Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜ. 5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ಮುಖ್ಯಮಂತ್ರಿಗಳಿಂದ ಉದ್ಘಾಟನೆ
ತಾಜಾ ಸುದ್ದಿ

ಜ. 5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ಮುಖ್ಯಮಂತ್ರಿಗಳಿಂದ ಉದ್ಘಾಟನೆ

Dinamaana Kannada News
Last updated: December 30, 2024 1:44 pm
Dinamaana Kannada News
Share
davanagere
davanagere
SHARE

ದಾವಣಗೆರೆ,ಡಿ,30 (Davanagere) : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಸೋಮವಾರ (ಡಿ.30) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಯುವಜನೋತ್ಸವ ಕಾರ್ಯಕ್ರಮದ ಸಿದ್ದತೆಗೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕಾರ್ಯಕ್ರಮ ರೂಪುರೇಷೆಗಳ ಬಗ್ಗೆ ವಿವಿಧ ಉಪ ಸಮಿತಿಗಳೊಂದಿಗೆ ಸಭೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಮತ್ತು ಯುವ ಪ್ರಶಸ್ತಿ ಪುರಷ್ಕøತರು ಭಾಗವಹಿಸುವರು.

7 ಸ್ಪರ್ಧೆಗಳು; ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ 7 ಸ್ಪರ್ಧೆಗಳಿದ್ದು ಪ್ರತ್ಯೇಕವಾಗಿ ನಡೆಯಲಿವೆ. ಜಾನಪದ ನೃತ್ಯ ಸ್ಪರ್ಧೆಯು ಬಿಐಇಟಿ ಕಾಲೇಜಿನ ಎಸ್.ಎಸ್.ಎಂ. ಸಾಂಸ್ಕøತಿಕ ಸಭಾಂಗಣ, ಜಾನಪದ ಗೀತೆ ಸ್ಪರ್ಧೆಯು ಬಾಪೂಜಿ ಎಂಬಿಎ ಕಾಲೇಜು ಸಭಾಂಗಣ, ವಿಜ್ಞಾನ ವಸ್ತು ಪ್ರದರ್ಶನ ಎಂಬಿಎ ಮೈದಾನದಲ್ಲಿನ ಎಸ್.ಎಸ್. ಪಬ್ಲಿಕ್ ಸ್ಕೂಲ್, ಕವನ ರಚನೆ ಎಂಬಿಎ ಕಾಲೇಜಿನ ಕೊಠಡಿ 1, ಕಥೆ ಬರೆಯುವುದು ಇಲ್ಲಿನ ಕೊಠಡಿ 2 ರಲ್ಲಿ ಹಾಗೂ ಚಿತ್ರಕಲೆ ಸ್ಪರ್ಧೆ ಮತ್ತು ಘೋಷಣ ಸ್ಪರ್ಧೆಯು ಲಲಿತ ಕಲಾ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ರಾಜ್ಯ ಎಲ್ಲಾ ಜಿಲ್ಲೆಗಳಿಂದ ಏಳು ಸ್ಪರ್ಧೆಗಳಲ್ಲಿ ಭಾಗವಹಿಸಲು ಯುವ ಸ್ಪರ್ಧಾಳುಗಳು ಆಗಮಿಸುವರು. ಇಲ್ಲಿನ ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಮೊದಲ ಬಹುಮಾನವಾಗಿ ರೂ.25000, ದ್ವಿತೀಯ ರೂ.15000 ಮತ್ತು ತೃತೀಯ ಬಹುಮಾನವಾಗಿ ರೂ.10000 ಗಳನ್ನು ಪ್ರಶಸ್ತಿ ಪತ್ರದೊಂದಿಗೆ ನಗದು ನೀಡಲಾಗುತ್ತದೆ. ಇಲ್ಲಿ ವಿಜೇತರಾದವರು ಜನವರಿ 11 ಮತ್ತು 12 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸುವರು ಎಂದರು.

