Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ
ತಾಜಾ ಸುದ್ದಿ

ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

Dinamaana Kannada News
Last updated: January 3, 2025 12:52 pm
Dinamaana Kannada News
Share
Davanagere
Davanagere
SHARE

ದಾವಣಗೆರೆ,ಜ.3(Davanagere) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದ್ದು ಇದರ ಅಂಗವಾಗಿ ಶುಕ್ರವಾರ ಗುಂಡಿ ವೃತ್ತದಿಂದ ಸಾವಿರಾರು ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ  ನಡೆಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಣಾಧಿಕಾರಿ ಡಾ.ಸುರೇಶ್ ಬಿ ಇಟ್ನಾಳ್ ಮೋತಿ ವೀರಪ್ಪ ಕಾಲೇಜು ಮುಂಭಾಗದ ಗುಂಡಿ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿ,  ದಾವಣಗೆರೆ ನಗರ ಹಾಗೂ ಜಿಲ್ಲೆಯ ಯುವಕ-ಯುವತಿಯರು ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎರಡು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾನಪದ ನೃತ್ಯ, ಜಾನಪದ ಗೀತೆ, ವಿಜ್ಞಾನ ವಸ್ತುಪ್ರದರ್ಶನ, ಕವನ ರಚನೆ, ಕಥೆ ಬರೆಯುವುದು, ಚಿತ್ರಕಲೆ, ಘೋಷಣ ಸ್ಪರ್ಧೆಗಳ ಜೊತೆಗೆ ಸಂಜೆ ನಡೆಯುವ ಮಣಿಕಾಂತ್ ಕದ್ರಿಯವರ ಸಂಗೀತ ಕಾರ್ಯಕ್ರಮ ವೀಕ್ಷಣೆ ಮಾಡುವ ಮೂಲಕ ಸದುಪಯೋಗ ಮಾಡಿಕೊಳ್ಳಲು ಕರೆ ನೀಡಿದರು.

ಜಾಥಾದಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು ವಿವಿಧ ಘೋಷವಾಕ್ಯಗಳ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ನೀರನ್ನು ಉಳಿಸಿ ಭೂಮಿಯನ್ನು ರಕ್ಷಿಸಿ, ‘ಸ್ವಚ್ಚ ಮತ್ತು ಹಸಿರು ಅದು ನಮ್ಮ ಕನಸು’ ಮತ್ತು ‘ಉಸಿರಾಡಲು ಪ್ರೀತಿಸಿ, ಮರಗಳನ್ನು ಉಳಿಸಿ’ ‘ಮಾಲಿನ್ಯವನ್ನು ಉಳಿಸಿ, ಬದುಕಲು ಪ್ರಾರಂಭಿಸಿ’. ವಿದ್ಯಾರ್ಥಿನಿಯರು ‘ಹಣದಾಸೆಗೆ ಬಳಿಯಾಗದೆ ಯೋಚಿಸಿ ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಎಂದು ಕೂಗುತ್ತಾ ಸಾಗಿದರು.

ಕಾಲ್ನೆಡಿಗೆ ಜಾಥಾದಲ್ಲಿ ಅತ್ಯುತ್ತಮವಾಗಿ ಸಂಘಟಿಸಿದ ಉತ್ತಮ ತಂಡಕ್ಕೆ ಅಭಿನಂದನಾ ಪತ್ರವನ್ನು ಶಾಸಕರಾದÀ ಬಿ.ಪಿ ಹರೀಶ್ ವಿತರಿಸಿ ಯುವಕರು ಯುವಜನೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅದರ ಅನುಕೂಲತೆಗಳ ಬಗ್ಗೆ ತಿಳಿದುಕೊಂಡು ದೇಶದ ಪ್ರಗತಿಗೆ ಪೂರಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಪೋಲಿಸ್ ತಂಡದ ಎಲ್ಲಾ ಸಿಬ್ಬಂದಿಗಳು ಕಾಲ್ನೆಡಿಗೆಯಲ್ಲಿ ತಮ್ಮ ಶಿಸ್ತಿನ ಸಿಪಾಯಿಗಳಂತೆ ನಡೆದುಕೊಂಡು ರಸ್ತೆ ಸುರಕ್ಷತೆಯ ಅರಿವು ಮೂಡಿಸಿದರು.

ಜಾಥಾವು ಗುಂಡಿ ವೃತ್ತದಿಂದ ವಿದ್ಯಾರ್ಥಿಭವನ, ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಮಹಾನಗರಪಾಲಿಕೆ ಮುಂಭಾಗದಿಂದ ಎವಿಕೆ ರಸ್ತೆಯ ಮೂಲಕ ಮೋತಿ ವೀರಪ್ಪ ಕಾಲೇಜಿನ ಆವರಣ ತಲುಪಿತು. ಜಾಥಾದಲ್ಲಿ 75 ವóರ್ಷದ ಹಿರಿಯ ವ್ಯಕ್ತಿ ನಾಗರಾಜ್ ಭಾಗವಹಿಸಿ ಎಲ್ಲಾರ ಮೆಚ್ಚುಗೆಗೆ ಪಾತ್ರರಾದರು.

ಕಾಲ್ನೆಡಿಗೆ ಜಾಥಾದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಸಿಪಿಓ ಮಲ್ಲಾನಾಯ್ಕ್, ಡಿಡಿಪಿಯು ಕರಿಸಿದ್ದಪ್ಪ, ಡಿಡಿಪಿಐ ಕೊಟ್ರೇಶ್, ಡಿಆರ್‍ಸಿಎಸ್ ಮಧುಶ್ರೀನಿವಾಸ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ, ಯುವ ಪ್ರಶಸ್ತಿ ಪುರಸ್ಕøತ ಮಾಗನಹಳ್ಳಿ ಮಂಜುನಾಥ್ ಮತ್ತು ನಗರದ ಪದವಿಪೂರ್ವ, ಪದವಿ ಕಾಲೇಜುಗಳ ವಿದ್ಯಾರ್ಥಿಗಳು , ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರಿ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Read also : Davanagere | ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ 

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ   
Next Article Davangere ಶಾಲಾ ಸಬಲೀಕರಣ ಸಮಿತಿಯ ವರದಿ ಯಥಾವತ್ತಾಗಿ ಜಾರಿಗೆ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಆ.17 (Davangere District) : ಪ್ರಿಯತಮನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಹೆಂಡತಿ ಮತ್ತು ಪ್ರಿಯಕರನಿಗೆ ಜೀವಾವಧಿ ಶಿಕ್ಷೆ …

By Dinamaana Kannada News

Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ

ದಾವಣಗೆರೆ (Davamagere ) : ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ ನಿಟ್ಟಿನಲ್ಲಿ ನಗರದ ಬಾರ್ ಲೈನ್ ರಸ್ತೆಯಲ್ಲಿರುವ…

By Dinamaana Kannada News

Davanagere | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ನ.29 (Davanagere); ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?