ಟಿ ರಾಜು, ಕರಿಯಪ್ಪ ನಾಯಕ, ಕುರ್ಕಿ ಹನುಮಂತ, ಕೋಗಲೂರು ಕುಮಾರ, ಉಪ್ಪನಾಯಕನಹಳ್ಳಿ ಉಮೇಶ, ಇತರರು ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಖಾದರ್, ಬಿ.ಎಚ್.ಪ್ರಕಾಶ್ ಮತ್ತು ಉಮೇಶ್ ನಾಯ್ಕ ಕಾರ್ಯನಿರ್ವಹಿಸಿದರು.

ಮಹಿಳಾ ಸೋಬಾನೆ ಸ್ಪರ್ಧೆ ವಿಜೇತರು:  ರಾಜ್ಯ ಪ್ರಶಸ್ತಿ ಪುರಸ್ಕೃತ ಚಿತ್ರದುರ್ಗ ಜಿಲ್ಲೆ ಸಿದ್ದಮ್ಮನಹಳ್ಳಿಯ ಇಂದಿರಮ್ಮ ಮತ್ತು ಸಂಗಡಿಗರು ತಂಡಕ್ಕೆ ಮೊದಲ ಬಹುಮಾನ, ಅಕ್ಕಮಹಾದೇವಿ ಹವ್ಯಾಸ ಮಂಡಳಿ ಶಿಕಾರಿಪುರ ತಂಡಕ್ಕೆ ಎರಡನೇ ಬಹುಮಾನ, ಮೂರನೇ ಬಹುಮಾನ ದುರ್ಗಮ್ಮ ಮತ್ತು ಸಂಗಡಿಗರು ಅಬ್ಬೆನಹಳ್ಳಿ ಚಿತ್ರದುರ್ಗ, ಸಮಾಧಾನಕರ ಬಹುಮಾನ ಪುರುಷರ ವಿಭಾಗದಲ್ಲಿ ದೇವರಾಜ್ ಸಂಗಡಿಗರು, ಪ್ರಗತಿ ಯುವತಿ ಮಂಡಳಿ ಶಿಕಾರಿಪುರ, ಹನುಮಂತ ಮತ್ತು ಸಂಗಡಿಗರು ಚಿಕ್ಕಮಲ್ಲನಹೊಳೆ ತಂಡಕ್ಕೆ ಸಮಾಧಾನಕರ ಬಹುಮಾನ ಲಭಿಸಿದೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 
Next Article Direct interview Davanagere | ಅ.25 ರಂದು ವಾಕ್ ಇನ್ ಇಂಟರ್ ವ್ಹೀವ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

poem | ಚೂರೇಚೂರು ಮಾನವೀಯತೆ 

ಅವಳು‌  ಸಮುದ್ರ ಕಿತ್ತೊಗೆದ ಮರುಳು ಬಟ್ಟಯಿಲ್ಲದ ಗೋಡೆಯಪ್ಪಿದ ಬೆತ್ತಲ ಚಿತ್ರ ಹಾಗೆ ನೋಡಿದರೆ ಅವಳು ನಿಜಕ್ಕೂ ಬೆತ್ತಲಲ್ಲ ಬದುಕಿನ ಅದೆಷ್ಟೋ…

By Dinamaana Kannada News

Harihara | ಗುರು ವಂದನಾ ಕಾರ್ಯಕ್ರಮ : 1998 ರ ಹಳೇ ವಿದ್ಯಾರ್ಥಿಗಳಿಂದ ಸಭೆ

ಹರಿಹರ  (Harihara)  : ಶ್ರೀ ನಂದೀಶ್ವರ ಗ್ರಾಮಾಂತರ ಪ್ರೌಢಶಾಲೆಯ 1997-98 ರ ಸಾಲಿನ ಹಳೆಯ ವಿದ್ಯಾರ್ಥಿಗಳು  ನಗರದ ಕ್ಷೇತ್ರನಾಥ ಹರಿಹರೇಶ್ವರ…

By Dinamaana Kannada News

ಚಿತ್ರಕಲಾ ಶಿಕ್ಷಕರಿಂದ 50 ಮೀಟರ್ ಬಟ್ಟೆಯಲ್ಲಿ ಮತದಾನ ಜಾಗೃತಿ

ದಾವಣಗೆರೆ.ಏ.26 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯಯಲ್ಲಿ ಮತದಾನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?