ಜನಪದ ರ್ಯಾಲಿ; ಯುವಜನೋತ್ಸವವು ಜನವರಿ 5 ರಂದು ಬೆಳಗ್ಗೆ ಉದ್ಘಾಟನೆಯಾಗಲಿದ್ದು ಇದರ ಅಂಗವಾಗಿ ಬೆಳಗ್ಗೆ 9 ಗಂಟೆಯಿಂದ ವಿವಿಧ ಕಲಾತಂಡಗಳೊಂದಿಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳೊಂದಿಗೆ ಜನಪದ ಮೆರವಣಿಗೆ ಮೂಲಕ ಎಂಬಿಎ ಮೈದಾನಕ್ಕೆ ತೆರಳಿ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ಕಲಾಮೇಳದಲ್ಲಿ ದಕ್ಷಿಣ ವಲಯದ ಸಾಂಸ್ಕøತಿಕ ಕೇಂದ್ರದಿಂದ 10 ಕ್ಕಿಂತ ಹೆಚ್ಚು ತಂಡಗಳು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 10 ಕ್ಕೂ ಹೆಚ್ಚು ಕಲಾ ತಂಡಗಳು ಸೇರಿದಂತೆ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳ ತಂಡಗಳು ಕಲಾ ಮೇಳದಲ್ಲಿ ಭಾಗಿಯಾಗಲಿದ್ದು ಆಕರ್ಷಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಕದ್ರಿ ಮಣಿಕಂಠ ಮತ್ತು ತಂಡದಿಂದ ಸಾಂಸ್ಕøತಿಕ ಸಂಜೆ; ಯುವಜನೋತ್ಸವ ಅಂಗವಾಗಿ ಖ್ಯಾತ ಕಲಾವಿದರಾದ ಕದ್ರಿ ಮಣಿಕಂಠ ಮತ್ತು ತಂಡದವರಿಂದ ಜನವರಿ 5 ರ ಸಂಜೆ 5 ಗಂಟೆಯಿಂದ ಪ್ರಧಾನ ವೇದಿಕೆ ಎಂಬಿಎ ಮೈದಾನದಲ್ಲಿ ಸಾಂಸ್ಕøತಿಕ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವೇದಿಕೆಯಲ್ಲಿ ಐದು ಸಾವಿರಕ್ಕಿಂತಲೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದ್ದು ಸುಮಾರು 10 ಸಾವಿರಕ್ಕೂ ಹೆಚ್ಚಿನ ಜನರು ಸೇರುವ ನಿರೀಕ್ಷೆ ಹೊಂದಲಾಗಿದೆ. ಗ್ಲಾಸ್‍ಹೌಸ್‍ನಲ್ಲಿ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ನಡೆಯುತ್ತಿದ್ದು ಜನವರಿ 5 ರವರೆಗೆ ಯುವಜನೋತ್ಸವ ಹಿನ್ನಲೆಯಲ್ಲಿ ಮುಂದುವರೆಸಲಾಗಿದ್ದು ದಾವಣಗೆರೆ ಜನತೆಯು ಯುವಜನೋತ್ಸವವನ್ನು ವೀಕ್ಷಣೆ ಮಾಡುವ ಮೂಲಕ ಪ್ರೋತ್ಸಾಹಿಸಬೇಕಾಗಿದೆ ಎಂದರು.

ಯುವಜನೋತ್ಸವ ವೀಕ್ಷಣೆಗೆ ನಗರ ಸಾರಿಗೆ; ಜನವರಿ 5 ಮತ್ತು 6 ರಂದು ನಡೆಯುವ ಯುವಜನೋತ್ಸವ ವೀಕ್ಷಣೆಗಾಗಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕೆಎಸ್‍ಆರ್‍ಟಿಸಿ ಯಿಂದ ನಿರಂತರ ಬಸ್ ಸೇವೆಯನ್ನು ಒದಗಿಸಲಾಗುತ್ತಿದೆ. ವೀಕ್ಷಣೆ ಮಾಡುವವರು ಈ ಬಸ್ ಸೌಲಭ್ಯ ಪಡೆಯಬಹುದಾಗಿದ್ದು ಎಲ್ಲಾ ವೇದಿಕೆಗಳಿಗೂ ಬಸ್ ಕರೆದುಕೊಂಡು ಹೋಗಲಿದೆ ಎಂದರು.

ಜನಪ್ರತಿನಿಧಿಗಳು, ಯುವ ಪುರಸ್ಕøತರು ಭಾಗಿ; ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ರಾಜ್ಯದಲ್ಲಿನ ಪ್ರಮುಖ ಯುವ ಪುರಸ್ಕøತರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುತ್ತಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ ಯುವ ಸ್ಪರ್ಧಾಳುಗಳಿಗೆ ಊಟ, ವಸತಿ ಸೇರಿದಂತೆ ಜಿಲ್ಲೆಯಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಹಮ್ಮಿಕೊಳ್ಳಲು ಸೂಕ್ತ ವಾಹನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ.ಸಂತೋಷ್, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read also : Davanagere| ರಸ್ತೆಯಲ್ಲಿ ಗುಂಡಿಬಿದ್ದರೂ ನಿರ್ಲಕ್ಷ್ಯ : ಪ್ರತಿಭಟನೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Golden Karnataka Forum Davanagere| ರಸ್ತೆಯಲ್ಲಿ ಗುಂಡಿಬಿದ್ದರೂ ನಿರ್ಲಕ್ಷ್ಯ : ಪ್ರತಿಭಟನೆ
Next Article Davanagere ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಬೆಂಕಿ: ಆವರಗೊಳ್ಳ ಗ್ರಾಮಕ್ಕೆ ಹಬ್ಬಿದ ವಿಷ ಹೊಗೆ

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯ ಆವರಗೊಳ್ಳದಲ್ಲಿನ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಷಪೂರಿತ ಹೊಗೆ ಗ್ರಾಮವನ್ನು…

By Dinamaana Kannada News

ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-26 ಸಾಲಿ ಬಿಟ್ಟ ಮಕ್ಕಳು….

ಬಳ್ಳಾರಿ ಜಿಲ್ಲೆಯ ತಲಾ ವರಮಾನವು ರೂ.47607/ ಇದ್ದು,ಆಗ ಕರ್ನಾಟಕ ರಾಜ್ಯದ ತಲಾ ವರಮಾನವು ರೂಂ.41902/ ಆಗಿತ್ತು. ಅಂದರೆ ಬಳ್ಳಾರಿ ಜಿಲ್ಲೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
davanagere
Blog

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?